Army ಸಾಮರ್ಥ್ಯ ವೃದ್ಧಿ: ಕೇಂದ್ರದ ದಿಟ್ಟ ನಡೆ


Team Udayavani, Dec 1, 2023, 5:30 AM IST

army

ಭಾರತೀಯ ಸಶಸ್ತ್ರ ಪಡೆಗಳ ಯುದ್ಧ ಸಾಮರ್ಥ್ಯವನ್ನು ಹೆಚ್ಚಿಸುವ ದೃಷ್ಟಿ ಯಿಂದ ಮತ್ತು ಯುದ್ಧ ವಿಮಾನಗಳು ಮತ್ತು ಕಾಪ್ಟರ್‌ಗಳನ್ನು ಖರೀದಿಸುವ ಪ್ರಸ್ತಾವಕ್ಕೆ ಕೇಂದ್ರ ಸರಕಾರ ಗುರುವಾರ ತನ್ನ ಪ್ರಾಥಮಿಕ ಒಪ್ಪಿಗೆಯನ್ನು ನೀಡಿದೆ. ಈ ಮೂಲಕ ಭಾರತ, ತನ್ನ ಸೇನಾ ಪಡೆಗಳನ್ನು ಜಾಗತಿಕ ಮಟ್ಟದಲ್ಲಿ ಬದಲಾಗು ತ್ತಿರುವ ಸನ್ನಿವೇಶಗಳಿಗೆ ತಕ್ಕಂತೆ ಸರ್ವಸನ್ನದ್ಧವಾಗಿರಿಸುವ ನಿಟ್ಟಿನಲ್ಲಿ ಮಹತ್ತರ ಹೆಜ್ಜೆ ಇಟ್ಟಿದೆ.

97 ತೇಜಸ್‌ ಲಘು ಯುದ್ಧ ವಿಮಾನಗಳು ಮತ್ತು 156 ಪ್ರಚಂಡ್‌ ಹೆಲಿ ಕಾಪ್ಟ ರ್‌ಗಳನ್ನು ಖರೀದಿಸುವ ಮತ್ತು ಭಾರತೀಯ ವಾಯುಪಡೆಯ ಎಸ್‌ಯು- 30 ಫೈಟರ್‌ ಫ್ಲೀಟ್‌ ಅನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವನೆಯನ್ನು ಕೇಂದ್ರ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದ ರಕ್ಷಣ ಖರೀದಿ ಮಂಡಳಿ ಯು ಕೇಂದ್ರ ಸರಕಾರದ ಮುಂದಿರಿಸಿತ್ತು. ಈ ಎರಡೂ ಪ್ರಸ್ತಾವನೆಗಳಿಗೂ ಕೇಂ ದ್ರ ಸರಕಾರ ಮೊದಲ ಹಂತದ ಹಸುರು ನಿಶಾನೆಯನ್ನು ತೋರಿದೆ. ಈ ಎರಡೂ ಯೋಜನೆಗಳಿಗೆ ಒಟ್ಟು 1.6 ಲಕ್ಷ ಕೋಟಿ ರೂ. ವೆಚ್ಚವನ್ನು ಅಂದಾಜಿಸಲಾಗಿದೆ.

ಕಳೆದೊಂದು ದಶಕದಿಂದೀಚೆಗೆ ಕೇಂದ್ರ ಸರಕಾರ ಭಾರತೀಯ ಸಶಸ್ತ್ರ ಪಡೆ ಗಳಿಗೆ ಅತ್ಯಾಧುನಿಕ ಸಮರ ವಿಮಾನಗಳು, ಹೆಲಿಕಾಪ್ಟರ್‌ಗಳು, ಕ್ಷಿಪಣಿಗಳು, ಸಮರನೌಕೆಗಳು, ಜಲಾಂತರ್ಗಾಮಿಗಳ ಸೇರ್ಪಡೆಗೆ ಹೆಚ್ಚಿನ ಉತ್ತೇಜನ ನೀಡುತ್ತಲೇ ಬಂದಿದೆಯಲ್ಲದೆ ಯೋಧರ ಪ್ರಾಥಮಿಕ ಆವಶ್ಯಕತೆಗಳನ್ನು ಪೂರೈ ಸಲು ಹೆಚ್ಚಿನ ಆಸ್ಥೆ ವಹಿಸಿದೆ. ನೆರೆಯ ಪಾಕಿಸ್ಥಾನ ಮತ್ತು ಚೀನ ಗಡಿಯಲ್ಲಿ ಪದೇ ಪದೆ ತಕರಾರು ಎತ್ತಿ, ಕಾಲುಕೆರೆದು ಜಗಳಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ದೇಶದ ರಕ್ಷಣೆಯನ್ನು ಖಾತರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಅತ್ಯಂತ ದೃಢ ನಿರ್ಧಾರಗಳನ್ನು ಕೈಗೊಂಡಿದೆ. ಅಷ್ಟು ಮಾತ್ರವಲ್ಲದೆ ರಕ್ಷಣ ಕ್ಷೇತ್ರದಲ್ಲಿ ವಿಶ್ವದ ಪ್ರಬಲ ರಾಷ್ಟ್ರಗಳೊಂದಿಗೆ ಸಹಭಾಗಿತ್ವವನ್ನು ಹೆಚ್ಚಿಸುವ ಜತೆಯಲ್ಲಿ ಸ್ವಾವಲಂ ಬನೆಯ ದಿಸೆಯಲ್ಲೂ ದಾಪುಗಾಲಿರಿಸಿದೆ.

ಜಾಗತಿಕ ಮಟ್ಟದಲ್ಲಿ ಹಾಲಿ ನಡೆಯುತ್ತಿರುವ ಸಂಘರ್ಷ, ವಿಶ್ವ ರಾಷ್ಟ್ರ ಗಳನ್ನು ಆರ್ಥಿಕ ಸಂಕಷ್ಟ ಕಾಡುತ್ತಿರುವ ಹೊರತಾಗಿಯೂ ಭಾರತ ಅಭಿವೃದ್ಧಿ ಪಥ ದಲ್ಲಿ ದಾಪುಗಾಲಿಡುತ್ತಿದೆ. ಇದರ ನಡುವೆಯೇ ಭಯೋತ್ಪಾದನೆ, ಅಲ್ಲಲ್ಲಿ ಮೊಳಕೆ ಯೊಡೆಲೆತ್ನಿಸುತ್ತಿರುವ ಪ್ರತ್ಯೇಕತಾವಾದಿ ಸಂಘಟನೆಗಳು, ಗಡಿ ಪ್ರದೇಶ ದಲ್ಲಿ ಚೀನ ಮೂಲಸೌಕರ್ಯಗಳ ಅಭಿವೃದ್ಧಿ ಕಾರ್ಯದಲ್ಲಿ ನಿರತವಾಗಿರು ವುದು, ಸೇನಾಪಡೆಗಳ ಗಸ್ತನ್ನು ಹೆಚ್ಚಿಸುತ್ತಿರುವುದು ಹೀಗೆ ಈ ಎಲ್ಲ ಪ್ರತಿಕೂಲ ವಿದ್ಯ ಮಾನಗಳ ಹಿನ್ನೆಲೆಯಲ್ಲಿ ದೇಶದ ಭದ್ರತೆ ಮತ್ತು ಸಾರ್ವಭೌಮತೆಯ ರಕ್ಷಣೆಯ ನಿಟ್ಟಿನಲ್ಲಿ ಸಶಸ್ತ್ರ ಪಡೆಗಳ ಬಲವರ್ಧನೆಯ ಕೇಂದ್ರದ ನಿರ್ಧಾರ ಅತ್ಯಂತ ಗಮನಾರ್ಹ.

ಜಾಗತಿಕ ಸಮುದಾಯದೊಂದಿಗೆ ಶಾಂತಿ-ಸೌಹಾರ್ದ, ಸಹಭಾಗಿತ್ವದ ಮಂತ್ರ ವನ್ನು ಸದಾ ಪಠಿಸುತ್ತಲೇ ಬಂದಿರುವ ಭಾರತ, ಇದೇ ವೇಳೆ ತನ್ನನ್ನು ಕೆಣಕಲು ಬಂದ ದೇಶಗಳಿಗೆ ಸೂಕ್ತ ಪಾಠ ಕಲಿಸಿದೆ. ಇದೇ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಯಾವುದೇ ತೆರನಾದ ಸಂಭಾವ್ಯ ಪರಿಸ್ಥಿತಿಗಳನ್ನೆದುರಿಸಲು ದೇಶದ ಸೇನಾಪಡೆಗಳನ್ನು ಸರ್ವಸನ್ನದ್ಧವಾಗಿರಿಸಲು ಗರಿಷ್ಠ ಆದ್ಯತೆಯನ್ನು ನೀಡಿದೆ. ಈ ರಕ್ಷಣ ಕಾರ್ಯತಂತ್ರದ ಭಾಗವಾಗಿ ಸರಕಾರ ಈಗ ಭಾರತೀಯ ಸಶಸ್ತ್ರ ಪಡೆಗಳ ಸಾಮರ್ಥ್ಯ ವರ್ಧನೆಗೆ ಮುಂದಾಗಿದ್ದು ಮತ್ತಷ್ಟು ಸಮರ ವಿಮಾನಗಳನ್ನು ದೇಶದ ಸೇನಾ ಬತ್ತಳಿಕೆಗೆ ಸೇರ್ಪಡೆಗೊಳಿಸುವ ತೀರ್ಮಾನ ಕೈಗೊಂಡಿರುವುದು ಅತ್ಯಂತ ದಿಟ್ಟ ಹೆಜ್ಜೆಯಾಗಿದೆ.

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.