ಅಂತಾರಾಷ್ಟ್ರೀಯ ಮಟ್ಟದಲ್ಲೇ ಚೀನಕ್ಕೆ ಬುದ್ಧಿ ಕಲಿಸಬೇಕು


Team Udayavani, Jan 5, 2022, 6:00 AM IST

ಅಂತಾರಾಷ್ಟ್ರೀಯ ಮಟ್ಟದಲ್ಲೇ ಚೀನಕ್ಕೆ ಬುದ್ಧಿ ಕಲಿಸಬೇಕು

ಗಾಲ್ವಾನ್‌ನಲ್ಲಿ ಭಾರತೀಯ ಯೋಧರು ತ್ರಿವರ್ಣ ಧ್ವಜವನ್ನು ಅರಳಿಸಿ ಈ ಪ್ರದೇಶ ಭಾರತದ ಸುಪರ್ದಿಯಲ್ಲೇ ಇದೆ ಎಂಬುದನ್ನು ಜಗತ್ತಿಗೆ ಸಾರಿದರು.

ಕಳೆದ ವರ್ಷದ ಆರಂಭದಲ್ಲಿ ಗಾಲ್ವಾನ್‌ನಲ್ಲಿ ಭಾರತೀಯ ಯೋಧರಿಂದ ಪೆಟ್ಟು ತಿಂದಿದ್ದರೂ ನೆರೆಯ ಚೀನ ತನ್ನ ಕೊಳಕು ಬುದ್ಧಿ ಮಾತ್ರ ಬಿಟ್ಟಿಲ್ಲ. ಹೊಸ ವರ್ಷದ ದಿನದಂದು ಗಾಲ್ವಾನ್‌ನಲ್ಲಿಯದು ಎಂದು ಹೇಳಿಕೊಂಡ ಫೋಟೋವೊಂದನ್ನು ಬಿಡುಗಡೆ ಮಾಡಿದ್ದ ಚೀನ, ನಮ್ಮ ಒಂದಿಂಚೂ ಭೂಮಿಯನ್ನು ಬಿಡುವುದಿಲ್ಲ ಎಂದು ಹೇಳಿಕೊಂಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ, ಮಂಗಳವಾರ ಗಾಲ್ವಾನ್‌ನಲ್ಲಿ ಭಾರತೀಯ ಯೋಧರು ತ್ರಿವರ್ಣ ಧ್ವಜ ಇರಿಸಿಕೊಂಡು ಹೊಸ ವರ್ಷಾಚರಣೆ ನಡೆಸುತ್ತಿರುವ ಫೋಟೋ ಬಿಡುಗಡೆ ಮಾಡಿದೆ. ಈ ಮೂಲಕ ಗಾಲ್ವಾನ್‌ ನಮ್ಮ ವಶದಲ್ಲೇ ಇದೆ ಎಂಬ ಸಂದೇಶವನ್ನು ಚೀನಕ್ಕೆ ರವಾನಿಸಿದೆ.

ಚೀನದ ಈ ಮೊಂಡಾಟ ಕೇವಲ ಗಾಲ್ವಾನ್‌ಗೆà ನಿಂತಿಲ್ಲ. ಅತ್ತ ಪ್ಯಾಂಗ್ಯಾಂಗ್‌ ಸರೋವರದ ಬಳಿ ಸೇತುವೆಯೊಂದನ್ನು ನಿರ್ಮಿಸುತ್ತಿರುವ ಸ್ಯಾಟ್‌ಲೈಟ್‌ ಚಿತ್ರವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆಯೂ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಗಾಲ್ವಾನ್‌ನಲ್ಲಿ ಸಂಘರ್ಷದ ಅನಂತರ ಇದುವರೆಗೆ ಉಭಯ ದೇಶಗಳ ನಡುವೆ 14 ಸುತ್ತಿನ ಮಾತುಕತೆ ನಡೆದಿದೆ. ಈ ಸಭೆಯಲ್ಲಿ ಕಾರ್ಪ್‌ ಕಮಾಂಡರ್‌ಗಳು ಸೇರಿ ಗಡಿಯಲ್ಲಿ ಶಾಂತಿಯ ವಾತಾವರಣ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿದ್ದಾರೆ. ಇದುವರೆಗೆ ಈ ಸಭೆಯಲ್ಲಿ ಪಾಲ್ಗೊಂಡಿರುವ ಚೀನ, ತನ್ನ ಪಟ್ಟು ಬಿಡದೇ ಮೊಂಡಾಟ ಮುಂದುವರಿಸಿದೆ. ಅಷ್ಟೇ ಅಲ್ಲ, ಪ್ಯಾಂಗ್ಯಾಂಗ್‌ ಸರೋವರದ ಬಳಿಯಿಂದ ಹಿಂದಕ್ಕೆ ಸರಿಯಲೂ ನಿರಾಕರಿಸಿದೆ. ಜತೆಗೆ ಉಭಯ ದೇಶಗಳ ನಡುವಿನ ಸಂಘರ್ಷ ಕಡಿಮೆ ಮಾಡಿಕೊಂಡು ಶಾಂತಿಯ ವಾತಾವರಣ ನಿರ್ಮಾಣ ಮಾಡುವ ಬಗ್ಗೆ ಹೇಳಿಕೊಳ್ಳುತ್ತಲೇ ತನ್ನ ಕುತ್ಸಿತ ಬುದ್ಧಿಯನ್ನು ತೋರುತ್ತಲೇ ಬಂದಿದೆ.

ಇದಕ್ಕೆ ಸಾಕ್ಷಿ ಪ್ಯಾಂಗ್ಯಾಂಗ್‌ ಸರೋವರದ ಬಳಿಕ ಸೇತುವೆ ನಿರ್ಮಾಣ ಮಾಡುತ್ತಿರುವುದು. 2020ರ ಆ.29-30ರಂದು ಭಾರತೀಯ ಸೇನೆ ಪ್ಯಾಂಗ್ಯಾಂಗ್‌ ಸರೋವರದ ಬಳಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಚೀನ ಸೇನೆಯನ್ನು ಹಿಮ್ಮೆಟ್ಟಿಸಿ, ಮುಂಚೂಣಿ ನೆಲೆಗಳಲ್ಲಿ ತನ್ನ ಸೇನೆಯನ್ನು ನಿಲ್ಲಿಸಿತ್ತು. ಇದು ಚೀನದ ಹಿನ್ನಡೆಗೂ ಕಾರಣವಾಗಿತ್ತು. ಅಲ್ಲದೆ ಈಗಲೂ ಭಾರತೀಯ ಸೇನೆ ಈ ಭಾಗದಲ್ಲಿ ಸರ್ವ ಸನ್ನದ್ಧವಾಗಿ ನಿಂತಿದೆ. ಇಲ್ಲಿ ಭಾರತವನ್ನು ಸಮರ್ಥವಾಗಿ ಎದುರಿಸಬೇಕಾದರೆ, ಚೀನ, ಯಾವುದೇ ಅಡ್ಡಿ ಇಲ್ಲದೇ ತನ್ನ ಫಿಂಗರ್‌ 4ಗೆ ಬರಬಹುದು. ಹೀಗಾಗಿ ಇಲ್ಲಿ ಸೇತುವೆ ನಿರ್ಮಾಣ ಮಾಡುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಲಡಾಖ್‌ನ ಈ ಭಾಗದ ವಿವಾದ ಒಂದು ಕಡೆಯಾದರೆ, ಇನ್ನೊಂದು ಕಡೆ ಅತ್ತ ಅರುಣಾಚಲ ಪ್ರದೇಶದಲ್ಲೂ ಚೀನದ ಕೆಟ್ಟ ಬುದ್ಧಿ ಪ್ರದರ್ಶನವಾಗಿದೆ. ಅಲ್ಲಿನ ಕೆಲವೊಂದು ಹಳ್ಳಿಗಳ ಹೆಸರನ್ನೇ ಬದಲಾವಣೆ ಮಾಡಿದೆ. ಆದರೆ ಈ ಬೆಳವಣಿಗೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿರುವ ಭಾರತ, ಇಂಥ ಯಾವುದೇ ಪ್ರಕ್ರಿಯೆಗಳನ್ನು ಭಾರತ ಸಹಿಸುವುದಿಲ್ಲ ಎಂದಿದೆ.

ಇತ್ತೀಚಿನ ದಿನಗಳಲ್ಲಿ ಗಡಿ ಭಾಗದಲ್ಲಿ ಚೀನದ ಮೊಂಡಾಟ ಹೆಚ್ಚಾಗುತ್ತಲೇ ಇದೆ. ಇದನ್ನು ಶಾಶ್ವತವಾಗಿ ಬಂದ್‌ ಮಾಡಬೇಕಾದರೆ, ಅಂತಾ

ರಾಷ್ಟ್ರೀಯ ಮಟ್ಟದಲ್ಲಿ ಚೀನಕ್ಕೆ ಕಡಿವಾಣ ಹಾಕಲೇಬೇಕು. ಆ ದೇಶಕ್ಕೆ ಸೌರ್ವಭೌಮತ್ವ ಎಂಬುದು ಎಷ್ಟು ಮಹತ್ವವೋ ಮತ್ತೂಂದು ದೇಶದ ಸಾರ್ವಭೌಮತ್ವವೂ ಅಷ್ಟೇ ಮಹತ್ವದ್ದು ಎಂಬುದನ್ನು ಚೀನ ಅರಿಯುವಂತಾಗಬೇಕು. ಇದಕ್ಕೆ ತಡೆಹಾಕುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾನ ಮನಸ್ಕ ದೇಶಗಳು ಒಂದಾಗಿ ಚೀನ ಮೇಲೆ ವ್ಯಾಪಾರವೂ ಸೇರಿದಂತೆ ಬೇರೆ ಬೇರೆ ರೀತಿಯ ನಿರ್ಬಂಧ ಹೇರುವಂತಾಗಬೇಕು.

ಟಾಪ್ ನ್ಯೂಸ್

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

2-

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಆಘಾತ; ಮೃತ್ಯು

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಳಸ: ಕಂಠಪೂರ್ತಿ ಕುಡಿದು ಬಂದು ಆಪರೇಷನ್ ಥಿಯೇಟರ್ ನಲ್ಲಿ ಮಲಗಿದ ಸರ್ಕಾರಿ ವೈದ್ಯ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

ಕಬ್ಬನ್‌ಪಾರ್ಕ್‌ನಲ್ಲಿ ಹೆಚ್ಚಿದ ಭಿಕ್ಷುಕರ ಕಾಟ

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

WTC Final: ಆಸೀಸ್ ತಂಡ ಈ ಇಬ್ಬರು ಆಟಗಾರರ ಬಗ್ಗೆ ತಲೆಕೆಡೆಸಿಕೊಂಡಿದೆ ಎಂದ ಪಾಂಟಿಂಗ್

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು

ಚಾಮರಾಜನಗರ ತಾಲೂಕಿನಲ್ಲಿ ಸಣ್ಣ ವಿಮಾನ ಪತನ; ತಪ್ಪಿದ ಅನಾಹುತ; ಪೈಲಟ್ ಗಳು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

lok adalat

ನ್ಯಾಯಾಧೀಶರ ಘನತೆ, ಗೌರವಕ್ಕೆ ಧಕ್ಕೆ ಸರಿಯಲ್ಲ

SCHOOL TEA-STUDENTS

ಪಠ್ಯಪುಸ್ತಕ ಪರಿಷ್ಕರಣೆ ನೆಪದಲ್ಲಿ ವೃಥಾ ವಿವಾದ ಬೇಡ

police siren

ಸಂಚಾರ ನಿಯಮ ಭಂಜಕರ ವಿರುದ್ಧ ಕ್ರಮ ಅನಿವಾರ್ಯ

school student

ಶಾಲಾ ಶಿಕ್ಷಣ: ಮಕ್ಕಳ ಜೀವನಕ್ಕೆ ಸುಭದ್ರ ಬುನಾದಿಯಾಗಲಿ

cheeta

ಚೀತಾ ಸಂರಕ್ಷಣೆಗೆ ಸರಕಾರ ಹೆಚ್ಚಿನ ಕಾಳಜಿ ವಹಿಸಲಿ

MUST WATCH

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

udayavani youtube

ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ

ಹೊಸ ಸೇರ್ಪಡೆ

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

ಮಕ್ಕಳಿದ್ದರೂ ಶಿಕ್ಷಕರಿಲ್ಲ, ಮುಚ್ಚುವ ಸ್ಥಿತಿಯಲ್ಲಿ 15 ಶಾಲೆಗಳು

rishi in telugu web series

ವೆಬ್ ಸಿರೀಸ್ ನತ್ತ ರಿಷಿ: ತೆಲುಗಿನ ‘ಶೈತಾನ್’ನಲ್ಲಿ ನಟನೆ

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು!

Chamarajanagar ಸೇನಾ ತರಬೇತಿ ವಿಮಾನ ಪತನ: ಪ್ಯಾರಾಚೂಟ್ ಸಹಾಯದಿಂದ ಜಿಗಿದ ಪೈಲಟ್ ಗಳು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ಕಿಕ್ಕೇರಿಯಲ್ಲಿ ನಾಯಿಗಳ ಉಪಟಳಕ್ಕೆ ಜನರು ಕಂಗಾಲು

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ

ರಾತ್ರೋರಾತ್ರಿ ಜಮೀನಾದ ರಾಜವಂಶಸ್ಥರ ಕಾಲದ ಕೆರೆ