ಅಭಿನಂದನ್‌ ಜತೆಗೆ ದೇಶ


Team Udayavani, Feb 28, 2019, 12:30 AM IST

x-10.jpg

ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನ ಸ್ಥಿತಿ ಇನ್ನಷ್ಟು ಬಿಗಡಾಯಿಸಿದ್ದು, ಬುಧವಾರ ಎರಡೂ ಕಡೆಗಳ ಯುದ್ಧ ವಿಮಾನಗಳ ನಡುವೆ ತೀವ್ರ ಘರ್ಷಣೆ ಸಂಭವಿಸಿದೆ. ಮಂಗಳವಾರದ ಸರ್ಜಿಕಲ್‌ ದಾಳಿಗೆ ಪ್ರತಿಯಾಗಿ ಭಾರತದ ವಾಯುನೆಲೆಗೆ ಪ್ರವೇಶಿಸಿದ್ದ ಪಾಕಿಸ್ತಾನದ ಯುದ್ಧ ವಿಮಾನಗಳನ್ನು ವಾಪಸ್‌ ಕಳುಹಿಸುವಲ್ಲಿ ಯಶಸ್ವಿಯಾಗಿರುವ ಭಾರತೀಯ ವಾಯು ಸೇನೆ, ಆ ದೇಶದ ಎಫ್ 16 ಯುದ್ಧ ವಿಮಾನವನ್ನೂ ಹೊಡೆದುರುಳಿಸಿದೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನವೂ ಭಾರತದ ಮಿಗ್‌ 21 ಯುದ್ಧ ವಿಮಾನ ಹೊಡೆದುರುಳಿಸಿದ್ದು, ಪೈಲಟ್‌ ಅಭಿನಂದನ್‌ ವರ್ಧಮಾನ್‌ ಅವರನ್ನು ಬಂಧಿಸಿ ಕರೆದೊಯ್ದಿದೆ. ಇಡೀ ದೇಶವೇ ಇವರ ಬಿಡುಗಡೆಗಾಗಿ ಪ್ರಾರ್ಥಿಸುತ್ತಿದ್ದು, ಅವರೊಟ್ಟಿಗಿದೆ.  

ಪಾಕ್‌ ಆಕ್ರಮಿತ ಕಾಶ್ಮೀರದ ಸ್ಥಳೀಯರು ನಮ್ಮ ಪೈಲಟ್‌ಗೆ ಥಳಿಸಿರುವ ವಿಡಿಯೋವನ್ನು ಪಾಕಿಸ್ತಾನವೇ ಬಿಡುಗಡೆ ಮಾಡಿದೆ. ಈ ವೇಳೆ ಪಾಕ್‌ ಸೇನೆಯ ಸೈನಿಕರು ಇದ್ದರೂ, ಅವರು ವರ್ಧಮಾನ್‌ ಮೇಲೆ ಸ್ಥಳೀಯರಿಂದ ಹಲ್ಲೆಯಾಗುತ್ತಿದ್ದರೂ ಬಿಡಿಸುವ ಯತ್ನ ಮಾಡದೇ ಇರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಿಸುತ್ತಿದೆ. ಅಂತಾರಾಷ್ಟ್ರೀಯ ಮಿಲಿಟರಿ ನಿಯಮದ ಪ್ರಕಾರ, ಇದು ಅಕ್ಷಮ್ಯ ನಡೆಯಾಗಿದ್ದು, ಈ ಬಗ್ಗೆ ಭಾರತವೂ ಪಾಕಿಸ್ತಾನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಇನ್ನೊಂದು ದೇಶದ ಯೋಧರು ಸೆರೆಸಿಕ್ಕಲ್ಲಿ, ಅವರನ್ನು ಉತ್ತಮವಾಗಿ ನಡೆಸಿಕೊಳ್ಳಬೇಕು ಎಂಬ ಕನಿಷ್ಠ ಜ್ಞಾನವನ್ನೂ ಪಾಕಿಸ್ತಾನ ಹೊಂದದೇ ಇರುವುದು ಈ ವಿಡಿಯೋ ಮೂಲಕ ಗೊತ್ತಾಗಿದೆ. 

ಇದಷ್ಟೇ ಅಲ್ಲ, ಬುಧವಾರ ಬೆಳಗ್ಗೆಯಿಂದಲೂ ಸುಳ್ಳುಗಳ ಸರಮಾಲೆಯನ್ನೇ ಪೊಣಿಸಿದ್ದ ಪಾಕಿಸ್ತಾನ, ತನ್ನದೇ ಹೇಳಿಕೆಗಳನ್ನು ಹಿಂಪಡೆದು ಮುಜುಗರಕ್ಕೀಡಾದ ಪ್ರಸಂಗವೂ ಜರುಗಿದೆ. ಕಾಶ್ಮೀರದ ಬುದ್ವಾಮ್‌ನಲ್ಲಿ ಮಿಗ್‌ ಹೆಲಿಕಾಪ್ಟರ್‌ ಪತನಗೊಂಡ ದೃಶ್ಯಾವಳಿಗಳನ್ನು ಪ್ರಕಟಿಸಿದ್ದ ಪಾಕಿಸ್ತಾನ ಮಾಧ್ಯಮಗಳು ನಾವೇ ಇದನ್ನು ಹೊಡೆದುಹಾಕಿದ್ದೆವು ಎಂದಿದ್ದವು. ನಂತರ, ಈ ಘಟನೆಗೂ ನಮಗೂ ಸಂಬಂಧವೇ ಇಲ್ಲ ಎಂದು ಅಲ್ಲಿನ ಸೇನಾ ವಕ್ತಾರರೇ ಹೇಳಿದರು. 

ಇನ್ನು ಇಬ್ಬರು ಪೈಲಟ್‌ಗಳನ್ನು ಬಂಧಿಸಿದ್ದೇವೆ ಎಂದು ಘಂಟಾಘೋಷವಾಗಿ ಹೇಳಿದ್ದ ಪಾಕಿಸ್ತಾನ, ರಾತ್ರಿ ವೇಳೆಗೆ ಈ ಹೇಳಿಕೆಯನ್ನೂ ವಾಪಸ್‌ ಪಡೆಯಿತು. ಪಾಕ್‌ ಸೇನೆಯ ವಕ್ತಾರರು, ನಾವು ಭಾರತದ ಎರಡು ಯುದ್ಧ ವಿಮಾನ ಹೊಡೆದಿದ್ದೇವೆ, ಆದರೆ, ಒಬ್ಬ ಪೈಲಟ್‌ನನ್ನು ಮಾತ್ರ ಸೆರೆಹಿಡಿದಿದ್ದೇವೆ. ಇದಷ್ಟೇ ಅಲ್ಲ, ನಮ್ಮ ಜತೆ‌ಯಲ್ಲಿ ಇರುವ ಅಭಿನಂದನ್‌ ವರ್ಧಮಾನ್‌ ಅವರಿಗೆ ಯಾವುದೇ ಹಿಂಸೆಯನ್ನೂ ಕೊಟ್ಟಿಲ್ಲ. ಅಂತಾರಾಷ್ಟ್ರೀಯ ಮಿಲಿಟರಿ ನಿಯಮದ ಪ್ರಕಾರವೇ ನಡೆಸಿಕೊಳ್ಳುತ್ತಿದ್ದೇವೆ ಎಂದು ಹೇಳಿ ಸ್ಪಷ್ಟನೆ ಕೊಟ್ಟರು. 

ಇದಕ್ಕೆ ಕಾರಣವೂ ಇದೆ. ವರ್ಧಮಾನ್‌ ಅವರನ್ನು ಬಂಧಿಸಿದ ಕೂಡಲೇ ಈ ಸಂಗತಿಯನ್ನು ಇಡೀ ಜಗತ್ತಿಗೆ ಹೇಳಬೇಕಿತ್ತು. ಈ ನಿಟ್ಟಿನಲ್ಲಿ ಅಲ್ಲಿ ಏನಾಗುತ್ತಿದೆ ಎಂಬುದನ್ನು ಅವಲೋಕಿಸದೇ, ವರ್ಧಮಾನ್‌ ಅವರಿಗೆ ಹಿಂಸೆ ನೀಡುತ್ತಿರುವ ವಿಡಿಯೋ ದೃಶ್ಯಾವಳಿಗಳನ್ನು ಪಾಕಿಸ್ತಾನ ಮಾಧ್ಯಮಗಳ ಮೂಲಕ ಪ್ರಸಾರ ಮಾಡಿಸಿತು. ಕೇವಲ ಅರ್ಧಗಂಟೆಯಲ್ಲೇ ಈ ವಿಡಿಯೋ ಇಡೀ ಜಗತ್ತಿಗೆ ತಲುಪಿ, ಪಾಕಿಸ್ತಾನದ ವರ್ತನೆಗೆ ಛೀ ಥೂ ಎಂದು ಹೇಳಲು ಶುರು ಮಾಡಿದರು. ಇದರಿಂದ ಆತಂಕಗೊಂಡ ಪಾಕ್‌ ಸೇನೆ, ನಾವು ಅಭಿನಂದನ್‌ ವರ್ಧಮಾನ್‌ ಅವರನ್ನು ಉತ್ತಮವಾಗಿ ನಡೆಸಿಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟನೆ ಕೊಟ್ಟಿತು.

ಇವತ್ತಿನ ಸಾಮಾಜಿಕ ಮಾಧ್ಯಮಗಳ ಭರಾಟೆಯಲ್ಲಿ ಯಾವುದೇ ಸುದ್ದಿಯನ್ನು ಹಿಂದೆ ಮುಂದೆ ನೋಡದೇ ಪ್ರಕಟ ಮಾಡಬಾರದು ಎಂಬುದಕ್ಕೆ ಪಾಕಿಸ್ತಾನದ ಈ ಸುದ್ದಿಗಳೇ ಸಾಕ್ಷಿ. ನಮಗೆ ಹಿನ್ನಡೆಯಾಗುತ್ತಿಲ್ಲ ಎಂದು ಹೇಳುವ ಸಲುವಾಗಿ ಸುಳ್ಳು ಸುದ್ದಿಗಳನ್ನು ಪ್ರಕಟ ಮಾಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮುಜುಗರಕ್ಕೀಡಾಗುತ್ತಿರುವ ಪಾಕಿಸ್ತಾನ ಇನ್ನಾದರೂ ಬುದ್ಧಿ ಕಲಿಯಬೇಕು. 

ಎಲ್ಲದಕ್ಕೂ ಯುದ್ಧವೇ ಪರಿಹಾರವಲ್ಲ ಎಂಬುದು ಇತಿಹಾಸ ನೋಡಿದ ಎಲ್ಲರಿಗೂ ಗೊತ್ತು. ಅದರಲ್ಲೂ ಮಹಾಭಾರತ, ರಾಮಾಯಣ ಓದಿರುವ ಭಾರತದಂಥ ದೇಶದಲ್ಲಿ ಯುದ್ಧದಿಂದ ಏನಾಗುತ್ತದೆ ಎಂಬುದು ಚೆನ್ನಾಗಿಯೇ ಅರಿವಿದೆ. ಆದರೆ, ಉಗ್ರರಿಗೆ ಆಶ್ರಯ ಕೊಟ್ಟು, ಅವರ ಕಡೆಯಿಂದ ಪರೋಕ್ಷ ಸಮರ ನಡೆಸುತ್ತಿರುವ ಪಾಕಿಸ್ತಾನ ಆಡಳಿತ, ಅಲ್ಲಿನ ಸೇನೆ, ಐಎಸ್‌ಐ ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳದಿದ್ದರೆ, ಕೆಲವೊಂದು ಕಠಿಣ ಕ್ರಮಗಳು ಅನಿವಾರ್ಯವಾಗುತ್ತವೆ. ಇಂದು ಭಾರತವೇನೂ ಯುದ್ಧ ಮಾಡಲೇಬೇಕು ಎಂದು ಹೊರಟಿಲ್ಲ. ಆದರೆ, ಪುಲ್ವಾಮಾದಂಥ ದಾಳಿಗೆ ಉಗ್ರರು ಸಜ್ಜಾಗುತ್ತಿದ್ದಾರೆ ಎಂಬ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬಾಲಕೋಟ್‌ನ ಉಗ್ರ ಶಿಬಿರಗಳ ಮೇಲೆ ದಾಳಿ ಮಾಡಿದ್ದು. ಇದನ್ನು ಅರಿತುಕೊಳ್ಳದೇ ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌, ನಮಗೆ ಯುದ್ಧ ಬೇಕಿಲ್ಲ, ಶಾಂತಿಯ ಪ್ರತಿಪಾದಕರು ಎಂದು ಹೇಳಲು ಹೊರಟಿರುವುದು ಕೇವಲ ಹಾಸ್ಯಾಸ್ಪದವಷ್ಟೇ. ಮೊದಲು ಉಗ್ರರಿಗೆ ಅನ್ನ ನೀರು ಕೊಡುವುದನ್ನು ನಿಲ್ಲಿಸಿ, ನಂತರ ಶಾಂತಿ ಸಾಮರಸ್ಯದಿಂದ ಬಾಳ್ಳೋಣ ಎಂದರೆ ಆ ಮಾತಿಗೆ ಒಂದು ಅರ್ಥವಾದರೂ ಬಂದೀತು. 

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.