ಪ್ರಶ್ನೆ ಪತ್ರಿಕೆ ಸೋರಿಕೆ : ಸೇನೆ ನೇಮಕಾತಿಯಲ್ಲೂ ಭ್ರಷ್ಟಾಚಾರ 


Team Udayavani, Feb 27, 2017, 11:17 AM IST

Ankana-1.jpg

ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು ಮತ್ತು ಅದರ ಫ‌ಲಾನುಭವಿಯಾಗುವುದು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕಾನೂನು ಅಗತ್ಯವಿದೆ.  ಜೊತೆಗೆ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರವಾದ ಸುಧಾರಣೆಗಳಾಗಬೇಕು.

ಪ್ರಶ್ನೆ ಪತ್ರಿಕೆ ಸೋರಿಕೆ ಎನ್ನುವುದು ಈಗ ಮಾಮೂಲು ಪಿಡುಗಾಗಿ ಹೋಗಿದೆ.  ಈಗ ಪ್ರಶ್ನೆ ಪತ್ರಿಕೆ ಸೋರಿಕೆಯಾಗದಂತೆ ಪರೀಕ್ಷೆ ನಡೆಸುವುದೇ ಒಂದು ಭಾರೀ ಸವಾಲಿನ ಕೆಲಸ ಎನ್ನುವಂತಾಗಿದೆ. ಒಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದೆಂದರೆ ಯುದ್ಧಕ್ಕೆ ನಡೆಸುವಂತಹ ತಯಾರಿಯನ್ನು ನಡೆಸಬೇಕಾಗಿದೆ. ಇದೀಗ ರವಿವಾರ ನಡೆದ ಸೇನಾ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಈ  ಸಾಲಿಗೆ ಇನ್ನೊಂದು ಸೇರ್ಪಡೆ. ದೇಶಾದ್ಯಂತ 52 ಕೇಂದ್ರಗಳಲ್ಲಿ ಸೇನೆಗೆ ಗುಮಾಸ್ತರು, ಸ್ಟ್ರಾಂಗ್‌ಮ್ಯಾನ್‌ ಮತ್ತು ಟ್ರೇಡ್ಸ್‌ಮ್ಯಾನ್‌ಗಳನ್ನು ನೇಮಿಸಿಕೊಳ್ಳುವ ಸಲುವಾಗಿ ಪರೀಕ್ಷೆ ನಡೆಸಲಾಗಿತ್ತು. ಪುಣೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾದ ಮಾಹಿತಿ ಸಿಕ್ಕಿದ ಬಳಿಕ ಮಹಾರಾಷ್ಟ್ರ ಮತ್ತು ಗೋವಾ ಒಳಗೊಂಡಿರುವ ಪಶ್ಚಿಮ ಭಾರತದ ಆರು ಕೇಂದ್ರಗಳ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. 18 ಮಂದಿಯನ್ನು ಸೋರಿಕೆಗೆ ಸಂಬಂಧಿಸಿ ಬಂಧಿಸಲಾಗಿದೆ ಹಾಗೂ 300ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ವಿಚಾರಣೆಗೊಳಪಡಿಸಲಾಗಿದೆ. ಕೋಚಿಂಗ್‌ ಕ್ಲಾಸ್‌ಗಳೇ ಪ್ರಶ್ನೆಪತ್ರಿಕೆಯನ್ನು ವಿದ್ಯಾರ್ಥಿಗಳಿಗೆ ನೀಡಿವೆ ಹಾಗೂ ಕೆಲವೆಡೆಗಳಲ್ಲಿ ಸೇನೆಯ ಉದ್ಯೋಗಿಗಳೇ ಹೊಟೇಲುಗಳಲ್ಲಿ ಕುಳಿತು ಉತ್ತರ ಬರೆದಿದ್ದಾರೆ ಎನ್ನಲಾಗಿದೆ. ಅತ್ಯಂತ ಹೆಚ್ಚು ಶಿಸ್ತು ಮತ್ತು ದಕ್ಷತೆ ಬಯಸುವ ಸೇನೆಯಲ್ಲಿ ಈ ಪರಿಯ ಭ್ರಷ್ಟಾಚಾರ ಇದೆ ಎನ್ನುವುದು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ. 

ಪ್ರಶ್ನೆ ಪತ್ರಿಕೆ ಸೋರಿಕೆ ಎಂದಾಕ್ಷಣ ಕಣ್ಣೆದುರು ಬರುವುದು ಕಳೆದ ವರ್ಷ ಕರ್ನಾಟಕದಲ್ಲಿ ಸಂಭವಿಸಿದ ಘಟನೆ. ಪಿಯುಸಿ ರಸಾಯನ ಶಾಸ್ತ್ರ ಪ್ರಶ್ನೆ ಪತ್ರಿಕೆ ಎರಡೆರಡು ಸಲ ಸೋರಿಕೆಯಾಗಿ ಸರಕಾರ ಭಾರೀ ಮುಜುಗರಕ್ಕೀಡಾಗಿ ತಲೆತಗ್ಗಿಸುವಂತಾಗಿತ್ತು. ಅಂಕವೇ ಮುಖ್ಯವಾಗಿರುವ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ಪರೀಕ್ಷೆಗೆ ಎಲ್ಲಿಲ್ಲದ ಮಹತ್ವವಿದೆ.  ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಮರುಪರೀಕ್ಷೆ ನಡೆಸುವುದು ಅನಿವಾರ್ಯ ಎಂದು 2010ರ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್‌ ಹೇಳಿದೆ. ನೇಮಕಾತಿ ಪ್ರಕ್ರಿಯೆಯ ಪಾವಿತ್ರ್ಯವನ್ನು ಕಾಪಾಡುವ ಸಲುವಾಗಿ ಚಿಕ್ಕ ಸೋರಿಕೆಯಾಗಿದ್ದರೂ ಮರುಪರೀಕ್ಷೆ ನಡೆಸಲೇ ಬೇಕೆಂದು ನ್ಯಾಯಾಲಯ ಈ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ. 

ಅಚ್ಚರಿಯ ವಿಚಾರವೆಂದರೆ ಗುಮಾಸ್ತರಂತಹ ಚಿಕ್ಕ ಹುದ್ದೆಗಳಿಗೆ ನೇಮಕಾತಿಗಾಗಿ ನಡೆಯುವ ಪರೀಕ್ಷೆಗಳಲ್ಲೂ ಪ್ರಶ್ನೆಪತ್ರಿಕೆ ಸೋರಿಕೆಯಾಗುವುದು. ಅಭ್ಯರ್ಥಿಗಳ ಸಾಮಾನ್ಯಜ್ಞಾನವನ್ನು ಮತ್ತು ವೃತ್ತಿಗೆ ಸಂಬಂಧಿಸಿದ ಕೌಶಲ್ಯವನ್ನು ಅಳೆಯಲು ನಡೆಸುವ ಪರೀಕ್ಷೆಯನ್ನು ಎದುರಿಸುವಷ್ಟು ಜ್ಞಾನವೂ ಇಲ್ಲ ಎಂದಾದರೆ ಅವರು ಗಳಿಸುವ ವಿದ್ಯೆ ಯಾವ ರೀತಿಯದ್ದು ಎನ್ನುವ ಪ್ರಶ್ನೆ ಎದುರಾಗುತ್ತದೆ.  ಶಾಲಾ ಕಾಲೇಜುಗಳಲ್ಲಿ ನೈತಿಕತೆಯ ಶಿಕ್ಷಣ ಮರೆಯಾಗಿರುವುದೇ ಇದರ ಮೂಲಕಾರಣ. ಈಗ ಎಲ್ಲರೂ ಅಂಕಗಳ ಹಿಂದೆ ನಾಗಾಲೋಟದಲ್ಲಿರುವುದರಿಂದ ನೈತಿಕತೆ, ಮೌಲ್ಯಗಳೆಲ್ಲ ಅರ್ಥ ಕಳೆದುಕೊಂಡಿವೆ. ಪರೀಕ್ಷೆ  ನೆನಪಿನ ಶಕ್ತಿ ಪರೀಕ್ಷಿಸುವ ವಿಧಾನವೇ  ಹೊರತು ಅಭ್ಯರ್ಥಿಯ ನೈಜ ಸಾಮರ್ಥ್ಯ ಮತ್ತು ಕೌಶಲ್ಯ ಪರೀಕ್ಷಿಸುವ ಮಾಧ್ಯಮವಲ್ಲ. ಒಂದೆರಡು ಲಕ್ಷ ಕೊಟ್ಟರೆ ಪರೀಕ್ಷೆಗೆ ಮೊದಲೇ ಪ್ರಶ್ನೆಪತ್ರಿಕೆ ಸಿಗುತ್ತದೆ. ಹೀಗಿರುವಾಗ  ಕಷ್ಟಪಟ್ಟು ಕಲಿಯುವುದು  ಏಕೆ ಎಂಬ ಮನೋಭಾವ ಬೆಳೆಯುತ್ತಿದೆ. ಮೊಬೈಲ್‌, ವಾಟ್ಸಪ್‌, ಫೇಸ್‌ಬುಕ್‌ನಂತಹ ಆಧುನಿಕ ಸಂಪರ್ಕ ಮಾಧ್ಯಮಗಳು ಸೋರಿಕೆಯನ್ನು ಬಹಳ ಸುಲಭಗೊಳಿಸಿವೆ.
 
ಪ್ರಶ್ನೆ ಪತ್ರಿಕೆ ಸೋರಿಕೆ ಹಿಂದೆ ವ್ಯವಸ್ಥಿತವಾದ ಜಾಲ ಕಾರ್ಯವೆಸಗುತ್ತಿದೆ. ಕೆಲವೊಮ್ಮೆ ಪ್ರಶ್ನೆಪತ್ರಿಕೆಗಳು ಮುದ್ರಣವಾಗುತ್ತಿರುವಾಗಲೇ  ಜಾಲದ ಕೈಸೇರಿರುತ್ತದೆ. ಈ ಜಾಲ ರಾಜಕಾರಣಿಗಳ ಮತ್ತು ಉನ್ನತ ಅಧಿಕಾರಿಗಳ ನಂಟು ಹೊಂದಿರುತ್ತದೆ. ಆದರೆ ಸಿಕ್ಕಿ ಬೀಳುವುದು ಚಿಲ್ಲರೆ ಅಪರಾಧಿಗಳು ಮಾತ್ರ. ಹೀಗಾಗಿ ಪ್ರತಿವರ್ಷ ಸೋರಿಕೆ ಎನ್ನುವುದು ಮರುಕಳಿಸುತ್ತಲೇ ಇರುತ್ತದೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುವುದು ಮತ್ತು ಅದರ ಫ‌ಲಾನುಭವಿಯಾಗುವುದು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸುವ ಕಠಿಣ ಕಾನೂನು ರಚಿಸುವ ಅಗತ್ಯವಿದೆ. ಇದಕ್ಕೂ ಮಿಗಿಲಾಗಿ ನಮ್ಮ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರವಾದ ಸುಧಾರಣೆಗಳಾಗಬೇಕು. ಪರೀಕ್ಷೆಗಳು ನೆನಪಿನ ಶಕ್ತಿಯನ್ನು ಅಳೆಯುವ ಮಾನದಂಡವಾಗುವ ಬದಲು ಅಭ್ಯರ್ಥಿಯ ನೈಜ ಸಾಮರ್ಥ್ಯವನ್ನು ಪರೀಕ್ಷಿಸುವ ಅಳತೆಗೋಳಾಗಬೇಕು. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.