ಹೊಸ ಸವಾಲಿನ ನಡುವೆ: ಭಾರತದಲ್ಲಿ ಶಿಶು ಮರಣ ಪ್ರಮಾಣ


Team Udayavani, Sep 12, 2020, 5:30 AM IST

ಭಾರತದಲ್ಲಿ ಶಿಶು ಮರಣ ಪ್ರಮಾಣ; ಹೊಸ ಸವಾಲಿನ ನಡುವೆ

ಸಾಂದರ್ಭಿಕ ಚಿತ್ರ

ಯಾವುದೇ ಒಂದು ದೇಶದಲ್ಲಿನ ಮಗು ಮತ್ತು ಶಿಶುಮರಣ ಪ್ರಮಾಣ ಎಷ್ಟಿದೆ ಎನ್ನುವುದರ ಮೇಲೆ ಆ ದೇಶದ ಒಟ್ಟಾರೆ ಆರೋಗ್ಯ ಚಿತ್ರಣವನ್ನು ಊಹಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ನೋಡುವುದಾದರೆ ಸ್ವಾತಂತ್ರ್ಯ ದೊರೆತು ದಶಕಗಳು ಕಳೆದ ನಂತರವೂ ಭಾರತದಲ್ಲಿ 5 ವರ್ಷಗಳಿಗಿಂತ ಕಡಿಮೆ ವಯೋಮಾನದ ಮಕ್ಕಳ ಮರಣ ಪ್ರಮಾಣ ನಿಜಕ್ಕೂ ಚಿಂತಾಜನಕ ಅಂಕಿಅಂಶಗಳನ್ನೇ ಎದುರಿಡುತ್ತಿತ್ತು.

ರಾಷ್ಟ್ರೀಯ ಸ್ತರದಲ್ಲಿ ಸ್ವಾಸ್ಥ್ಯ ಸವಲತ್ತುಗಳ ವಿಷಯದಲ್ಲಿ ಸರಕಾರಗಳು ಎಷ್ಟೇ ಭರವಸೆಯ ಚಿತ್ರಣಗಳನ್ನು, ವಾದಗಳನ್ನು ಎದುರಿಟ್ಟರೂ ಸಹ ಪರಿಸ್ಥಿತಿ ಬಿಗಡಾಯಿಸುತ್ತಲೇ ಸಾಗಿತ್ತು. ಆದರೆ ಕಳೆದ ಮೂರು ದಶಕಗಳ ಅವಧಿಯಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗಾಗಿ ಮಾಡಲಾದ ಪ್ರಯತ್ನಗಳ ಸಕಾರಾತ್ಮಕ ಫ‌ಲಿತಾಂಶವು ಈಗ ಕಾಣಲಾರಂಭಿಸಿದೆ. ಈಗ ಮಕ್ಕಳು ಮತ್ತು ಶಿಶುಮರಣ ಪ್ರಮಾಣದಲ್ಲಿ ಗಮನಾರ್ಹ ಇಳಿಕೆ ಕಾಣಿಸಿಕೊಳ್ಳುತ್ತಿದೆ. ವಿಶ್ವಸಂಸ್ಥೆಯ ಇತ್ತೀಚಿನ ವರದಿಯ ಪ್ರಕಾರ, ಭಾರತದಲ್ಲಿ 1990ರಿಂದ 2019ರ ನಡುವೆ ಮಕ್ಕಳ ಮರಣ ಪ್ರಮಾಣದಲ್ಲಿ ಗಣನೀಯ ಕುಸಿತ ಕಾಣಿಸಿಕೊಂಡಿದೆ. 1990ರಲ್ಲಿ ಶಿಶುಮರಣ ಪ್ರಮಾಣ ಪ್ರತಿ ಸಾವಿರಕ್ಕೆ 89ರಷ್ಟಿತ್ತು, ಕಳೆದ ವರ್ಷದ ವೇಳೆಗೆ ಇದು 28ಕ್ಕೆ ಇಳಿದಿದೆ. ಆದರೂ ಈಗಲೂ ಜಾಗತಿಕ ಶಿಶುಮರಣ ಪ್ರಮಾಣದಲ್ಲಿ ಮುಕ್ಕಾಲು ಭಾಗದಷ್ಟು ಘಟನೆಗಳು ಭಾರತ ಮತ್ತು ನೈಜೀರಿಯಾದಂಥ ರಾಷ್ಟ್ರಗಳಿಂದಲೇ ವರದಿ ಆಗುತ್ತಿವೆ.

ಭಾರತದಲ್ಲಿನ ಅಪಾರ ಪ್ರಮಾಣದ ಜನಸಂಖ್ಯೆಯನ್ನು ಪರಿಗಣಿಸಿದಾಗ ಯಾವ ಪ್ರಮಾಣವೂ ಚಿಕ್ಕದಲ್ಲ ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕಾಗುತ್ತದೆ. ಆದರೂ ಸೀಮಿತ ಸವಲತ್ತುಗಳ ನಡುವೆಯೂ ಗಮನಾರ್ಹ ಸುಧಾರಣೆ ಕಂಡುಬಂದಿರುವುದನ್ನು ಸ್ವಾಗತಿಸಲೇಬೇಕಿದೆ.

ಈಗ ಬಹುತೇಕ ಪ್ರಸವಗಳು ಆಸ್ಪತ್ರೆಯಲ್ಲೇ ಆಗತೊಡಗಿರುವುದು ಶಿಶುಮರಣ ಪ್ರಮಾಣ ತಗ್ಗುವುದಕ್ಕೆ ಪ್ರಮುಖ ಕಾರಣ. ಇನ್ನು ನವಜಾತ ಶಿಶುಗಳಿಗೆ ಲಸಿಕೆಯ ಲಭ್ಯತೆಯೂ ಅಪಾಯ ತಗ್ಗುವಂತೆ ಮಾಡಿದೆ. ಆದರೆ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೌಷ್ಟಿಕ ಆಹಾರದ ಲಭ್ಯತೆ ಬಹಳ ಮುಖ್ಯವಾಗುತ್ತದೆ. ತಾಯಿಯಲ್ಲಿನ ಅಪೌಷ್ಟಿಕತೆಯೂ ಮಕ್ಕಳಿಗೆ ಆರೋಗ್ಯ ಸಮಸ್ಯೆಗಳನ್ನು ಹೆಚ್ಚಿಸಿಬಿಡುತ್ತದೆ. ಈ ನಿಟ್ಟಿನಲ್ಲಿ ಪೌಷ್ಟಿಕ ಆಹಾರ ಪೂರೈಕೆಯ ವ್ಯವಸ್ಥೆಯನ್ನು ಸದೃಢಗೊಳಿಸಬೇಕಾದ ಅಗತ್ಯವಿದೆ.

ಈ ಸುಧಾರಣೆಯ ನಡುವೆಯೇ ಕೋವಿಡ್‌ ಬಂದಿರುವುದು ಆತಂಕದ ವಿಚಾರವೇ ಸರಿ. ಏಕೆಂದರೆ, ಕೋವಿಡ್‌ ಸಮಯದಲ್ಲಿ ಲಾಕ್‌ಡೌನ್‌ ಜಾರಿಯಲ್ಲಿದ್ದದ್ದು, ನಿರುದ್ಯೋಗದ ಸಮಸ್ಯೆ ಎದುರಾಗಿದ್ದು, ಆಸ್ಪತ್ರೆಗಳಿಗೆ ಹೋಗಲು ಜನ ಹಿಂಜರಿದದ್ದು, ಆರೋಗ್ಯ ವ್ಯವಸ್ಥೆಯ ಗಮನವೆಲ್ಲ ಕೋವಿಡ್‌ಗೆà ಮೀಸಲಾಗಿರುವುದು… ಇವೆಲ್ಲ ಅಂಶಗಳನ್ನು ಪರಿಗಣಿಸಿದಾಗ, ಶಿಶುಮರಣ ಪ್ರಮಾಣದಲ್ಲಿ ಮತ್ತೆ ಏರಿಕೆಯಾಗುವ ಸಂಭಾವ್ಯತೆ ಇದೆ. ಈ ಕಾರಣಕ್ಕಾಗಿಯೇ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕೈಜೋಡಿಸಿ ಸ್ವಾಸ್ಥ್ಯ ಸೇವೆಗಳ ಸುಧಾರಣೆಗೆ ಕಟಿಬದ್ಧವಾಗಿ ಮುನ್ನಡೆಯಬೇಕಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.