ಪೌರತ್ವ ನೀತಿಗೆ ತಿದ್ದುಪಡಿ: ಐಟಿ ವೃತ್ತಿಪರರಿಗೆ ಶುಭಸುದ್ದಿ


Team Udayavani, Jul 11, 2019, 5:36 AM IST

s-34

ಅಮೆರಿಕವು ತನ್ನ ಪೌರತ್ವ ನೀತಿಯಲ್ಲಿ ಅತ್ಯಂತ ಮಹತ್ವಪೂರ್ಣ ಬದಲಾವಣೆ ತರಲು ಮುಂದಾಗಿದ್ದು ಪ್ರಸ್ತಾವಿತ ತಿದ್ದುಪಡಿ ಕಾಯಿದೆ ಜಾರಿಗೆ ಬಂದದ್ದೇ ಆದಲ್ಲಿ ಅಲ್ಲಿ ನೆಲೆ ನಿಂತಿರುವ ಭಾರತೀಯರ ದಶಕಗಳ ಬೇಡಿಕೆ ಈಡೇರಲಿದೆ. ಸದ್ಯ ಅಮೆರಿಕದ ಪೌರತ್ವ ನೀತಿಯ ಪ್ರಕಾರ ಗ್ರೀನ್‌ಕಾರ್ಡ್‌ಗಾಗಿ ಒಂದು ದೇಶಕ್ಕೆ ಗರಿಷ್ಠ ಶೇ. 7ರ ಮಿತಿಯನ್ನು ವಿಧಿಸಲಾಗಿದೆ. ಎಚ್‌-1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿರುವ ಭಾರತೀಯರಿಗಂತೂ ಈ ನೀತಿ ಅಲ್ಲಿನ ಪೌರತ್ವ ಪಡೆಯಲು ತಡೆಯಾಗಿ ಪರಿಣಮಿಸಿತ್ತು. ವಿವಿಧ ಕ್ಷೇತ್ರಗಳಲ್ಲಿ ಅದರಲ್ಲೂ ಐಟಿ ಕ್ಷೇತ್ರದಲ್ಲಿ ಉನ್ನತ ಕೌಶಲವನ್ನು ಪಡೆದು ಅಮೆರಿಕದಲ್ಲಿ ನೆಲೆಯಾಗಿರುವ ಭಾರತೀಯರಿಗೆ ಅಲ್ಲಿನ ಪೌರತ್ವ ಪಡೆಯುವುದು ಕಷ್ಟಸಾಧ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಭಾರತೀಯ ವೃತ್ತಿಪರರು ಪೌರತ್ವ ನೀತಿಗೆ ತಿದ್ದುಪಡಿ ತರುವಂತೆ ಅಮೆರಿಕ ಸರಕಾರದ ಮೇಲೆ ಒತ್ತಡ ಹೇರುತ್ತಲೇ ಬಂದಿದ್ದರು. ಅಷ್ಟು ಮಾತ್ರವಲ್ಲದೆ ಕೆನಡಾ ಸಹಿತ ಇನ್ನಿತರ ಕೆಲವು ದೇಶಗಳು ತಮ್ಮ ಗ್ರೀನ್‌ಕಾರ್ಡ್‌ ನಿಯಮಾವಳಿಗಳಲ್ಲಿ ಸಡಿಲಿಕೆಗಳನ್ನು ಮಾಡಿ ವಿದೇಶಿ ತಂತ್ರಜ್ಞರನ್ನು ತಮ್ಮತ್ತ ಆಕರ್ಷಿಸಲಾರಂಭಿಸಿವೆ. ಭಾರತೀಯ ಟೆಕ್ಕಿಗಳೂ ಕೆನಡಾದತ್ತ ಮುಖ ಮಾಡಲಾರಂಭಿಸಿದ್ದಾರೆ. ಈ ಕಾರಣದಿಂದಾಗಿ ಕೊಂಚ ವಿಚಲಿತವಾಗಿರುವ ಅಮೆರಿಕ ಗ್ರೀನ್‌ ಕಾರ್ಡ್‌ ವಿತರಣೆಗೆ ಸಂಬಂಧಿಸಿದ ದೇಶಗಳ ಕೋಟಾವನ್ನು ರದ್ದುಪಡಿಸುವ ತಿದ್ದುಪಡಿ ಮಸೂದೆಯನ್ನು ಸಂಸತ್‌ನಲ್ಲಿ ಮಂಡಿಸಿದೆ.

ಭಾರತೀಯ ಮೂಲದ ಟೆಕ್ಕಿಗಳು ಮತ್ತು ತಂತ್ರಜ್ಞರು ಎಚ್‌-1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿ ಅಲ್ಲಿ ವೃತ್ತಿನಿರತರಾಗಿದ್ದಾರೆ. ಇವರೆಲ್ಲರೂ ಅಲ್ಲಿನ ಗ್ರೀನ್‌ಕಾರ್ಡ್‌ ಪಡೆಯಲು ಹರಸಾಹಸ ಪಡುತ್ತಿದ್ದಾರೆ. ಸದ್ಯ ಅಮೆರಿಕದಲ್ಲಿ ವಿತರಣೆಯಾಗುತ್ತಿರುವ ಗ್ರೀನ್‌ಕಾರ್ಡ್‌ಗಳ ಪೈಕಿ ಶೇ. 0.25ರಷ್ಟು ಭಾರತೀಯರಿಗೆ ಲಭಿಸುತ್ತಿದೆ. ಇದೀಗ ಅಮೆರಿಕ ಸರಕಾರ ಸಂಸತ್‌ನಲ್ಲಿ ಮಂಡಿಸಿರುವ ಮಸೂದೆ ಅಂಗೀಕಾರವಾದರೆ ಮುಂದಿನ ಒಂದು ದಶಕದ ಅವಧಿಯಲ್ಲಿ ಶೇ. 90ರಷ್ಟು ಗ್ರೀನ್‌ ಕಾರ್ಡ್‌ಗಳು ಭಾರತೀಯರ ಪಾಲಾಗಲಿದೆ ಎಂದು ಅಲ್ಲಿನ ವಲಸೆ ಇಲಾಖೆ ಅಂದಾಜಿಸಿದೆ. ಅಷ್ಟು ಮಾತ್ರವಲ್ಲದೆ ಅಮೆರಿಕದ ಖಾಯಂ ನಿವಾಸಿಗಳಾಗಲು ಕಳೆದ ಹಲವಾರು ವರ್ಷಗಳಿಂದ ಚಾತಕಪಕ್ಷಿಗಳಂತೆ ಕಾಯುತ್ತಿರುವ ಭಾರತೀಯ ವಲಸಿಗರಿಗೆ ಅನುಕೂಲ ಆಗಲಿದೆ. ಇನ್ನೊಂದು ಅಂದಾಜಿನ ಪ್ರಕಾರ ಅಮೆರಿಕದಲ್ಲಿ ನೆಲೆಸಿರುವ 3 ಲಕ್ಷ ಭಾರತೀಯ ವಲಸಿಗರಿಗೆ ಗ್ರೀನ್‌ಕಾರ್ಡ್‌ ಲಭಿಸಲಿದೆ.

ಭಾರತದಲ್ಲಿ ಭಾರೀ ಸಂಖ್ಯೆಯಲ್ಲಿ ಉನ್ನತ ಕೌಶಲ ಹೊಂದಿರುವ ವೃತ್ತಿಪರರಿದ್ದು ಇವರನ್ನು ಸೆಳೆಯುವ ದೃಷ್ಟಿಯಿಂದ ಅಮೆರಿಕ ತನ್ನ ಪೌರತ್ವ ನೀತಿಗೆ ತಿದ್ದುಪಡಿ ತರಲು ಮುಂದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅಮೆರಿಕದ ಕಂಪೆನಿಗಳು ಮತ್ತು ಹೂಡಿಕೆದಾರರಿಗೆ ವೃತ್ತಿಪರ ಉದ್ಯೋಗಿಗಳ ಆವಶ್ಯಕತೆ ಇರುವುದರಿಂದ ಮತ್ತು ಇತರ ದೇಶಗಳ ವೃತ್ತಿಪರರಿಗೆ ಹೋಲಿಸಿದರೆ ಭಾರತೀಯರಿಗೆ ಕಡಿಮೆ ವೇತನ ನೀಡಿದರೆ ಸಾಕು ಎಂಬ ಕಾರಣಗಳಿಂದ ಅಮೆರಿಕ ಈ ಮಹತ್ತರ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಅಷ್ಟು ಮಾತ್ರವಲ್ಲದೆ ಅಮೆರಿಕದ ಆರ್ಥಿಕ ಬೆಳವಣಿಗೆಯಲ್ಲಿ ವಲಸಿಗರ ಪಾತ್ರ ನಿರ್ಣಾಯಕವಾಗಿರುವುದರಿಂದ ಅಮೆರಿಕ ಈ ನಡೆ ಹೆಚ್ಚಿನ ಮಹತ್ವವನ್ನು ಪಡೆದಿದೆ. ಈ ತಿದ್ದುಪಡಿ ಮಸೂದೆಗೆ ಅಮೆರಿಕದ ಅಧ್ಯಕ್ಷೀಯ ಹುದ್ದೆಯ ಆಕಾಂಕ್ಷಿ ಕಮಲಾ ಹ್ಯಾರೀಸ್‌ ಬಹಿರಂಗವಾಗಿಯೇ ತಮ್ಮ ಬೆಂಬಲ ಘೋಷಿಸುವ ಮೂಲಕ ಭಾರತೀಯ ಮೂಲದ ವಲಸಿಗರ ಬೆಂಬಲಕ್ಕೆ ನಿಂತಿದ್ದಾರೆ. ಡೆಮಾಕ್ರಾಟ್‌ ಮತ್ತು ರಿಪಬ್ಲಿಕನ್‌ ಪಕ್ಷಗಳ ಸದಸ್ಯರೂ ತಿದ್ದುಪಡಿ ಮಸೂದೆ ಪರವಾಗಿ ನಿಂತಿರುವುದರಿಂದ ಈ ಮಸೂದೆ ಸಂಸತ್‌ನ ಅಂಗೀಕಾರ ಪಡೆಯುವುದು ನಿಚ್ಚಳವಾಗಿದೆ. ಅಮೆರಿಕದ ಈ ನಡೆ ಭಾರತದ ಅದರಲ್ಲೂ ದೇಶದ ಐಟಿ ರಾಜಧಾನಿ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಬೆಂಗಳೂರಿನ ಐಟಿ ವೃತ್ತಿಪರರಿಗೆ ವರದಾನವಾಗಿ ಪರಿಣಮಿಸಲಿದೆ. ಎಚ್‌-1ಬಿ ವೀಸಾ ಪಡೆದು ಅಮೆರಿಕಕ್ಕೆ ತೆರಳಿ ಅಲ್ಲಿ ವೃತ್ತಿನಿರತವಾಗಿರುವ ರಾಜ್ಯದ ತಂತ್ರಜ್ಞರಿಗೆ ಇನ್ನು ಅಮೆರಿಕದ ಖಾಯಂ ಪೌರತ್ವ ಲಭಿಸಲಿದೆ. ಇದರಿಂದ ಪೌರತ್ವದ ಕುರಿತಾಗಿ ಅವರು ಎದುರಿಸುತ್ತಿದ್ದ ಸಂಕಷ್ಟ ನಿವಾರಣೆಯಾಗಲಿದ್ದು ಅಮೆರಿಕದ ಇತರ ಪ್ರಜೆಗಳಂತೆಯೇ ಅಲ್ಲಿನ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳಲಿದ್ದಾರೆ.

ಭಾರತ ಮತ್ತು ಅಮೆರಿಕ ನಡುವೆ ವ್ಯಾಪಾರ-ವಹಿವಾಟಿಗೆ ಸಂಬಂಧಿಸಿದಂತೆ ತಿಕ್ಕಾಟಗಳು ನಡೆಯುತ್ತಿವೆ. ಅಮೆರಿಕದ ಉತ್ಪನ್ನಗಳಿಗೆ ಭಾರತ ಸರಕಾರ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ವಿಧಿಸಿರುವುದು ಉಭಯ ದೇಶಗಳ ನಡುವಣ ಸಂಬಂಧದಲ್ಲಿ ಒಂದಿಷ್ಟು ಬಿರುಕು ಮೂಡಿಸಿರುವ ಸಂದರ್ಭದಲ್ಲಿಯೇ ಅಮೆರಿಕ ತನ್ನ ಪೌರತ್ವ ನೀತಿಗೆ ತಿದ್ದುಪಡಿ ತರಲು ಮುಂದಾಗಿರುವುದು ದ್ವಿಪಕ್ಷೀಯ ಸಂಬಂಧದ ಬಲವರ್ಧನೆಗೆ ಸಹಕಾರಿಯಾಗಲಿದೆ. ಐಟಿ ದಿಗ್ಗಜ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಭಾರತದ ಪಾಲಿಗೆ ಅಮೆರಿಕದ ಈ ನಿರ್ಧಾರ ಒಂದು ಸಕಾರಾತ್ಮಕ ಬೆಳವಣಿಗೆ ಎಂದೇ ಪರಿಗಣಿಸಲಾಗಿದೆ.

ಟಾಪ್ ನ್ಯೂಸ್

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.