ಕೋಮು ಹಿಂಸೆ ಕೆರಳಿಸುವ ದುರುದ್ದೇಶ: ಉಗ್ರರ ದಮನ ಅಸಾಧ್ಯವಾಯಿತೆ?


Team Udayavani, Jul 12, 2017, 9:54 AM IST

ANKAN-3.jpg

ದೇಶದ ಎಲ್ಲ ಮತ ಧರ್ಮಗಳ ಜನರು ಒಗ್ಗಟ್ಟಿನಿಂದ ಬದುಕಲು ಇಷ್ಟಪಡುತ್ತಾರೆ ಮತ್ತು ಕಷ್ಟಕಾಲದಲ್ಲಿ ಒಬ್ಬರಿಗೊಬ್ಬರು ನೆರವಾಗುತ್ತಾರೆ. 

ಜಮ್ಮು-ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಬತೆಂಗೂ ಎಂಬಲ್ಲಿ ನಿನ್ನೆ ರಾತ್ರಿ ಉಗ್ರರ ತಂಡವೊಂದು ಅಮರನಾಥ ಯಾತ್ರಿಗಳ ಬಸ್ಸಿನ ಮೇಲೆ ದಾಳಿ ಮಾಡಿ ಏಳು ಮಂದಿಯನ್ನು ಕೊಂದಿರುವ ಘಟನೆ ದೇಶವ್ಯಾಪಿ ಕಂಪನವುಂಟು ಮಾಡಿದೆ. ಸಂಜೆ ಐದು ಗಂಟೆಗೆ ಅಮರನಾಥದಿಂದ ಹೊರಟ ಬಸ್‌ ರಾತ್ರಿ 8.20ರ ವೇಳೆಗೆ ಬಟೆಂಗೂ ತಲುಪಿದಾಗ ಉಗ್ರರು ದಾಳಿ ಮಾಡಿದ್ದಾರೆ. ಬಹಳ ವರ್ಷಗಳ ಬಳಿಕ ಅಮರನಾಥ ಯಾತ್ರಿಗಳ ಮೇಲಾಗಿರುವ ದಾಳಿಯಿದು. ಧಾರ್ಮಿಕ ಯಾತ್ರಾರ್ಥಿಗಳನ್ನು ಗುರಿಮಾಡಿಕೊಂಡು ನಡೆಸಿರುವ ದಾಳಿಯಲ್ಲಿ ಕಾಶ್ಮೀರ ಮಾತ್ರವಲ್ಲದೆ ಇಡೀ ದೇಶದಲ್ಲಿ ಕೋಮು ಹಿಂಸೆಯನ್ನು ಕೆರಳಿಸುವ ದುರುದ್ದೇಶ ಇದೆ. ಪಶ್ಚಿಮ ಬಂಗಾಲದ ಹಿಂಸಾಚಾರ, ಗೋ ರಕ್ಷಕರಿಂದ ಹತ್ಯೆ ಇತ್ಯಾದಿ ಘಟನೆಗಳಿಂದ ದೇಶ ಪ್ರಕ್ಷುಬ್ಧವಾಗಿದ್ದು, ಈ ಸಂದರ್ಭದಲ್ಲಿ ಧಾರ್ಮಿಕ ಯಾತ್ರಿಕರ ಮೇಲೆ ದಾಳಿ ಮಾಡಿದರೆ ದೇಶದಲ್ಲಿ ವ್ಯಾಪಕವಾಗಿ ಕೋಮುಗಲಭೆ ನಡೆಯಬಹುದು ಎನ್ನುವುದು ಉಗ್ರರ ಲೆಕ್ಕಾಚಾರ ಎನ್ನಲು ವಿಶೇಷ ಪಾಂಡಿತ್ಯದ ಅಗತ್ಯವಿಲ್ಲ. ಅಂತೆಯೇ ಯಾರು ಈ ಕೃತ್ಯದ ಹಿಂದೆ ಇದ್ದಾರೆ ಎನ್ನುವುದು ಕೂಡ ಬಹುತೇಕ ಎಲ್ಲರಿಗೂ ಗೊತ್ತಾಗಿದೆ. ಪಾಕಿಸ್ಥಾನದ ಕೃಪಾಶ್ರಯದಲ್ಲಿರುವ ಎಲ್‌ಇಟಿ ಉಗ್ರ ಸಂಘಟನೆಯ ಉಗ್ರರು ಕೃತ್ಯ ಎಸಗಿದ್ದಾರೆ ಮತ್ತು ಲಷ್ಕರ್‌ ಕಮಾಂಡರ್‌ ಇಸ್ಮಾಯಿಲ್‌ ಎಂಬಾತ ತಂಡದ ಮುಖಂಡನಾಗಿದ್ದ ಎನ್ನುವುದನ್ನು ಕಾಶ್ಮೀರದ ಪೊಲೀಸರು ಬಹಿರಂಗಪಡಿಸಿದ್ದಾರೆ. 

ಭಾರೀ ಪ್ರಮಾಣದ ಸಾವುನೋವು ಗಳನ್ನು ಉಂಟು ಮಾಡುವುದು ಉಗ್ರರ ಹುನ್ನಾರವಾಗಿದ್ದರೂ ಬಸ್ಸಿನ ಚಾಲಕ ಸಲೀಮ್‌ ಶೇಕ್‌ ಸಮಯ ಪ್ರಜ್ಞೆಯಿಂದಾಗಿ ಸುಮಾರು 50 ಮಂದಿಯ ಜೀವ ಉಳಿದಿದೆ.  ನಿಸ್ಸಂಶಯವಾಗಿ ನಿನ್ನೆ ಘಟನೆಯ ಹೀರೊ ಸಲೀಮ್‌ ಶೇಖ್‌. ಮುಸ್ಲಿಮ್‌ ಉಗ್ರರ ದಾಳಿಯಿಂದ ಹಿಂದು ಯಾತ್ರಿಕರನ್ನು ರಕ್ಷಿಸಿದ್ದು ಓರ್ವ ಮುಸ್ಲಿಂ ಚಾಲಕ ಎನ್ನುವುದು ಈ ಸಂದರ್ಭದಲ್ಲಿ ಬಹಳ ಮುಖ್ಯವಾಗುತ್ತದೆ. ಏಕೆಂದರೆ ಹಿಂಸಾಚಾರ ಬೇಕಾಗಿರುವುದು ಕೆಲವೇ ಮಂದಿಗೆ ತಮ್ಮ ಸ್ಥಾಪಿತ ಹಿತಾಸಕ್ತಿಗಳನ್ನು ಈಡೇರಿಸಲು ಮಾತ್ರ. ಉಳಿದಂತೆ ದೇಶದ ಎಲ್ಲ ಮತ ಧರ್ಮಗಳ ಜನರು ಒಗ್ಗಟ್ಟಿನಿಂದ ಬದುಕಲು ಇಷ್ಟಪಡುತ್ತಾರೆ ಮತ್ತು ಕಷ್ಟಕಾಲದಲ್ಲಿ ಒಬ್ಬರಿಗೊಬ್ಬರು ನೆರವಾಗುತ್ತಾರೆ. ಅವರನ್ನು ವಿಭಜಿಸುವುದು ಮತೀಯ ಭಾವನೆಯನ್ನು ಕೆರಳಿಸುವ ಮೂಲಕ ರಾಜಕೀಯ ಲಾಭ ಮಾಡಿಕೊಳ್ಳಲೆತ್ನಿಸುವ ಕೆಲವು ಧೂರ್ತ ರಾಜಕೀಯ ಮತ್ತು ಧಾರ್ಮಿಕ ಮುಖಂಡರು.  17 ವರ್ಷಗಳ ಬಳಿಕ ಅಮರನಾಥ ಯಾತ್ರಿಗಳ ಮೇಲೆ ನಡೆದಿರುವ ದೊಡ್ಡ ಪ್ರಮಾಣದ ದಾಳಿಯಿದು. ಪ್ರತಿ ವರ್ಷ ಸರಕಾರ ಅಮರನಾಥ ಯಾತ್ರೆಗೆ ಭಾರೀ ಭದ್ರತಾ ವ್ಯವಸ್ಥೆಯ ಏರ್ಪಾಡು ಮಾಡುತ್ತಿದೆ. ಇಷ್ಟೆಲ್ಲ ಭದ್ರತೆಯಿದ್ದರೂ ಈ ಸಲ ಉಗ್ರರ ದಾಳಿಯಾಗಿರುವುದು ಹಲವು ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ. ಯಾತ್ರೆಯ ಮೇಲೆ ದಾಳಿ ಮಾಡಲು ಉಗ್ರರು ಸಜ್ಜಾಗಿದ್ದಾರೆ ಎಂಬ ಮಾಹಿತಿಯನ್ನು ಕಾಶ್ಮೀರ ಪೊಲೀಸರು ಎರಡು ವಾರಗಳ ಹಿಂದೆಯೇ ಕೇಂದ್ರ ಸರಕಾರಕ್ಕೆ ನೀಡಿದ್ದರು. ಹಾಗಿದ್ದರೂ ಭದ್ರತಾ ಲೋಪ ಆಗಿರುವುದು ಏಕೆ ಎನ್ನುವುದನ್ನು ತಿಳಿಸುವ ಜವಾಬ್ದಾರಿ ಸರಕಾರಕ್ಕಿದೆ.  ಯಾತ್ರೆ ನಡೆಸಲು ಪ್ರತ್ಯೇಕವಾದ ಮಂಡಳಿಯೊಂದಿದೆ. ಯಾತ್ರಾರ್ಥಿಗಳನ್ನು ಕರೆದೊಯ್ಯುವ ವಾಹನಗಳು ಈ ಮಂಡಳಿಯಲ್ಲಿ ನೋಂದಣಿಯಾಗಿರಬೇಕು. ಆದರೆ ನಿನ್ನೆ ದಾಳಿಗೊಳಗಾದ ಬಸ್‌ ಮಂಡಳಿಯಲ್ಲಿ ನೋಂದಣಿಯಾಗಿರಲಿಲ್ಲ ಎನ್ನುವ ಮಾಹಿತಿಯಿದೆ. ನೋಂದಣಿಯಾಗಿರದ ಬಸ್ಸೊಂದು ಬಂದೋಬಸ್ತಿನ ನಡುವೆ ಅಮರನಾಥ ತಲುಪಿದ್ದು ಹೇಗೆ? ಸೂರ್ಯಾಸ್ತದ ಬಳಿಕ ಯಾತ್ರಾಥಿಗಳ ಪ್ರಯಾಣಕೆ ನಿರ್ಬಂಧವಿದ್ದರೂ ಬಸ್‌ ಹೋಗಲು ಬಿಟ್ಟದ್ದು ಹೇಗೆ? ಅಡಿಗಡಿಗೂ ತಪಾಸಣೆ ನಡೆಯುತ್ತಿದ್ದರೂ ಈ ಬಸ್‌ ಸುಮಾರು ಮೂರು ತಾಸು ರಾಷ್ಟ್ರೀಯ ಹೆದ್ದಾರಿಯಲ್ಲಿ ಯಾರ ಕಣ್ಣಿಗೂ ಬೀಳಲಿಲ್ಲವೆ?  ಏನೇ ಆದರೂ ಈ ದಾಳಿಯಿಂದ ದೇಶ ಎದೆಗುಂದಿಲ್ಲ. ಯಾತ್ರೆ ಎಂದಿನಂತೆಯೇ ಮುಂದುವರಿದಿದೆ ಮತ್ತು ಎಲ್ಲೂ ಹಿಂಸಾಚಾರ ನಡೆದಿಲ್ಲ. ಅಷ್ಟರಮಟ್ಟಿಗೆ ಉಗ್ರರ ಮತ್ತು ಅವರಿಗೆ ಕುಮ್ಮಕ್ಕು ನೀಡುತ್ತಿರುವವರ ಉದ್ದೇಶವನ್ನು ವಿಫ‌ಲಗೊಳಿಸುವಲ್ಲಿ ದೇಶ ಸಫ‌ಲವಾಗಿದೆ ಎನ್ನುವುದಷ್ಟೇ ಸಮಾಧಾನ ಕೊಡುವ ವಿಷಯ.

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.