ರಾಜ್ಯದಲ್ಲಿ ಕೋವಿಡ್‌ ಆತಂಕ ಸಂಘಟಿತ ಪ್ರಯತ್ನ ಮುಖ್ಯ


Team Udayavani, Jun 29, 2020, 5:47 AM IST

ರಾಜ್ಯದಲ್ಲಿ ಕೋವಿಡ್‌ ಆತಂಕ ಸಂಘಟಿತ ಪ್ರಯತ್ನ ಮುಖ್ಯ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕರ್ನಾಟಕದಲ್ಲಿ ಕೋವಿಡ್‌-19 ಪ್ರಕರಣಗಳು ಏರಿಕೆಯಾಗುತ್ತಲೇ ಇವೆ.

ಈ ಕಾರಣಕ್ಕಾಗಿಯೇ ಸರಕಾರ, ಜುಲೈ 5ರಿಂದ ಮುಂದಿನ ನಾಲ್ಕು ರವಿವಾರಗಳಂದು ಪೂರ್ಣ ದಿನ ಲಾಕ್‌ಡೌನ್‌ ಘೋಷಿಸಿದೆ.

ಈ ರೀತಿಯ ನಿರ್ಧಾರ ಅಗತ್ಯವಾಗಿತ್ತು, ಅದರಲ್ಲೂ ಜೂನ್‌ ತಿಂಗಳ 3ನೇ ವಾರದಿಂದ ಕರ್ನಾಟಕದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಹಠಾತ್ತನೆ ಏರಿಕೆ ಕಂಡು ಬಂದಿದೆ.

ಜೂನ್‌ 1ರಿಂದ ಜೂನ್‌ 27ರ ನಡುವೆಯೇ 8700ಕ್ಕೂ ಅಧಿಕ ಹೊಸ ಪ್ರಕರಣಗಳು ಪತ್ತೆಯಾಗಿವೆ. ಆದರೆ ಇದೇ ಅವಧಿಯಲ್ಲೇ ಚೇತರಿಸಿಕೊಂಡವರ ಪ್ರಮಾಣವೂ ಉತ್ತಮವಾಗಿದೆಯಾದರೂ, ಸವಾಲು ಇಷ್ಟಕ್ಕೇ ಮುಗಿದಿದೆ ಎಂದೇನೂ ಇಲ್ಲ.

ಇದುವರೆಗೂ ರಾಜ್ಯದ 3 ಜಿಲ್ಲೆಗಳಲ್ಲಿ, ಅಂದರೆ ಬೆಂಗಳೂರು, ಕಲಬುರಗಿ ಹಾಗೂ ಉಡುಪಿಯಲ್ಲಿ ಸಹಸ್ರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆಯಲ್ಲಿ ಈ ಜಿಲ್ಲೆಗಳಲ್ಲೇ 5 ಸಾವಿರಕ್ಕೂ ಅಧಿಕ ಜನರಿದ್ದಾರೆ.

ಆದಾಗ್ಯೂ, ಇವರಲ್ಲಿ ಚೇತರಿಸಿಕೊಂಡವರ ಪ್ರಮಾಣವೂ ಗಣನೀಯವಾಗಿದೆ ಎನ್ನುವುದನ್ನು ಉಲ್ಲೇಖೀಸಲೇಬೇಕು. ಆದರೆ, ಚೇತರಿಕೆ ಪ್ರಮಾಣ ಗಮನಾರ್ಹವಾಗಿ ತಗ್ಗಿದರೂ, ನಿತ್ಯ ಸೋಂಕಿತರು ಪತ್ತೆಯಾಗುತ್ತಲೇ ಇರುವುದು ಕೊರೊನಾ ಹಾವಳಿ ಮುಗಿಯುವ ಲಕ್ಷಣವಿಲ್ಲ ಎನ್ನುವುದನ್ನು ಸೂಚಿಸುತ್ತಿದೆ.

ರಾಜ್ಯದ ಆರೋಗ್ಯ ಇಲಾಖೆಯು ಪ್ರತಿ ದಿನ ಏನಿಲ್ಲವೆಂದರೂ ಸರಾಸರಿ ಹದಿನೈದು ಸಾವಿರದಷ್ಟು ಪರೀಕ್ಷೆಗಳನ್ನು ನಡೆಸುತ್ತಿದ್ದು, ಪ್ರತಿ ಹತ್ತು ಲಕ್ಷ ಜನಸಂಖ್ಯೆಯಲ್ಲಿ 8 ಸಾವಿರಕ್ಕೂ ಅಧಿಕ ಜನರ ಪರೀಕ್ಷಿಸುತ್ತಿದೆ.

ಆದರೂ, ನೆರೆಯ ಆಂಧ್ರಪ್ರದೇಶ, ತಮಿ­ಳು­ನಾಡಿಗೆ ಹೋಲಿಸಿದರೆ, ರಾಜ್ಯದಲ್ಲಿ ನಿತ್ಯ ಪರೀಕ್ಷೆಗಳ ಸಂಖ್ಯೆ ಕಡಿಮೆಯೇ ಇದೆ. ಹೆಚ್ಚು ಟೆಸ್ಟ್‌ಗಳನ್ನು ನಡೆಸುವುದು ಕೋವಿಡ್ 19 ವಿರುದ್ಧದ ಹೋರಾಟಕ್ಕೆ ಪ್ರಮುಖ ಅಸ್ತ್ರವೆನ್ನುವುದು ಸಾಬೀತಾಗುತ್ತಿರುವುದರಿಂದ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಟೆಸ್ಟ್‌ಗಳ ಸಂಖ್ಯೆ ವೃದ್ಧಿಸಬೇಕಾಗಿದೆ.

ಇದೇನೇ ಇದ್ದರೂ, ಈಗಲೂ ರಾಜ್ಯದಲ್ಲಿ ಕೋವಿಡ್‌-19 ಮರಣ ಪ್ರಮಾಣ 1.6 ಪ್ರತಿಶತದಷ್ಟಿದೆ. ಹಾಗೆಂದು, ಇದೇನೂ ಸಮಾಧಾನಪಡಬೇಕಾದ ವಿಚಾರವೇನೂ ಅಲ್ಲ. ಏಕೆಂದರೆ ಪ್ರತಿ ಜೀವವೂ ಅಮೂಲ್ಯವಾದದ್ದು.

ಸೋಂಕಿತರ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚುವಲ್ಲಿ, ಸೂಕ್ತ ಚಿಕಿತ್ಸೆ ನೀಡುವಲ್ಲಿ ರಾಜ್ಯದ ಪರಿಶ್ರಮವನ್ನು ಐಸಿಎಂಆರ್‌ ಸೇರಿದಂತೆ ವಿವಿಧ ಸಂಸ್ಥೆಗಳು ಹಾಗೂ ಕೇಂದ್ರ ಸರ್ಕಾರವೂ ಶ್ಲಾಘಿಸಿದೆ. ಇದರ ನಡುವೆಯೇ ನೆನಪಿಡಬೇಕಾದ ಅಂಶವೆಂದರೆ, ಸರ್ಕಾರ-ಆರೋಗ್ಯ ಇಲಾಖೆಗಳ ಪರಿಶ್ರಮವಿದ್ದರೆ ಏನೂ ಸಾಲದು.

ಮುಖ್ಯವಾಗಿ, ಜನರ ಪೂರ್ಣ ಸಹಭಾಗಿತ್ವ ಈ ಹೋರಾಟಕ್ಕೆ ಅತ್ಯಗತ್ಯ. ಸರಕಾರ ಹೆಚ್ಚು ಟೆಸ್ಟಿಂಗ್‌ಗಳನ್ನೇನೋ ಮಾಡಬಹುದು, ಆದರೆ ಸಾಮಾಜಿಕ ಅಂತರದ ಪಾಲನೆ, ಮಾಸ್ಕ್ ಧರಿಸುವುದು, ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳುವುದು, ಅನಗತ್ಯವಾಗಿ ಹೊರಗೆ ಅಡ್ಡಾಡದಿರುವುದು.. ಇವೆಲ್ಲ ಜನರು ಪಾಲಿಸಬೇಕಾದ ಕ್ರಮಗಳು.

ಈ ಕಾರಣಕ್ಕಾಗಿಯೇ, ಮುಂಜಾಗ್ರತಾ ಕ್ರಮಗಳನ್ನು ಚಾಚೂತಪ್ಪದೇ ಪಾಲಿಸುವುದರಲ್ಲೇ ಜಾಣತನವಿದೆ. ರಾಜ್ಯದ ಜನರ, ಆರೋಗ್ಯ ಇಲಾಖೆಯ ಹಾಗೂಆಡಳಿತದ ಸಂಘಟಿತ ಪ್ರಯತ್ನದಿಂದ ಮಾತ್ರವೇ ಗೆಲುವು ಸಾಧ್ಯ.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.