ಪೊಲೀಸರಲ್ಲಿ ಕೋವಿಡ್‌-19 ರಕ್ಷಕರ ರಕ್ಷಿಸಿ


Team Udayavani, Jun 24, 2020, 7:20 AM IST

ಪೊಲೀಸರಲ್ಲಿ ಕೋವಿಡ್‌-19 ರಕ್ಷಕರ ರಕ್ಷಿಸಿ

ದೇಶದ ಪೊಲೀಸರು ಕೋವಿಡ್ ವಿರುದ್ಧದ ಹೋರಾಟದಲ್ಲಿ ಪಡುತ್ತಿರುವ ಪರಿಶ್ರಮ ನಿಜಕ್ಕೂ ಶ್ಲಾಘನೀಯ. ದುರದೃಷ್ಟವಶಾತ್‌, ಸೋಂಕಿತರ ಸಂಪರ್ಕಕ್ಕೆ ಬರುವ ಸಾಧ್ಯತೆಯೂ ಈ ವರ್ಗದಲ್ಲಿ ಅಧಿಕವಿರುವುದರಿಂದ ಇಂದು ದೇಶಾದ್ಯಂತ ಕೊರೊನಾ ಪೀಡಿತ ಪೊಲೀಸರ ಸಂಖ್ಯೆ ಹೆಚ್ಚುತ್ತಿದೆ. ರಾಜ್ಯದಲ್ಲೂ ಪರಿಸ್ಥಿತಿ ಭಿನ್ನವಾಗಿಲ್ಲ, ಅದರಲ್ಲೂ ರಾಜಧಾನಿಯೊಂದರಲ್ಲೇ ಪೊಲೀಸ್‌ ಇಲಾಖೆಯ 77 ಸಿಬಂದಿಗೆ ಕೋವಿಡ್ ದೃಢಪಟ್ಟಿದ್ದು, 8 ಪೊಲೀಸ್‌ ಠಾಣೆಗಳನ್ನು ಸೀಲ್‌ಡೌನ್‌ ಮಾಡಲಾಗಿದೆ. ಇದುವರೆಗೂ ಈ ಸೋಂಕಿಗೆ ಮೂವರು ಸಿಬಂದಿ ಬಲಿಯಾಗಿದ್ದು, ಈಗ ಕರ್ನಾಟಕ ರಾಜ್ಯ ಮೀಸಲು ಪಡೆಯಲ್ಲಿದ್ದ ಪೇದೆಯೊಬ್ಬರು, ಕೋವಿಡ್ ಸೋಂಕು ದೃಢಪಟ್ಟ ಕಾರಣ ಆತ್ಮಹತ್ಯೆ ಮಾಡಿಕೊಂಡ ದುಃಖಕರ ಘಟನೆ ನಡೆದಿದೆ. ಈ ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು, “ಜೀವವನ್ನೇ ಪಣಕ್ಕಿಟ್ಟು ಶ್ಲಾಘನೀಯ ಕೆಲಸ ಮಾಡುವ ಪೊಲೀಸರಿಗಾಗಿಯೇ ಪ್ರತ್ಯೇಕ ಕೋವಿಡ್‌ ಪರೀಕ್ಷಾ ಕೇಂದ್ರ ಪ್ರಾರಂಭಿಸಲಾಗುತ್ತಿದೆ, ಸೋಂಕಿತರಿಗೆ ಅತ್ಯುತ್ತಮ ಚಿಕಿತ್ಸೆ ನೀಡಲು ಎಲ್ಲ ಕ್ರಮಗಳನ್ನೂ ತೆಗೆದುಕೊಳ್ಳಲಾಗುತ್ತಿದೆ’ ಎಂದು ತಿಳಿಸಿರುವುದು ಸ್ವಾಗತಾರ್ಹ.

ರವಿವಾರ ಒಂದೇ ದಿನ ಬೆಂಗಳೂರಿನ 17 ಮಂದಿ ಪೊಲೀಸರಲ್ಲಿ ಸೋಂಕು ದೃಢಪಟ್ಟ ನಂತರವಂತೂ, ಪೊಲೀಸ್‌ ಇಲಾಖೆಯ ಸಿಬಂದಿಯಲ್ಲಿ ಆತಂಕ ಮಡುಗಟ್ಟಿದೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್‌ ಕಮಿಷನರ್‌ ಭಾಸ್ಕರರಾವ್‌ ಅವರು, ಪೊಲೀಸ್‌ ಸಿಬಂದಿಯ ಸುರಕ್ಷತೆಯ ಹಿತದೃಷ್ಟಿಯಿಂದ 13 ಅಂಶಗಳ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದ್ದು, ಇವುಗಳ ಕಡ್ಡಾಯ ಪಾಲನೆಯಾಗಬೇಕೆಂದು ಹೇಳಿದ್ದಾರೆ. ಮುಖ್ಯವಾಗಿ 55 ವರ್ಷಕ್ಕೂ ಮೇಲ್ಪಟ್ಟ ಸಿಬಂದಿಗೆ ವಿಶ್ರಾಂತಿ, ಠಾಣೆಯ ಹೊರಗಡೆಯೇ ಸಾರ್ವಜನಿಕ ದೂರುಗಳನ್ನು ಆಲಿಸಬೇಕು ಎಂಬ ಅಂಶಗಳು ಈ ಮಾರ್ಗಸೂಚಿಯಲ್ಲಿ ಇವೆ.

ಕೋವಿಡ್ ಹಾವಳಿಯು ದೇಶವಾಸಿಗಳ ಮಾನಸಿಕ ಸ್ಥಿತಿಯ ಮೇಲೂ ಅಪಾರ ಪರಿಣಾಮ ಬೀರುತ್ತಿದೆ. ಅದರಲ್ಲೂ, ಕೊರೊನಾ ಸಂಬಂಧಿತ ಕೆಲಸಗಳಲ್ಲಿ ಮುಂಚೂಣಿ ಸೇನಾನಿಗಳಾಗಿ ದುಡಿಯುತ್ತಿರುವ ಪೊಲೀಸರು, ಆರೋಗ್ಯ ವಲಯದ ಸಿಬಂದಿಗೆ ನಿಸ್ಸಂಶಯವಾಗಿಯೂ ಒತ್ತಡ ಅಧಿಕವಿದೆ. ಆದರೆ, ಇದು ಖನ್ನತೆಯಾಗಿ ಬದಲಾಗದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವಿದೆ. ಸುರಕ್ಷತ ಕ್ರಮಗಳನ್ನು ಪಾಲಿಸುವುದರಿಂದ ಕೊರೊನಾದಿಂದ ದೂರವಿರಬಹುದು. ಇನ್ನು ಕೊರೊನಾ ಎನ್ನುವುದು ಮಾರಕ ರೋಗವೇನೂ ಅಲ್ಲ ಎನ್ನುವುದು ನೆನಪಿರಲಿ.

ಇದೇನೇ ಇದ್ದರೂ, ಕೊರೊನಾ ಕುರಿತು ಪೊಲೀಸ್‌ ಇಲಾಖೆ ಸೇರಿದಂತೆ, ಮುಂಚೂಣಿ ಹೋರಾಟದಲ್ಲಿರುವ ಎಲ್ಲಾ ಸಿಬಂದಿಗೆ ಮಾನಸಿಕವಾಗಿಯೂ ಬಲ ತುಂಬಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ, ಸರಕಾರ ಯೋಚಿಸಬೇಕಿದೆ. ಸಾಧ್ಯವಾದರೆ, ಮನೋವೈದ್ಯರು, ಕೌನ್ಸೆಲಿಂಗ್‌ನ ಸಹಾಯವೂ ಸಿಗುವಂತೆ ನೋಡಿಕೊಳ್ಳುವುದು ಉತ್ತಮ. ಒಟ್ಟಾರೆ ವ್ಯವಸ್ಥೆಯು, ನಮ್ಮ ರಕ್ಷಕರ ರಕ್ಷಣೆಗೆ ದೃಢ ನಿಶ್ಚಯದಿಂದ ನಿಲ್ಲಬೇಕಾಗಿದೆ.

ಟಾಪ್ ನ್ಯೂಸ್

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.