ಕೋವಿಡ್ : ಮಾನವೀಯತೆಯ ಮೇಲೆ ಕ್ರೌರ್ಯ ಬೇಡ


Team Udayavani, Nov 29, 2022, 6:00 AM IST

ಕೋವಿಡ್ : ಮಾನವೀಯತೆಯ ಮೇಲೆ ಕ್ರೌರ್ಯ ಬೇಡ

ಝೀರೋ ಕೋವಿಡ್‌ ಹೆಸರಲ್ಲಿ ಚೀನ, ತನ್ನ ನಾಗರಿಕರ ಮೇಲೆ ಕ್ರೌರ್ಯ ಮೆರೆಯುತ್ತಿದ್ದು, ಬೆಂಕಿ ದುರಂತದಿಂದ 10 ಮಂದಿ ಸಾವನ್ನಪ್ಪಲು ಸರಕಾರವೇ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. 2019ರ ಡಿಸೆಂಬರ್‌ನಿಂದಲೂ ಚೀನದಲ್ಲಿ ಕೊರೊನಾ ಕಾಣಿಸಿಕೊಂಡಿದ್ದು, ಆಗಿನಿಂದಲೂ ಝೀರೋ ಕೋವಿಡ್‌ ಹೆಸರಲ್ಲಿ ಪದೇ ಪದೆ ನಿರ್ಬಂಧ ಹೇರುತ್ತಿದೆ. ವಿಚಿತ್ರವೆಂದರೆ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ಇಡೀ ಜಗತ್ತೇ ಕೊರೊನಾ ಹಿಮ್ಮೆಟ್ಟಿಸಿ ದೃಢವಾಗಿ ನಿಂತಿದ್ದರೆ ಚೀನ ಮಾತ್ರ ಕೊರೊನಾ ಹೆಸರಲ್ಲಿ ಇನ್ನೂ ಹುಚ್ಚುತನದ ತೀರ್ಮಾನಗಳನ್ನೇ ತೆಗೆದುಕೊಳ್ಳುತ್ತಿದೆ. ಇದು ಒಂದು ರೀತಿಯಲ್ಲಿ ಹೊರಜಗತ್ತಿಗೆ ತೀರಾ ವಿಚಿತ್ರವಾಗಿ ಕಾಣಿಸುತ್ತಿದೆ.

ಕಳೆದ ಗುರುವಾರ ಉರುಂಖೀ ಎಂಬಲ್ಲಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬೆಂಕಿ ಬಿದ್ದು 10 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿ ಕೊರೊನಾದಿಂದಾಗಿ ಲಾಕ್‌ಡೌನ್‌ ಹಾಕಲಾಗಿದ್ದು, ಬೆಂಕಿಯ ಕೆನ್ನಾಲಿಗೆಯಿಂದ ಜನರನ್ನು ರಕ್ಷಿಸುವ ಕೆಲಸವೂ ಆಗಿಲ್ಲ. ಜತೆಗೆ ಅಪಾರ್ಟ್‌ಮೆಂಟ್‌ನೊಳಗೆ ಇದ್ದವರನ್ನು ಹೊರಗೆ ಬರಲೂ ಬಿಟ್ಟಿಲ್ಲ. ಎಷ್ಟೋ ಅಪಾರ್ಟ್‌ಮೆಂಟ್‌ಗಳಿಗೆ ಹೊರಗಿನಿಂದ ತಂತಿ ಬಳಸಿ ಬಾಗಿಲು ಕಟ್ಟಲಾಗಿದ್ದು, ಬಹುತೇಕ ಮಂದಿ ಒಳಗೇ ಸಿಲುಕಿಕೊಂಡಿದ್ದಾರೆ. ಹೀಗಾಗಿ ಸಾವನ್ನಪ್ಪಿರುವವರ ಸಂಖ್ಯೆ ಹೆಚ್ಚಿದೆ ಎಂಬುದು ಜನರ ಆರೋಪ.  ಹೀಗಾಗಿಯೇ ಬೀಜಿಂಗ್‌, ಶಾಂಘೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಸರಕಾರದ ವಿರುದ್ಧ ಪ್ರತಿಭಟನೆಯ ಕಾಳಿYಟ್ಟು ಹಬ್ಬಿದೆ. ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ರಾಜೀನಾಮೆಗೆ ಜನ ಒತ್ತಾಯ ಮಾಡುತ್ತಿದ್ದಾರೆ. ಅಲ್ಲದೇ ಖಾಲಿ ಪೇಪರ್‌ ಹಿಡಿದು ಪ್ರತಿಭಟನೆ ಮಾಡುತ್ತಾ ಸರಕಾರವೂ ಕೆಳಗಿಳಿಯಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಈ ಎಲ್ಲ ಹೋರಾಟಗಳನ್ನು ಹತ್ತಿಕ್ಕುವ ಕೆಲಸವನ್ನು ಚೀನ ಸರಕಾರ ಮಾಡುತ್ತಿದೆ. ಅಧ್ಯಕ್ಷರ ರಾಜೀನಾಮೆಗೆ ಆಗ್ರಹಿಸುವಂಥ ಸಾಮಾಜಿಕ ಜಾಲತಾಣಗಳಲ್ಲಿನ ಪೋಸ್ಟ್‌ಗಳನ್ನು ಸೆನ್ಸಾರ್‌ ಮಾಡಿ ಡಿಲೀಟ್‌ ಮಾಡಲಾಗುತ್ತಿದೆ. ವರದಿಗೆಂದು ಹೋಗಿದ್ದ ಅಂತಾರಾಷ್ಟ್ರೀಯ ಪತ್ರಕರ್ತರೊಬ್ಬರ ಮೇಲೆ ಪೊಲೀಸರು ದಾಳಿ ನಡೆಸಿ, ಬಂಧಿಸಿದ್ದಾರೆ. ಒಟ್ಟಾರೆಯಾಗಿ ಜನರ ಪ್ರತಿಭಟ ನೆಯಿಂದಾಗಿ ಅಲ್ಲಿನ ಸರಕಾರ ಕಂಗೆಟ್ಟಿರುವುದು ಸತ್ಯ.  ಇಡೀ ಜಗತ್ತು ನಂಬಿರುವ ಹಾಗೆ ಕೊರೊನಾ ಮೊದಲು ಹುಟ್ಟಿಕೊಂಡಿದ್ದೇ ಚೀನದಲ್ಲಿ. ಹಾಗೆಯೇ ಬೇರೆ ಎಲ್ಲ ದೇಶಗಳಿಗಿಂತ ಮೊದಲು ಮಕ್ಕಳನ್ನು ಹೊರತುಪಡಿಸಿ, ಎಲ್ಲರಿಗೂ ಲಸಿಕೆ ನೀಡಿದ ಮೊದಲ ದೇಶವೂ ಚೀನವೇ. ಆದರೂ ಕೊರೊನಾ ಎಂದರೆ ಇನ್ನೂ ಏಕೆ ಹೆದರಿಕೆ ಎಂಬುದೇ ಹೊರಗಿನ ದೇಶಗಳಿಗೆ ಅರ್ಥವಾಗುತ್ತಿಲ್ಲ.

ಭಾರತದಲ್ಲಿ ಈಗಾಗಲೇ ಕೊರೊನಾ ಗೆದ್ದಿರುವ ರೀತಿಯಲ್ಲೇ ಜನರು ವರ್ತನೆ ಮಾಡುತ್ತಿದ್ದಾರೆ. ಇದು ಕೇವಲ ಭಾರತಕ್ಕಷ್ಟೇ ಅಲ್ಲ, ಜಗತ್ತಿನ ಎಲ್ಲ ದೇಶಗಳೂ ಕೊರೊನಾದ ಸುಳಿಯಿಂದ ಹೊರಗೆ ಬಂದಿವೆ. ಜನ ಕೊರೊನಾಗೆ ತೆರೆದುಕೊಂಡಿದ್ದರಿಂದಲೇ ಎಲ್ಲರಿಗೂ ಅದು ಬಂದು ಹೋಗಿದೆ. ಹೀಗಾಗಿ ಜನರಲ್ಲಿ ಕೊರೊನಾ ವಿರುದ್ಧ ಹೋರಾಡುವ ಶಕ್ತಿಯೂ ಬಂದಿದೆ. ಆದರೆ ಚೀನದಲ್ಲಿ ಝೀರೋ ಕೋವಿಡ್‌ ನೀತಿಯಿಂದಾಗಿ ಜನರಿಗೆ ಕೊರೊನಾ ಬರಲು ಬಿಡುತ್ತಿಲ್ಲ. ಇದನ್ನು ಬಿಟ್ಟು ಮನೆಯಲ್ಲಿಯೇ ಕೂಡಿಹಾಕಲಾಗುತ್ತಿದೆ. ಕೆಲವು ಕಡೆಗಳಲ್ಲಿ ಕಾರ್ಖಾನೆಗಳಲ್ಲೇ ವಸತಿ ನಿಲಯಗಳನ್ನು ರೂಪಿಸಿ, ಅಲ್ಲೇ ಇರಿಸಿಕೊಂಡು ಕೆಲಸ ಮಾಡಿಸಲಾಗುತ್ತಿದೆ. ಇದರಿಂದಾಗಿ ಜನ ಮನೆಗೂ ಬರಲಾರದ ಸ್ಥಿತಿಗೆ ತಲುಪಿದ್ದಾರೆ. ಹೀಗಾಗಿಯೇ ಅಲ್ಲಿನ ಕಾರ್ಖಾನೆಯೊಂದರಿಂದ ಸಾವಿರಾರು ಜನ ತಪ್ಪಿಸಿಕೊಂಡು ಹೋಗಿದ್ದಾರೆ. ಹೀಗಾಗಿ ಚೀನ ಸರಕಾರ ಮಾನವೀಯತೆಯನ್ನು ಮುಂದಿಟ್ಟುಕೊಂಡು ಜನರನ್ನು ನಡೆಸಿಕೊಳ್ಳಬೇಕಿದೆ.

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.