ಕೋವಿಡ್ ಮಾರ್ಗಸೂಚಿ: ಪದೇ ಪದೆ ಎಡವುತ್ತಿರುವ ಸರಕಾರ


Team Udayavani, Apr 23, 2021, 6:40 AM IST

ಕೋವಿಡ್ ಮಾರ್ಗಸೂಚಿ: ಪದೇ ಪದೆ ಎಡವುತ್ತಿರುವ ಸರಕಾರ

ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ತೀವ್ರಗತಿಯಲ್ಲಿ ವ್ಯಾಪಿಸುತ್ತಿದೆ. ರೂಪಾಂತರಿತ ವೈರಸ್‌ ಕಳೆದ ಬಾರಿಯ ವೈರಸ್‌ಗಿಂತ ಅತ್ಯಂತ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಪೀಡಿತರು ಮತ್ತು ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ದಿನೇ ದಿನೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸೋಂಕಿನ ಹರಡುವಿಕೆಗೆ ತಡೆ ಒಡ್ಡುವ ಪ್ರಯತ್ನವಾಗಿ ಸರಕಾರ ಕೆಲವೊಂದು ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೆ ತಂದಿದೆ. ಆದರೆ ಕೋವಿಡ್ ಎರಡನೇ ಅಲೆ ರಾಜ್ಯದಲ್ಲಿ ಕಾಣಿಸಿಕೊಂಡಾಗಿನಿಂದಲೂ ಪರಿಸ್ಥಿತಿಯ ನಿಭಾವಣೆಯಲ್ಲಿ ರಾಜ್ಯ ಸರಕಾರ ನಿರಂತರವಾಗಿ ಎಡವುತ್ತಲೇ ಬಂದಿದೆ. ಸೋಂಕು ನಿಯಂತ್ರಣದ ಕ್ರಮವಾಗಿ ದಿನಕ್ಕೊಂದರಂತೆ  ಮಾರ್ಗಸೂಚಿ, ನಿಯಮಾವಳಿ ಗಳನ್ನು ಜಾರಿಗೊಳಿಸುತ್ತ, ಅದನ್ನು ಮತ್ತೆ ಮಾರ್ಪಡಿಸುತ್ತ ಬಂದಿದ್ದು ಜನರನ್ನು ಗೊಂದಲದ ಮಡುವಿಗೆ ದೂಡಿದೆ.

ಸೋಂಕಿನ ಎರಡನೇ ಅಲೆ ವ್ಯಾಪಿಸಲಾರಂಭಿಸಿದಂತೆ ರಾಜ್ಯ ಸರಕಾರ ಕೋವಿಡ್‌ ಪ್ರಕರಣಗಳು ಹೆಚ್ಚಾಗಿರುವ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ರೂಪಿಸಿ ಜಾರಿಗೊಳಿಸಿತು. ಇದಾದ ಕೆಲವೇ ದಿನ‌ಗಳಲ್ಲಿ ನಿಯಮಾವಳಿಗಳಲ್ಲಿ ಹಲವು ಬದಲಾವಣೆಗಳನ್ನು ಮಾಡಿದ ಸರಕಾರ ಪರಿಸ್ಥಿತಿಯನ್ನು ಮತ್ತಷ್ಟು ಗೋಜಲನ್ನಾಗಿಸಿತು. ಕಳೆದ ಬಾರಿಯಂತೆ ಈ ಬಾರಿಯೂ ಸಂಪುಟದ ಸಚಿವರಲ್ಲೇ ಸಮನ್ವಯದ ಕೊರತೆ ಇರುವುದು ಹಲವಾರು ಬಾರಿ ಸಾಬೀತಾಯಿತು. ಒಂದು ಹಂತದಲ್ಲಿ ಸರಕಾರದ ಮೂಲದಿಂದಲೇ ಮಾರ್ಗಸೂಚಿ ಪ್ರಕಟಗೊಂಡಿದ್ದು, ಅದಾದ ಅರ್ಧ ಗಂಟೆಯಲ್ಲಿ ಅದು ನಕಲಿ ಎಂದು ಸರಕಾರವೇ ಸ್ಪಷ್ಟಪಡಿಸಿತು. ಎರಡು ದಿನಗಳ ಹಿಂದೆಯಷ್ಟೇ ರಾಜ್ಯಪಾಲರ ನೇತೃತ್ವದಲ್ಲಿ ನಡೆದ ಸರ್ವ ಪಕ್ಷಗಳ ಸಭೆಯ ಬಳಿಕ ಸರಕಾರ ಐದು ದಿನಗಳ ಕಾಲ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ, ವಾರಾಂತ್ಯದ ದಿನಗಳಾದ ಶನಿವಾರ ಮತ್ತು ರವಿವಾರ ಗ ಳಂದು ದಿನವಿಡೀ ಕರ್ಫ್ಯೂ ಇರುವುದಾಗಿ ಘೋಷಿಸಿ ಆದೇಶ ಹೊರ ಡಿಸಿತು. ಈ ಮಾರ್ಗಸೂಚಿಯಲ್ಲೂ ಯಾವುದೇ ಸ್ಪಷ್ಟತೆ ಇಲ್ಲದೆ ಜನರು ನಿಯಮಾವಳಿ ಗಳನ್ನು ಅರಿತುಕೊಳ್ಳಲು ಹರಸಾಹಸ ಪಡುವಂತಾಯಿತು. ಬೆನ್ನಲ್ಲೇ ಬುಧವಾರ ಸಂಜೆಯ ವೇಳೆ ಕೊರೊನಾ ನಿರ್ಬಂಧಗಳಲ್ಲಿ ಮತ್ತೆ ಬದಲು ಮಾಡಿದ ಸರಕಾರ ಇನ್ನಷ್ಟು ಕಠಿನ ನಿಯಮಗಳನ್ನು ಸೇರ್ಪಡೆಗೊಳಿಸಿತು.

ಇವೆಲ್ಲದರ ನಡುವೆ  ರಾಜ್ಯ ಸರಕಾರ ಮೇ 4ರ ವರೆಗೆ ಅಗತ್ಯ ಸೇವೆ ಯನ್ನು ಹೊರತುಪಡಿಸಿದಂತೆ ಉಳಿದೆಲ್ಲವುಗಳನ್ನೂ ಬಂದ್‌ ಮಾಡಿ ಅಧಿ ಸೂಚನೆಯನ್ನು ಹೊರಡಿಸಿತು. ಈ ಆದೇಶ ಹೊರ ಬೀಳುತ್ತಿದ್ದಂತೆಯೇ ರಾಜ್ಯದ ಹಲವೆಡೆ ಅಂಗಡಿ ಮುಂಗಟ್ಟುಗಳನ್ನು ಬಲವಂತವಾಗಿ ಬಂದ್‌ ಮಾಡಿಸಲಾಯಿತು. ಅಷ್ಟು ಮಾತ್ರವಲ್ಲದೆ ಪೇಟೆಯಲ್ಲಿದ್ದ ಜನರನ್ನೂ ಅವರವರ ಮನೆಗೆ ತೆರಳುವಂತೆ ಸೂಚನೆ ನೀಡಲಾಯಿತು. ಸದ್ಯ ಸರಕಾರ ಮತ್ತು ಆಡಳಿತ ವ್ಯವಸ್ಥೆ ಎಲ್ಲದಕ್ಕೂ ಜನರೇ ಹೊಣೆ ಎಂದು ಬೆಟ್ಟು ಮಾಡಿ ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತಿರುವುದಂತೂ ವಿಪ ರ್ಯಾ ಸವೇ ಸರಿ. ರಾಜ್ಯದ ಆರೋಗ್ಯ ವ್ಯವಸ್ಥೆ ಯಲ್ಲಿನ ಎಲ್ಲ ಲೋಪ ದೋಷಗಳು ಈಗ ಒಂದೊಂದಾಗಿ ಬಹಿರಂಗಗೊಳ್ಳುತ್ತಿವೆ. ಆಸ್ಪತ್ರೆಗಳಲ್ಲಿ ಹಾಸಿಗೆ ಕೊರತೆ, ಆಮ್ಲಜನಕ ಕೊರತೆ, ಜನ ಸಾಮಾನ್ಯರಿಗೆ ಸೂಕ್ತ ಚಿಕಿತ್ಸೆ ದೊರೆಯ ದಿರುವುದು.. ಹೀಗೆ ಹತ್ತು ಹಲವು ಸಮಸ್ಯೆಗಳು ಎದುರಾಗಿವೆ. ಇವೆ ಲ್ಲವನ್ನೂ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾದ ಸಚಿವರು ಮತ್ತು ಅಧಿಕಾರಿಗಳು ಕೇವಲ ಸಭೆ, ಹೇಳಿಕೆಗಳಿಗೆ ಸೀಮಿತ ವಾಗಿದ್ದಾರೆ. ರಾಜ್ಯದ ಜನತೆಯ ಆರೋಗ್ಯದ ದೃಷ್ಟಿ ಯಿಂದ ವಿವೇಚನೆಯ ನಿರ್ಧಾರವನ್ನು ಸರಕಾರ ಕೈಗೊಳ್ಳಬೇಕಿದೆ. ಇದು ಈಗಿನ ತುರ್ತು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.