ಜನಸಂಖ್ಯೆ ಏರಿದಂತೆಯೇ ಸವಾಲು ಸಹ ಏರಿಕೆ


Team Udayavani, Nov 16, 2022, 6:00 AM IST

ಜನಸಂಖ್ಯೆ ಏರಿದಂತೆಯೇ ಸವಾಲು ಸಹ ಏರಿಕೆ

ಜಗತ್ತಿನ ಜನಸಂಖ್ಯೆ ಮಂಗಳವಾರಕ್ಕೆ ಎಂಟು ನೂರು ಕೋಟಿ ದಾಟಿ ಮುನ್ನಡೆದಿದೆ. ಹೆಚ್ಚುತ್ತಿರುವ ಜನಸಂಖ್ಯೆ ವರವೋ ಶಾಪವೋ ಎಂಬ ಬಗ್ಗೆ ಹಲವು ದಶಕಗಳಿಂದ ಪರ ವಿರೋಧದ ಚರ್ಚೆ ಮುಂದುವರಿದಿದೆ.

ಅದರಲ್ಲೂ ನಮ್ಮ ದೇಶದಲ್ಲಿ 141 ಕೋಟಿ ಮಂದಿ ಜನರು ಇದ್ದಾರೆ. ಮುಂದಿನ ವರ್ಷ ನಾವು ಜನಸಂಖ್ಯೆಯಲ್ಲಿ ಚೀನವನ್ನು ಮೀರಿಸಿ ಮೊದಲ ಸ್ಥಾನಕ್ಕೆ ಏರಲಿದ್ದೇವೆ ಎಂಬ ಬಗ್ಗೆ ವಿಶ್ವಸಂಸ್ಥೆ ಸೇರಿದಂತೆ ಹಲವು ಪರಿಣತ ಸಂಸ್ಥೆಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ. ವಿಶ್ವಸಂಸ್ಥೆಯ ಜನಸಂಖ್ಯಾ ನಿಧಿಯ ಪ್ರಕಾರ ನಮ್ಮ ದೇಶದಲ್ಲಿ 2050ರ ವೇಳೆಗೆ 166 ಕೋಟಿಗೆ ಏರಿಕೆಯಾಗಲಿದೆ.

ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಹನ್ನೊಂದು ವರ್ಷಗಳ ಅವಧಿಯಲ್ಲಿ ಜಗತ್ತಿನ ಸಂಖ್ಯೆ 700 ಕೋಟಿಯಿಂದ 800 ಕೋಟಿಗೆ ಏರಿಕೆಯಾಗಿದೆ.

ಜಗತ್ತಿನ ವಿವಿಧ ಭಾಗಗಳಲ್ಲಿ ಏರಿಕೆಯಾದ ಜೀವನ ಮಟ್ಟ ಸುಧಾರಣೆ, ಹೊಸ ವೈದ್ಯಕೀಯ ಆವಿಷ್ಕಾರಗಳು, ಪೌಷ್ಟಿಕಾಂಶಯುಕ್ತವಾದ ಆಹಾರದಿಂದಾಗಿ ಭಾರತವೂ ಸೇರಿದಂತೆ ವಿಶ್ವದಲ್ಲಿ ಅನುಕೂಲಕರ ವಾತಾವರಣ ಉಂಟಾಗಿದೆ. ಮುಂದಿನ 15 ವರ್ಷಗಳಲ್ಲಿ ಅದು 900 ಕೋಟಿಗೆ ಹೆಚ್ಚಲಿದೆ.

1800ನೇ ಇಸ್ವಿಯಿಂದ 1900ನೇ ಇಸ್ವಿಯ ವರೆಗೆ 100 ಕೋಟಿಯಿಂದ 200 ಕೋಟಿ ಜನಸಂಖ್ಯೆಯ ಬೆಳವಣಿಗೆ ಆಗಿತ್ತು. ವಿಶ್ವಸಂಸ್ಥೆಯ ವರದಿಯ ಪ್ರಕಾರ 2080ರ ವೇಳೆಗೆ ಈಗಿನದ್ದಕ್ಕಿಂತ ಹೆಚ್ಚಾಗಲಿದೆ. ಅನಂತರದ ವರ್ಷಗಳಲ್ಲಿ ಏರಿಕೆ ಆಗುವ ಬದಲು ಕುಸಿತ ಕಾಣಲಿದೆ ಎಂದು ಅದರಲ್ಲಿ ಅಭಿಪ್ರಾಯಪಡಲಾಗಿದೆ. ನಮ್ಮ ದೇಶದ ಜನಸಂಖ್ಯೆ ಹೆಚ್ಚುತ್ತಿ­ರುವ ಬಗ್ಗೆ ವಿಶ್ವಸಂಸ್ಥೆ ಹೀಗೆ ಉಲ್ಲೇಖಿಸಿದೆ “ದೇಶದಲ್ಲಿನ ಜನಸಂಖ್ಯೆಯ ಬೆಳವಣಿಗೆ ಸ್ಥಿರವಾಗುವತ್ತ ಸಾಗಿದೆ. ಒಟ್ಟಾರೆ ಫ‌ಲವತ್ತತೆ ಪ್ರಮಾಣ 2.2ರಿಂದ 2.0ಕ್ಕೆ ಇಳಿಕೆಯಾಗಿದೆ’ ಎಂದು ಹೇಳಿದೆ. 31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವ್ಯಾಪ್ತಿಯಲ್ಲಿ ಫ‌ಲವತ್ತತೆ ಪ್ರಮಾಣ ಶೇ.2.1ಕ್ಕೆ ಇಳಿದಿದೆ.

ಜನಸಂಖ್ಯೆ 800 ಕೋಟಿ ದಾಟಿದ್ದನ್ನು ವಿಶ್ವಸಂಸ್ಥೆ “ಅತ್ಯುತ್ತಮ ಮೈಲು­ಗಲ್ಲು’ ಎಂದು ಘೋಷಣೆ ಮಾಡಿದೆ ನಿಜ. ಆದರೆ ಅಂಥ ಅವಕಾಶಗಳು ಇವೆಯೇ ಎಂದು ನೋಡಬೇಕಾಗುತ್ತದೆ. ಇದರ ಜತೆಗೆ ಜಗತ್ತಿನಲ್ಲಿ ಜನ­ಸಂಖ್ಯೆಯ ಏರಿಕೆ ನಿಧಾನವಾಗುತ್ತಿದೆ ಎಂದೂ ವಿಶ್ವಸಂಸ್ಥೆ ಹೇಳಿಕೊಂಡಿದೆ.

ಒಟ್ಟಾರೆಯಾಗಿ ಹೇಳಿಕೊಂಡಾಗ ಎಲ್ಲ ವ್ಯವಸ್ಥೆಯೂ ಸುಧಾರಣೆ ಆಗಿರುವುದರಿಂದ ಜನಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಆದರೆ ಸದ್ಯಕ್ಕೆ ಈ ಅಂಶ ಮಾರಕವಾಗಿ ಪರಿಣಮಿಸಲಿದೆ ಎನ್ನುವುದು ಹಗಲಿನಷ್ಟೇ ಸತ್ಯ. ಹಾಗೆಂದು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿಭಾಯಿಸಿದರೆ ಅದು ಕಷ್ಟವಾಗಲಾರದು ನಿಜ. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಮತ್ತು ಪುರುಷರಲ್ಲಿ ಫ‌ಲವತ್ತತೆ ಕ್ಷೀಣಿಸುತ್ತಿದೆ. ಒಂದು ಅಧ್ಯಯನದ ಪ್ರಕಾರ 1950ರಲ್ಲಿ ಫ‌ಲವತ್ತತೆ ಪ್ರಮಾಣ 4.86 ಇದ್ದದ್ದು 2100ರ ವೇಳೆ 1.84ಕ್ಕೆ ಇಳಿಕೆಯಾಗಿದೆ. ಸಾವಿನ ಪ್ರಮಾಣ 46.46 ಇದ್ದದ್ದು 2100ರ ವೇಳೆಗೆ 82.6ಕ್ಕೆ ಏರಿಕೆಯಾಗಲಿದೆ ಎಂದು ಉಲ್ಲೇಖಿಸಲಾಗಿದೆ. ಹೀಗಾಗಿ ಜಗತ್ತಿನ ಸರಕಾರಗಳು ಜನಸಂಖ್ಯೆಯ ನಿಯಂತ್ರಣದತ್ತ ಗಮನ ಹರಿಸಬೇಕಾಗಿದೆ.

ಹೀಗೆ ಉಲ್ಲೇಖಿಸಲು ಕಾರಣವೂ ಇದೆ. ಈಗಿನ ಜನಸಂಖ್ಯೆಗೇ ಮೂಲ ಸೌಕರ್ಯ ಒದಗಿಸಲು ಸರಕಾರಗಳು ಪರದಾಡುತ್ತಿರುವ ಸಂದರ್ಭದಲ್ಲಿ ಇನ್ನು ಹೆಚ್ಚಾಗುತ್ತಿರುವ ಜನರಿಗೆ ಸೌಲಭ್ಯ ಒದಗಿಸಲು ಹೇಗೆ ಸಾಧ್ಯ ಎನ್ನುವುದು ಪ್ರಾಥಮಿಕ ಪ್ರಶ್ನೆಯಾಗುತ್ತದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.