ಮಳೆಗಾಲ ಆರಂಭಕ್ಕೂ ಮುನ್ನವೇ ಸೂಕ್ತ ವ್ಯವಸ್ಥೆ ಮಾಡಿ


Team Udayavani, Apr 16, 2022, 6:00 AM IST

ಮಳೆಗಾಲ ಆರಂಭಕ್ಕೂ ಮುನ್ನವೇ ಸೂಕ್ತ ವ್ಯವಸ್ಥೆ ಮಾಡಿ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಕೆಲವು ಕಡೆಗಳಲ್ಲಿ ಮರ ಬಿದ್ದ, ಮನೆಗಳಿಗೆ ನೀರು ನುಗ್ಗಿರುವಂಥ ಪ್ರಕರಣಗಳು ವರದಿಯಾಗಿದೆ. ಪ್ರತಿ ಮಳೆಗಾಲದಲ್ಲೂ ಇಂಥ ಸಮಸ್ಯೆಗಳು ಮಾಮೂಲು ಎನ್ನುವಂಥಾಗಿದ್ದು, ಸರಕಾರ ಮತ್ತು ಅಧಿಕಾರಿಗಳು ಈ ಬಗ್ಗೆ ಕುರುಡಾಗಿದ್ದಾರೆ ಎಂಬ ಅನುಮಾನಗಳೂ ಜನಸಾಮಾನ್ಯರಲ್ಲಿ ಮೂಡಿವೆ. ಅದರಲ್ಲೂ ಬೆಂಗಳೂರಿನಲ್ಲಿ ಸುರಿದ ಮಳೆ, ಅಬ್ಬರವನ್ನೇ ಸೃಷ್ಟಿಸಿದ್ದು, ಕೆಲವು ಪ್ರದೇಶಗಳಲ್ಲಿ ತೀರಾ ಸಮಸ್ಯೆಯುಂಟಾಗಿರುವುದು ಕಂಡು ಬಂದಿದೆ.

ವಿಚಿತ್ರವೆಂದರೆ ರಾಜ್ಯದಲ್ಲಿ ಇನ್ನೂ ಮಳೆಗಾಲ ಆರಂಭವಾಗಿಲ್ಲ. ಈಗ ಮುಂಗಾರು ಪೂರ್ವ ಬೇಸಗೆ ಮಳೆ ಸುರಿಯುತ್ತಿದೆ. ಆದರೆ ಮೂರು ದಿನಗಳ ಮಳೆಯ ಪರಿಣಾಮದಿಂದಾಗಿ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿರುವುದು, ರಸ್ತೆಗಳು ನೀರಿನಿಂದ ತುಂಬಿರುವಂಥದ್ದು, ಅಲ್ಲಲ್ಲಿ ಮರ ಬಿದ್ದಿರುವಂಥದ್ದನ್ನು ಗಮನಿಸಬಹುದಾಗಿದೆ. ಹಾಗೆಯೇ ವಿದ್ಯುತ್‌ ಕಂಬವೊಂದು ಧರೆಗುರುಳಿ ಯುವಕನೊಬ್ಬ ಜೀವ ಕಳೆದುಕೊಂಡಿರುವ ಘಟನೆಯೂ ಬೆಂಗಳೂರಿನಲ್ಲಿಯೇ ನಡೆದಿರುವುದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ಪ್ರತೀ ಬಾರಿಯೂ ಮಳೆಗಾಲ ಶುರುವಾದ ಮೇಲೆ ಕಾಣಿಸಿಕೊಳ್ಳುತ್ತಿದ್ದ ಸಮಸ್ಯೆಗಳು ಈಗ ಒಂದಷ್ಟು ಬೇಗನೆ ಶುರುವಾಗಿರುವುದು ಸಮಸ್ಯೆ ಇನ್ನಷ್ಟು ಉಲ್ಪಣಕ್ಕೆ ಕಾರಣವಾಗಿವೆ. ಏಕೆಂದರೆ ಇನ್ನೂ ಮಳೆಗಾಲ ದೂರವಿದೆ ಎಂದೇ ಅಂದುಕೊಂಡಿರುವ ಸ್ಥಳೀಯಾಧಿಕಾರಿಗಳು, ಮಳೆಗಾಲ ಸಂದರ್ಭದ ಸಮಸ್ಯೆಗಳ ನಿಭಾವಣೆಗಾಗಿ ಅಗತ್ಯ ಸಿದ್ಧತೆ ಮಾಡಿಕೊಂಡೇ ಇಲ್ಲ. ಈಗಿನ ಸ್ಥಿತಿ ನೋಡಿದರೆ ಇದು ಎಲ್ಲರ ಕಣ್ಣಿಗೆ ಕಾಣಿಸುತ್ತಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಮಳೆಗಾಲದಲ್ಲಿ ಹೆಚ್ಚು ಹಾನಿಗೀಡಾಗುವ ಪ್ರದೇಶಗಳನ್ನು ಗುರುತಿಸಿ ಅಲ್ಲಿನ ಸಮಸ್ಯೆಗಳನ್ನು ನಿವಾರಿಸಲಿ. ಇಲ್ಲದಿದ್ದರೆ, ಮುಂದೆ ಬರುವ ಮಳೆಗಾಲದ ಸಂದರ್ಭದಲ್ಲಿ ಇನ್ನಷ್ಟು ಹೆಚ್ಚಿನ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಜತೆಗೆ ತುರ್ತು ಸಂದರ್ಭಕ್ಕಾಗಿ ಕೆಲವು ಸಿಬಂದಿ ನೇಮಕ ಮಾಡಲಿ. ವಿದ್ಯುತ್‌ ತಂತಿಗಳ ಮೇಲೆ ಮರದ ಕೊಂಬೆಗಳು ಬೀಳುವಂತಿದ್ದರೆ ಅಂಥವುಗಳನ್ನು ಬೇಗನೆ ತೆರವು ಮಾಡಲಿ. ರಸ್ತೆಗಳಲ್ಲಿನ ಗುಂಡಿಗಳನ್ನು ಮುಚ್ಚಿ ವಾಹನ ಸವಾರರ ಓಡಾಟಕ್ಕೆ ಅನುವು ಮಾಡಿಕೊಡಲಿ. ಇಲ್ಲದಿದ್ದರೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಮರ್ಯಾದೆ ಹೋಗುವುದು ಖಚಿತ.

ಇದು ಬೆಂಗಳೂರಿಗಾದರೆ, ಹಳ್ಳಿಗಳಲ್ಲಿ ಸಿಡಿಲಿನಿಂದ ಸಾಯುವವರ ಸಂಖ್ಯೆ ಹೆಚ್ಚು. ಇದಕ್ಕೆ ಕಾರಣ ನಮ್ಮಲ್ಲಿ ಇನ್ನೂ ಸಿಡಿಲು ಮುನ್ನೆಚ್ಚರಿಕಾ ವ್ಯವಸ್ಥೆ ಇಲ್ಲದಿರುವುದು. ಇದನ್ನು ಸೂಕ್ತರೀತಿಯಲ್ಲಿ ಬಳಸಿಕೊಂಡು ಮಾನವ ಮತ್ತು ಜಾನುವಾರುಗಳ ಪ್ರಾಣ ಉಳಿಸಬಹುದು. ಈಗಾಗಲೇ ಗ್ರಾಮಾಂತರ ಪ್ರದೇಶದಲ್ಲಿ ಇಂಥ ಹಲವಾರು ಪ್ರಕರಣಗಳನ್ನು ನಾವು ನೋಡಿದ್ದೇವೆ.

ಹಾಗೆಯೇ ಸಣ್ಣಪುಟ್ಟ ನಗರಗಳು, ಹಳ್ಳಿಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಮಸ್ಯೆಗಳನ್ನು ಗುರುತಿಸಿ ಇವುಗಳನ್ನೂ ನಿವಾರಿಸಬೇಕು. ಈ ಕೆಲಸಗಳನ್ನು ಸರಕಾರದ ಜತೆಗೆ, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳೂ ಸೇರಿಕೊಂಡು ಮಾಡಬೇಕು. ಈ ಬಗ್ಗೆ ಮೊದಲೇ ಎಚ್ಚರಿಕೆ ವಹಿಸದಿದ್ದರೆ ಅಪಾರ ಪ್ರಮಾಣದ ಹಾನಿ ಖಚಿತ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.