ರಾಜ್ಯಕ್ಕೆ ಬಂದ ಲಸಿಕೆ ಸುಗಮ ವಿತರಣೆಯಾಗಲಿ


Team Udayavani, Jan 13, 2021, 6:50 AM IST

ರಾಜ್ಯಕ್ಕೆ ಬಂದ ಲಸಿಕೆ ಸುಗಮ ವಿತರಣೆಯಾಗಲಿ

ಕೋವಿಡ್ ವೈರಸ್‌ ವಿರುದ್ಧದ ಹೋರಾಟಕ್ಕೆ ಸಿದ್ಧಗೊಂಡಿದ್ದ ಮದ್ದು, ಪ್ರಯೋಗಾಲಯಗಳಿಂದ ಹೊರಬಂದಾಯಿತು. ಮಂಗಳವಾರ ವಿಮಾನ ಮೂಲಕ ವಿವಿಧ ರಾಜ್ಯಗಳಿಗೆ ಲಸಿಕೆ ಸರಬರಾಜಾಗಿದೆ. ಪುಣೆಯಿಂದ 56 ಲಕ್ಷ ಡೋಸ್‌ ಲಸಿಕೆ ದೇಶದ 13 ನಗರಗಳಿಗೆ ತಲುಪಿದೆ. ಅಂತೆಯೇ ಕರ್ನಾಟಕದ  ಒಂದು ಪಾಲು ಬೆಂಗಳೂರಿಗೆ ಬಂದಿದೆ. ಇನ್ನೊಂದು ಪಾಲು ಬುಧವಾರ ಬೆಳಗಾವಿಗೆ ಬರಲಿದೆ. ಈಗ ರಾಜ್ಯ ಸರಕಾರದ ಮುಂದಿರುವುದು ಲಸಿಕೆ ಸುಗಮ ವಿತರಣೆ ಸವಾಲು.

ಬಂದಿರುವ 6.48 ಲಕ್ಷ ಡೋಸ್‌ ಲಸಿಕೆಯ ಸಂಗ್ರಹಕ್ಕೆ  ರಾಜ್ಯಮಟ್ಟದ ಸಂಗ್ರಹಾಗಾರಗಳನ್ನು ಬೆಂಗಳೂರು, ಬೆಳಗಾವಿಯಲ್ಲಿ ತೆರೆಯಲಾಗಿದೆ. ಜತೆಗೆ ಐದು ಪ್ರಾದೇಶಿಕ, 22 ಜಿಲ್ಲಾ, ಒಂದು ಮಹಾನಗರ ಪಾಲಿಕೆ ಸಂಗ್ರಹಾಗಾರವಿದೆ. 2,676 ಕೋಲ್ಡ್‌ಚೈನ್‌ ಪಾಯಿಂಟ್‌ಗಳನ್ನು ನಿಯೋಜಿಸಲಾಗಿದೆ. ಹಂತ ಹಂತವಾಗಿ ಇವುಗಳ ಮೂಲಕ ಜಿಲ್ಲಾಸ್ಪತ್ರೆಯಿಂದ, ಪ್ರಾಥಮಿಕ ಆರೋಗ್ಯ ಕೇಂದ್ರಗಳವರೆಗೂ ಲಸಿಕೆ ತಲುಪಿಸಲು ಆರೋಗ್ಯ ಇಲಾಖೆ ವ್ಯವಸ್ಥೆ ರೂಪಿಸಿದೆ. ಈ ವೇಳೆ ಸಂಗ್ರಹಾಗಾರಗಳ ಯಂತ್ರೋಪ ಕರಣಗಳು ಮತ್ತು ಸಾಗಣೆಗೆ ವ್ಯವಸ್ಥೆಗೆ ಮಾಡಿರುವ ಶೀತಲೀಕರಣ ಟ್ರಕ್‌ಗಳ ಗುಣಮಟ್ಟ ಕಾಯ್ದು ಕೊಳ್ಳುವುದು, ಸಮಯಪಾಲನೆಯಂತಹ ಪ್ರಮುಖ ಜವಾಬ್ದಾರಿ ಆರೋಗ್ಯ ಇಲಾಖೆ ಮೇಲಿದೆ.

ಈಗಾಗಲೇ ಲಸಿಕೆ ವಿತರಣೆ ಹಿನ್ನೆಲೆಯಲ್ಲಿ ಒಂದು ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ನೀಡಿರುವ ತರಬೇತಿ, ಎರಡು ಬಾರಿ ನಡೆದಿರುವ ಲಸಿಕೆ ತಾಲೀಮು (ಡ್ರೈ ರನ್‌) ವಿತರಣೆ ಕಾರ್ಯಕ್ಕೆ ಖಂಡಿತ ನೆರವಾಗಲಿದೆ. ಲಸಿಕೆ ವಿತರಣೆಗೆ ಎದುರಾಗಬಹುದಾದ ಸವಾಲುಗಳನ್ನು ಆರೋಗ್ಯ ಸಿಬಂದಿ ಅರಿತುಕೊಂಡಿದ್ದು, ಪರಿಹಾರವನ್ನು ಕಂಡುಕೊಂಡಿದ್ದಾರೆ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಉದ್ದೇಶಿಸಿರುವುದರಿಂದ ಗೊಂದಲ ಉಂಟಾಗುವ ಸಾಧ್ಯತೆ ತೀರಾ ಕಡಿಮೆ.

ಮೊದಲ ಹಂತದಲ್ಲಿ  ರಾಜ್ಯದಲ್ಲಿ 16.9 ಲಕ್ಷ ಮಂದಿಗೆ ಲಸಿಕೆ ವಿತರಿಸಲು ಉದ್ದೇಶಿಸಲಾಗಿದೆ. ಈ ಪೈಕಿ 6.6 ಲಕ್ಷ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರ ನೋಂದಣಿಯು ಆಗಿದೆ. ನೋಂದಣಿಯಾಗಿರುವವರಿಗೆ ಸದ್ಯ ಬಂದಿರುವ ಲಸಿಕೆ ಸಾಲಲಿದೆಯಾದರೂ, ಉದ್ದೇಶಿರುವ 16.9 ಲಕ್ಷ ಮಂದಿಗೆ ಕೊರತೆಯಾಗಬಹುದು. ಅಷ್ಟರಲ್ಲಿ ಕೇಂದ್ರ ಸರಕಾರವು ರಾಜ್ಯದ

ಇನ್ನಷ್ಟು ಪಾಲನ್ನು ಕಳುಹಿಸಿ ಕೊಡಬೇಕಿದೆ. ಈ ವಿಚಾ ರದಲ್ಲಿ ರಾಜ್ಯ ಸರಕಾರ ತ್ವರಿತವಾಗಿ ಕೇಂದ್ರದೊಡನೆ ಸಂವಹನ ನಡೆಸಬೇಕಾದ ಅಗತ್ಯವಿರುತ್ತದೆ.

ಈ ಮಧ್ಯೆ ಲಸಿಕೆಯು ಕಳ್ಳಮಾರ್ಗದಲ್ಲಿ ಇತರರ ಪಾಲಾಗದಂತೆ ನೋಡಿಕೊಳ್ಳುವಲ್ಲಿ ರಾಜ್ಯ ಸರಕಾರ ಎಚ್ಚರಿಕೆ ವಹಿಸಬೇಕಿದೆ. ಸಾರ್ವಜನಿಕರು ಲಸಿಕೆ ಪಡೆಯುವ ವಿಚಾರದಲ್ಲಿ ದುಂಬಾಲು ಬೀಳುವ ಅಗತ್ಯವಿಲ್ಲ. ಕೋವಿಡ್ ಯೋಧರ ಬಳಿಕ ಸಾರ್ವಜನಿಕರಿಗೂ ಹಂತಾನುಹಂತವಾಗಿ ಲಸಿಕೆ ಪೂರೈಸಲು ಕೇಂದ್ರ ಸರಕಾರ ಬದ್ಧವಾಗಿದೆ.

ಶತಮಾನದಲ್ಲಿಯೇ ಅತ್ಯಂತ ಹೆಚ್ಚು ಕಾಡಿದ ಸೋಂಕು ಕೋವಿಡ್ ಆಗಿದ್ದು, ಇದಕ್ಕೆ ಅತೀ ಕಡಿಮೆ ಅವಧಿಯಲ್ಲಿ ಲಸಿಕೆ ಸಿದ್ದಗೊಂಡಿದೆ. ಆರಂಭದಲ್ಲಿ ಲಸಿಕೆ ಕುರಿತು ಅಪಸ್ವರಗಳು ಕೇಳಿಬಂದರೂ ಪ್ರತಿಷ್ಠಿತ ಪ್ರಯೋಗಾಲಯಗಳು, ತಜ್ಞರ ಅಭಿಪ್ರಾಯದಿಂದ ಬಹುತೇಕ ಜನರಲ್ಲಿ ಲಸಿಕೆ ಬಗ್ಗೆ ವಿಶ್ವಾಸ ಬಂದಿದೆ. ವಿತರಣೆ ಸಂದರ್ಭದಲ್ಲಿ ಸರಕಾರ ಗೊಂದಲಗಳಿಗೆ ಅವಕಾಶ ನೀಡದಂತೆ, ಅಂತೆಯೇ ಸಾರ್ವಜನಿಕರೂ ಕೂಡ ಗಾಳಿಸುದ್ದಿಗಳಿಗೆ ಕಿವಿಗೊಡದಿದ್ದರೆ ಲಸಿಕೆ ವಿತರಣೆ ಯಶಸ್ವಿಯಾಗಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.