ಕಸ್ತೂರಿ ರಂಗನ್ ವರದಿ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ


Team Udayavani, Jul 31, 2023, 7:15 AM IST

1-KSV

ವಿವಾದಿತ ಕಸ್ತೂರಿ ರಂಗನ್‌ ವರದಿ ಜಾರಿ ವಿಚಾರದಲ್ಲಿ ಕೇಂದ್ರ ಸರಕಾರ ಮತ್ತು ಆರು ರಾಜ್ಯಗಳ ಜತೆ ಚರ್ಚಿಸಿ ಜಾರಿ ಮಾಡುವುದಾಗಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹೇಳಿದ್ದು, ಒಂದಷ್ಟು ವಿವಾದಗಳಿಗೆ ಕಾರಣವಾಗುವ ಎಲ್ಲ ಸಾಧ್ಯತೆಗಳಿವೆ. ರಾಜ್ಯವು ಹಿಂದಿನಿಂದಲೂ ಪಶ್ಚಿಮ ಘಟ್ಟಗಳ ಕುರಿತಾದ ಕಸ್ತೂರಿ ರಂಗನ್‌ ವರದಿಯನ್ನು ತಿರಸ್ಕಾರ ಮಾಡುತ್ತಲೇ ಬಂದಿದೆ. 

ಪರಿಸರ ಸಂರಕ್ಷಣೆ ವಿಚಾರದಲ್ಲಿ ಹೇಳುವುದಾದರೆ ಕಸ್ತೂರಿ ರಂಗನ್‌ ವರದಿ ಜಾರಿ ಉತ್ತಮವಾದ ಕ್ರಮವೇ ಆಗಿದೆ. ಆದರೆ ಕಾಡಂಚಿನಲ್ಲಿ ವಾಸಿಸುತ್ತಿರುವ ಜನರ ಹಿತದೃಷ್ಟಿಯಿಂದ ಹೇಳುವುದಾದರೆ ಅದು ಅತ್ಯಂತ ಮಾರಕವಾಗಿದೆ. ಹೀಗಾಗಿ ಇಲ್ಲಿ ರಾಜಕೀಯಕ್ಕಿಂತ ಪರಿಸರ ಮತ್ತು ಜನರ ಬದುಕಿನ ನಡುವೆ ಸಮತೋಲನವಾಗಿ ಒಂದು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ.

ಅಂದ ಹಾಗೆ, ಕಸ್ತೂರಿ ರಂಗನ್‌ ವರದಿಯನ್ನು ಈಗ ನೀಡಿದ್ದಲ್ಲ. 2011ರ ಆ. 31ರಂದು ಕೇಂದ್ರ ಸರಕಾರಕ್ಕೆ ಕಸ್ತೂರಿ ರಂಗನ್‌ ಅವರ ನೇತೃ ತ್ವದ ಸಮಿತಿ ವರದಿ ನೀಡಿತ್ತು. ಈ ವರದಿಯನ್ನು ಕೇಂದ್ರ ಸರಕಾರ 2013 ರಲ್ಲಿ ಒಪ್ಪಿಕೊಂಡಿತ್ತು. ಆದರೆ ಅಂದಿನಿಂದ ಇಂದಿನವರೆಗೂ ಪಶ್ಚಿಮ ಘಟ್ಟಗಳು ಹಾದು ಹೋಗಿರುವ ರಾಜ್ಯಗಳಲ್ಲಿ ಈ ವರದಿ ಬಗ್ಗೆ ಅಪಸ್ವರಗಳಿವೆ.

ಅಂದರೆ ಕರ್ನಾಟಕ, ಕೇರಳ, ತಮಿಳುನಾಡು, ಮಹಾರಾಷ್ಟ್ರ, ಗೋವಾ ಮತ್ತು ಗುಜರಾತ್‌ ರಾಜ್ಯಗಳಲ್ಲಿ ಪಶ್ಚಿಮ ಘಟ್ಟ ಹಾದುಹೋಗಿದೆ. ಕರ್ನಾಟಕದಲ್ಲಿ ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಉಡುಪಿ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಪಶ್ಚಿಮ ಘಟ್ಟಗಳ ಸಾಲು ಇದೆ. ರಾಜ್ಯದಲ್ಲಿಯೇ 1,553ಕ್ಕೂ ಹೆಚ್ಚು ಹಳ್ಳಿಗಳಿವೆ. ವರದಿ ಜಾರಿಯಾದ ಮೇಲೆ ಕ್ವಾರಿ, ಮರಳು ಗಣಿಗಾರಿಕೆ, ಕೈಗಾರಿಕೆಗಳು, ಜಲವಿದ್ಯುತ್‌ ಯೋಜನೆಗಳು, ಪವನ ವಿದ್ಯುತ್‌ ಯೋಜನೆ ಸೇರಿದಂತೆ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಅಷ್ಟೇ ಅಲ್ಲ ಸೀಮೆಂಟ್‌, ಕಲ್ಲು, ರಾಸಾಯನಿಕ ಬಳಕೆ, ಜನವಸತಿ ನಿರ್ಮಾಣಕ್ಕೂ ನಿಷೇಧ ವಿಧಿಸಬೇಕು ಎಂಬ ಶಿಫಾರಸು ಇದೆ.

ಇದೆಲ್ಲದಕ್ಕಿಂತ ಪ್ರಮುಖವಾಗಿ ಇಡೀ ಪಶ್ಚಿಮ ಘಟ್ಟ ಪ್ರದೇಶವು ರಾಜ್ಯಗಳ ಹಿಡಿತದಿಂದ ಕೇಂದ್ರ ಸರಕಾರದ ಹಿಡಿತಕ್ಕೆ ಹೋಗಲಿದೆ. ಇಲ್ಲಿನ ಜನರನ್ನು ಒಕ್ಕಲೆಬ್ಬಿಸಬೇಕಾಗುತ್ತದೆ. ಈಗಾಗಲೇ ಇರುವ ಕೈಗಾರಿಕೆಗಳನ್ನೂ 5 ವರ್ಷಗಳಲ್ಲಿ ಮುಚ್ಚಬೇಕು ಎಂಬ ಅಂಶವೂ ಇದೆ.

ಸದ್ಯ ಕೇರಳ ರಾಜ್ಯ ಕಸ್ತೂರಿ ರಂಗನ್‌ ವರದಿಗೆ ತೀವ್ರವಾಗಿ ವಿರೋಧಿಸಿದೆ. ಹೀಗಾಗಿ ಕೇಂದ್ರ ಸರಕಾರ ಈ ರಾಜ್ಯದ ಬಗ್ಗೆ ಮೃದು ಧೋರಣೆ ತಳೆದಿದೆ. ಇದರ ಜತೆಗೆ ಹಿಂದಿನ ಬಿಜೆಪಿ ಸರಕಾರವೂ ವರದಿಯನ್ನು ಅನುಷ್ಠಾನಗೊಳಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹೀಗಾಗಿ ಈಗಿನ ಸರಕಾರ ಕಸ್ತೂರಿ ರಂಗನ್‌ ವರದಿ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಾಗುತ್ತದೆ. ಇಲ್ಲಿನ ತಜ್ಞರು, ಕಾನೂನು ಪಂಡಿತರು, ಬಾಧಿತರ ಸಂಕಷ್ಟಗಳನ್ನು ಆಲಿಸಿ ಕಡೆಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಎಲ್ಲದಕ್ಕಿಂತ ಪ್ರಮುಖವಾಗಿ ಈ ವಿಚಾರದಲ್ಲಿ ತಾರ್ಕಿಕ ಅಂತ್ಯವೊಂದು ಬೇಕಾಗಿದೆ. ಪಶ್ಚಿಮ ಘಟ್ಟಗಳ ಜನತೆ ಇನ್ನೂ ಈ ವರದಿ ಬಗ್ಗೆ ಹೆದರಿಕೆಯಲ್ಲೇ ಬದುಕುತ್ತಿದ್ದು, ಇವರ ಭಯವನ್ನು ನಿವಾರಿಸುವ ನಿಟ್ಟಿನಲ್ಲಿ ಒಂದು ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಇಲ್ಲಿ ಕಾಡಿಗಾಗಲಿ ಅಥವಾ ಜನರ ಬದುಕಿಗಾಗಲಿ ತೊಂದರೆ ಇಲ್ಲದ ತೀರ್ಮಾನವೊಂದು ಸ್ಪಷ್ಟವಾಗಿ ಬರಬೇಕಾಗಿದೆ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.