ಅಧಿಕಾರಿಗಳ ಲಂಚಗುಳಿತನ: ಮೇಲಿಂದ ವ್ಯವಸ್ಥೆ ಸ್ವಚ್ಛವಾಗಲಿ


Team Udayavani, Sep 20, 2018, 6:00 AM IST

21.jpg

ಸರಕಾರಿ ಕಚೇರಿಗಳಲ್ಲಿ ಇನ್ನೂ ಒಂದು ಲಂಚದ ವ್ಯವಸ್ಥೆಯಿದೆ. ಅದು ಕೆಳಗಿನ ಅಧಿಕಾರಿಗಳು ತಮ್ಮ ಕೆಲಸ ಮಾಡಿಸಿಕೊಳ್ಳಲು ಮೇಲಧಿಕಾರಿಗಳಿಗೆ ಲಂಚ ಕೊಡುವುದು. 

ಸರಕಾರಿ ಕಚೇರಿಗಳಲ್ಲಿ ಕೆಲಸ ಆಗಬೇಕಾದರೆ ಲಂಚ ಕೊಡಬೇಕು ಎನ್ನುವುದು ಗಂಭೀರ ವಿಷಯ. ಅಧಿಕಾರಿಗಳ ಲಂಚಗುಳಿತನವನ್ನು ತಡೆಯಲು ಎಷ್ಟೇ ಕಠಿಣ ಕಾನೂನುಗಳನ್ನು ತಂದರೂ ಅದು ಯಾವುದಾದರೊಂದು ರೂಪದಲ್ಲಿ ತನ್ನ ಅಸ್ತಿತ್ವವನ್ನು ಸಾಬೀತುಪಡಿಸುತ್ತಲೇ ಇರುತ್ತದೆ. ಹಾಗಾಗಿ ಯಾರಾದರೂ ಅಧಿಕಾರಿ ಲಂಚ ಸ್ವೀಕರಿಸಿ ಸಿಕ್ಕಿ ಬಿದ್ದರು ಎನ್ನುವಾಗ ಅಚ್ಚರಿಯೆನಿಸದು. 

ಇದು ತೀರಾ ಮಾಮೂಲು ಸುದ್ದಿ ಎಂಬಂತೆ ಈ ವ್ಯವಸ್ಥೆಗೆ ನಾವು ಒಗ್ಗಿ ಹೋಗಿದ್ದೇವೆ. ಇದೇ ವೇಳೆ ಸರಕಾರಿ ಕಚೇರಿಗಳಲ್ಲಿ ಇನ್ನೂ ಒಂದು ಲಂಚದ ವ್ಯವಸ್ಥೆಯಿದೆ. ಅದು ಕೆಳಗಿನ ಅಧಿಕಾರಿಗಳು ತಮ್ಮ ಕೆಲಸ ಮಾಡಿಸಿಕೊಳ್ಳಲು ಮೇಲಧಿಕಾರಿಗಳಿಗೆ ಲಂಚ ಕೊಡುವುದು. ಪ್ರಾಯಶಃ ಈ ಲಂಚದ ಬಗ್ಗೆ ಹೆಚ್ಚು ಚರ್ಚೆಯಾಗಿಲ್ಲ. ಈ ಮಾದರಿಯ ಪ್ರಕರಣಗಳು ಬೆಳಕಿಗೆ ಬರುವುದು ಅಪರೂಪಕ್ಕೊಮ್ಮೆ. ಆದರೆ ಇಂಥ ಒಂದು ವ್ಯವಸ್ಥೆ ಮೇಲಿನಿಂದ ಹಿಡಿದು ಕೆಳಗಿನ ತನಕ ಹರಡಿಕೊಂಡಿದೆ ಎನ್ನುವುದಕ್ಕೆ ಮಂಗಳೂರಿನಲ್ಲಿ ಕೆಲ ದಿನಗಳ ಹಿಂದೆ ಸಂಭವಿಸಿದ ಘಟನೆಯೇ ಸಾಕ್ಷಿ. 

ಇಲ್ಲಿ ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಗ್ರಾಮ ಪಂಚಾಯತ್‌ ಕ್ರಿಯಾ ಯೋಜನೆಯ ಕಡತ ವಿಲೇವಾರಿ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಕೆಲವು ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಈ ಕಾರ್ಯ ನಿರ್ವಹಣಾಧಿಕಾರಿಯ ವಿರುದ್ಧ ಸಿಡಿದೆದ್ದು ಪ್ರತಿಭಟನೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಭಾರ ನೆಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಈ ಕಾರ್ಯನಿರ್ವಹಣಾಧಿಕಾರಿಯನ್ನು ಸದ್ಯ ಈ ಹೊಣೆಯಿಂದ ಮುಕ್ತಿಗೊಳಿಸಲಾಗಿದ್ದರೂ ಈ ಪ್ರಕರಣ ಸರಕಾರಿ ಇಲಾಖೆಗಳಲ್ಲಿರುವ ಲಂಚವಾತಾರದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ. ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಹಣ ನೀಡಲು ಲಂಚ ಪಡೆಯುತ್ತಿದ್ದೇನೆ ಎಂದು ಈ ಅಧಿಕಾರಿ ಶಾಸಕರ ಎದುರೇ ಒಪ್ಪಿಕೊಂಡಿದ್ದರು. 

ಸರಕಾರಿ ಇಲಾಖೆಗಳಲ್ಲಿ ಲಂಚಕ್ಕೂ ಹೀಗೆ ಶ್ರೇಣೀಕೃತ ವ್ಯವಸ್ಥೆಯನ್ನು ಮಾಡಿಟ್ಟುಕೊಂಡಿ ರುವುದು ತುಸು ಗಂಭೀರವಾಗಿ ಪರಿಗಣಿಸಬೇಕಾದ ವಿಚಾರ. ಮೇಲಧಿಕಾರಿ ತನ್ನ ಕೆಳಗಿನ ಅಧಿಕಾರಿಯನ್ನು, ಆತ ತನ್ನಿಂದ ಕೆಳಗಿನ ಅಧಿಕಾರಿಯನ್ನು ಲಂಚಕ್ಕೆ ಪೀಡಿಸುವುದೇ ಈ ಶ್ರೇಣೀಕೃತ ವ್ಯವಸ್ಥೆ. ಈ ಸರಪಣಿಯ ಕೊಟ್ಟಕೊನೆಯ ಅಧಿಕಾರಿ ಜನರಿಂದ ಲಂಚ ಪಡೆದು ಪಾವತಿಸಬೇಕಾಗುತ್ತದೆ. ಈ ವ್ಯವಸ್ಥೆ ಬರೀ ಆರ್ಥಿಕ ಇಲಾಖೆ ಎಂದಲ್ಲ ಪ್ರತಿ ಸರಕಾರಿ ಇಲಾಖೆಯಲ್ಲೂ ಇದೆ. ಕೆಲವು ಶಿಕ್ಷಕರು ತಮ್ಮ ಸಂಬಳ ಬಿಡುಗಡೆಗೆ ಹಣ ನೀಡಬೇಕಾದ ಸ್ಥಿತಿ, ಸರಕಾರಿ ಬಸ್ಸಿನ ನಿರ್ವಾಹಕ ತನ್ನ ಮಾರ್ಗಕ್ಕಾಗಿ ಇಲಾಖೆಯ ಇನ್ಯಾರಿಗೋ ಹಣ ಕೊಡುವ ಸ್ಥಿತಿ, ಪೊಲೀಸ್‌ ಇಲಾಖೆಯಲ್ಲಿ ಸಾಹೇಬರಿಗೆ ಕೊಡಲು ಬೇಕು ಎಂದು ಹೇಳಿ ಕಿರಿಯ ಅಧಿಕಾರಿಗಳು ತೆಗೆದುಕೊಳ್ಳುವ ಲಂಚ ಎಲ್ಲವೂ ಸಾಮಾನ್ಯ ಆರೋಪದಂತಿಲ್ಲ.  ತಮ್ಮ ಇಲಾಖೆಯೊಳಗೆ ಇರುವ ಈ ಲಂಚಗುಳಿತನದ ಬಗ್ಗೆ ಅಧಿಕಾರಿಗಳು ಬಾಯಿ ಬಿಡುವುದು ಬಹಳ ವಿರಳ. ಹಾಗೊಂದು ವೇಳೆ ಬಹಿರಂಗಗೊಳಿಸಿದರೂ ಅವರಿಗೆ ವರ್ಗಾವಣೆ, ಬಡ್ತಿ ತಡೆ ಹಿಡಿಯುವುದು, ವ್ಯತಿರಿಕ್ತ ವರದಿ ರವಾನಿಸುವಂಥ ಕಿರುಕುಳಗಳು ಕಾದಿರುತ್ತವೆ.  ವ್ಯವಸ್ಥೆಯಿಂದ ಭ್ರಷ್ಟಾಚಾರವನ್ನು ನಿರ್ಮೂಲನಗೊಳಿಸಲು ಮಾಡುವ ಪ್ರಯತ್ನ ಘೋರವಾಗಿ ವಿಫ‌ಲಗೊಳ್ಳಲೂ ಇಲಾಖೆಯೊಳಗಿನ ಈ ವ್ಯವಸ್ಥೆಯೂ ಒಂದು ಕಾರಣ. ಮೇಲಧಿಕಾರಿಗೆ ಲಂಚ ನೀಡಿದವ ಅದನ್ನು ತನ್ನ ಕೆಳಗಿನ ಅಧಿಕಾರಿಯಿಂದ ವಸೂಲು ಮಾಡಿಯೇ ಮಾಡುತ್ತಾನೆ. ಹೀಗೆ ಅದು ಸರಪಣಿಯಾಗಿ ಸಾಗಿ ಬರುವುದರಿಂದ ದುರಸ್ತಿ ಕಾರ್ಯ ಮೇಲಿನಿಂದಲೇ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಒಂದಷ್ಟು ಪ್ರಯತ್ನಗಳನ್ನು ಮಾಡಿದೆ. ಲಂಚ ಕೊಟ್ಟವರಿಗೂ 7 ವರ್ಷ ತನಕ ಶಿಕ್ಷೆ ವಿಧಿಸುವಂಥ ಕಾನೂನು ಈ ಮಾದರಿಯ ಪ್ರಯತ್ನಗಳಲ್ಲಿ ಒಂದು. ಆದರೆ ಇದರಿಂದಲೂ ಹೆಚ್ಚೇನೂ ಫ‌ಲವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. 

ಲಂಚ ಹೀಗೆ ವ್ಯಾಪಕವಾಗಲು ಕಾನೂನು ತನ್ನ ಕೆಲಸವನ್ನು ಸಕ್ಷಮವಾಗಿ ಮಾಡದಿರುವುದೂ ಒಂದು ಕಾರಣ. ಕರ್ನಾಟಕದಲ್ಲಿ ಲಂಚ ಪಡೆಯುವಾಗಲೇ ಸಿಕ್ಕಿ ಬಿದ್ದ ಪ್ರಕರಣಗಳಲ್ಲಿ ಕೂಡಾ ಶೇ. ಹತ್ತು ಆರೋಪಿಗಳಿಗೆ ಮಾತ್ರ ಶಿಕ್ಷೆಯಾಗಿದೆ ಎಂದು ಇತ್ತೀಚೆಗಷ್ಟೆ ವರದಿಯೊಂದು ತಿಳಿಸಿತ್ತು.  ಭ್ರಷ್ಟಾಚಾರ ನಿಯಂತ್ರಣಕ್ಕೆ ಬರಬೇಕಾದರೆ ಇಡೀ ವ್ಯವಸ್ಥೆ ಪಾರದರ್ಶಕಗೊಳ್ಳಬೇಕು. ವಿಶ್ವಾಸಾರ್ಹತೆ, ಕಾರ್ಯಾನುಷ್ಠಾನ, ಪ್ರಾಮಾಣಿಕತೆ , ದಕ್ಷತೆ, ಬದ್ಧತೆ ಇವೆಲ್ಲ ಹೆಚ್ಚಬೇಕು. ಇದಾಗಬೇಕಿದ್ದರೆ ಆಡಳಿತದಲ್ಲಿ ಭಾರೀ ಎನ್ನುವಂಥ ಬದಲಾವಣೆಗಳಾಗಬೇಕು. ಈ ಬದಲಾವಣೆಯಾಗಬೇಕಾದರೆ ಮೊದಲು ರಾಜಕೀಯ ವ್ಯವಸ್ಥೆ ಸ್ವತ್ಛವಾಗಬೇಕು. ಆದರೆ ರಾಜಕೀಯ ವ್ಯವಸ್ಥೆಯನ್ನು ಸ್ವತ್ಛಗೊಳಿಸುವ ಪ್ರಯತ್ನಗಳು ಪದೇ ಪದೇ ವಿಫ‌ಲಗೊಳ್ಳುತ್ತಿದೆ. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.