ಉಗ್ರರ ವಿಚಾರದಲ್ಲಿ ಚೀನದ ನಿಲುವು ಖಂಡನೀಯ


Team Udayavani, Aug 11, 2022, 6:00 AM IST

ಉಗ್ರರ ವಿಚಾರದಲ್ಲಿ ಚೀನದ ನಿಲುವು ಖಂಡನೀಯ

ಉಗ್ರರಿಗೆ ನೀರೆರೆದು ಸಾಕುತ್ತಲೇ ಬಂದಿರುವ ಪಾಕಿಸ್ಥಾನದ ರಕ್ಷಣೆಗೆ ನಿಂತಿರುವ ಚೀನ ಮತ್ತೆ ತನ್ನ ವಿಕೃತ ಬುದ್ಧಿಯನ್ನು ತೋರಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಮತ್ತು ಅಮೆರಿಕ ದೇಶಗಳು ಜಂಟಿಯಾಗಿ ಪಾಕಿಸ್ಥಾನ ಮೂಲದ ಉಗ್ರ ಅಬ್ದುಲ್‌ ರೆಹಮಾನ್‌ ಮಕ್ಕಿ ಎಂಬಾತನನ್ನು ಕಪ್ಪುಪಟ್ಟಿಗೆ ಸೇರಿಸಲು ಮಾಡಿದ ಪ್ರಯತ್ನಕ್ಕೆ ಚೀನ, ತನ್ನ ವಿಟೋ ಅಧಿಕಾರ ಬಳಸಿ ತಡೆದಿದೆ.

ಚೀನದ ಈ ದ್ವಂದ್ವ ನೀತಿ ಇದೇ ಮೊದಲೇನಲ್ಲ. ಈ ಹಿಂದಿನಿಂದಲೂ ಪಾಕಿಸ್ಥಾನದ ಬೆನ್ನಿಗೆ ನಿಂತಿರುವ ಅದು, ವಿಶ್ವಸಂಸ್ಥೆಯಲ್ಲಿ ಬಹಳಷ್ಟು ಉಗ್ರರನ್ನು ಕಪ್ಪುಪಟ್ಟಿಗೆ ಸೇರದಂತೆ ತಡೆಹಿಡಿದಿದೆ. ಅದರಲ್ಲೂ ಜಾಗತಿಕ ಉಗ್ರ ಮಸೂದ್‌ ಅಜರ್‌ನನ್ನು ವಿಶ್ವಸಂಸ್ಥೆಯ ಕಪ್ಪುಪಟ್ಟಿಗೆ ಸೇರಿಸುವ ಅಮೆರಿಕದ ಪ್ರಸ್ತಾವಕ್ಕೂ ಅದು ಸತತ ನಾಲ್ಕು ಬಾರಿ ಅಡ್ಡಕಾಲು ಹಾಕಿದೆ.

ಜಗತ್ತಿಗೇ ಕಂಟಕವಾಗಿರುವ ಉಗ್ರವಾದವನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಎಲ್ಲ ದೇಶಗಳು ಒಟ್ಟಾಗಿ ಪ್ರಯತ್ನಿಸುತ್ತಿವೆ. ಆದರೆ ಜಗತ್ತಿಗೇ ಗೊತ್ತಿರುವಂತೆ ಪಾಕಿಸ್ಥಾನ ಬಹುತೇಕ ಎಲ್ಲ ಉಗ್ರರ ಆಶ್ರಯತಾಣ. ಇದಕ್ಕೆ ಅತೀ ದೊಡ್ಡ ಉದಾಹರಣೆ ಎಂದರೆ, ಅಲ್‌ಖೈದಾ ಉಗ್ರ ಒಸಾಮಾ ಬಿನ್‌ ಲಾಡೆನ್‌ ಮತ್ತು ಮುಂಬಯಿ ಸರಣಿ ಸ್ಫೋಟದ ರೂವಾರಿ ದಾವೂದ್‌ ಇಬ್ರಾಹಿಂಗೆ ಪಾಕಿಸ್ಥಾನ ನೆಲೆ ಕೊಟ್ಟಿದ್ದು. ಅಮೆರಿಕವೇ ಬಿನ್‌ ಲಾಡೆನ್‌ನನ್ನು ಹೊಡೆದುಹಾಕಿದ್ದರೆ, ದಾವೂದ್‌ ಇಬ್ರಾಹಿಂ ಇನ್ನೂ ಪಾಕಿಸ್ಥಾನದಲ್ಲೇ ಇದ್ದಾನೆ.

ಹಾಗೆಯೇ ಮುಂಬಯಿ ದಾಳಿಯ ಉಗ್ರ ಲಷ್ಕರ್‌ ಸಂಘಟನೆಯ ಹಫೀಜ್‌ ಸಯೀದ್‌ ಕೂಡ ಇನ್ನೂ ಆ ದೇಶದಲ್ಲೇ ತಿರುಗಾಡಿಕೊಂಡಿದ್ದಾನೆ. ಜಾಗತಿಕ ಮಟ್ಟದಲ್ಲಿ ಪಾಕಿಸ್ಥಾನ ವಿರುದ್ಧ ಎಷ್ಟೆಲ್ಲ ಆಕ್ರೋಶಗಳಿದ್ದರೂ ಚೀನ ಮಾತ್ರ ಆ ದೇಶದ ಬೆನ್ನಿಗೆ ನಿಂತು, ಇನ್ನೂ ಸಾಕುತ್ತಲೇ ಇದೆ. ಅಲ್ಲದೆ ಸಾಲದ ರೂಪದಲ್ಲಿ ನೀಡುವ ಹಣವೂ ಈ ಉಗ್ರ ಸಂಘಟನೆಗಳಿಗೆ ಹೋದರೂ ತಲೆಕೆಡಿಸಿಕೊಂಡಂತೆ ಕಾಣುವುದಿಲ್ಲ. ಆದರೆ ಪಾಕಿಸ್ಥಾನದ ಉಗ್ರರು ಭಾರತದ ವಿರುದ್ಧವೇ ಸಂಚು ರೂಪಿಸಿ, ಉಗ್ರ ಕೃತ್ಯ ಮಾಡುತ್ತಾರೆ. ಇದರಿಂದ ತನಗೇ ಲಾಭ ಎಂದು ಭಾವಿಸಿದಂತಿದೆ ಚೀನ.

ಹೀಗಾಗಿಯೇ ಸದಾ ಪಾಕಿಸ್ಥಾನದ ಬೆನ್ನಿಗೆ ನಿಲ್ಲುತ್ತಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಚೀನ ಮತ್ತು ಪಾಕಿಸ್ಥಾನದ ಈ ಕುತಂತ್ರಗಳಿಗೆ ತಕ್ಕ ಎದಿರೇಟು ನೀಡಲೇಬೇಕಾಗಿದೆ. ಮುಂದಿನ ದಿನಗಳಲ್ಲಿಯೂ ಚೀನ, ವಿಶ್ವಸಂಸ್ಥೆಯಲ್ಲಿ ತನ್ನ ವಿಟೋ ಅಧಿಕಾರ ಬಳಸಿಕೊಂಡು ಉಗ್ರರಿಗೆ ಸಹಾಯ ನೀಡುತ್ತಾ ಹೋಗಬಹುದು. ಇದನ್ನು ತಪ್ಪಿಸಲೇಬೇಕು ಎಂದಾದರೆ ವಿಶ್ವಸಂಸ್ಥೆಯಲ್ಲಿ ಸುಧಾರಣೆಯಾಗಲೇಬೇಕು.

ಭಾರತ, ಬ್ರೆಜಿಲ್‌, ಜಪಾನ್‌, ದಕ್ಷಿಣ ಆಫ್ರಿಕಾ ದೇಶಗಳು ಈ ಹಿಂದಿನಿಂದಲೂ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸುಧಾರಣೆ ಯಾಗ ಲೇಬೇಕು ಎಂಬ ಹಕ್ಕೊತ್ತಾಯ ಮಂಡಿಸುತ್ತಲೇ ಇವೆ. ವಿಶ್ವಸಂಸ್ಥೆ ರಚನೆಯಾದಾಗಿನಿಂದಲೂ ಇಂಥದ್ದೊಂದು ಪ್ರಯತ್ನವಾಗಲೇ ಇಲ್ಲ.

ಸದ್ಯ ಭಾರತ ಜಗತ್ತಿನಲ್ಲೇ ಎರಡನೇ ಅತೀ ದೊಡ್ಡ ಜನಸಂಖ್ಯೆ ಹೊಂದಿರುವ ದೇಶ. ಆರ್ಥಿಕವಾಗಿಯೂ ಈಗ ಅಭಿವೃದ್ಧಿ ಹೊಂದಿದ ದೇಶಗಳಿಗೆ ದೊಡ್ಡ ಸ್ಪರ್ಧೆಯನ್ನೇ ನೀಡುತ್ತಿದೆ. ಸದ್ಯ ಆರನೇ ಶ್ರೀಮಂತ ದೇಶವಾಗಿಯೂ ಭಾರತ ಗುರುತಿಸಿಕೊಂಡಿದೆ.

ಹೀಗಾಗಿ ಭಾರತಕ್ಕೆ ಭದ್ರತಾ ಮಂಡಳಿಯಲ್ಲಿ ಸ್ಥಾನ ನೀಡುವಂಥ ಸಮಯ ಬಂದಿದೆ. ಒಂದು ವೇಳೆ ಈಗ ಸುಧಾರಣೆಯಾಗದಿದ್ದರೆ, ವಿಶ್ವಸಂಸ್ಥೆ ಒಂದೆರಡು ದೇಶಗಳ ಕೈಗೊಂಬೆಯಂತಾಗುವುದು ಖಂಡಿತ.

ಟಾಪ್ ನ್ಯೂಸ್

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

B Y Vijayendra: ಕಾಂಗ್ರೆಸ್‌ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ

Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

12-fusion

UV Fusion: ಆಕೆಗೂ ಒಂದು ಮನಸ್ಸಿದೆ

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

ಮಂಡ್ಯದಲ್ಲಿ ಐಸ್‌ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Panaji: ಸರಕಾರದ ಆ್ಯಪ್‌ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.