ಚೌತಿ ವೇಳೆ ಮೈತುಂಬಾ ಇರಲಿ ಎಚ್ಚರ


Team Udayavani, Sep 7, 2021, 6:00 AM IST

ಚೌತಿ ವೇಳೆ ಮೈತುಂಬಾ ಇರಲಿ ಎಚ್ಚರ

ಕೊರೊನಾ ಮೂರನೇ ಅಲೆ ಎಚ್ಚರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಅಳೆದು ತೂಗಿ ಗಣೇಶೋತ್ಸವಕ್ಕೆ ಒಪ್ಪಿಗೆ ನೀಡಿದೆ. ಈ ಸಂದರ್ಭದಲ್ಲಿ ಕೆಲವೊಂದು ಷರತ್ತುಗಳನ್ನು ವಿಧಿಸಿ, ಇವುಗಳನ್ನು ಪಾಲಿಸಲೇಬೇಕು ಎಂಬ ನಿಯಮಗಳನ್ನೂ ಹಾಕಿದೆ. ಒಂದು ಲೆಕ್ಕಾಚಾರದಲ್ಲಿ ಗಣೇಶೋತ್ಸವಕ್ಕೆ ಒಪ್ಪಿಗೆ ಸಿಕ್ಕಿದ್ದು, ಉತ್ತಮವಾದ ನಿರ್ಧಾರವೇ ಸರಿ.

ಕೊರೊನಾ ಬಂದ ಮೇಲೆ ಜನ, ದೈಹಿಕವಾಗಿಯಷ್ಟೇ ಅಲ್ಲದೇ ಮಾನಸಿಕವಾಗಿಯೂ ನಲುಗಿದ್ದಾರೆ. ಇಂಥ ಸಂದರ್ಭದಲ್ಲಿ ಹಬ್ಬ-ಹರಿದಿನಗಳು ಒಂದಷ್ಟು ನೆಮ್ಮದಿ ನೀಡಬಹುದು. ಈ ಕಾರಣದಿಂದ ರಾಜ್ಯದ ಜನತೆಯ ಒತ್ತಾಸೆ ಮೇರೆಗೆ ಸರಕಾರ ಒಪ್ಪಿಗೆ ನೀಡಿದೆ. ಆದರೆ ಈ ಒಪ್ಪಿಗೆಯನ್ನು ದುರುಪಯೋಗಪಡಿಸಿಕೊಳ್ಳದೇ, ನಮ್ಮದೇ ಇತಿಮಿತಿಯೊಳಗೆ ಹಬ್ಬ ಮಾಡಬೇಕಾದದ್ದೂ ಜನರ ಕರ್ತವ್ಯವಾಗಿದೆ.

ಗಣೇಶೋತ್ಸವ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ವೇಳೆಯಲ್ಲಿ ಮೆರವಣಿಗೆ ಮಾಡದೇ ಇರುವುದು, ಡಿಜೆ ಅಥವಾ ಸಂಗೀತ, ನೃತ್ಯ, ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಕೊಡದೇ ಇರುವುದು ಒಂದು ಲೆಕ್ಕಾಚಾರದಲ್ಲಿ ಕೆಲವು ವರ್ಗದವರ ಅಸಮಾಧಾನಕ್ಕೂ ಕಾರಣವಾದರೂ, ಸದ್ಯದ ಪರಿಸ್ಥಿತಿಯಲ್ಲಿ ಅನಿವಾರ್ಯವೆಂಬಂಥ ಸ್ಥಿತಿ ಇದೆ. ಒಂದು ವೇಳೆ ಮೆರವಣಿಗೆಗಳಿಗೆ, ಸಂಗೀತ, ಡಿಜೆ ಕಾರ್ಯಕ್ರಮಗಳಿಗೆ ಒಪ್ಪಿಗೆ ಕೊಟ್ಟರೆ, ಜನ ಗುಂಪಾಗಿ ಸೇರಿ ಕೊರೊನಾ ಹರಡುವಿಕೆಗೆ ಕಾರಣವಾಗುತ್ತದೆ ಎಂಬ ಆತಂಕವೂ ಸರಕಾರಕ್ಕೆ ಇದೆ. ಹೀಗಾಗಿಯೇ ಇಂಥ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಿಲ್ಲ.

ಅದೇ ರೀತಿ ವಾರ್ಡ್‌ಗೊಂದು, ಹಳ್ಳಿಗಳಲ್ಲಿ ಸ್ಥಳೀಯಾಡಳಿತಗಳ ನಿರ್ಧಾರದಂತೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗಿದೆ. ಜತೆಗೆ ಮಹಾನಗರ ಪ್ರದೇಶಗಳಲ್ಲಿ ಗಣೇಶೋತ್ಸವ ಸಮಿತಿಗಳು ಪೂರ್ವಾನುಮತಿ ಪಡೆದಿರಬೇಕು ಎಂಬ ಷರತ್ತು ವಿಧಿಸಲಾಗಿದೆ. ಹೀಗಾಗಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳು, ಯಾವುದೇ ನಿಯಮ ಮೀರದೇ ಸ್ಥಳೀಯಾಡಳಿತಗಳ ಅನುಮತಿ ಪಡೆದೇ ಗಣೇಶ ಪ್ರತಿಷ್ಠಾನೆಗೆ ಕ್ರಮ ತೆಗೆದುಕೊಳ್ಳಬೇಕು.

ಸದ್ಯ ರಾಜ್ಯದಲ್ಲಿ ಕೊರೊನಾ ಹತೋಟಿಯಲ್ಲಿದೆ. ಕೊರೊನಾ ಹೆಚ್ಚಾಗಿಲ್ಲ, ಹೀಗಾಗಿ ನಾವು ಹೇಗೆ ಬೇಕಾದರೂ ಹಬ್ಬ ಮಾಡುತ್ತೇವೆ ಎಂಬ ಹುಂಬತನ ಯಾರಲ್ಲೂ ಬರಬಾರದು. ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಹೇಳಿದಂತೆ, ಕೊರೊನಾ ಮೂರನೇ ಅಲೆ ಮನೆ ಬಾಗಿಲಲ್ಲೇ ಇದೆ. ಅದು ಯಾವಾಗ ಬರುತ್ತದೆ ಎಂಬ ಖಚಿತತೆ ಇಲ್ಲ. ಒಂದು ವೇಳೆ ನಾವು ಮೈಮರೆತರೆ ಈಗಲೇ ಅದು ಮನೆ ಪ್ರವೇಶಿಸಬಹುದು. ಹೀಗಾಗಿ ನಾವು ಎಚ್ಚರಿಕೆಯಿಂದ ಇರಬೇಕಾದದ್ದು ಈ ಸಂದರ್ಭದಲ್ಲಿ ಅನಿವಾರ್ಯವೇ ಆಗಿದೆ.

ಗಣೇಶೋತ್ಸವಕ್ಕೆ ಒಪ್ಪಿಗೆ ಸಿಕ್ಕಿರುವುದರಿಂದ ಜನತೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬಹುದು. ಕೊರೊನಾ ನಿಯಮಗಳನ್ನು ಪಾಲಿಸಿಕೊಂಡು ಯಾವ ರೀತಿ ಹಬ್ಬ ಆಚರಿಸಿಕೊಳ್ಳಬಹುದು ಎಂಬ ಬಗ್ಗೆ ಗಣೇಶೋತ್ಸವ ಸಮಿತಿಗಳೂ ಚರ್ಚಿಸಿಕೊಂಡು ಹೆಜ್ಜೆ ಇಡಬಹುದು. ಇಲ್ಲಿ ಬದುಕು ಮತ್ತು ಕೊರೊನಾ ನಿಯಂತ್ರಣ ಎರಡೂ ನಮ್ಮ ಕೈಯಲ್ಲೇ ಇವೆ. ಇದನ್ನು ಅರಿತುಕೊಂಡೇ ಎಲ್ಲೂ ಮೈ ಮರೆಯಬಾರದು. ಒಂದು ವೇಳೆ ಈಗ ಮೈಮರೆತರೆ ಏನಾಗಬಹುದು ಎಂಬುದಕ್ಕೆ ಕೇರಳದ ಓಣಂ ಅನಂತರ ಆಗಿರುವ ಸ್ಥಿತಿಯೇ ನಮ್ಮ ಕಣ್ಮುಂದೆ ಇದೆ. ಹೀಗಾಗಿ ಮೈಮರೆಯದೇ ಹಬ್ಬ ಆಚರಿಸುವುದು ಮುಖ್ಯ.

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.