ಬಜೆಟ್‌ ಅನುಷ್ಠಾನಕ್ಕಾಗಿ ಸಮಿತಿ; ಭರವಸೆ ಜಾರಿಯಾಗಲಿ


Team Udayavani, Mar 28, 2022, 6:00 AM IST

ಬಜೆಟ್‌ ಅನುಷ್ಠಾನಕ್ಕಾಗಿ ಸಮಿತಿ; ಭರವಸೆ ಜಾರಿಯಾಗಲಿ

ತೀರಾ ಅಪರೂಪವೆಂಬಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿರುವ ಯೋಜನೆಗಳ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿಯೊಂದನ್ನು ರಚನೆ ಮಾಡಿ, ಇದರ ಮೇಲುಸ್ತುವಾರಿಯನ್ನೂ ತಾವೇ ವಹಿಸಿಕೊಳ್ಳುವುದಾಗಿ ಹೇಳಿದ್ದಾರೆ. ಮೇಲ್ನೋಟಕ್ಕೆ ನೋಡಿದರೆ ಇದು ಉತ್ತಮ ನಿರ್ಧಾರದಂತೆಯೇ ಕಾಣಿಸುತ್ತಿದೆ. ಸಾಮಾನ್ಯವಾಗಿ ಬಜೆಟ್‌ನಲ್ಲಿ ಘೋಷಿಸಿದ ಮೇಲೆ ಅದೆಷ್ಟೋ ಯೋಜನೆಗಳು ಜಾರಿಯಾಗದೇ ಹಾಗೆಯೇ ಉಳಿಯುವುದುಂಟು. ಇದಕ್ಕಾಗಿಯೇ ಪ್ರತೀ ಬಜೆಟ್‌ನಲ್ಲಿಯೂ ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳ ಯಥಾಸ್ಥಿತಿ ವರದಿಯನ್ನೂ ನೀಡಲಾಗುತ್ತದೆ. ಇದನ್ನು ಕೂಲಂಕಶವಾಗಿ ಪರಿಶೀಲಿಸಿದರೆ ಘೋಷಣೆಯಾದ ಯೋಜನೆಗಳ ಜಾರಿ ಕುರಿತ ಮಾಹಿತಿ ಸಿಗುತ್ತದೆ.

ಪ್ರತೀ ವರ್ಷವೂ ಬಜೆಟ್‌ ಮಂಡನೆಯಾದ ಮೇಲೆ, ಇದರ ಮೇಲೆ ಚರ್ಚೆ ಮತ್ತು ಬಜೆಟ್‌ನ ಅಂಗೀಕಾರಕ್ಕಾಗಿ ಅಧಿವೇಶನ ನಡೆಯುತ್ತದೆ. ಇದರಲ್ಲಿ ಪ್ರಮುಖವಾಗಿ ಚರ್ಚೆಯಾಗುವುದು ಹಿಂದಿನ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳ ಜಾರಿ ಕುರಿತ ವಿಚಾರಗಳೇ. ಅಲ್ಲದೆ, ವಿಪಕ್ಷಗಳಿಗೆ ಈ ಜಾರಿಯಾಗದ ಯೋಜನೆಗಳೇ ಆಹಾರವಾಗುತ್ತವೆ. ಹಳೇ ಯೋಜನೆಗಳನ್ನೇ ಜಾರಿ ಮಾಡದೇ ಮತ್ತೆ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದು ಉತ್ತಮವೇ ಎಂಬ ಪ್ರಶ್ನೆಗಳೂ ವಿಪಕ್ಷಗಳ ಕಡೆಯಿಂದ ಬರುತ್ತವೆ. ಆಡಳಿತದಲ್ಲಿರುವವರಿಗೆ ಇಂಥ ಪ್ರಶ್ನೆಗಳಿಗೆ ಉತ್ತರ ಕೊಡುವುದು ಕೆಲವೊಮ್ಮೆ ಇರುಸು ಮುರುಸಿಗೂ ಕಾರಣವಾಗಬಹುದು.

ಹೀಗಾಗಿಯೇ ಈ ಬಾರಿ ಮುಖ್ಯಮಂತ್ರಿಗಳು ಬಜೆಟ್‌ ಘೋಷಣೆಗಳ ಅನುಷ್ಠಾನಕ್ಕಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲು ಹೊರಟಿರುವುದು ಉತ್ತಮ ನಿರ್ಧಾರ. ಅಂದರೆ ಕಾಲಮಿತಿಯಲ್ಲಿ ಯೋಜನೆಗಳ ಜಾರಿ, ಬಜೆಟ್‌ ತೀವ್ರಗತಿ ಅನುಷ್ಠಾನ ಮಾಡುವಂತೆ ನೋಡಿಕೊಳ್ಳುವುದು ಈ ಸಮಿತಿಯ ಪ್ರಮುಖ ಜವಾಬ್ದಾರಿ. ಇದಕ್ಕಾಗಿ ಮುಖ್ಯ ಕಾರ್ಯ ದರ್ಶಿಗಳ ಹಣಕಾಸು ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ಸಮನ್ವಯ ಸಾಧಿಸಲಿದ್ದಾರೆ. ಹಾಗೆಯೇ ಬಜೆಟ್‌ನ ಪ್ರಮುಖ ಯೋಜನೆಗಳಿಗೆ ಕಾರ್ಯಾದೇಶ ನೀಡುವುದರಿಂದ ಹಿಡಿದು, ಅನುಷ್ಠಾನದ ಸಂಪೂರ್ಣ ಮೇಲ್ವಿಚಾರಣೆಯನ್ನೂ ಈ ಸಮಿತಿಯೇ ನೋಡಿಕೊಳ್ಳಲಿದೆ ಎಂಬುದು ವಿಶೇಷ.

ಸಾಮಾನ್ಯವಾಗಿ ಕೆಲವೊಂದು ಯೋಜನೆಗಳಿಗೆ ಎರಡು ಮೂರು ಇಲಾಖೆಗಳ ಸಹಭಾಗಿತ್ವ ಬೇಕಾಗುತ್ತದೆ. ಕೆಲವು ಬಾರಿ ಅಧಿಕಾರಿಗಳ ನಡುವಿನ ಸಮನ್ವಯ ಕೊರತೆಯಿಂದ ಯೋಜನೆಗಳ ಜಾರಿ ವಿಳಂಬವಾಗಬಹುದು. ಈಗ ಮುಖ್ಯ ಕಾರ್ಯದರ್ಶಿಗಳೇ ಸಮಿತಿಯ ನೇತೃತ್ವವಹಿಸಿಕೊಂಡರೆ ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಸುಲಭವಾಗುತ್ತದೆ ಎಂಬ ಉದ್ದೇಶವೂ ಇದರ ಹಿಂದಿದೆ. ಏನೇ ಆಗಲಿ ಪ್ರತೀ ಬಾರಿಯ ಬಜೆಟ್‌ ಘೋಷಣೆ ಬಳಿಕ, ಇದರಲ್ಲಿನ ಎಷ್ಟು ಯೋಜನೆಗಳು ಕಾರ್ಯರೂಪಕ್ಕೆ ಬರುತ್ತವೆ ಎಂಬ ಕುರಿತಂತೆ ಚರ್ಚೆ ನಡೆಯುತ್ತದೆ. ಅದು ಯಾವುದೇ ಪಕ್ಷದ ಸರಕಾರ ಇರಲಿ, ಘೋಷಣೆಗೂ ಜಾರಿಯ ನಡುವೆ ವ್ಯತ್ಯಾಸವಂತೂ ಇರುತ್ತದೆ. ಈ ವ್ಯತ್ಯಾಸವನ್ನು ಗಮನದಲ್ಲಿ ಇರಿಸಿಕೊಂಡು ಬಜೆಟ್‌ನಲ್ಲಿ ಘೋಷಿಸಲಾದ ಯೋಜನೆಗಳನ್ನು ಕಾರ್ಯರೂಪಕ್ಕೆ ತಂದರೆ ಆಗ ಅದು ಅತ್ಯುತ್ತಮ ನಿರ್ಧಾರವಾಗುತ್ತದೆ ಎಂಬುದರಲ್ಲಿ ಸಂದೇಹವಿಲ್ಲ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.