Article 370; ಭಾರತದ ಸಾರ್ವಭೌಮತೆಯನ್ನು ಎತ್ತಿಹಿಡಿದ ಸುಪ್ರೀಂ ತೀರ್ಪು


Team Udayavani, Dec 12, 2023, 5:39 AM IST

supreem

ಜಮ್ಮು – ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಪಡಿಸಿದ ಕೇಂದ್ರ ಸರಕಾರದ ನಿರ್ಣಯವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿಯುವ ಮೂಲಕ ಭಾರತದ ಸಾರ್ವಭೌಮತೆಯನ್ನು ಮತ್ತೂಮ್ಮೆ ಸ್ಪಷ್ಟಪಡಿಸಿದೆ. ನಾಲ್ಕು ವರ್ಷಗಳ ಹಿಂದೆ 370ನೇ ವಿಧಿಯನ್ನು ಭಾರತದ ಸಂಸತ್‌ ರದ್ದುಪಡಿಸಿದ ಅನಂತರ ಅಲ್ಲಿ ಹಲವು ಮಹತ್ತರವಾದ ಮತ್ತು ಗುಣಾತ್ಮಕವಾದ ಬದಲಾವಣೆಗಳಾಗಿರುವುದನ್ನು ಅಲ್ಲಗಳೆಯಲಾಗದು.

ಆದರೆ ಜಮ್ಮು-ಕಾಶ್ಮೀರಕ್ಕೆ ಇತಿಹಾಸದ ಅನಿವಾರ್ಯತೆಯಿಂದ ತಾತ್ಕಾಲಿಕ ವಾಗಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಇಷ್ಟು ವರ್ಷ ಮುಂದುವರಿ ಸಿಕೊಂಡು ಹೋಗಿದ್ದೇ ತೀರಾ ದುರಂತ. 2019ರಲ್ಲಿ ಪ್ರಧಾನಿ ಮೋದಿ ನೇತೃತ್ವದ ಸರಕಾರ 370ರ ವಿಧಿಯನ್ವಯ ನೀಡಲಾಗುವ ಎಲ್ಲ ಸ್ಥಾನಮಾನವನ್ನು ಹಿಂತೆಗೆದುಕೊಳ್ಳುವುದಾಗಿ ನಿರ್ಧರಿಸಿದ್ದು ಭಾರತೀಯ ಇತಿಹಾಸದ ಮಹತ್ವದ ಮೈಲಿಗಲ್ಲು. ಆದರೆ ಇದನ್ನು ಪ್ರಶ್ನಿಸಿ ಕೆಲವರು ಸರ್ವೋತ್ಛ ನ್ಯಾಯಾಲ ಯದ ಮೊರೆ ಹೋಗಿದ್ದುದರಿಂದ ಸಹಜವಾಗಿಯೇ ಇಡೀ ದೇಶದ ಕಣ್ಣು ನ್ಯಾಯಾಲಯದ ತೀರ್ಪಿನ ಮೇಲೆ ಇತ್ತು. ಆದರೆ ವಾದಿಗಳು ಮತ್ತು ಪ್ರತಿವಾದಿಗಳ ವಾದಗಳನ್ನು ಆಲಿಸಿಕೊಂಡ ನ್ಯಾಯಾ ಲಯ ಸಮರ್ಥನೀಯವಾದ ಹಾಗೂ ದೇಶದ ಸಾರ್ವಭೌಮತೆಗೆ ಪೂರಕ ವಾದ ತೀರ್ಪನ್ನು ಪ್ರಕಟಿಸಿರುವುದು ಸ್ವಾಗತಾರ್ಹ.

ಜಮ್ಮು-ಕಾಶ್ಮೀರದ ಸಂವಿಧಾನದ ಸಭೆಯಲ್ಲಿ ವಿಶೇಷ ಸ್ಥಾನಮಾನದ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಆದರೆ ಕಾಲಾನುಕ್ರಮೇಣ ಸಂವಿಧಾನ ಸಭೆಯೇ ರದ್ದಾಗಿದ್ದುದರಿಂದ ಈವಿಶೇಷ ಸ್ಥಾನಮಾನದ ನಿರ್ಣಯ ಶಾಶ್ವತ ವಾಗಿ ಉಳಿಯುತ್ತದೆ ಎಂದು ವಾದಿಸಿದ್ದ ಅರ್ಜಿದಾರರು ಸಂವಿಧಾನ ಸಭೆ ಕೈಗೊಂಡ ನಿರ್ಣಯವನ್ನು ಭಾರತದ ಸಂಸತ್‌ ಆಗಲಿ, ರಾಷ್ಟ್ರಪತಿಗಳಾಗಲಿ ತಿರಸ್ಕರಿಸುವ ಹಾಗಿಲ್ಲ ಎಂದು ವಾದ ಮಂಡಿಸಿದ್ದರು. ಈ ವಾದವನ್ನು ಖಂಡತುಂಡವಾಗಿ ತಳ್ಳಿ ಹಾಕಿದ ಸುಪ್ರೀಂ ಕೋರ್ಟ್‌ ಪೀಠ, ಭಾರತದ ಸಂಸತ್‌ಗೆ ರಾಜ್ಯಗಳ ಪರವಾಗಿ ನಿರ್ಧಾರ ಕೈಗೊಳ್ಳುವ ಹಕ್ಕಿದೆ. ಯಾವುದೇ ರಾಜ್ಯಕ್ಕೆ ಪ್ರತ್ಯೇಕ ಸಾರ್ವಭೌಮತೆಯ ಅಸ್ತಿತ್ವ ಇಲ್ಲ ಎಂದು ಹೇಳುವ ಮೂಲಕ ಭಾರತದ ಅಖಂಡತೆಯನ್ನು ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿದಿದೆ.
ಈ ತೀರ್ಪು ದೇಶದ ಪ್ರಗತಿ ವಿಚಾರದಲ್ಲಿ ದೂರಗಾಮಿ ಪರಿಣಾಮವನ್ನು ಬೀರುವುದರಲ್ಲಿ ಯಾವುದೇ ಅನುಮಾನ ಇಲ್ಲ. ಭಾರತದ ಅಭಿವೃದ್ಧಿಗೆ ಹಾಗೂ ಏಕತೆಗೆ ಇದು ಮಹತ್ವದ ದಾರಿದೀಪವಾದ ತೀರ್ಪು.

ಇದರ ಜತೆಗೆ ಮುಂದಿನ ವರ್ಷದೊಳಗೆ ಜಮ್ಮು-ಕಾಶ್ಮೀರದಲ್ಲಿ ಚುನಾ ವಣೆ ನಡೆಸಬೇಕೆಂದು ನ್ಯಾಯಪೀಠ ನಿರ್ದೇಶನ ನೀಡಿರುವುದರಿಂದ ಅಲ್ಲಿ ಪ್ರಜಾಪ್ರಭುತ್ವ ಮತ್ತೆ ಅರಳಬಹುದು ಎಂಬ ಭರವಸೆ ದೇಶವಾಸಿಗಳಲ್ಲಿ ಮೂಡಿದೆ. ನ್ಯಾಯಯುತವಾಗಿ ಚುನಾವಣೆ ನಡೆದು ಸಮರ್ಥ ಆಡಳಿತ ವ್ಯವಸ್ಥೆ ಅಲ್ಲಿಗೆ ಬಂದ ಅನಂತರ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್‌ ಶಾ ಅವರ ಸಂಕಲ್ಪ ಪೂರ್ಣಪ್ರಮಾಣದಲ್ಲಿ ಜಾರಿಗೆ ಬಂದಂತಾಗುತ್ತದೆ. ವಿಶೇಷ ಸ್ಥಾನಮಾನವನ್ನು ಹಿಂತೆಗೆದುಕೊಂಡ ಅನಂತರ ಜಮ್ಮು-ಕಾಶ್ಮೀರದಲ್ಲಿ ಪ್ರಗತಿಯ ಕನಸು ಅರಳಿದೆ. ಪ್ರವಾಸೋದ್ಯಮ ಚಿಗುರಿದೆ. ಕಳೆದ ಮೂರು ವರ್ಷಗಳಲ್ಲಿ ಆ ರಾಜ್ಯಗಳಲ್ಲಿ ಹೂಡಿಕೆ ಮಾಡಲು ಉದ್ಯಮಿಗಳು ಆಸಕ್ತಿ ವಹಿಸುತ್ತಿದ್ದು, 85,000 ಕೋಟಿ ರೂಗೂ ಹೆಚ್ಚು ಹೂಡಿಕೆ ಪ್ರಸ್ತಾವನೆ ಸರಕಾರದ ಮುಂದೆ ಬಂದಿದೆ. ಈ ಎಲ್ಲ ಬೆಳವಣಿಗೆಗಳು ಭಾರತೀಯರ ನಯಾಕಾಶ್ಮೀರದ ಕನಸಿಗೆ ಸೋಪಾನವಾಗಿದೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.