ದೇಶದ ಕೆಲವೆಡೆ ಸಾಮುದಾಯಿಕ ಪ್ರಸರಣ; ಕೂಲಂಕಷ ಅಧ್ಯಯನವಾಗಲಿ


Team Udayavani, Oct 20, 2020, 6:11 AM IST

ದೇಶದ ಕೆಲವೆಡೆ ಸಾಮುದಾಯಿಕ ಪ್ರಸರಣ; ಕೂಲಂಕಷ ಅಧ್ಯಯನವಾಗಲಿ

ಲಾಕ್‌ಡೌನ್‌ ತೆರವಾದ ಅನಂತರ ಕೋವಿಡ್‌ ಪ್ರಕರಣಗಳ ಸಂಖ್ಯೆ ಹಠಾತ್ತನೆ ಏರಿಕೆಯಾಗುತ್ತಾ ಸಾಗಿದ್ದರಿಂದ, ದೇಶಾದ್ಯಂತ ಕೋವಿಡ್‌ ಸಾಮುದಾಯಿಕ ಪ್ರಸರಣದ ಹಂತ ತಲುಪಿದೆಯೇ ಎನ್ನುವ ಅಂಶ ಚರ್ಚೆಗೊಳಗಾಗುತ್ತಲೇ ಬಂದಿದೆ. ಈಗ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌ ಅವರು ದೇಶದ ಕೆಲವು ಜಿಲ್ಲೆಗಳಲ್ಲಿ ಕೋವಿಡ್‌ನ‌ ಸಾಮುದಾಯಿಕ ಪ್ರಸರಣ ಆಗುತ್ತಿದೆ ಎಂದಿದ್ದಾರೆ.

ಸತ್ಯವೇನೆಂದರೆ, ಜೂನ್‌ ತಿಂಗಳಲ್ಲೇ ಈ ವಿಚಾರವಾಗಿ ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ ಹಾಗೂ ತಜ್ಞರ ನಡುವೆ ಜಟಾಪಟಿ ಆರಂಭ ವಾಗಿತ್ತು. “”ಭಾರತದಲ್ಲಿ ಈಗಾಗಲೇ ಹಲವು ಪ್ರದೇಶಗಳಲ್ಲಿ ಕೋವಿಡ್‌-19 ಸಮು  ದಾಯ ಪ್ರಸರಣ ಶುರುವಾಗಿದೆ. ಆದರೆ ಐಸಿಎಂಆರ್‌ ಸತ್ಯಕ್ಕೆ ದೂರವಾದ ವರದಿಗಳನ್ನು ತೋರಿಸುತ್ತಿದೆ. ಸಮುದಾಯ ಪ್ರಸರಣ ಆರಂಭವಾಗಿದೆ ಎಂದು ಸರಕಾರ ಹೇಳಿ ದರೆ ಜನರು ಕೂಡ ಎಚ್ಚರಿಕೆ ವಹಿಸುತ್ತಾರೆ” ಎಂದು ಏಮ್ಸ್‌ನ ಮಾಜಿ ನಿರ್ದೇಶಕ ಡಾ| ಎಂ.ಸಿ. ಮಿಶ್ರಾ ವ್ಯಕ್ತಪಡಿಸಿದ್ದ ಆಕ್ರೋಶ ಅಂದು ಬಹಳ ಸುದ್ದಿಯಾಗಿತ್ತು.

ಸಾಮುದಾಯಿಕ ಪ್ರಸರಣವೆನ್ನುವುದು ಪರಿಸ್ಥಿತಿ ಕೈ ಜಾರಿದೆ ಎನ್ನುವುದನ್ನು ಸೂಚಿಸುವಂಥ ಹಂತ. ಸೋಂಕಿನ ಮೂಲವನ್ನು ಪತ್ತೆ ಮಾಡಲು ಸಾಧ್ಯವಾಗ ದಂಥ ಸ್ಥಿತಿ. ಇದರಿಂದಾಗಿ, ಸಾಮುದಾಯಿಕ ಪ್ರಸರಣವಾಗುತ್ತಿರುವ ಪ್ರದೇಶಗಳಲ್ಲಿ ಬಹು ತೇಕರಿಗೆ ಸೋಂಕು ಹರಡುವ ಅಪಾಯವಿರುತ್ತದೆ.

ಕೊರೊನಾ ವೈರಸ್‌ನ ಸಾಮುದಾಯಿಕ ವ್ಯಾಪಿಸುವಿಕೆಯು ಪ್ರಸಕ್ತ ಕೆಲವು ಜಿಲ್ಲೆಗಳಿಗೆ ಸೀಮಿತವಾಗಿರಬಹುದು. ಆದರೆ, ಈಗ ಎಲ್ಲ ರಾಜ್ಯಗಳೂ ನಿರ್ಬಂಧಗಳನ್ನು ತೆಗೆದುಹಾಕಿ, ಜನರ ಓಡಾಟವನ್ನು ಯಥಾಸ್ಥಿತಿಗೆ ತಂದಿರುವುದರಿಂದ ದೇಶಾದ್ಯಂತ ಸಾಮುದಾಯಿಕ ಪ್ರಸರಣ ಆಗಬಹುದೇ? ಅದನ್ನು ತಡೆಯಲು ಸಾಧ್ಯವಿದೆಯೇ ಎನ್ನುವ ಪ್ರಶ್ನೆ ಎದುರಾಗುತ್ತದೆ.

ದುರದೃಷ್ಟವಶಾತ್‌, ಸರಕಾರಗಳ ಹಾಗೂ ಸಾರ್ವಜನಿಕರ ಈಗಿನ ಮನೋಧೋರಣೆಯನ್ನು ಗಮನಿಸಿದರೆ, ಈ ಅಪಾಯವನ್ನು ತಡೆಯಲು ಅಸಾಧ್ಯ ಎಂದೆನಿಸುತ್ತದೆ. ಕೆಲವು ತಿಂಗಳವರೆಗೂ ಹೆಚ್ಚಾಗಿ ನಗರ ಪ್ರದೇಶಗಳಿಗೆ ಸೀಮಿತವಾ ಗಿದ್ದ ಸಾಂಕ್ರಾಮಿಕ ಈಗ ಗ್ರಾಮೀಣ ಭಾಗಗಳಲ್ಲೂ ವೇಗವಾಗಿ ಹರಡಲಾರಂಭಿ ಸಿದೆ. ಜನರಲ್ಲಿನ ಜಾಗೃತಿಯ ಕೊರತೆ, ತ್ವರಿತ ವೈದ್ಯಕೀಯ ನೆರವಿನ ಅಭಾವ, ರೋಗ ಲಕ್ಷಣಗಳಿದ್ದರೂ ಪರೀಕ್ಷೆ ಮಾಡಿಸಿಕೊಳ್ಳಲು ಹಿಂಜರಿಯುವ ಗುಣ ರೋಗ ಪ್ರಸರಣದ ಅಪಾಯವನ್ನು ಹೆಚ್ಚಿಸುತ್ತಲೇ ಸಾಗಿದೆ. ಈ ಕಾರಣಕ್ಕಾಗಿಯೇ, ಯಾವ ರಾಜ್ಯಗಳ, ಯಾವೆಲ್ಲ ಪ್ರದೇಶಗಳಲ್ಲಿ ಸೋಂಕು ಸಾಮುದಾಯಿಕ ಪ್ರಸರಣದ ಹಂತ ತಲುಪಿದೆ ಎನ್ನುವುದರ ಕೂಲಂಕಷ ಅಧ್ಯಯನವಾಗಿ ಶೀಘ್ರದಲ್ಲೇ ಪಟ್ಟಿ ಬಿಡುಗಡೆ ಮಾಡುವುದಕ್ಕೆ ಸರಕಾರಗಳು ಆದ್ಯತೆ ನೀಡಬೇಕು. ಆಗ ಮುಂದಿನ ಸುರಕ್ಷತಾ ಕ್ರಮಗಳು, ಅಂದರೆ, ಆ ಭಾಗದಿಂದ ರೋಗ ಇನ್ನಿತರೆಡೆಗೆ ವೇಗವಾಗಿ ವಿಸ್ತರಿಸದಂತೆ ತಡೆಯಲು ಸಾಧ್ಯವಾಗುತ್ತದೆ. ಈಗ ಹಬ್ಬಗಳ ದಿನವಾಗಿ ರುವುದರಿಂದ, ಜನರು ಅಜಾಗರೂಕತೆ ಮೆರೆದರೆ ಒಂದೇ ತಿಂಗಳಲ್ಲೇ 26 ಲಕ್ಷ ಪ್ರಕರಣಗಳು ವರದಿಯಾಗಬಲ್ಲವು ಎಂದೂ ಎಚ್ಚರಿಕೆ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ವೈಯಕ್ತಿಕ ಸುರಕ್ಷತೆ, ಸ್ವತ್ಛತೆಯನ್ನು ಕಡೆಗಣಿಸಲೇಬಾರದು.

ಟಾಪ್ ನ್ಯೂಸ್

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.