ಚೀನದ ವಿರುದ್ಧ ರಾಜನಾಥ್‌ ಗುಡುಗು: ಡಿಜಿಟಲ್‌ ಪೆಟ್ಟು ಕೂಡ ಮುಖ್ಯ


Team Udayavani, Sep 17, 2020, 6:16 AM IST

ಚೀನದ ವಿರುದ್ಧ ರಾಜನಾಥ್‌ ಗುಡುಗು: ಡಿಜಿಟಲ್‌ ಪೆಟ್ಟು ಕೂಡ ಮುಖ್ಯ

ನಾಲ್ಕು ತಿಂಗಳಿಂದ ಪೂರ್ವ ಲಡಾಖ್‌ನಲ್ಲಿ ಭಾರತ-ಚೀನ ನಡುವಿನ ಬಿಕ್ಕಟ್ಟು ಮುಂದುವರಿದಿದೆ.

ಈ ವಿಚಾರದಲ್ಲಿ ಎರಡೂ ಸರಕಾರಗಳ ನಡುವೆ, ಸೇನೆಗಳ ನಡುವೆ ಹಲವು ಸುತ್ತಿನ ಮಾತುಕತೆಗಳೂ ನಡೆದಿವೆಯಾದರೂ ಶೀಘ್ರದಲ್ಲೇ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಕಾಣಿಸುತ್ತಿಲ್ಲ.

ಗಡಿ ಸಂಘರ್ಷದ ವಿಚಾರವಾಗಿ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ಅವರು ಲೋಕಸಭೆಯಲ್ಲಿ ವಿಸ್ತೃತವಾಗಿ ಮಾತನಾಡಿದ್ದಾರೆ.

ಲಡಾಖ್‌ ಪರಿಸ್ಥಿತಿ ನಮಗೆ ಸವಾಲಾಗಿದೆ ಎನ್ನಲು ಹಿಂಜರಿಯುವುದಿಲ್ಲ, ಎಂದೂ ಹೇಳಿರುವ ಅವರು, ಭಾರತ ಶಾಂತಿಗೂ ಸಿದ್ಧವಿದೆ, ಶಸ್ತ್ರವೆತ್ತಲೂ ತಯಾರಿದೆ ಎಂಬ ಕಠಿನ ಸಂದೇಶವನ್ನು ಚೀನಕ್ಕೆ ಕಳುಹಿಸಿದ್ದಾರೆ.

ವಾಸ್ತವಿಕ ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಚೀನ ಭಾರೀ ಪ್ರಮಾಣದಲ್ಲಿ ತನ್ನ ಸೇನೆಯನ್ನು ಜಮಾವಣೆ ಮಾಡಿದೆ.

ಕಾಲಕಾಲಕ್ಕೆ ಭಾರತದೊಂದಿಗೆ ಗಡಿ ವಿಚಾರದಲ್ಲಿ ಕುತಂತ್ರದ ನಡೆಗಳನ್ನು ಇಡುತ್ತಾ ಬರುತ್ತಿದ್ದ ಚೀನ ಈ ಬಾರಿಯಂತೂ ಹದ್ದುಮೀರುತ್ತಿದೆ. ಕುತಂತ್ರದಿಂದ ನಮ್ಮ ಸೈನಿಕರ ಮೇಲೆ ದಾಳಿ ಮಾಡಿ ಅದಕ್ಕೆ ತಾನು ಭಾರೀ ಬೆಲೆಯನ್ನೂ ತೆತ್ತರೂ ಸುಮ್ಮನೆ ಕೂಡುತ್ತಿಲ್ಲ. ಈ ವಿಚಾರವಾಗಿ

ಮಾತನಾಡಿದ ರಕ್ಷಣ ಸಚಿವರು, ನಮ್ಮ ಪಡೆಗಳು ಚೀನಕ್ಕೆ ಮರೆಯಲಾಗದ ಪೆಟ್ಟು ನೀಡಿವೆ ಎಂದೂ ಹೇಳಿದ್ದಾರೆ.

ಈ ಬಾರಿಯಂತೂ ಭಾರತದ ಎದಿರೇಟುಗಳು ಚೀನಕ್ಕೆ ಭಾರೀ ನೋವು ಕೊಡುತ್ತಿವೆ ಎನ್ನುವುದರಲ್ಲಿ ಸಂಶಯವೇ ಇಲ್ಲ. ಸಂಘರ್ಷದ ವೇಳೆ ತನ್ನ 45ಕ್ಕೂ ಅಧಿಕ ಸೈನಿಕರು ಮೃತಪಟ್ಟರೂ ಚೀನ ಈ ವಿಚಾರ ತನ್ನ ನಾಗರಿಕರಿಗೆ ತಲುಪದಂತೆ ಮುಚ್ಚಿಟ್ಟಿತು. ಭಾರತವು ಗಡಿರೇಖೆಯುದ್ದಕ್ಕೂ ನಿರ್ಮಿಸುತ್ತಿರುವ ರಸ್ತೆಗಳು, ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾರ್ಯಗಳು ಡ್ರ್ಯಾಗನ್‌ ರಾಷ್ಟ್ರದ ನಿದ್ದೆಗೆಡಿಸಿರುವುದು ಇದಕ್ಕೆ ಒಂದು ಕಾರಣವಾದರೆ, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಜಗತ್ತು ವ್ಯಸ್ತವಾಗಿರುವ ಸಮಯದಲ್ಲಿ ತನ್ನ ವಿಸ್ತರಣಾಕಾಂಕ್ಷೆಯನ್ನು ಈಡೇರಿಸಿಕೊಳ್ಳಬೇಕು ಎನ್ನುವ ಅದರ ದುರ್ಬುದ್ಧಿ ಈ ಬೆಳವಣಿಗೆಗೆ ಮತ್ತೂಂದು ಕಾರಣ.

ಚೀನ ಕೇವಲ ತನ್ನ ಸೈನ್ಯದ ಮೂಲಕ ಮಾತ್ರವಲ್ಲ, ವಿವಿಧ ರೂಪದಲ್ಲೂ ಭಾರತದ ವಿರುದ್ಧ ಸಂಚು ರೂಪಿಸುತ್ತಿರುವುದರಿಂದಾಗಿ ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ದಿಟ್ಟ ಕ್ರಮಗಳನ್ನು ಕೈಗೊಳ್ಳುತ್ತಿದೆ, ಮುಂದೆಯೂ ಕೈಗೊಳ್ಳಬೇಕಿದೆ. ಭಾರತದ ಬಳಕೆದಾರರ ಮಾಹಿತಿ ಕದಿಯುತ್ತಿರುವ ಅನೇಕ ಚೀನಿ ಆ್ಯಪ್‌ಗಳನ್ನು ನಿಷೇಧಿಸಿದ್ದು ಈ ನಿಟ್ಟಿನಲ್ಲಿ ಮೊದಲ ಯಶಸ್ವಿ ಹೆಜ್ಜೆ. ಆದಾಗ್ಯೂ ಈ ಕಂಪೆನಿಗಳು, ತಾವು ಚೀನದೊಂದಿಗೆ ಭಾರತೀಯರ ಮಾಹಿತಿಯನ್ನು ಹಂಚಿಕೊಳ್ಳುತ್ತಿಲ್ಲ ಎಂದು ಎಷ್ಟೇ ವಾದಿಸಿದರೂ, ವಾಸ್ತವವೇ ಬೇರೆ ಎನ್ನುವುದು ಭಾರತಕ್ಕೆ ಸ್ಪಷ್ಟವಾಗಿ ಅರಿವಿದೆ.

ಚೀನಿ ಸರಕಾರದ ಜತೆ ಸಂಪರ್ಕದಲ್ಲಿರುವ ಜೆನ್‌ಹುವಾ ಟಾಡಾ ಇನ್ಫಾರ್ಮೇಷನ್‌ ಟೆಕ್ನಾಲಜಿ ಕೋ ಲಿಮಿಟೆಡ್‌ ಎನ್ನುವ ಕಂ±ನಿಯು, ಭಾರತದ ಸುಮಾರು 10 ಸಾವಿರಕ್ಕೂ ಅಧಿಕ ವ್ಯಕ್ತಿಗಳು ಹಾಗೂ ಸಂಸ್ಥೆಗಳ ಡೇಟಾ ಕಲೆಹಾಕುತ್ತಿದೆ ಎನ್ನುವ ಸತ್ಯ ಕೆಲದಿನಗಳ ಹಿಂದೆ ಬಯಲಾಗಿದೆ. ಪ್ರಧಾನಿ, ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಅವರ ಕುಟುಂಬಸ್ಥರು, ಮಿಲಿಟರಿ, ಉದ್ಯಮಿಗಳು, ಸಂಸದರು ಹಾಗೂ ಕೆಲವು ಪಾತಕಿಗಳ ಆನ್‌ಲೈನ್‌ ಡೇಟಾವನ್ನೂ ಈ ಸಂಸ್ಥೆ ಕಲೆಹಾಕಿದೆಯಂತೆ.

ಭಾರತದ ಸೈಬರ್‌ ಶಕ್ತಿ ಎಷ್ಟು ಬಲಿಷ್ಠವಾಗಿದೆ ಎನ್ನುವ ವಿಶ್ಲೇಷಣೆಯನ್ನೂ ಈ ಸಂಸ್ಥೆ ಮಾಡುತ್ತಿದೆ ಎಂದು ವರದಿಯಾಗಿದೆ. ಇದೆಲ್ಲವನ್ನೂ ಗಮನಿಸಿದಾಗ, ಚೀನ ಭಾರತವನ್ನು ತನ್ನ ಪ್ರಬಲ ಪ್ರತಿಸ್ಪರ್ಧಿ ಎಂದು ಪರಿಗಣಿಸುತ್ತದೆ ಎನ್ನುವುದು ಸ್ಪಷ್ಟವಾಗುತ್ತದೆ. ಈ ಕಾರಣಕ್ಕಾಗಿಯೇ, ಗಡಿ ಭಾಗದಲ್ಲಷ್ಟೇ ಅಲ್ಲದೇ ಈ ರೀತಿಯ ಚೀನದ ಡಿಜಿಟಲ್‌ ಕಳ್ಳಮಾರ್ಗಗಳಿಗೆ ಮತ್ತಷ್ಟು ಬಲವಾದ ಪೆಟ್ಟುಕೊಡಲು ಭಾರತ ಮುಂದಾಗಬೇಕಿರುವ ಸಮಯವಿದು.

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.