ತೈಲ ಬೆಲೆ ಇಳಿಕೆಗೆ ಕೇಂದ್ರದ ನಿರ್ಧಾರ: ಮಿಥನಾಲ್‌ಗೆ ಸ್ವಾಗತ


Team Udayavani, Dec 11, 2017, 8:01 AM IST

11-3.jpg

ಪೆಟ್ರೋಲಿಗೆ ಹೋಲಿಸಿದರೆ ಮಿಥನಾಲ್‌ನಿಂದ ಹಲವು ರೀತಿಯ ಲಾಭಗಳಿವೆ ಎನ್ನುವುದು ನಿಜ. ಈ ಇಂಧನಕ್ಕಾಗಿ ವಿದೇಶಗಳನ್ನೇ  ನೆಚ್ಚಿಕೊಳ್ಳುವ  ಅಗತ್ಯವಿಲ್ಲ. ಸ್ಥಳೀಯವಾಗಿ ಉತ್ಪಾದಿಸಿಕೊಳ್ಳಬಹುದು. ಇದು ಕಲ್ಲಿದ್ದಲಿನ ಉಪ ಉತ್ಪನ್ನ. ಜತೆಗೆ ಇದರಿಂದ ಉಂಟಾಗುವ ಮಾಲಿನ್ಯದ ಪ್ರಮಾಣವೂ ಕಡಿಮೆ.

ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಕಡಿಮೆಯಾಗಬೇಕೆನ್ನುವುದು ಪ್ರತಿಯೊಬ್ಬರ ಇಚ್ಛೆ. ಈ ಎರಡು ಇಂಧನಗಳು ವಾಹನ ಹೊಂದಿರುವವರ ಮಾತ್ರವಲ್ಲದೆ ಪ್ರತಿಯೊಬ್ಬರ ಬದುಕಿನ ಜತೆಗೆ ಮೇಲೆ ನೇರ ಸಂಬಂಧ ಹೊಂದಿವೆ. ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಕಡಿಮೆಯಾದ ಕೂಡಲೇ ಸಾಗಾಟ ವೆಚ್ಚ ಕಡಿಮೆಯಾಗಿ ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗುತ್ತದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ಸರಳ ಅರ್ಥಶಾಸ್ತ್ರ. ಹೀಗಾಗಿ ಎಲ್ಲರೂ ಅವುಗಳ ಬೆಲೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಆದರೆ ಜನರು ನಿರೀಕ್ಷಿಸಿದ ಮಟ್ಟಕ್ಕೆ ಈ ಇಂಧನಗಳ ಬೆಲೆ ಇಳಿಸಲು ಸಾಧ್ಯವಾಗುತ್ತಿಲ್ಲ ಎನ್ನುವುದು ವಾಸ್ತವ. ಈಗಲೂ ದೇಶದಲ್ಲಿ ಪೆಟ್ರೋಲು 70 ರೂ. ಮತ್ತು ಡೀಸೆಲ್‌ 50 ರೂ. ಆಸುಪಾಸಿನಲ್ಲಿದೆ. ದುರದೃಷ್ಟವೆಂದರೆ ಪೆಟ್ರೋಲು ಮತ್ತು ಡೀಸೆಲ್‌ಗಾಗಿ ನಾವು ವಿದೇಶಗಳನ್ನು ಅದರಲ್ಲೂ ನಿರ್ದಿಷ್ಟವಾಗಿ ಗಲ್ಫ್ ದೇಶಗಳನ್ನು ಅವಲಂಬಿಸಿರಬೇಕಾಗುತ್ತದೆ. ವಿದೇಶದಿಂದ ತಂದ ಕಚ್ಚಾತೈಲವನ್ನು ಸಂಸ್ಕಾರಣಾಗಾರಕ್ಕೆ ಸಾಗಿಸಿ ಸಂಸ್ಕರಿಸಿ ಪೆಟ್ರೋಲು ಮತ್ತು ಡೀಸೆಲ್‌ ಆಗಿ ಪರಿವರ್ತಿಸಿ ಮಾರುಕಟ್ಟೆಗೆ ಪೂರೈಕೆ ಮಾಡಲಾಗುತ್ತದೆ. ಕಚ್ಛಾತೈಲ ಆಮದು ಮಾಡಿಕೊಳ್ಳುವ ಪ್ರಕ್ರಿಯೆಯಲ್ಲಿ ದೇಶ ಭಾರೀ ಮೊತ್ತದ ವಿದೇಶಿ ವಿನಿಮಯವನ್ನು ಕಳೆದುಕೊಳ್ಳಬೇಕಾಗುತ್ತದೆ. ಈ ಹೀಗೆ ನಷ್ಟವಾದ ವಿದೇಶಿ ವಿನಿಮಯವನ್ನು ಸರಿದೂಗಿಸಿಕೊಳ್ಳುವ ಸಲುವಾಗಿ ಡೀಸೆಲ್‌ ಮತ್ತು ಪೆಟ್ರೋಲು ಮೇಲೆ ನಾನಾ ರೀತಿಯ ತೆರಿಗೆಯನ್ನು ಹಾಕುತ್ತದೆ. ಇದರಿಂದಾಗಿ ಈ ಇಂಧನಗಳ ಬೆಲೆಯಲ್ಲಿ ಶೇ. 50ರಷ್ಟು ತೆರಿಗೆ ಒಳಗೊಂಡಿರುತ್ತದೆ. ತೆರಿಗಳಿಂದಾಗಿ ಅವುಗಳು ಸದಾ ದುಬಾರಿಯಾಗಿಯೇ ಇರುತ್ತವೆ.ಆದರೆ ಕಾಲಕಾಲಕ್ಕೆ ಡೀಸೆಲ್‌ ಮತ್ತು ಪೆಟ್ರೋಲು ಬೆಲೆ ಇಳಿಸಬೇಕೆಂಬ ಬೇಡಿಕೆ ಕೇಳಿ ಬರುತ್ತಿರುತ್ತದೆ.

ಸಾರಿಗೆ ಸಚಿವ ನಿತಿನ್‌ ಗಡ್ಕರಿಯವರು ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಇಳಿಸಲು ಹೊಸ ಉಪಾಯವನ್ನು ಕಂಡುಕೊಂಡಿದ್ದಾರೆ. ಅದು ಪೆಟ್ರೋಲಿಗೆ ಮಿಥನಾಲ್‌ ಎಂಬ ರಾಸಾಯನಿವನ್ನು ಬೆರೆಸುವುದು. ಈಗಾಗಲೇ  ಮಿಥನಾಲ್‌ ಮತ್ತು ಇಥನಾಲ್‌ ಎಂಬ ರಾಸಾಯನಿಕಗಳನ್ನು ಅಲ್ಪ ಪ್ರಮಾಣ ದಲ್ಲಿ ಬೆರೆಸಲಾಗುತ್ತಿದೆ. ಮಿಥನಾಲ್‌ ಲೀಟರಿಗೆ ಬರೀ 22 ರೂ.ಗೆ ಸಿಗುವುದರಿಂದ ಮಿಥನಾಲ್‌ ಪ್ರಮಾಣವನ್ನು ಶೇ. 15ಕ್ಕೇರಿಸುವ ಮೂಲಕ ಪೆಟ್ರೋಲು ಬೆಲೆ ಇಳಿಸಬಹುದು ಎನ್ನುವುದು ಅವರ ಲೆಕ್ಕಾಚಾರ. ಮುಂಬರುವ ಅಧಿವೇಶನದಲ್ಲಿ ಮಿಥನಾಲ್‌ ಬೆರೆಸುವುದನ್ನು ಕಡ್ಡಾಯಗೊಳಿಸುವ ಮಸೂದೆ ಮಂಡಿಸಿ ಮಂಜೂರು ಮಾಡಿಕೊಂಡು ಶಾಸನ ರೂಪದಲ್ಲಿ ಜಾರಿಗೆ ತರುವುದು ಅವರ ಉದ್ದೇಶ. ಮಿಥನಾಲ್‌ನಿಂದ ಹಲವು ರೀತಿಯ ಲಾಭಗಳಿವೆ. ಈ ಇಂಧನಕ್ಕಾಗಿ ವಿದೇಶಗಳನ್ನೇ ಅವಲಂಬಿಸಿಕೊಂಡಿರಬೇಕಾದ ಅಗತ್ಯವಿಲ್ಲ. ಸ್ಥಳೀಯವಾಗಿ ಉತ್ಪಾದಿಸಿಕೊಳ್ಳಬಹುದು. ಇದು ಕಲ್ಲಿದ್ದಲಿನ ಉಪ ಉತ್ಪನ್ನ. ಜತೆಗೆ ಇದರಿಂದ ಉಂಟಾಗುವ ಮಾಲಿನ್ಯದ ಪ್ರಮಾಣವೂ ಕಡಿಮೆ. ಹೀಗೆ ಎಲ್ಲ ವಿಚಾರದಲ್ಲೂ ಮಿಥನಾಲ್‌ ಪೆಟ್ರೋಲಿಗಿಂತ ಉತ್ತಮ ಎಂದು ಕಾಣಿಸುತ್ತಿರುವುದರಿಂದ ಗಡ್ಕರಿಯವರ ಸಲಹೆ ಆಕರ್ಷಣೀಯವಾಗಿ ಕಾಣಿಸುತ್ತಿದೆ. 

ಮಿಥನಾಲ್‌ ಎನ್ನುವುದು ಒಂದು ಅಲ್ಕೋಹಾಲ್‌. ಸುಡುವ ಗುಣ ಪೆಟ್ರೋಲಿಗಿಂತ ಹೆಚ್ಚಿರುವುದರಿಂದ ಇದನ್ನು ವಾಹನಗಳಲ್ಲಿ ಬಳಸುತ್ತಾರೆ.  ಕೆಲವು ದೇಶಗಳಲ್ಲಿ ಈಗಾಗಲೇ ಮಿಥನಾಲ್‌ ಬೆರೆಸುವುದು ಕಡ್ಡಾಯವಾಗಿದೆ.   ಆದರೆ ಮಿಥನಾಲ್‌, ಪೆಟ್ರೋಲು ಮಿಶ್ರಣದ ಅನುಪಾತ ಏರುಪೇರಾದರೆ  ವಾಹನಗಳ ಎಂಜಿನ್‌ಗಳಿಗೆ ಭಾರೀ ಹಾನಿ ಸಂಭವಿಸುತ್ತದೆ. ಅಲ್ಲದೆ ಮಿಥನಾಲ್‌ ಬಳಕೆಗೆ ಎಂಜಿನ್‌ಗಳಲ್ಲಿ ಚಿಕ್ಕಪುಟ್ಟ ಮಾರ್ಪಾಡು ಮಾಡಿಕೊಳ್ಳಬೇಕಿದೆ. ಹೀಗಾಗಿ, ಸಚಿವ ಐಡಿಯಾ, ಒಳಿತಿಗಿಂತ ಹೆಚ್ಚು ಕೆಡುಕಾಗಬಹುದು. ಅಲ್ಕೋಹಾಲ್‌ ಗುಣ ಹೊಂದಿರುವುದರಿಂದ ದುರುಪಯೋಗವಾಗುವ ಸಾಧ್ಯತೆಯೂ ಅಧಿಕವಿದೆ. ಇದೆಲ್ಲವನ್ನೂ ಗಮನದಲ್ಲಿಟ್ಟುಕೊಂಡು ಕಾನೂನು ರಚಿಸುವ ಅಗತ್ಯತೆಯಿದೆ. 

ಟಾಪ್ ನ್ಯೂಸ್

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.