ಬ್ಯಾಂಕ್‌ ವಿಲೀನ : ಸಾಧಕಬಾಧಕಗಳ ಅಧ್ಯಯನವಾಗಬೇಕಿತ್ತು


Team Udayavani, Aug 31, 2019, 5:30 AM IST

bank

ತ್ತೂಂದು ಸುತ್ತಿನ ಬ್ಯಾಂಕ್‌ ವಿಲೀನ ಪ್ರಕ್ರಿಯೆಗೆ ಸರಕಾರ ಮುಂದಾಗಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಈ ಕುರಿತು ಘೋಷಣೆಯನ್ನು ಮಾಡಿದ್ದು,ಆ ಪ್ರಕಾರ ದೇಶದಲ್ಲಿ ಇನ್ನು 12 ರಾಷ್ಟ್ರೀಕೃತ ಬ್ಯಾಂಕ್‌ಗಳು ಮಾತ್ರ ಉಳಿಯಲಿವೆ. ಈ ಸಲ ನಾಲ್ಕು ದೊಡ್ಡ ಮಟ್ಟದ ವಿಲೀನಗಳನ್ನು ಮಾಡಲು ಉದ್ದೇಶಿಸಲಾಗಿದೆ. ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌, ಯುನೈಟೆಡ್‌ ಬ್ಯಾಂಕ್‌ ಮತ್ತು ಓರಿಯೆಂಟಲ್‌ ಬ್ಯಾಂಕ್‌ ಆಫ್ ಕಾಮರ್ಸ್‌ ಬ್ಯಾಂಕ್‌ಗಳ ವಿಲೀನ ಈ ಪೈಕಿ ಅತಿ ದೊಡ್ಡದು. ಈ ಸುತ್ತಿನ ವಿಲೀನದಲ್ಲಿ ಕರ್ನಾಟಕದ ಮೂರು ಪ್ರಮುಖ ಬ್ಯಾಂಕ್‌ಗಳು ಒಳಗೊಂಡಿವೆ. ಈ ಪೈಕಿ ಕೆನರಾ ಬ್ಯಾಂಕ್‌ನೊಂದಿಗೆ ಸಿಂಡಿ ಕೇಟ್‌ ಬ್ಯಾಂಕ್‌ ವಿಲೀನವಾಗಲಿದೆ. ಕಾರ್ಪೋರೇಶನ್‌ ಬ್ಯಾಂಕ್‌, ಆಂಧ್ರ ಬ್ಯಾಂಕ್‌ಗಳುಯೂನಿಯನ್‌ ಬ್ಯಾಂಕ್‌ ಜತೆ ವಿಲೀನವಾಗಲಿದೆ.

ಕಳೆದ ಎಪ್ರಿಲ್‌ನಲ್ಲಷ್ಟೇ ಕರಾವಳಿ ಮೂಲದ ವಿಜಯ ಬ್ಯಾಂಕ್‌ ಅನ್ನು ಗುಜರಾತಿನ ಬ್ಯಾಂಕ್‌ ಆಫ್ ಬರೋಡದ ಜತೆಗೆ ವಿಲೀನಗೊಳಿಸಲಾಗಿತ್ತು. ದೇನಾ ಬ್ಯಾಂಕ್‌ ಕೂಡ ಇದರ ಜತೆ ಸೇರಿಕೊಂಡಿತ್ತು. ರಾಜ್ಯದಲ್ಲಿ ಕರಾವಳಿಯೊಂದೇ ನಾಲ್ಕು ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ದೇಶಕ್ಕೆ ನೀಡಿದ್ದು, ಈ ನಾಲ್ಕೂ ಬ್ಯಾಂಕ್‌ಗಳ ಆರ್ಥಿಕ ಆರೋಗ್ಯವೂ ಸುಸ್ಥಿರವಾಗಿಯೇ ಇದೆ. ಕರಾವಳಿ ಕರ್ನಾಟಕ ಬ್ಯಾಂಕ್‌ಗಳ ಮೂಲಕ ದೇಶದಲ್ಲಿ ತನ್ನ ಅಸ್ಮಿತೆಯನ್ನು ತೋರಿಸುತ್ತಿದೆ. ಹೀಗೆ ಉತ್ತಮ ಸ್ಥಿತಿಯಲ್ಲಿರುವ ಬ್ಯಾಂಕ್‌ಗಳನ್ನು ಬೇರೊಂದು ಬ್ಯಾಂಕಿನ ಜತೆಗೆ ವಿಲೀನಗೊಳಿಸುವಾಗ ಆ ಭಾಗದ ಜನರ ಭಾವನೆಗೂ ಸಾಕಷ್ಟು ನೋವಾಗುತ್ತದೆ. ವಿಜಯ ಬ್ಯಾಂಕ್‌ ವಿಲೀನಕ್ಕೆ ಭಾರೀ ಪ್ರತಿರೋಧ ವ್ಯಕ್ತವಾಗಿದ್ದರೂ ಅದನ್ನು ಲೆಕ್ಕಿಸದೆ ವಿಲೀನ ಪ್ರಕ್ರಿಯೆಯನ್ನು ಮುಂದುವರಿಸಲಾಗಿತ್ತು ಹಾಗೂ ಎಪ್ರಿಲ್‌ನಿಂದ ಅದು ಬ್ಯಾಂಕ್‌ ಆಫ್ ಬರೋಡದ ಜತೆಗೆ ಗುರುತಿಸಿಕೊಂಡಿದೆ.

ಈಗ ಸಿಂಡಿಕೇಟ್‌, ಕೆನರಾ ಮತ್ತು ಕಾರ್ಪೋರೇಶನ್‌ ಬ್ಯಾಂಕ್‌ಗಳು ವಿಲೀನದ ಸುಳಿಗೆ ಸಿಲುಕಿವೆ. ಸರಕಾರಕ್ಕೆ ಈ ವಿಲೀನ ನಿರ್ಧಾರವನ್ನು ಸಮರ್ಥಿಸಲು ಅನೇಕ ಕಾರಣಗಳಿರಬಹುದು. ಆದರೆ ನಮ್ಮದೇ ಬ್ಯಾಂಕ್‌ ಎಂಬ ಭಾವನಾತ್ಮಕ ನಂಟು ಹೊಂದಿರುವ ಜನರಿಗೆ ಆಗುವ ನೋವು ಆಡಳಿತ ನಡೆಸುವವರಿಗೆ ಅರ್ಥವಾಗುವುದಿಲ್ಲ. ಈ ಸುತ್ತಿನ ವಿಲೀನದೊಂದಿಗೆ ಕರ್ನಾಟಕದ ಮೂರು ಪ್ರಮುಖ ಬ್ಯಾಂಕ್‌ಗಳು ಅಸ್ತಿತ್ವ ಕಳೆದುಕೊಂಡಂತಾಗುವುದು. ಸಿಂಡಿಕೇಟ್‌ ಮತ್ತು ಕೆನರಾ ಬ್ಯಾಂಕ್‌ ವಿಲೀನ ಪ್ರಕ್ರಿಯೆಯಲ್ಲಿ ಒಂದು ಬ್ಯಾಂಕಿನ ಹೆಸರು ಉಳಿಯುವ ಸಾಧ್ಯತೆಯಿದೆ. ಸಾಮಾನ್ಯವಾಗಿ ದೊಡ್ಡ ಬ್ಯಾಂಕಿನ ಹೆಸರು ಉಳಿಸಿಕೊಳ್ಳುವುದು ರೂಢಿ. ಈ ವಿಲೀನದ ಬಳಿಕ ಇದು ದೇಶದ ನಾಲ್ಕನೇ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್‌ ಎಂದು ಗುರುತಿಸಲ್ಪಡಲಿದ್ದು ಒಟ್ಟು ವ್ಯವಹಾರ 15.20 ಲಕ್ಷ ಕೋ.ರೂ.ಗೇರಲಿದೆ.

ವಸೂಲಾಗದ ಸಾಲದ ಮೊತ್ತ ಕಳವಳಕಾರಿಯಾಗಿ ಹೆಚ್ಚಿರುವುದರಿಂದ ಬ್ಯಾಂಕಿಂಗ್‌ ವಲಯ ಪ್ರಸ್ತುತ ಭಾರೀ ಸಂಕಟ ಎದುರಿಸುತ್ತಿದೆ. ಆರ್ಥಿಕ ಹಿಂಜರಿತವೂ ಬ್ಯಾಂಕುಗಳ ಹಣಕಾಸು ಆರೋಗ್ಯವನ್ನು ಹದಗೆಡಿಸುತ್ತಿವೆ.ಬ್ಯಾಂಕ್‌ಗಳ ಗಾತ್ರವನ್ನು ಹಿರಿದಾಗಿಸುವ ಮೂಲಕ ಅವುಗಳ ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಿ ಜಾಗತಿಕ ಬ್ಯಾಂಕ್‌ಗಳಿಗೆ ಸರಿಸಾಟಿಯಾಗುವಂತೆ ಮಾಡುವುದು ವಿಲೀನದ ಉದ್ದೇಶ ಎಂದು ಸರಕಾರ ಹೇಳುತ್ತಿದ್ದರೂ ಅನುತ್ಪಾದಕ ಸಾಲದ ಸುಳಿಯಿಂದ ಬ್ಯಾಂಕ್‌ಗಳನ್ನು ಪಾರು ಮಾಡುವ ಸಾಹಸ ಇದು ಎನ್ನುವುದು ನಿಜವಾದ ಕಾರಣ ಎಂದು ಆರ್ಥಿಕ ತಜ್ಞರು ವಿಶ್ಲೇಷಿಸುತ್ತಿದ್ದಾರೆ. ದೊಡ್ಡದೆಲ್ಲ ಶ್ರೇಷ್ಠವೂ ಅಲ್ಲ, ಸದೃಢವೂ ಅಲ್ಲ ಎನ್ನುವುದು ವಿಲೀನವನ್ನು ವಿರೋಧಿಸುತ್ತಿರುವ ತಜ್ಞರ ತರ್ಕ.

ಸ್ಟೇಟ್‌ ಬ್ಯಾಂಕಿನ ಜತೆಗೆ ಅದರ ಐದು ಉಪ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ದೇಶದ ಅತಿ ದೊಡ್ಡ ಬ್ಯಾಂಕ್‌ ಮಾಡಲಾಗಿದ್ದರೂ ಅದರ ಸತ್ಪರಿಣಾಮಗಳು ಇನ್ನೂ ಗೋಚರಕ್ಕೆ ಬಂದಿಲ್ಲ. ಆದೇ ರೀತಿ ವಿಜಯ ಬ್ಯಾಂಕ್‌ ವಿಲೀನದಿಂದ ಆಗಿರುವ ಲಾಭವೇನು ಎನ್ನುವುದು ಕೂಡಾ ಅನುಭವಕ್ಕೆ ಬಂದಿಲ್ಲ. ಆರಂಭದ ಎರಡು ವಿಲೀನಗಳ ಸಾಧಕಬಾಧಕಗಳನ್ನು ನೋಡಿಕೊಂಡು ಮುಂದಿನ ಸುತ್ತಿನ ವಿಲೀನ ಪ್ರಕ್ರಿಯೆಯನ್ನು ಪ್ರಾರಂಭಿಸುವುದು ಆರ್ಥಿಕ ಸ್ಥಿತಿ ಕಂಗಾಲಾಗಿರುವ ಈ ಸಂದರ್ಭದಲ್ಲಿ ವಿಹಿತವಾಗುತ್ತಿತ್ತು.

ಸ್ವಾತಂತ್ರಾéನಂತರ 39 ಬ್ಯಾಂಕ್‌ ವಿಲೀನಗಳು ನಡೆದಿದ್ದು, ಅವುಗಳಿಂದ ಆರ್ಥಿಕತೆಯ ಮೇಲಾಗಿರುವ ಪರಿಣಾಮಗಳೇನು ಎನ್ನುವುದನ್ನು ಅಧ್ಯಯನ ನಡೆಸಲು ಇದು ಸಕಾಲ. ಸರ್ವರಿಗೂ ಬ್ಯಾಂಕ್‌ ಸೌಲಭ್ಯ ಸಿಗಬೇಕು ಎನ್ನುವುದು ಸರಕಾರದ ಆಶಯ.ಬ್ಯಾಂಕ್‌ ಸೇವೆಯ ವ್ಯಾಪ್ತಿಗೆ ಒಳಪಡದೇ ಇದ್ದ ಗ್ರಾಮೀಣ ಭಾಗದವರನ್ನು ಸೇವಾವ್ಯಾಪ್ತಿಗೆ ತರುವ ಉದ್ದೇಶದಿಂದಲೇ ಜನಧನ ಕಾರ್ಯಕ್ರಮವನ್ನು ಪ್ರಾರಂಭಿಸಲಾಗಿದೆ. ಆದರೆ ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು ವಿಲೀನಗೊಳಿಸುತ್ತಿರುವ ಪ್ರಸ್ತುತ ನಡೆ ಜನರನ್ನು ಬ್ಯಾಂಕಿನಿಂದ ದೂರ ಮಾಡದಂತೆ ನೋಡಿಕೊಳ್ಳಬೇಕಿದೆ. ದೊಡ್ಡ ಬ್ಯಾಂಕ್‌ಗಳಿಂದ ಕಾರ್ಪೋರೇಟ್‌ ಕುಳಗಳಿಗೆ ಮಾತ್ರ ಪ್ರಯೋಜನವಾದರೆ ಬ್ಯಾಂಕ್‌ ರಾಷ್ಟ್ರೀಕರಣದ ಉದ್ದೇಶವೇ ವಿಫ‌ಲವಾಗಬಹುದು.

ಟಾಪ್ ನ್ಯೂಸ್

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.