ಅನಗತ್ಯ ಹುದ್ದೆ ರದ್ದುಗೊಳಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ


Team Udayavani, Mar 23, 2022, 6:00 AM IST

ಅನಗತ್ಯ ಹುದ್ದೆ ರದ್ದುಗೊಳಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡಿ

ರಾಜ್ಯದಲ್ಲಿ ಸರಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚನೆ ಘೋಷಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2.40 ಲಕ್ಷ ಹುದ್ದೆಗಳು ಖಾಲಿ ಇರುವುದಾಗಿ ತಿಳಿಸಿದ್ದಾರೆ. ಇಷ್ಟೊಂದು ಬೃಹತ್‌ ಸಂಖ್ಯೆಯ ಸರಕಾರಿ ಹುದ್ದೆಗಳು ಖಾಲಿ ಇದ್ದರೆ ಇಲಾಖೆಗಳಲ್ಲಿ ದೈನಂದಿನ ಕೆಲಸ ಕಾರ್ಯಗಳು ನಡೆಯುವುದಾದರೂ ಹೇಗೆ!

ಅತ್ತ ಕಲ್ಯಾಣ ಕರ್ನಾಟಕ ಭಾಗದಲ್ಲೂ ಸಾವಿರಾರು ಹುದ್ದೆಗಳ ಖಾಲಿ ಇರುವ ಬಗ್ಗೆ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾವವಾಗಿದೆ. ಜತೆಗೆ ಇಲಾಖಾ ಸಚಿವರು ಖಾಲಿ ಹುದ್ದೆ ತುಂಬುವ ಕುರಿತ ವಿಚಾರ ಬಂದಾಗಲೆಲ್ಲ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಿರುವುದು ಸಾಮಾನ್ಯವಾಗಿದೆ. ರಾಜ್ಯದಲ್ಲಿ ಎಲ್ಲ ಇಲಾಖೆಗಳಲ್ಲಿನ ಒಟ್ಟಾರೆ ಸರಕಾರಿ ನೌಕರರ ಹುದ್ದೆ 7.60 ಲಕ್ಷ. ಆ ಪೈಕಿ ತುಂಬಿರುವುದು 5.20 ಲಕ್ಷ. ಖಾಲಿ ಇರುವುದು 2.40 ಲಕ್ಷ. ಇದರಲ್ಲಿ 91 ಸಾವಿರ ಹೊರಗುತ್ತಿಗೆ ನೌಕರರು ಇದ್ದಾರೆ ಎಂದು ಅಂಕಿ-ಅಂಶ ನೀಡಲಾಗಿದೆ. ಖಾಲಿ ಇರುವ ಹುದ್ದೆಗಳಿಂದ ರಾಜ್ಯ ಸರಕಾರಕ್ಕೆ ವಾರ್ಷಿಕ 8 ಸಾವಿರ ಕೋಟಿ ರೂ. ಉಳಿತಾಯವಾಗುತ್ತಿದೆ. ಇದೀಗ 7ನೇ ವೇತನ ಆಯೋಗ ರಚಿಸಿ ವೇತನ ಪರಿಷ್ಕರಣೆ ಮಾಡಿದರೆ 10,500 ಕೋಟಿ ರೂ. ಹೊರೆಯಾಗುತ್ತದೆ. ಈಗಿನ ಪ್ರಕಾರ ಹೆಚ್ಚುವರಿಯಾಗಿ 2,500 ಕೋಟಿ ರೂ. ಭರಿಸಬೇಕಾಗುತ್ತದೆ ಎಂಬುದು ಸರಕಾರದ ಲೆಕ್ಕಾಚಾರ.

ಆದರೆ ಇದೇ ಲೆಕ್ಕಾಚಾರದಡಿ ಮುಂದುವರಿಯುವುದಾದರೆ 2.40 ಲಕ್ಷ ಖಾಲಿ ಹುದ್ದೆ ಭರ್ತಿ ಮಾಡುವುದಿಲ್ಲವೇ ಎಂಬ ಪ್ರಶ್ನೆಯೂ ಇದೆ. ಹೀಗಾದರೆ ವೇತನ ಆಯೋಗ ರಚನೆ ಮಾಡಿ ವೇತನ ಪರಿಷ್ಕರಣೆ ಮಾಡಿದರೂ ಇರುವ ಅಧಿಕಾರಿ-ನೌಕರರ ಮೇಲೆ ಒತ್ತಡ ಹೆಚ್ಚಾಗಲಿದೆ.

ಆರ್ಥಿಕ ಮಿತವ್ಯಯ ಜಾರಿ ಹಿನ್ನೆಲೆಯಲ್ಲಿ ಕೆಲವು ಇಲಾಖೆಗಳ ವಿಲೀನ, ಅನಗತ್ಯ ಹುದ್ದೆ ರದ್ದು ಕುರಿತು ಕೂಡ ಸರಕಾರದ ಮುಂದೆ ಶಿಫಾರಸು ಇದೆ. ರಾಜ್ಯ ಸರಕಾರಕ್ಕೆ ಆರ್ಥಿಕ ಶಿಸ್ತು ರೂಪಿಸಲು ಇದು ಸಕಾಲ ಎಂದೇ ಹೇಳಬಹುದು. ರಾಜ್ಯದಲ್ಲಿರುವ ಒಟ್ಟಾರೆ ಇಲಾಖೆಗಳು, ಅವುಗಳ ಕಾರ್ಯದ ಒತ್ತಡ, ಇ ಆಡಳಿತದಿಂದಾಗಿ ತೀರಾ ಅಗತ್ಯವಾಗಿ ಬೇಕಾದ ಸಿಬಂದಿ ಇವೆಲ್ಲದರ ಬಗ್ಗೆ ಸಮಗ್ರವಾಗಿ ಪರಾಮರ್ಶೆ ಮಾಡಿ ಆನಗತ್ಯ ಹುದ್ದೆ ರದ್ದು ಮಾಡಿ “ಖಾಲಿ ಹುದ್ದೆ ತುಂಬಲು ಬಾಕಿ ಇದೆ’ ಎಂಬುದಕ್ಕೆ ಅವಕಾಶ ಇಲ್ಲದಂತೆ ಮಾಡಬೇಕಾಗಿದೆ. ಇಡೀ ಇಲಾಖಾ ರಚನೆ ಹಾಗೂ ಕಾರ್ಯನಿರ್ವಹಣೆಯ ವ್ಯವಸ್ಥೆ ಬದಲಾವಣೆ ಮಾಡಬೇಕಾಗಿದೆ. ಇದರ ನಡುವೆ ಹೊರಗುತ್ತಿಗೆ ವ್ಯವಸ್ಥೆಯಿಂದ ಸಮಸ್ಯೆಗಳಾಗುತ್ತಿರುವ ದೂರುಗಳು ಇರುವುದರಿಂದ ಅದಕ್ಕೂ ಶಾಶ್ವತ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ.

ಖಾಲಿ ಹುದ್ದೆ ಇದೇ ರೀತಿ ಇರಿಸಿಕೊಂಡು ಇದರಿಂದ ಉಳಿತಾಯ ಆಗುತ್ತಿದೆ ಎಂದು ಭಾವಿಸುವುದು ಸರಿಯಲ್ಲ. 2.40 ಲಕ್ಷ ಹುದ್ದೆಯಲ್ಲಿ ಇಂದಲ್ಲ ನಾಳೆ ತುಂಬಲೇಬೇಕಾದ ಹುದ್ದೆಗಳು ಇದ್ದರೆ ಅದರ ಬಗ್ಗೆ ಗಮನಹರಿಸಬೇಕಾಗಿದೆ. ಅನಗತ್ಯ ಹುದ್ದೆ ಇದ್ದರೂ ರದ್ದು ಮಾಡ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯೋನ್ಮುಖ ವಾಗಬೇಕಾಗುತ್ತದೆ. ವೇತನ ಆಯೋಗದ ರಚನೆ, ಅನಂತರ ಅದರ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಿ ಖಾಲಿ ಹುದ್ದೆ ಬಗ್ಗೆ ಯಥಾಸ್ಥಿತಿ ಮುಂದುವರಿಕೆಯಾದರೆ ಪರೋಕ್ಷವಾಗಿ ಇದು ಅಭಿವೃದ್ಧಿ ಹಾಗೂ ಸರಕಾರದ ದೈನಂದಿನ ಕಾರ್ಯಚಟುವಟಿಕೆಗಳ ಮೇಲೂ ಪರಿಣಾಮ ಬೀರಬಹುದು.

ಟಾಪ್ ನ್ಯೂಸ್

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

UTK

Revanna ಬಂಧನ: ಸ್ಪೀಕರ್‌ ಯು.ಟಿ.ಖಾದರ್‌ಗೆ ಇ ಮೇಲ್‌?

1-modi

Ayodhya;ಮೋದಿ ಭರ್ಜರಿ ರೋಡ್‌ ಶೋ: ಜನರ ಹೃದಯ ರಾಮನಷ್ಟೇ ವಿಶಾಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

1-qweqeq

Bihar;10 ವರ್ಷ ಜೈಲು ಶಿಕ್ಷೆ: ಪರೋಲ್‌ ಮೇಲೆ ಬಂದು ಚುನಾವಣ ಪ್ರಚಾರ!

Revanna 2

SIT ಅಧಿಕಾರಿಗಳಿಗೆ ತಲೆನೋವಾದ ಎಚ್‌.ಡಿ.ರೇವಣ್ಣ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

voter

Odisha; ಒಂದೇ ವಿಧಾನಸಭಾ ಕ್ಷೇತ್ರಕ್ಕೆ 3 ಪಕ್ಷಗಳಿಂದ ಒಂದೇ ಕುಟುಂಬದ ಅಭ್ಯರ್ಥಿಗಳು!

HDK 2

JDSನಿಂದ ಅಂತರಕ್ಕೆ ಬಿಜೆಪಿ ಚಿಂತನೆ? ಶಾ-ಎಚ್‌ಡಿಕೆ ಭೇಟಿ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.