ಕೋವಿಡ್ ಹಾವಳಿ ಆಗಿದ್ದ ಭಯ ಈಗೇಕಿಲ್ಲ?


Team Udayavani, Jun 23, 2020, 5:46 AM IST

ಕೋವಿಡ್ ಹಾವಳಿ ಆಗಿದ್ದ ಭಯ ಈಗೇಕಿಲ್ಲ?

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್‌-19 ವೇಗ ತಗ್ಗುವ ಲಕ್ಷಣವೇ ಕಾಣುತ್ತಿಲ್ಲ. ತಗ್ಗುವುದಿರಲಿ, ಊಹೆಗೂ ಮೀರಿದ ವೇಗವನ್ನು ಈ ವೈರಸ್‌ ಪಡೆದುಬಿಟ್ಟಿದೆ.

ಈಗ ರಾಜ್ಯದಲ್ಲೂ ನಿತ್ಯ ಸೋಂಕು ಬೆಳವಣಿಗೆ ವೇಗ ಪಡೆದಿದೆ (ಶೇ. 4). ಇದೇ ವೇಗದಲ್ಲೇ ಮುಂದುವರಿದರೆ ಆಗಸ್ಟ್‌ 15ರ ವೇಳೆಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20-25 ಸಾವಿರ ತಲುಪಬಹುದು ಎಂದು ಕರ್ನಾಟಕ ಕೋವಿಡ್‌-19 ವಾರ್‌ ರೂಂ ಎಚ್ಚರಿಸಿದೆ. ಆದರೆ ನಿಸ್ಸಂಶಯವಾಗಿಯೂ ಅಷ್ಟೇ ಸಂಖ್ಯೆಯನ್ನು ತಲುಪಲಿದ್ದೇವೆ ಎಂದೇನೂ ಇಲ್ಲ.

ಇಲ್ಲಿಯವರೆಗೂ ಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ರಾಜ್ಯ ಸರಕಾರ ಹಾಗೂ ಆರೋಗ್ಯ ವಲಯವು ಮೂರು ತಿಂಗಳಿಂದ ಎಲ್ಲ ರೀತಿಯ ನಿಯಂತ್ರಣ ಕ್ರಮಗಳು, ಸೋಂಕಿತರ ಸಂಪರ್ಕಕ್ಕೆ ಬಂದವರ ಪತ್ತೆ, ತ್ವರಿತ ಚಿಕಿತ್ಸೆಯ ಮೂಲಕ ಸೋಂಕು ಪ್ರಸರಣ ವೇಗವನ್ನು ಹತ್ತಿಕ್ಕುವಲ್ಲಿ ಸಫ‌ಲವಾಗಿದೆ.

ಈ ಪ್ರಯತ್ನಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಮಾಡುವುದರಿಂದ, ಪರಿಶ್ರಮಕ್ಕೆ ವೇಗ ಕೊಡುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆಯನ್ನು ಆ ಹಂತಕ್ಕೆ ತಲುಪುವುದನ್ನು ನಿಲ್ಲಿಸಬಹುದಾಗಿದೆ.

ಹಾಗೆಂದು, ಎಲ್ಲವನ್ನೂ ಸರಕಾರವೇ ಮಾಡಬೇಕು ಎಂದು ಭಾವಿಸುವುದು ತಪ್ಪು. ಕೋವಿಡ್‌-19 ವಿರುದ್ಧ ಜಯ ಸಾಧಿಸಲು ಜನಸಹಭಾಗಿತ್ವವೂ ಅಷ್ಟೇ ಮುಖ್ಯ. ದುರದೃಷ್ಟವಶಾತ್‌, ಅತೀ ಹೆಚ್ಚು ಪೀಡಿತ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಭಾಗಗಳಲ್ಲಿ ಜನ ನಿಷ್ಕಾಳಜಿ ಮೆರೆಯುತ್ತಿರುವ ವರದಿಗಳು ಬರುತ್ತಿವೆ.

ಆರ್ಥಿಕತೆಯನ್ನು ಹಳಿಗೇರಿಸಲು ಸರಕಾರ ಬಹುತೇಕ ವಲಯಗಳಿಗೆ ಚಾಲನೆ ನೀಡಿದೆ ಎನ್ನುವುದೇನೋ ಸರಿ, ಹಾಗೆಂದಾಕ್ಷಣ ಎಲ್ಲಾ ಸರಿ ಹೋಗಿಬಿಟ್ಟಿದೆ ಎಂದರ್ಥವಲ್ಲ. ಈಗ ಕೋವಿಡ್ 19 ಪಡೆಯುತ್ತಿರುವ ವೇಗವನ್ನು ಗಮನಿಸಿದರೆ, ನಾವು ಮೊದಲಿಗಿಂತ ಹೆಚ್ಚು ಜಾಗರೂಕರಾಗಿ ಇರಬೇಕಾದ ಅಗತ್ಯವಿದೆ.

ದುರಂತವೆಂದರೆ, ಕಟ್ಟುನಿಟ್ಟಾದ ಲಾಕ್‌ಡೌನ್‌ ಸಮಯದಲ್ಲಿ ಕೋವಿಡ್ ಬಗ್ಗೆ ಜನರಿಗಿದ್ದ ಆತಂಕ ಈಗ ದೂರವಾಗಿಬಿಟ್ಟಿದೆಯೇನೋ ಅನ್ನಿಸುತ್ತಿದೆ. ಏಕೆಂದರೆ, ಸುಖಾಸುಮ್ಮನೇ ಹೊರಗೆ ತಿರುಗುವುದು, ಸಾಮಾಜಿಕ ಅಂತರ ನಿಯಮಗಳನ್ನು ಉಲ್ಲಂಘಿಸುವುದು, ನೆಪಕ್ಕೆಂಬಂತೆ ಮಾಸ್ಕ್ ಧರಿಸುವುದು (ಪೊಲೀಸರನ್ನು ಕಂಡಾಗ) ಇಂಥ ವರ್ತನೆಗಳು ಬಹುತೇಕ ಕಡೆಗಳಲ್ಲಿ ಕಾಣಿಸುತ್ತಿವೆ.

ಹೊರಹೋಗಿ ಬಂದಾಕ್ಷಣ ಸ್ವಚ್ಛವಾಗಿ ಸೋಪಿನಿಂದ ಕೈತೊಳೆಯುತ್ತಿದ್ದವರು, ಈಗ ನೆಪ ಮಾತ್ರಕ್ಕೆ ಕೈತೊಳೆಯುತ್ತಿದ್ದಾರೆ ಅಥವಾ ಅದೂ ಇಲ್ಲ. ಕೋವಿಡ್ 19 ವಿರುದ್ಧದ ಹೋರಾಟವು ನಿರ್ಣಾಯಕ ಹಂತ ತಲುಪುತ್ತಿರುವ ವೇಳೆಯಲ್ಲಿ ಜನಸಾಮಾನ್ಯರು ಈ ರೀತಿ ವರ್ತಿಸಿದರೆ, ದೇಶದ ಪ್ರಯತ್ನಕ್ಕೆ ದೇಶವಾಸಿಗಳೇ ಅಡ್ಡಗಾಲು ಹಾಕಿದಂತಾಗುತ್ತದಷ್ಟೆ.

ಆದಾಗ್ಯೂ, ಇಂಥದೊಂದು ಅಸಡ್ಡೆಯ ಮನೋಭಾವನೆ ನಿರ್ಮಾಣವಾಗಲಿದೆ ಎಂದು ಮನಶ್ಯಾಸ್ತ್ರಜ್ಞರು ಮೊದಲೇ ಎಚ್ಚರಿಸಿದ್ದರು ಎನ್ನುವುದು ವಿಶೇಷ. ಇದನ್ನು ಅವರು ‘Caution Fatigue’ ಎಂದು ಕರೆಯುತ್ತಾರೆ.

ಸರಳವಾಗಿ ಹೇಳಬೇಕೆಂದರೆ, ಒಂದು ವಿಪತ್ತಿನ ಕುರಿತು ಆರಂಭದಲ್ಲಿ ಇರುವ ಆತಂಕ, ಎಚ್ಚರಿಕೆ ದಿನಗಳೆದಂತೆ ಹಲವು ಕಾರಣಗಳಿಂದಾಗಿ ಕಡಿಮೆಯಾಗುತ್ತಾ ಹೋಗುತ್ತದೆ. ಪರಿಣಾಮವಾಗಿ, ಮನಸ್ಸು ವಿಪತ್ತಿಗೂ ಮುನ್ನ ನಾವು ಹೇಗಿದ್ದೆವೋ ಹಾಗೆಯೇ ಬದುಕಲು ಪ್ರೇರೇಪಿಸುತ್ತಿದೆ. ಇದರ ದುಷ್ಪರಿಣಾಮವನ್ನೇ ನಾವೀಗ ನೋಡುತ್ತಿದ್ದೇವೆ. ಆದರೆ, ನೆನಪಿರಲಿ ಆರಂಭದ ದಿನಗಳಲ್ಲಿ ಭಯ ನಮ್ಮಲ್ಲಿ ಒಂದು ಶಿಸ್ತನ್ನು, ಮುನ್ನೆಚ್ಚರಿಕೆಯ ಭಾವನೆಯನ್ನು ಸೃಷ್ಟಿಸಿತ್ತು. ಹಾಗೆಂದು, ಭಯವೇ ನಮ್ಮನ್ನು ಹೆಚ್ಚು ದಿನ ನಿರ್ದೇಶಿಸುವುದಿಲ್ಲ. ಹೀಗಾಗಿ, ಈಗ ನಮ್ಮ ನಡೆಯನ್ನು ಬುದ್ಧಿವಂತಿಕೆಯೇ ನಿರ್ದೇಶಿಸುವಂತಾಗಲಿ.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.