ಹಬ್ಬದ ಸಂಭ್ರಮದ ನಡುವೆ…ಸುರಕ್ಷತೆಗೆ ಆದ್ಯತೆ ನೀಡಿ


Team Udayavani, Oct 24, 2020, 6:20 AM IST

ಹಬ್ಬದ ಸಂಭ್ರಮದ ನಡುವೆ…ಸುರಕ್ಷತೆಗೆ ಆದ್ಯತೆ ನೀಡಿ

ಸಾಂದರ್ಭಿ ಚಿತ್ರ

ಕೋವಿಡ್‌-19 ಜನರನ್ನು ದೈಹಿಕವಾಗಿ, ಮಾನಸಿಕವಾಗಿ ಹಾಗೂ ಆರ್ಥಿಕವಾಗಿಯೂ ಹೈರಾಣಾಗಿಸಿದೆ. ಈ ಸಂಕಷ್ಟದ ನಡುವೆಯೇ ಹಬ್ಬದ ಋತುವೂ ಎದುರಾಗಿದೆ. ಕಳೆದ ಎಂಟು ತಿಂಗಳಿಂದ ಕೋವಿಡ್‌ ಕಾರಣಕ್ಕಾಗಿ ಮಾನಸಿಕ ತುಮುಲಕ್ಕೆ ಒಳಗಾಗಿರುವ ಜನರಿಗೆ ಹಬ್ಬಗಳು ನೆಮ್ಮದಿ ತಂದುಕೊಡುತ್ತವೆ, ಅಲ್ಲದೇ ಆರ್ಥಿಕವಾಗಿಯೂ ಮಾರುಕಟ್ಟೆಗೆ ಚೇತರಿಕೆ ನೀಡುತ್ತವೆ ಎನ್ನುವುದರಲ್ಲಿ ಸಂಶಯವಿಲ್ಲ.

ಈ ಬಾರಿ ಜನರು ಹಿಂದೆಂದೂ ಕಾಣದಂಥ ಪಲ್ಲಟವನ್ನು ಎದುರಿಸಿದ್ದಾರೆ. ಹಿಂದೆಲ್ಲ ಆಯುಧ ಪೂಜೆ ಹಾಗೂ ವಿಜಯ ದಶಮಿ ಸಮಯದಲ್ಲಿ ಇಡೀ ರಾಜ್ಯವೇ ಕಳೆಗಟ್ಟುತ್ತಿತ್ತು, ಮಾರುಕಟ್ಟೆಗಳು ನಳನಳಿಸುತ್ತಿದ್ದವು. ಆದರೆ ಈ ಬಾರಿ ಹೂ-ಹಣ್ಣು, ಪೂಜಾ ಸಾಮಗ್ರಿಗಳನ್ನು ಕೊಳ್ಳಲು ಜನ ಸಾಮಾಜಿಕ ಅಂತರ ಮರೆತು ಮುಗಿಬೀಳುತ್ತಾರೆ ಎನ್ನುವ ಕಾರಣಕ್ಕಾಗಿ ಮೈಸೂರು ಸೇರಿದಂತೆ ವಿವಿಧ ಭಾಗಗಳಲ್ಲಿನ ಸ್ಥಳೀಯಾಡಳಿತಗಳು ಮುಂಜಾಗ್ರತಾ ಕ್ರಮ ಕೈಗೊಂಡಿವೆ. ಕೆಲವೆಡೆ ಕಿಕ್ಕಿರಿಯುತ್ತಿದ್ದ ಮಾರುಕಟ್ಟೆಗಳನ್ನು ತಾತ್ಕಾಲಿಕ ಸ್ಥಳಾಂತರಿಸಲಾಗಿದೆ. ಆದರೂ, ಕೋವಿಡ್‌ ಅಪಾಯವನ್ನೂ ಲೆಕ್ಕಿಸದೆ ಜನ ಖರೀದಿಗಾಗಿ ಮುಗಿಬೀಳುತ್ತಿದ್ದಾರೆಂಬ ವರದಿಗಳೂ ಬರುತ್ತಿವೆ.

ಇದು ಅತ್ಯಂತ ನಿರ್ಣಾಯಕ ಸಮಯ. ಏಕೆಂದರೆ ಇತ್ತೀಚೆಗಷ್ಟೇ ಕೇಂದ್ರ ಸರಕಾರವು ಕೋವಿಡ್‌ನ‌ ಮೊದಲ ಅಲೆಯ ಉತ್ತುಂಗ ಮುಗಿದಿದೆ ಎಂದು ಹೇಳಿದೆ. ಅಂದರೆ ಸೆಪ್ಟಂಬರ್‌ ತಿಂಗಳಲ್ಲಿ 97 ಸಾವಿರದ ಗಡಿ ದಾಟಿದ್ದ ನಿತ್ಯ ಪ್ರಕರಣಗಳ ಸಂಖ್ಯೆ ಕಳೆದ ಕೆಲವು ದಿನಗಳಿಂದ ಗಣನೀಯವಾಗಿ ತಗ್ಗಿದೆ. ಅಕ್ಟೋಬರ್‌ 22ರಂದು 55 ಸಾವಿರ ನಿತ್ಯ ಪ್ರಕರಣಗಳು ಪತ್ತೆಯಾಗಿವೆ. ಇದು ಸಮಾಧಾನದ ವಿಷಯವೇ ಆದರೂ ಎಲ್ಲಿ ಅಜಾಗರೂಕತೆಯಿಂದಾಗಿ ನಿತ್ಯ ಪ್ರಕರಣಗಳು ಮತ್ತೆ ಅಧಿಕವಾಗಿಬಿಡುತ್ತವೋ ಎನ್ನುವ ಆತಂಕವೂ ಎದುರಾಗುತ್ತಿದೆ.

ಇತ್ತೀಚೆಗಷ್ಟೇ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಅವರು ಓಣಂ ಸಂದರ್ಭದಲ್ಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ಕೇರಳ ಈಗ ಬೆಲೆ ತೆರುತ್ತಿದೆ ಎಂದು ಹೇಳಿರುವುದನ್ನು ಎಲ್ಲ ರಾಜ್ಯಗಳೂ ಗಂಭೀರವಾಗಿ ಪರಿಗಣಿಸಬೇಕಿದೆ. ಇನ್ನು ಹಬ್ಬದ ಸಮಯದಲ್ಲಿ ನಾಗರಿಕರು ಎಚ್ಚರಿಕೆ ಕ್ರಮಗಳನ್ನು ಪಾಲಿಸದೇ ಇದ್ದರೆ ದೇಶದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ ಎಂದು ಕೊರೊನಾ ನಿಯಂತ್ರಣಕ್ಕಾಗಿ ಸರಕಾರ ರಚಿಸಿದ್ದ ತಜ್ಞರ ಸಮಿತಿಯೂ ಎಚ್ಚರಿಸಿದೆ.

ಐಐಟಿ ಹೈದ್ರಾಬಾದ್‌ನ ಪ್ರಾಧ್ಯಾಪಕ ಎಂ. ವಿದ್ಯಾಸಾಗರ್‌ ನೇತೃತ್ವದ ಈ ಸಮಿತಿ ಈ ಹಬ್ಬದ ಋತುವಿನಲ್ಲಿ ಜನ ಸಾಮಾಜಿಕ ಅಂತರ ಪಾಲನೆ ಮಾಡದಿದ್ದರೆ ಒಂದೇ ತಿಂಗಳಲ್ಲೇ ದೇಶದಲ್ಲಿ 26 ಲಕ್ಷಕ್ಕೂ ಹೆಚ್ಚು ಸಕ್ರಿಯ ಸೋಂಕು ಪ್ರಕರಣಗಳು ದಾಖಲಾಗಬಹುದು ಎಂದು ಎಚ್ಚರಿಸಿದೆ. ನೆನಪಿಡಬೇಕಾದ ಅಂಶವೆಂದರೆ, ಕೋವಿಡ್‌ ಈಗ ನಗರ ಪ್ರದೇಶಗಳಿಗಷ್ಟೇ ಸೀಮಿತವಾಗಿಲ್ಲ. ಅದು ಗ್ರಾಮೀಣ ಪ್ರದೇಶಗಳಲ್ಲೂ ವೇಗವಾಗಿ ಪ್ರಸರಣಗೊಳ್ಳುತ್ತಿದೆ. ಈಗಾಗಲೇ ದೇಶದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ನ‌ ಸಾಮುದಾಯಿಕ ಪ್ರಸರಣ ಆರಂಭವಾಗಿದೆ ಎಂದು ಇತ್ತೀಚೆಗಷ್ಟೇ ಕೇಂದ್ರ ಸರಕಾರ ಹೇಳಿದೆ. ಒಂದು ಪ್ರದೇಶದಲ್ಲಿ ರೋಗ ಸಾಮುದಾಯಿಕ ಪ್ರಸರಣ ಹಂತ ತಲುಪಿತೆಂದರೆ, ತಡೆಯುವುದು ಬಹುದೊಡ್ಡ ಸವಾಲಾಗಿ ಬಿಡುತ್ತದೆ. ಈ ಕಾರಣಕ್ಕಾಗಿಯೇ, ಪ್ರತಿಯೊಬ್ಬರೂ ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಿಕೆ, ಜನಜಂಗುಳಿ ಸೃಷ್ಟಿಯಾಗುವುದನ್ನು ತಪ್ಪಿಸುವುದು ಹಾಗೂ ಕೈಗಳನ್ನು ನಿಯಮಿತವಾಗಿ ಸ್ವತ್ಛಗೊಳಿಸುವಂಥ ಸುರಕ್ಷತಾ ಕ್ರಮಗಳನ್ನು ತಪ್ಪದೇ ಪಾಲಿಸೋಣ. ಸುರಕ್ಷತೆಯಿಂದ ಹಬ್ಬವನ್ನು ಆಚರಿಸೋಣ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.