ಬಂಡೀಪುರ ರಾತ್ರಿ ಸಂಚಾರ ವಿಚಾರ ರಾಜಕೀಯ ಬೇಡ


Team Udayavani, Oct 4, 2019, 5:45 AM IST

bandipura

ಬಂಡೀಪುರ ಹುಲಿ ಸಂರಕ್ಷಿತಾರಣ್ಯ ಮೂಲಕ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯ ವರೆಗೆ ಸದ್ಯ ಜಾರಿಯಲ್ಲಿರುವ ಇರುವ ಸಂಚಾರ ನಿಷೇಧ ತೆಗೆದು ಹಾಕಬೇಕು ಎಂಬ ಒತ್ತಾಯಕ್ಕೆ ಮತ್ತೆ ಜೀವ ಬಂದಿದೆ. ಅದಕ್ಕೆ ಮುಖ್ಯ ಕಾರಣಕರ್ತರು ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರು. ಸದ್ಯ ಅವರು ವಯನಾಡ್‌ ಲೋಕಸಭಾ ಕ್ಷೇತ್ರದ ಸಂಸದರು. ಹೀಗಾಗಿ ಕ್ಷೇತ್ರದ ಜನರ ಹಿತ ಕಾಯುವ ಕೆಲಸ ಮಾಡಬೇಕು ಎಂಬ ವಿಚಾರ ಹಗಲಿನಷ್ಟೇ ಸತ್ಯ. ಆದರೆ, ಅದೊಂದೇ ವಿಚಾರವೇ? ಸಂಚಾರ ನಿಷೇಧ ಏಕೆ ಮಾಡಲಾಯಿತು ಎನ್ನುವುದಕ್ಕೆ 2009ರಲ್ಲಿ ಬಂಡೀಪುರ ವ್ಯಾಪ್ತಿಯ ಅರಣ್ಯಾಧಿಕಾರಿಗಳು, ಪರಿಸರವಾದಿಗಳು ಚಾಮರಾಜನಗರ ಜಿಲ್ಲಾಡಳಿತಕ್ಕೆ ವರದಿ ನೀಡಿ, ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ ಅದರಿಂದ ಬಹು ಅಮೂಲ್ಯವಾಗಿರುವ ಜೀವ ಸಂಕುಲಕ್ಕೆ ಅಪಾಯವಿದೆ. ಹೀಗಾಗಿ, ನಿಷೇಧ ಹೇರುವ ಬಗ್ಗೆ ಶಿಫಾರಸು ಮಾಡಿದ್ದರಿಂದ ಅಂದಿನ ಜಿಲ್ಲಾಧಿಕಾರಿ ನಿಷೇಧ ಹೇರಿದ್ದರು. ಆ ದಿನದಿಂದ ಇದುವರೆಗೆ ಕೇರಳ ಸರ್ಕಾರ ರಾಜ್ಯ ಸರ್ಕಾರದ ಮೇಲೆ ಇನ್ನಿಲ್ಲದ ರೀತಿಯಲ್ಲಿ ನಿಷೇಧ ತೆರವಿಗೆ ಒತ್ತಡ ಹೇರುತ್ತಾ ಬಂದಿದೆ. ಅದರ ಹಿಂದೆ ಜನಹಿತದ ಕಾರಣಗಳಿಗೆ ಬದಲಾಗಿ ವಾಣಿಜ್ಯಿಕ ಸ್ವಹಿತಾಸಕ್ತಿಗಳು ಇವೆ ಎನ್ನುವುದು ಬಹಿರಂಗ ಸತ್ಯವೇ.

ರಾಜಕೀಯವಾಗಿ, ಜನ ಸಾಮಾನ್ಯರಿಗೆ ಅನಾನುಕೂಲವಾಗುತ್ತದೆ ಎಂಬ ಮುಖವಾಡವನ್ನು ದೇವರೊಲಿದ ರಾಜ್ಯದ ಆಡಳಿತಗಾರರು ಮಂಡಿಸಿದ ವಾದಕ್ಕೆ ಕರ್ನಾಟಕ ಸರ್ಕಾರ ಮಣಿದೇ ಇಲ್ಲ ಎನ್ನುವುದೊಂದೇ ಇದುವರೆಗಿನ ಬಲುದೊಡ್ಡ ಸಮಾಧಾನದ ವಿಚಾರ. ಈ ನಿಟ್ಟಿನಲ್ಲಿ ನಮ್ಮ ಸರ್ಕಾರವನ್ನು ಮುನ್ನಡೆಸಿದ್ದ ವಿವಿಧ ಪಕ್ಷಗಳ ನಾಯಕರು ಅಭಿನಂದನಾರ್ಹರೇ ಹೌದು.

ಬಂಡೀಪುರದಲ್ಲಿ ಏಕೆ ರಾತ್ರಿ ಸಂಚಾರ ನಿಷೇಧ ಎನ್ನುವುದಕ್ಕೆ ಹಲವು ರೀತಿಯಲ್ಲಿ ಅರ್ಹ ತಜ್ಞರೇ ಅಭಿಪ್ರಾಯಗಳನ್ನು ಮುಂದಿಟ್ಟಿದ್ದಾರೆ. ರಾತ್ರಿ ನಿಷೇಧ ಹೊರತಾಗಿಯೂ 2009ರಲ್ಲಿ 2, 2010ರಲ್ಲಿ 3, 2011ರಲ್ಲಿ 7, 2012ರಲ್ಲಿ 10, 2013ರಲ್ಲಿ 6, 2014ರಲ್ಲಿ 01, 2015ರಲ್ಲಿ 2, 2016ರಲ್ಲಿ 1, 2017ರಲ್ಲಿ 2, 2018ರಲ್ಲಿ 2 ವನ್ಯಜೀವಿಗಳು ವಾಹನಾಘಾತಕ್ಕೆ ಜೀವ ಕಳೆದುಕೊಂಡಿವೆ. ವಾಹನ ವೇಗ ಕಡಿಮೆ ಮಾಡಬಹುದಲ್ಲವೇ ಎಂಬ ಸಲಹೆಯ ಮಾತುಗಳು ಬರಬಹುದು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಕೇರಳ ಸರ್ಕಾರ ಮೊರೆ ಹೋಗಿ, ನಿಷೇಧ ರದ್ದು ಮಾಡುವಂತೆ ಅನುಕೂಲ ಮಾಡಿಕೊಡಬೇಕು ಎಂದು ಕೇಳಿಕೊಂಡಿದೆ. ಅದರಂತೆ ಪರ್ಯಾಯ ಮಾರ್ಗಗಳ ಬಗ್ಗೆ ವಿವರಣೆ ಸಲ್ಲಿಸಲು ಸೂಚಿಸಿದೆ. ಅರಣ್ಯ ಪ್ರದೇಶದಲ್ಲಿ ಎತ್ತರಿಸಿದ ರಸ್ತೆ ನಿರ್ಮಿಸುವ ಬಗ್ಗೆಯೂ ಕೂಡ ಕೇರಳ ಸರ್ಕಾರ ಸಲಹೆ ಮಾಡಿದೆ. ಈ ವರ್ಷದ ಬೇಸಗೆಯಲ್ಲಿ ನಾಗರಹೊಳೆ ಅಭಯಾರಣ್ಯದ ಹೆಕ್ಟೇರುಗಟ್ಟಲೆ ಅರಣ್ಯ ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ಇದರ ಜತೆಗೆ ವರ್ಷದಿಂದ ವರ್ಷಕ್ಕೆ ಅರಣ್ಯ ಪ್ರದೇಶ ಒತ್ತುವರಿಯಾಗುವ ಬಗ್ಗೆ ಆತಂಕಕಾರಿ ವರದಿ ಸರ್ಕಾರದ ವತಿಯಿಂದಲೇ ಬಿಡುಗಡೆಯಾಗುತ್ತಿದೆ. ಇದರ ಜತೆಗೆ ವನ್ಯಜೀವಿಗಳಿಗೆ ತೊಂದರೆಯಾಗದಿರಲಿ ಎಂದು ಎತ್ತರಿಸಿದ ಮಾರ್ಗ ನಿರ್ಮಾಣಗೊಂಡರೆ ಅದು ಯಾವಾಗ ಮುಕ್ತಾಯವಾದೀತೋ ಎಂದು ಹೇಳಲು ಕಷ್ಟ ಸಾಧ್ಯ.

ಹೀಗಾಗಿ, ವಯನಾಡ್‌ ಸಂಸದರಾಗಿರುವ ರಾಹುಲ್‌ ಗಾಂಧಿಯವರು ಸ್ವತಃ ಬಂಡೀಪುರದಲ್ಲಿ ಯಾವ ಕಾರಣಕ್ಕಾಗಿ ರಾತ್ರಿ ವೇಳೆ ಸಂಚಾರ ನಿಷೇಧ ಮಾಡಲಾ ಯಿತು, ಅದಕ್ಕಿಂತ ಮೊದಲು ಎಷ್ಟೊಂದು ಅನಾಹುತಗಳಾಗಿವೆ, ಅರಣ್ಯ ನಾಶದಿಂದ ಅವರದ್ದೇ ಸ್ವಕ್ಷೇತ್ರದಲ್ಲಿ ಏನೇನು ತೊಂದರೆ ಸವಾಲುಗಳು ಉಂಟಾಗಿವೆ ಮತ್ತು ಉಂಟಾಗಬಹುದು ಎಂಬದರ ಬಗ್ಗೆ ಅಧ್ಯಯನ ಮಾಡಬೇಕು. ಈ ಬಗ್ಗೆ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯಲ್ಲಿ ಅವರಿಗೆ ವಿಶ್ವಾಸಾರ್ಹ ವ್ಯಕ್ತಿಯ ಮೂಲಕವೇ ಮಾಹಿತಿ ಪಡೆದುಕೊಳ್ಳಲಿ. ಎಲ್ಲದಕ್ಕಿಂತ ಹೆಚ್ಚಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸಿಗರು ತಮ್ಮ ಹಿರಿಯ ನಾಯಕನ ಧೋರಣೆ ಬಗ್ಗೆ ಆಕ್ಷೇಪ ಮಾಡಬೇಕಾಗಿತ್ತು. ಆದರೆ, ಅವರು ಆ ರೀತಿಯ ನಿರ್ಧಾರ ಕೈಗೊಳ್ಳದೇ ಇರುವುದು ಸರಿಯಲ್ಲ. ಅರಣ್ಯ ಕರ್ನಾಟಕ ಅಥವಾ ಕೇರಳದ ವ್ಯಾಪ್ತಿಯದ್ದೇ ಆಗಲಿ ನಾಶಗೊಂಡರೆ ಅದರಿಂದ ಎಲ್ಲರಿಗೂ ಹಾನಿಯೇ. ಈ ನಿಟ್ಟಿನಲ್ಲಿ ಬದಲಿ ವ್ಯವಸ್ಥೆಯ ಬಗ್ಗೆ ಆಲೋಚನೆ ಮಾಡುವುದರ ಬಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್‌ ಮತ್ತು ವಯನಾಡ್‌ ಸಂಸದರು ಕುಳಿತು ಯೋಚನೆ ಮಾಡುವುದು ಉತ್ತಮ. ಅಮೇಠಿಯಲ್ಲಿ ಸಿಕ್ಕದ ರಾಜಕೀಯ ಪುನರುಜ್ಜೀವನವನ್ನು ರಾಹುಲ್‌ ಅವರು ಕೇರಳದ ಮೂಲಕ ಮಾಡದೇ ಇರುವುದೊಳಿತು.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.