ಅಂತಾರಾಷ್ಟ್ರೀಯ ಮಟ್ಟದಲ್ಲೇ ಚೀನಕ್ಕೆ ಬುದ್ಧಿ ಕಲಿಸಬೇಕು


Team Udayavani, Jan 5, 2022, 6:00 AM IST

ಅಂತಾರಾಷ್ಟ್ರೀಯ ಮಟ್ಟದಲ್ಲೇ ಚೀನಕ್ಕೆ ಬುದ್ಧಿ ಕಲಿಸಬೇಕು

ಗಾಲ್ವಾನ್‌ನಲ್ಲಿ ಭಾರತೀಯ ಯೋಧರು ತ್ರಿವರ್ಣ ಧ್ವಜವನ್ನು ಅರಳಿಸಿ ಈ ಪ್ರದೇಶ ಭಾರತದ ಸುಪರ್ದಿಯಲ್ಲೇ ಇದೆ ಎಂಬುದನ್ನು ಜಗತ್ತಿಗೆ ಸಾರಿದರು.

ಕಳೆದ ವರ್ಷದ ಆರಂಭದಲ್ಲಿ ಗಾಲ್ವಾನ್‌ನಲ್ಲಿ ಭಾರತೀಯ ಯೋಧರಿಂದ ಪೆಟ್ಟು ತಿಂದಿದ್ದರೂ ನೆರೆಯ ಚೀನ ತನ್ನ ಕೊಳಕು ಬುದ್ಧಿ ಮಾತ್ರ ಬಿಟ್ಟಿಲ್ಲ. ಹೊಸ ವರ್ಷದ ದಿನದಂದು ಗಾಲ್ವಾನ್‌ನಲ್ಲಿಯದು ಎಂದು ಹೇಳಿಕೊಂಡ ಫೋಟೋವೊಂದನ್ನು ಬಿಡುಗಡೆ ಮಾಡಿದ್ದ ಚೀನ, ನಮ್ಮ ಒಂದಿಂಚೂ ಭೂಮಿಯನ್ನು ಬಿಡುವುದಿಲ್ಲ ಎಂದು ಹೇಳಿಕೊಂಡಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ, ಮಂಗಳವಾರ ಗಾಲ್ವಾನ್‌ನಲ್ಲಿ ಭಾರತೀಯ ಯೋಧರು ತ್ರಿವರ್ಣ ಧ್ವಜ ಇರಿಸಿಕೊಂಡು ಹೊಸ ವರ್ಷಾಚರಣೆ ನಡೆಸುತ್ತಿರುವ ಫೋಟೋ ಬಿಡುಗಡೆ ಮಾಡಿದೆ. ಈ ಮೂಲಕ ಗಾಲ್ವಾನ್‌ ನಮ್ಮ ವಶದಲ್ಲೇ ಇದೆ ಎಂಬ ಸಂದೇಶವನ್ನು ಚೀನಕ್ಕೆ ರವಾನಿಸಿದೆ.

ಚೀನದ ಈ ಮೊಂಡಾಟ ಕೇವಲ ಗಾಲ್ವಾನ್‌ಗೆà ನಿಂತಿಲ್ಲ. ಅತ್ತ ಪ್ಯಾಂಗ್ಯಾಂಗ್‌ ಸರೋವರದ ಬಳಿ ಸೇತುವೆಯೊಂದನ್ನು ನಿರ್ಮಿಸುತ್ತಿರುವ ಸ್ಯಾಟ್‌ಲೈಟ್‌ ಚಿತ್ರವನ್ನು ಬಿಡುಗಡೆ ಮಾಡಿದೆ. ಈ ಬಗ್ಗೆಯೂ ಭಾರತದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಗಾಲ್ವಾನ್‌ನಲ್ಲಿ ಸಂಘರ್ಷದ ಅನಂತರ ಇದುವರೆಗೆ ಉಭಯ ದೇಶಗಳ ನಡುವೆ 14 ಸುತ್ತಿನ ಮಾತುಕತೆ ನಡೆದಿದೆ. ಈ ಸಭೆಯಲ್ಲಿ ಕಾರ್ಪ್‌ ಕಮಾಂಡರ್‌ಗಳು ಸೇರಿ ಗಡಿಯಲ್ಲಿ ಶಾಂತಿಯ ವಾತಾವರಣ ನಿರ್ಮಾಣ ಮಾಡುವ ಬಗ್ಗೆ ಚರ್ಚಿಸಿದ್ದಾರೆ. ಇದುವರೆಗೆ ಈ ಸಭೆಯಲ್ಲಿ ಪಾಲ್ಗೊಂಡಿರುವ ಚೀನ, ತನ್ನ ಪಟ್ಟು ಬಿಡದೇ ಮೊಂಡಾಟ ಮುಂದುವರಿಸಿದೆ. ಅಷ್ಟೇ ಅಲ್ಲ, ಪ್ಯಾಂಗ್ಯಾಂಗ್‌ ಸರೋವರದ ಬಳಿಯಿಂದ ಹಿಂದಕ್ಕೆ ಸರಿಯಲೂ ನಿರಾಕರಿಸಿದೆ. ಜತೆಗೆ ಉಭಯ ದೇಶಗಳ ನಡುವಿನ ಸಂಘರ್ಷ ಕಡಿಮೆ ಮಾಡಿಕೊಂಡು ಶಾಂತಿಯ ವಾತಾವರಣ ನಿರ್ಮಾಣ ಮಾಡುವ ಬಗ್ಗೆ ಹೇಳಿಕೊಳ್ಳುತ್ತಲೇ ತನ್ನ ಕುತ್ಸಿತ ಬುದ್ಧಿಯನ್ನು ತೋರುತ್ತಲೇ ಬಂದಿದೆ.

ಇದಕ್ಕೆ ಸಾಕ್ಷಿ ಪ್ಯಾಂಗ್ಯಾಂಗ್‌ ಸರೋವರದ ಬಳಿಕ ಸೇತುವೆ ನಿರ್ಮಾಣ ಮಾಡುತ್ತಿರುವುದು. 2020ರ ಆ.29-30ರಂದು ಭಾರತೀಯ ಸೇನೆ ಪ್ಯಾಂಗ್ಯಾಂಗ್‌ ಸರೋವರದ ಬಳಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ ಚೀನ ಸೇನೆಯನ್ನು ಹಿಮ್ಮೆಟ್ಟಿಸಿ, ಮುಂಚೂಣಿ ನೆಲೆಗಳಲ್ಲಿ ತನ್ನ ಸೇನೆಯನ್ನು ನಿಲ್ಲಿಸಿತ್ತು. ಇದು ಚೀನದ ಹಿನ್ನಡೆಗೂ ಕಾರಣವಾಗಿತ್ತು. ಅಲ್ಲದೆ ಈಗಲೂ ಭಾರತೀಯ ಸೇನೆ ಈ ಭಾಗದಲ್ಲಿ ಸರ್ವ ಸನ್ನದ್ಧವಾಗಿ ನಿಂತಿದೆ. ಇಲ್ಲಿ ಭಾರತವನ್ನು ಸಮರ್ಥವಾಗಿ ಎದುರಿಸಬೇಕಾದರೆ, ಚೀನ, ಯಾವುದೇ ಅಡ್ಡಿ ಇಲ್ಲದೇ ತನ್ನ ಫಿಂಗರ್‌ 4ಗೆ ಬರಬಹುದು. ಹೀಗಾಗಿ ಇಲ್ಲಿ ಸೇತುವೆ ನಿರ್ಮಾಣ ಮಾಡುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಲಡಾಖ್‌ನ ಈ ಭಾಗದ ವಿವಾದ ಒಂದು ಕಡೆಯಾದರೆ, ಇನ್ನೊಂದು ಕಡೆ ಅತ್ತ ಅರುಣಾಚಲ ಪ್ರದೇಶದಲ್ಲೂ ಚೀನದ ಕೆಟ್ಟ ಬುದ್ಧಿ ಪ್ರದರ್ಶನವಾಗಿದೆ. ಅಲ್ಲಿನ ಕೆಲವೊಂದು ಹಳ್ಳಿಗಳ ಹೆಸರನ್ನೇ ಬದಲಾವಣೆ ಮಾಡಿದೆ. ಆದರೆ ಈ ಬೆಳವಣಿಗೆಯನ್ನು ಸಂಪೂರ್ಣವಾಗಿ ತಿರಸ್ಕರಿಸಿರುವ ಭಾರತ, ಇಂಥ ಯಾವುದೇ ಪ್ರಕ್ರಿಯೆಗಳನ್ನು ಭಾರತ ಸಹಿಸುವುದಿಲ್ಲ ಎಂದಿದೆ.

ಇತ್ತೀಚಿನ ದಿನಗಳಲ್ಲಿ ಗಡಿ ಭಾಗದಲ್ಲಿ ಚೀನದ ಮೊಂಡಾಟ ಹೆಚ್ಚಾಗುತ್ತಲೇ ಇದೆ. ಇದನ್ನು ಶಾಶ್ವತವಾಗಿ ಬಂದ್‌ ಮಾಡಬೇಕಾದರೆ, ಅಂತಾ

ರಾಷ್ಟ್ರೀಯ ಮಟ್ಟದಲ್ಲಿ ಚೀನಕ್ಕೆ ಕಡಿವಾಣ ಹಾಕಲೇಬೇಕು. ಆ ದೇಶಕ್ಕೆ ಸೌರ್ವಭೌಮತ್ವ ಎಂಬುದು ಎಷ್ಟು ಮಹತ್ವವೋ ಮತ್ತೂಂದು ದೇಶದ ಸಾರ್ವಭೌಮತ್ವವೂ ಅಷ್ಟೇ ಮಹತ್ವದ್ದು ಎಂಬುದನ್ನು ಚೀನ ಅರಿಯುವಂತಾಗಬೇಕು. ಇದಕ್ಕೆ ತಡೆಹಾಕುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಮಾನ ಮನಸ್ಕ ದೇಶಗಳು ಒಂದಾಗಿ ಚೀನ ಮೇಲೆ ವ್ಯಾಪಾರವೂ ಸೇರಿದಂತೆ ಬೇರೆ ಬೇರೆ ರೀತಿಯ ನಿರ್ಬಂಧ ಹೇರುವಂತಾಗಬೇಕು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.