ಪಾದಯಾತ್ರೆ ಸ್ಥಗಿತ; ಅನಿವಾರ್ಯ ಕ್ರಮ


Team Udayavani, Jan 14, 2022, 6:30 AM IST

Untitled-1

ಮೇಕೆದಾಟು ಕುಡಿಯುವ ನೀರು ಯೋಜನೆ ಸಂಬಂಧ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪಾದಯಾತ್ರೆ ತಾತ್ಕಾಲಿಕವಾಗಿ ಸ್ಥಗಿತವಾಗಿದೆ. ಒಂದು ಕಡೆ ಹೈಕೋರ್ಟ್‌ ಚಾಟಿ, ಮತ್ತೂಂದು ಕಡೆ ಹೆಚ್ಚುತ್ತಿರುವ  ಕೊರೊನಾದಿಂದಾಗಿ ಕಾಂಗ್ರೆಸ್‌ ನಾಯಕರು ಸದ್ಯಕ್ಕೆ ಪಾದಯಾತ್ರೆ  ಸ್ಥಗಿತ ಮಾಡುತ್ತಿರುವುದಾಗಿ ಹೇಳಿ ತಮ್ಮ ತಮ್ಮ ಊರುಗಳಿಗೆ ವಾಪಸ್‌ ಆಗಿದ್ದಾರೆ.

ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಲು ಹಮ್ಮಿಕೊಳ್ಳಲಾಗಿದ್ದ ಈ ಪಾದಯಾತ್ರೆ ಅತ್ಯವಶ್ಯವಾಗಿಯೇ ಇತ್ತು. ಮೇಕೆದಾಟುವಿನಲ್ಲಿ ಅಣೆಕಟ್ಟೊಂದನ್ನು ಕಟ್ಟಿ ವಿದ್ಯುತ್‌ ಉತ್ಪಾದನೆ ಮತ್ತು ಬೆಂಗಳೂರಿಗೆ ಕುಡಿಯುವ ನೀರು ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶ. ಇದರ ಈ ಆಶಯಗಳನ್ನು ಯಾರೂ ಬೇಡ ಎನ್ನಲು ಸಾಧ್ಯವೇ ಇಲ್ಲ. ಆದರೆ ತಮಿಳುನಾಡಿನ ವಿರೋಧ ಮತ್ತು ಇತರ ರಾಜಕೀಯ ಲಾಭ ಹಾಗೂ ನಷ್ಟಗಳ ಕಾರಣದಿಂದಾಗಿ ಈ ಯೋಜನೆಯನ್ನು  ಇದುವರೆಗೆ ಜಾರಿ ಮಾಡಲಾಗಿಲ್ಲ. ಕೇಂದ್ರದ ಮಟ್ಟದಲ್ಲಿ ಬರುವ ಸರಕಾರಗಳೂ ಈ ಬಗ್ಗೆ ಕಠಿನ ನಿರ್ಧಾರ ತೆಗೆದುಕೊಳ್ಳಲು  ಸಾಧ್ಯವಾಗಿಲ್ಲ. ಇದಕ್ಕೆ ಪ್ರಮುಖ ಕಾರಣ ತಮಿಳುನಾಡಿನ ಪ್ರಾದೇಶಿಕ ರಾಜಕಾರಣ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರವೇ.

ಸದ್ಯ ಪಾದಯಾತ್ರೆಯಂಥ ಪ್ರತಿಭಟನೆಗಳನ್ನು ಯಾರೂ ಬೇಡ ಎನ್ನಲು ಸಾಧ್ಯವೇ ಇಲ್ಲ. ಆದರೆ ಇಲ್ಲಿ ಪ್ರಮುಖವಾಗಿ ಗಮನಿಸಬೇಕಾಗಿರುವುದು ಪಾದಯಾತ್ರೆ ಹಮ್ಮಿಕೊಂಡಿರುವ ವೇಳೆ. ಈಗ ದೇಶಾದ್ಯಂತ ಕೊರೊನಾ ಕೇಸ್‌ಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜ. 1ರಿಂದ ಈಚೆಗೆ ಕೇಸುಗಳ ಸಂಖ್ಯೆ ದಿನದಿಂದ ದಿನಕ್ಕೆ ದುಪ್ಪಟ್ಟಾಗುತ್ತಿದೆ. ಇದಕ್ಕೆ ಒಮಿಕ್ರಾನ್‌ ಕಾರಣ ಎನ್ನುವುದು ತಜ್ಞರ ಮಾತು. ಹೀಗಾಗಿ ಸೂಪರ್‌ ಸ್ಪ್ರೆಡ್ಡರ್‌ ರೀತಿ ವರ್ತಿಸುವ ಪಾದಯಾತ್ರೆಯಂಥ ಜನಸೇರುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳದಿರುವುದು ಒಳಿತು. ಈಗ ಹಿಂದೆಗೆದುಕೊಳ್ಳುವುದಕ್ಕಿಂತ ಆರಂಭ ಮಾಡುವ ಮುನ್ನವೇ ಕೊರೊನಾವನ್ನು ಗಮನದಲ್ಲಿ ಇರಿಸಿಕೊಂಡು ಮುಂದೊಂದು ದಿನ ಪಾದಯಾತ್ರೆ ಹಮ್ಮಿಕೊಳ್ಳಬಹುದಿತ್ತು. ಏಕೆಂದರೆ, ಈಗಾಗಲೇ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಲಿ ಅವರಂಥ ಹಲವಾರು ಪ್ರಮುಖ ನಾಯಕರಿಗೇ ಕೊರೊನಾ ದೃಢಪಟ್ಟಿದೆ. ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಇತರ ಪ್ರಮುಖ ನಾಯಕರೆಲ್ಲರೂ ಇವರ ಸಂಪರ್ಕಿತರೇ ಆಗಿದ್ದಾರೆ. ಈಗ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂಬುದನ್ನು ಅಲ್ಲಗೆಳೆಯಲು ಸಾಧ್ಯವಿಲ್ಲ. ಇಂಥ ಸಂದರ್ಭದಲ್ಲಿ ಕಾಂಗ್ರೆಸ್‌ ಹೈಕಮಾಂಡ್‌ ಮಧ್ಯಪ್ರವೇಶಿಸಿ ಪಾದಯಾತ್ರೆ ಸœಗಿತ ಮಾಡಲು ಹೇಳಿರುವುದು ಸರಿಯಾದ ಕ್ರಮವೇ ಆಗಿದೆ.

ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗ ಪಾದಯಾತ್ರೆಯ ಬೇಡಿಕೆಯನ್ನು ಈಡೇರಿಸುವುದಾಗಿ ಪತ್ರಮುಖೇನ ಕಾಂಗ್ರೆಸ್‌ ನಾಯಕರಿಗೆ ಭರವಸೆ ನೀಡಿದ್ದಾರೆ. ಈ ಕೆಲಸವನ್ನು  ಪಾದಯಾತ್ರೆ ಆರಂಭಿಸುವ ಮುನ್ನವೇ ಮಾಡಿದ್ದರೆ ಒಳ್ಳೆಯದಿತ್ತು.  ಆಗ ಕಾಂಗ್ರೆಸ್‌ ನಾಯಕರನ್ನು ಕರೆಸಿ, ಮಾತುಕತೆ ಮಾಡಿ ಈ ಯೋಜನೆಗಾಗಿ ಒಟ್ಟಾಗಿಯೇ ಹೋರಾಟ ಮಾಡೋಣ ಎಂದು ಮನವೊಲಿಕೆ ಮಾಡಬಹುದಿತ್ತು. ಈ ಮೂಲಕ ಕೊರೊನಾ ಹಬ್ಬುವಿಕೆಯನ್ನು  ತಡೆಯಬಹುದಿತ್ತು.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.