ನವ ಭಾರತ-ನವ ಕಾಶ್ಮೀರ ನಿರ್ಮಾಣದ ಸಂಭ್ರಮ


Team Udayavani, Aug 15, 2019, 5:35 AM IST

e-18

73ನೇ ಸ್ವಾತಂತ್ರ್ಯೋತ್ಸವ ದೇಶದ ಪಾಲಿಗೆ ಹಲವು ಕಾರಣಗಳಿಂದ ಮಹತ್ವದ್ದಾಗಿದೆ. ಸ್ವಾತಂತ್ರ್ಯದ ಹರಿಕಾರರಲ್ಲಿ ಒಬ್ಬರಾಗಿರುವ ಮಹಾತ್ಮ ಗಾಂಧೀಜಿಯವರ 150ನೇ ಜಯಂತಿ ಆಚರಣೆಯೂ ಇದೇ ವರ್ಷ ಸಂಭವಿಸುತ್ತಿರುವುದರಿಂದ ಸ್ವಾತಂತ್ರ್ಯದ ಸಂಭ್ರಮ ಇಮ್ಮಡಿಯಾಗಿದೆ. ಇದು ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯಿಂದ ಮಾಡುವ ಸತತ ಆರನೇ ಭಾಷಣ ಎನ್ನುವ ಇನ್ನೊಂದು ಕಾರಣವೂ ಇದೆ. ಈ ಮೂಲಕ ಅವರು ಅಟಲ್ ಬಿಹಾರಿ ವಾಜಪೇಯಿಯವರ ದಾಖಲೆಯನ್ನು ಸರಿಗಟ್ಟುತ್ತಿದ್ದಾರೆ. ಹೀಗೆ ಸತತ ಆರು ಭಾಷಣ ಮಾಡಿದ ಕಾಂಗ್ರೆಸ್ಸೇತರ ಪ್ರಧಾನಿಗಳು ಇವರಿಬ್ಬರೆ. ಇವೆಲ್ಲ ಒಂದು ತೂಕವಾದರೆ ಈ ಸಲ ಜಮ್ಮು-ಕಾಶ್ಮೀರ ಮೊದಲ ಸಲ ಸರ್ವತಂತ್ರ ಸ್ವತಂತ್ರ ಉತ್ಸವದ ಸವಿಯನ್ನು ಕಾಣಲಿದೆ ಎನ್ನುವುದು ಬಹಳ ಮುಖ್ಯವಾದ ಕಾರಣ.

ಕಣಿವೆ ರಾಜ್ಯಕ್ಕಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿ, ಅದನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸಿದ ಐತಿಹಾಸಿಕ ನಿರ್ಧಾರದ ಹಿನ್ನೆಲೆಯಲ್ಲಿ ಈ ಸ್ವಾತಂತ್ರ್ಯೋತ್ಸವಕ್ಕೆ ಇನ್ನಿಲ್ಲದ ಮಹತ್ವ ಬಂದಿದೆ. ಇಷ್ಟರ ತನಕ ಕಾಶ್ಮೀರದಲ್ಲಿ ಪೂರ್ಣ ಪ್ರಮಾಣದ ಸ್ವಾತಂತ್ರ್ಯೋತ್ಸವದ ಆಚರಣೆಯಾಗಿಲ್ಲ. ವಿಶೇಷ ಸ್ಥಾನಮಾನದ ಕಾರಣ ಅದು ದೇಶದಿಂದ ಪ್ರತ್ಯೇಕವಾಗಿಯೇ ಉಳಿದಿತ್ತು. ಸ್ವಾತಂತ್ರ್ಯ ದಿನದಂದು ತ್ರಿವರ್ಣ ಧ್ವಜದೊಂದಿಗೆ ಜಮ್ಮು-ಕಾಶ್ಮೀರದ ಧ್ವಜವನ್ನು ಹಾರಿಸುವುದು ವಾಡಿಕೆಯಾಗಿತ್ತು. ಕಾಶ್ಮೀರ ಸ್ವತಂತ್ರವಾಗಬೇಕೆಂದು ಪ್ರತಿಪಾದಿಸುತ್ತಿದ್ದವರು, ಪ್ರತ್ಯೇಕತಾವಾದಿಗಳು ಮತ್ತು ಉಗ್ರವಾದಿ ಸಂಘಟನೆಗಳ ಜತೆಗೆ ಗುರುತಿಸಿಕೊಂಡ ದೇಶದ್ರೋಹಿಗಳು ಪಾಕಿಸ್ಥಾನದ ಧ್ವಜ ಅರಳಿಸಿ ಸಂಭ್ರಮಪಡುತ್ತಿದ್ದ ದೃಶ್ಯಗಳೂ ಇದ್ದವು. ಆದರೆ ಈ ಸಲ ಪರಿಸ್ಥಿತಿ ಸಂಪೂರ್ಣ ಭಿನ್ನವಾಗಿದೆ. ಆ.5ರಂದು ಸರಕಾರ ಕೈಗೊಂಡ ಐತಿಹಾಸಿಕ ನಿರ್ಧಾರದ ಬಳಿಕ ಕಣಿವೆ ರಾಜ್ಯದಲ್ಲಿ ಹೊಸ ಗಾಳಿ ಬೀಸುತ್ತಿದೆ. ಮೊದಲ ಸಲ ಸ್ವತಂತ್ರ ಭಾರತದ ಜೊತೆಗೆ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೇವೆ ಎಂಬ ಪುಳಕ ಅಲ್ಲಿನ ಜನರಲ್ಲೂ ಇದೆ. ಒಂದರ್ಥದಲ್ಲಿ ಇದು ಅಖಂಡ ಭಾರತದ ಮೊದಲ ಸ್ವಾತಂತ್ರ್ಯೋತ್ಸವವೂ ಹೌದು. ಹೀಗಾಗಿ ಇತಿಹಾಸದಲ್ಲಿ ಈ ಸಲದ ಸ್ವಾತಂತ್ರ್ಯೋತ್ಸವಕ್ಕೆ ಬಹಳ ಪ್ರಾಮುಖ್ಯ ಇದೆ.

ನವ ಭಾರತ ನಿರ್ಮಾಣ ಮೋದಿ ಸರಕಾರದ ಸಂಕಲ್ಪ. ಇದಕ್ಕೆ ಈಗ ನವ ಕಾಶ್ಮೀರ ನಿರ್ಮಾಣವೂ ಸೇರಿಕೊಂಡಿದೆ. ವಿಶೇಷ ಸ್ಥಾನಮಾನದಿಂದಾಗಿ ದೇಶದ ಮುಖ್ಯವಾಹಿನಿಯಲ್ಲಿ ಬೆರೆಯದೇ ದೂರವೇ ಉಳಿದಿದ್ದ ಕಾಶ್ಮೀರದಲ್ಲಿ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿತ್ತು. ಇದ್ದ ಒಂದು ಪ್ರವಾಸೋದ್ಯಮವೂ ಉಗ್ರರ ಉಪಟಳದಿಂದಾಗಿ ಕುಂಟುತಿತ್ತು. ಇದೀಗ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಗಿದ್ದು, ಈ ಮೂಲಕ ಅಲ್ಲಿ ಅಭಿವೃದ್ಧಿಯ ಹೊಸ ಶಕೆಯನ್ನು ಪ್ರಾರಂಭಿಸುವ ವಾಗ್ಧಾನವನ್ನು ಸರಕಾರ ನೀಡಿದೆ. ಈ ಸ್ವಾತಂತ್ರ್ಯೋತ್ಸವ ಈ ಶಕೆಗೆ ನಾಂದಿ ಹಾಡುವ ಸಮಾರಂಭವಾಗಲಿ.

ಪ್ರತ್ಯೇಕತಾವಾದಿಗಳು, ಗಡಿಯಾಚೆಗಿನ ದುರುಳರು, ಗಡಿಯೊಳಗೆಯೇ ಇರುವ ದ್ರೋಹಿಗಳಿಂದ ಸಮಾರಂಭಕ್ಕೆ ಅಡ್ಡಿಯಾಗುವ ಸಾಧ್ಯತೆ ಖಂಡಿತ ಇದೆ. ಸದ್ಯಕ್ಕೇನೂ ಕಾಶ್ಮೀರ ಸೇನೆಯ ಬಿಗು ಕಣ್ಗಾವಲಿನಲ್ಲಿ ಸುರಕ್ಷಿತವಾಗಿರುವಂತೆ ಕಾಣಿಸುತ್ತಿದೆ. ಪರಿಸ್ಥಿತಿ ಸಹಜ ಸ್ಥಿತಿಗೆ ಬರುವ ತನಕ ಅಲ್ಲಿಂದ ಸೇನೆಯನ್ನು ಕದಲಿಸುವಂತಿಲ್ಲ ಎನ್ನುವುದೆಲ್ಲ ನಿಜ. ಆದರೆ ಬಂದೂಕಿನ ಮೂಲಕ ಬಹಳ ಕಾಲ ರಾಜ್ಯಭಾರ ಮಾಡಲು ಸಾಧ್ಯವಾಗದು. ಈ ವಾಸ್ತವ ಸರಕಾರಕ್ಕೂ ಅರಿವಿದೆ. ಸಂಬಂಧಪಟ್ಟ ಎಲ್ಲರ ಮನವೊಲಿಸಿಕೊಂಡು ಆದಷ್ಟು ಶೀಘ್ರವಾಗಿ ಅಲ್ಲಿ ಸಹಜ ಸ್ಥಿತಿ ನಿರ್ಮಾಣವಾಗುವಂತೆ ನೋಡಿಕೊಳ್ಳಬೇಕು. ವಿಧಾನಸಭೆಗೆ ಚುನಾವಣೆ ನಡೆಸಿ ನಾಗರಿಕ ಸರಕಾರ ಅಸ್ತಿತ್ವಕ್ಕೆ ಬರುವ ಪೂರಕ ವಾತಾವರಣವನ್ನು ಅಲ್ಲಿ ನಿರ್ಮಿಸಬೇಕು. ಜನಾಧಿಪತ್ಯವೇ ಸ್ವಾತಂತ್ರ್ಯದ ಪರಮ ಧ್ಯೇಯ. ಈ ಧ್ಯೇಯವನ್ನು ಸಾಧಿಸಿದಾಗಲೇ ಕಾಶ್ಮೀರಕ್ಕೆ ನಿಜವಾದ ಸ್ವಾತಂತ್ರ್ಯದ ಸಂಭ್ರಮ.ಈ ಸಂಭ್ರಮದಲ್ಲಿ ಕಾಶ್ಮೀರ ಆದಷ್ಟು ಬೇಗ ತೇಲಾಡಲಿ.

ಮೊದಲ ಸಲ ಸ್ವತಂತ್ರ ಭಾರತದ ಜತೆಗೆ ಸ್ವಾತಂತ್ರ್ಯೋತ್ಸವ ಆಚರಿಸುತ್ತಿದ್ದೇವೆ ಎಂಬ ಪುಳಕ ಅಲ್ಲಿನ ಜನರಲ್ಲೂ ಇದೆ.

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.