ಮಲೇರಿಯಾ ಲಸಿಕೆಗೆ ಸಮ್ಮತಿ: ಲಕ್ಷಾಂತರ ಮಕ್ಕಳಿಗೆ ಜೀವದಾನ


Team Udayavani, Oct 9, 2021, 6:30 AM IST

ಮಲೇರಿಯಾ ಲಸಿಕೆಗೆ ಸಮ್ಮತಿ: ಲಕ್ಷಾಂತರ ಮಕ್ಕಳಿಗೆ ಜೀವದಾನ

ಸರಿಸುಮಾರು ಶತಮಾನದಿಂದ ಇಡೀ ವಿಶ್ವವನ್ನು ಅದರಲ್ಲೂ ಪ್ರಮುಖ­ವಾಗಿ ಆಫ್ರಿಕಾ, ಏಷ್ಯಾ ಮತ್ತು ಲ್ಯಾಟಿನ್‌ ಅಮೆರಿಕನ್‌ ದೇಶಗಳನ್ನು ನಿರಂತರವಾಗಿ ಕಾಡುತ್ತಾ ಬಂದಿರುವ ಮಲೇರಿಯಾ ಕಾಯಿಲೆಗೆ ಲಸಿಕೆಯೊಂದನ್ನು ಸಂಶೋಧಿಸುವ ಪ್ರಕ್ರಿಯೆಯಲ್ಲಿ ವೈದ್ಯಕೀಯ ಕ್ಷೇತ್ರ ಕೊನೆಗೂ ಯಶಸ್ಸು ಕಂಡಿದೆ. ಸಂಶೋಧಕರ ಪಾಲಿಗೆ ಕಠಿನ ಸವಾಲಾಗಿ ಪರಿಣಮಿಸಿದ್ದ ಮಲೇರಿಯಾ ಕಾಯಿಲೆಗೆ ಲಸಿಕೆ­ಯೊಂದನ್ನು ಸಂಶೋಧಿಸಿ ಲಕ್ಷಾಂತರ ಮಕ್ಕಳ ಪ್ರಾಣ ಉಳಿಸುವಲ್ಲಿ ಸಫ‌ಲರಾಗಿದ್ದಾರೆ.

ಎಲ್ಲ ವಯೋಮಾನದವರನ್ನು ಮಲೇರಿಯಾ ಕಾಯಿಲೆ ಕಾಡುತ್ತದೆ­ಯಾದರೂ ಮಕ್ಕಳ ಪಾಲಿಗೆ ಇದು ಯಮದೂತನೇ ಸರಿ. ಬಡತನ ವ್ಯಾಪಕವಾಗಿರುವ ದೇಶಗಳಲ್ಲಿ ಪ್ರತೀ ವರ್ಷ ಈ ಕಾಯಿಲೆಯಂದ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದು ಈ ಪೈಕಿ ಮಕ್ಕಳ ಸಂಖ್ಯೆಯೇ ಅಧಿಕ. ಅದರಲ್ಲೂ ಆಫ್ರಿಕನ್‌ ದೇಶಗಳಲ್ಲಿ ಮಲೇರಿಯಾ ಬಾಧೆ ಅಧಿಕವಾಗಿದ್ದು ನಿರಂತರವಾಗಿ ಲಕ್ಷಾಂತರ ಸಂಖ್ಯೆಯಲ್ಲಿ ಪ್ರಾಣಹಾನಿ ಸಂಭವಿಸುತ್ತಿರುತ್ತದೆ. ಮಲೇರಿಯಾಕ್ಕೆ ತುತ್ತಾಗುವ ಮಕ್ಕಳ ಪ್ರಾಣ ರಕ್ಷಣೆಗಾಗಿ ಕಳೆದ ಮೂರು ದಶಕಗಳಿಂದ ವಿವಿಧ ದೇಶಗಳ ವೈದ್ಯಕೀಯ ತಜ್ಞರು ನಿರಂತರ ಸಂಶೋಧನೆಯಲ್ಲಿ ತೊಡಗಿಕೊಂಡಿದ್ದರು. ಇದರ ಫ‌ಲವಾಗಿ ಕೆಲವೊಂದು ಲಸಿಕೆಗಳನ್ನು ಸಂಶೋಧಿಸಲಾಗಿತ್ತಾದರೂ ಅದರ ಪರಿಣಾಮಕತ್ವದ ಬಗೆಗೆ ಅನುಮಾನಗಳು ಮೂಡಿದ್ದರಿಂದಾಗಿ ಈ ಲಸಿಕೆಗಳಿಗೆ ವಿಶ್ವ ಆರೋಗ್ಯ ಸಂಸ್ಥೆಯಿಂದ ಅನುಮೋದನೆ ಲಭಿಸಿರಲಿಲ್ಲ.

ಬ್ರಿಟನ್‌ನ ಫಾರ್ಮಾಸ್ಯುಟಿಕಲ್‌ ಕಂಪೆನಿಯಾದ ಗ್ಲ್ಯಾಕ್ಸೋಸ್ಮಿತ್‌ ಕ್ಲೈನ್‌ 1987ರಲ್ಲಿ ಅಭಿವೃದ್ಧಿಪಡಿಸಿದ ಮಾಸ್‌ಕ್ವಿರಿಕ್ಸ್‌ ಎಂಬ ಲಸಿಕೆಗೆ 31 ವರ್ಷಗಳ ಬಳಿಕ ವಿಶ್ವ ಆರೋಗ್ಯ ಸಂಸ್ಥೆ ಸಾರ್ವಜನಿಕ ಬಳಕೆಗೆ ಅನುಮತಿಯನ್ನು ನೀಡಿದೆ. ಮಲೇರಿಯಾ ರೋಗದ ಪ್ರಕರಣಗಳು ಅಧಿಕವಾಗಿರುವ ಆಫ್ರಿ­ಕಾದ ದೇಶಗಳಲ್ಲಿ ಈ ಲಸಿಕೆಯನ್ನು ಮಕ್ಕಳಿಗೆ ಆದ್ಯತೆಯ ಮೇಲೆ ನೀಡಲು ವಿಶ್ವ ಆರೋಗ್ಯ ಸಂಸ್ಥೆ ಚಿಂತನೆ ನಡೆಸಿದೆ. ಲಸಿಕೆ ವಿತರಣೆ ಪ್ರಕ್ರಿಯೆ ಶೀಘ್ರ ಆರಂಭಗೊಂಡದ್ದೇ ಆದಲ್ಲಿ ಮಲೇರಿಯಾದಿಂದ ಮಕ್ಕಳ ಜೀವರಕ್ಷಣೆ ಸಾಧ್ಯವಾಗಲಿದೆ ಎಂದು ವೈದ್ಯಕೀಯ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ:ಬದಲಿ ಇಂಧನ ಬಳಕೆ ಮಾಡಿದರೆ ದೇಶ ಐದು ವರ್ಷಗಳಲ್ಲಿ ನಂ1

ಪರಾವಲಂಬಿ ಜೀವಿಗಳ ಮೇಲ್ಮೈ ಯಲ್ಲಿ ಕಂಡುಬರುವ ಪ್ರೊಟೀನ್‌ಗಳಿಂದ ಈ ಮಾಸ್‌ಕ್ವಿರಿಕ್ಸ್‌ ಎಂಬ ಲಸಿಕೆಯನ್ನು ತಯಾರಿಸಲಾಗಿದೆ. ಸದ್ಯ ಈ ಲಸಿಕೆಯನ್ನು 6 ವಾರಗಳಿಂದ ಒಂದೂವರೆ ವರ್ಷದವರೆಗಿನ ಮಕ್ಕಳಿಗೆ ಮೂರು ಡೋಸ್‌ಗಳಲ್ಲಿ ನೀಡಲು ನಿರ್ಧರಿಸಲಾಗಿದ್ದು ಆ ಬಳಿಕ ನಾಲ್ಕನೇ ಡೋಸ್‌ ನೀಡಲಾಗುವುದು. ಪ್ರತೀ ಡೋಸ್‌ನ ನಡುವೆ ಕನಿಷ್ಠ 1 ತಿಂಗಳ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಮಾಸ್‌ಕ್ವಿರಿಕ್ಸ್‌ ಲಸಿಕೆ ಕೊರೊನಾ ನಿರೋಧಕ ಲಸಿಕೆಯ ಮಾದರಿ­ಯಲ್ಲಿಯೇ ಕೇವಲ ಮಲೇರಿಯಾ ನಿರೋಧಕ ಲಸಿಕೆಯೇ ಹೊರತು ಇದು ಮಲೇರಿಯಾ ಕಾಯಿಲೆಗೆ ಔಷಧವಲ್ಲ. ಮಾಸ್‌ಕ್ವಿರಿಕ್ಸ್‌ ಲಸಿಕೆಯನ್ನು ಪಡೆದ ಮಕ್ಕಳಿಗೆ ಮಲೇರಿಯಾ ಕಾಯಿಲೆ ಬಾಧಿಸಿದರೂ ಪ್ರಾಣಾಪಾಯ­ದಿಂದ ಅವರನ್ನು ರಕ್ಷಿಸಲಿದೆಯಲ್ಲದೆ ಕಾಯಿಲೆ ಗಂಭೀರ ಪರಿಸ್ಥಿತಿಗೆ ತಲುಪುವುದನ್ನೂ ನಿಯಂತ್ರಿಸಲಿದೆ. ಅಷ್ಟು ಮಾತ್ರವಲ್ಲದೆ ಈ ಲಸಿಕೆ ಪಡೆದ ಮಕ್ಕಳಿಗೆ ಹೈಪಟೈಟಿಸ್‌ ವೈರಸ್‌ನಿಂದ ಎದುರಾಗಬಹು­ದಾದ ಹಲವು ತೊಂದರೆಗಳಿಂದಲೂ ರಕ್ಷಣೆ ಒದಗಿಸಲಿದೆ. ಸದ್ಯ ಈ ಲಸಿಕೆಯ ಪರಿಣಾಮಕತ್ವ ಶೇ.30ರಷ್ಟು ಮಾತ್ರವೇ ಆಗಿದ್ದರೂ ಮಲೇರಿಯಾ ಪೀಡಿತ ಮಕ್ಕಳ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಲಿರುವುದಂತೂ ನಿಸ್ಸಂಶಯ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.