ಕ್ಯಾನ್ಸರ್‌ ನಿಯಂತ್ರಣ ಔಷಧಗಳು ಮತ್ತಷ್ಟು ಅಗ್ಗ: ಸ್ವಾಗತಾರ್ಹ ನಿರ್ಧಾರ


Team Udayavani, Sep 14, 2022, 6:00 AM IST

ಕ್ಯಾನ್ಸರ್‌ ನಿಯಂತ್ರಣ ಔಷಧಗಳು ಮತ್ತಷ್ಟು ಅಗ್ಗ: ಸ್ವಾಗತಾರ್ಹ ನಿರ್ಧಾರ

ಕ್ಯಾನ್ಸರ್‌ ಚಿಕಿತ್ಸೆಯಲ್ಲಿ ಬಳಸಲ್ಪಡುವ ಪ್ರಮುಖ ನಾಲ್ಕು ಔಷಧಗಳು, ಪ್ರತಿಜೀವಕಗಳು ಮತ್ತು ಕೆಲವೊಂದು ಸೋಂಕು ನಿವಾರಕ ಔಷಧಗಳನ್ನು ಕೇಂದ್ರ ಸರಕಾರ ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿಗೆ ಸೇರ್ಪಡೆಗೊಳಿಸಿ ಮಂಗಳವಾರ ಆದೇಶ ಹೊರಡಿಸಿದೆ. ಕೇಂದ್ರ ಸರಕಾರದ ಈ ಮಹತ್ವದ ನಿರ್ಧಾರ ಕ್ಯಾನ್ಸರ್‌ ರೋಗಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದು ಕ್ಯಾನ್ಸರ್‌ ನಿಯಂತ್ರಣ ಔಷಧಗಳ ಬೆಲೆ ಮತ್ತಷ್ಟು ಇಳಿಕೆಯಾಗಲಿದೆ.

ಎಲ್ಲರಿಗೂ ಅಗ್ಗದ ಬೆಲೆಯಲ್ಲಿ ಔಷಧವನ್ನು ದೊರಕಿಸಿಕೊಡುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಈ ದಿಟ್ಟ ಹೆಜ್ಜೆಯನ್ನಿರಿಸಿದ್ದು, 34 ಔಷಧಗಳನ್ನು ಹೊಸದಾಗಿ ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಇದರಿಂದ ಈ ಎಲ್ಲ ಔಷಧಗಳ ಬೆಲೆ ಭಾರೀ ಇಳಿಕೆಯನ್ನು ಕಾಣಲಿದ್ದು, ರೋಗಿಗಳಿಗೆ ಕೈಗೆಟಕುವ ಬೆಲೆಯಲ್ಲಿ ಈ ಔಷಧಗಳು ಲಭಿಸಲಿವೆ. ಕ್ಯಾನ್ಸರ್‌ನಂತಹ ಕಾಯಿಲೆಗಳ ಚಿಕಿತ್ಸೆಯಲ್ಲಿ ಬಳಸಲ್ಪಡುವ ಔಷಧಗಳ ಬೆಲೆ ಬಹಳಷ್ಟು ಹೆಚ್ಚಿರುವುದರಿಂದ ಜನಸಾಮಾನ್ಯರು ಮತ್ತು ಮಧ್ಯಮ ವರ್ಗದ ಕುಟುಂಬಗಳ ಕ್ಯಾನ್ಸರ್‌ ರೋಗಿಗಳಿಗೆ ಚಿಕಿತ್ಸೆ ಪಡೆಯುವುದೇ ಕಷ್ಟಸಾಧ್ಯ­ವಾಗಿತ್ತು.

ಈಗ ಕೇಂದ್ರ ಸರಕಾರ ವಿವಿಧ ತೆರನಾದ ಕ್ಯಾನ್ಸರ್‌ನ ಚಿಕಿತ್ಸೆಯಲ್ಲಿ ಬಳಸ­ಲ್ಪಡುವ 4 ಪ್ರಮುಖ ಔಷಧಗಳಾದ ಬೆಂಡಾ­ಮಸ್ಟಿನ್‌ ಹೈಡ್ರೋ­ಕ್ಲೋರೈಡ್‌, ಇರಿನೊಟೆಕನ್‌ ಎಚ್‌ಸಿಐ ಟ್ರೈಹೈಡ್ರೇಟ್‌, ಲೆನಾಲಿಡೊಮೈಡ್‌ ಮತ್ತು ಲ್ಯುಪ್ರೊಲೈಡ್‌ ಅಸಿಟೇಟ್‌ ಔಷಧಗಳು, ಮಾನಸಿಕ ಕಾಯಿಲೆಗಳ ಚಿಕಿತ್ಸೆ­ಯಲ್ಲಿ ಬಳಸಲ್ಪಡುವ ಔಷಧಗಳನ್ನು ಅಗತ್ಯ ಔಷಧಗಳ ಪಟ್ಟಿಗೆ ಸೇರ್ಪಡೆ­ಗೊಳಿಸುವ ಮೂಲಕ ಈ ಔಷಧಗಳ ಬೆಲೆಯ ಮೇಲೆ ನಿಯಂ­ತ್ರಣ ಹೇರಿದೆ. ಇದರ ಜತೆಯಲ್ಲಿ ಸೋಂಕು ನಿವಾರಕ­ಗಳಾದ ಐವರ್‌ವೆುಕ್ಟಿನ್‌, ಮುಪಿ­ರೋಸಿನ್‌ ಮತ್ತು ಮೆರೊಪೆನೆಮ್‌ ಔಷಧವನ್ನೂ ಈ ಪಟ್ಟಿಗೆ ಸೇರ್ಪಡೆಗೊಳಿಸಿದೆ. ಹಲವಾರು ಪ್ರತಿಜೀವಕ­ಗಳು, ಲಸಿಕೆಗಳನ್ನು ಕೂಡ ಪಟ್ಟಿಗೆ ಸೇರಿಸಲಾಗಿದೆ.

ಈಗ ಒಟ್ಟಾರೆ ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿಯಲ್ಲಿ 27 ವಿಭಾಗಗಳ 384 ಔಷಧಗಳು ಸೇರಿವೆ. ಅಗತ್ಯ ಔಷಧಗಳ ಪಟ್ಟಿಗೆ ಸೇರ್ಪಡೆಯಾಗಿರುವ ಔಷಧಗಳು ಗ್ರಾಹಕರಿಗೆ ನಿರ್ದಿಷ್ಟ ಬೆಲೆಯಲ್ಲಿ ಲಭ್ಯವಾಗಲಿವೆ.
ಇದೇ ವೇಳೆ ಕೇಂದ್ರ ಸರಕಾರ ರ್ಯಾನಿಟಿಡಿನ್‌, ಸುಕ್ರಾಲ್ಫೆàಟ್‌, ವೈಟ್‌ ಪೆಟ್ರೋ­ಲಿಯಂ, ಅಟೆನೊಲಾಲ್‌ ಮತ್ತು ಮೀಥೈಲ್ಡೋಪಾ ಸಹಿತ 26 ಔಷಧಗಳನ್ನು ಅಗತ್ಯ ಔಷಧಗಳ ಪಟ್ಟಿಯಿಂದ ಕೈಬಿಟ್ಟಿದೆ. ಈ ಔಷಧಗಳ ಉತ್ಪಾದನೆ ವೆಚ್ಚದಾಯಕವಾಗಿರುವುದು ಮತ್ತು ಇದಕ್ಕಿಂತ ಉತ್ತಮ ಔಷಧಗಳು ಮಾರು­ಕಟ್ಟೆಯಲ್ಲಿ ಲಭ್ಯವಿರುವುದರಿಂದ ಇವುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಔಷಧಗಳ ಬೆಲೆಯ ಮೇಲೆ ನಿಯಂತ್ರಣದ ಜತೆಯಲ್ಲಿ ಗುಣಮಟ್ಟ ಮತ್ತು ಮಾರುಕಟ್ಟೆಯಲ್ಲಿ ಇವುಗಳ ಲಭ್ಯತೆಯನ್ನು ಖಾತರಿಪಡಿಸುವ ಉದ್ದೇಶದಿಂದ ಈ ಪ್ರಮುಖ ಔಷಧಗಳನ್ನು ಅಗತ್ಯ ಔಷಧಗಳ ರಾಷ್ಟ್ರೀಯ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ. ಇದರಿಂದ ಎಲ್ಲರಿಗೂ ಕೈಗೆಟಕುವ ಬೆಲೆಯಲ್ಲಿ ಸಮರ್ಪಕ ಮತ್ತು ಗುಣಮಟ್ಟದ ಚಿಕಿತ್ಸೆ ಲಭಿಸುವುದನ್ನು ಸರಕಾರ ಖಾತರಿಪಡಿಸಿದೆ.

ಕೊರೊನಾನಂತರ ದೇಶದ ಆರೋಗ್ಯ ಕ್ಷೇತ್ರದಲ್ಲಿ ಗಮನಾರ್ಹ ಸುಧಾರಣೆಯಾಗಿದ್ದು, ಜನರ ಆರೋಗ್ಯ ರಕ್ಷಣೆಗೆ ಅಗತ್ಯವಾಗಿ ಆರೋಗ್ಯ ಮೂಲಸೌಕರ್ಯ, ಔಷಧಗಳ ಉತ್ಪಾದನೆ, ಲಭ್ಯತೆಯನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಕ್ರಾಂತಿಕಾರಿ ಕ್ರಮಗಳನ್ನು ಕೈಗೊಂಡಿದೆ. ಇದೀಗ ಔಷಧಗಳ ಬೆಲೆ ಮತ್ತು ಲಭ್ಯತೆ ವಿಚಾರದಲ್ಲೂ ಸರಕಾರ ಒಂದಿಷ್ಟು ಬಿಗು ನಿಲುವು ತಾಳುವ ಮೂಲಕ ದೇಶದ ಕಟ್ಟಕಡೆಯ ಪ್ರಜೆಗೂ ಆರೋಗ್ಯ ಸೇವೆ ಲಭಿಸುವಂತೆ ಮಾಡುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ.

ಟಾಪ್ ನ್ಯೂಸ್

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.