ಲಸಿಕೆ ನೋಂದಣಿ ಪ್ರಕ್ರಿಯೆ ಸರಳೀಕರಣವಾಗಬೇಕು


Team Udayavani, Mar 5, 2021, 6:50 AM IST

ಲಸಿಕೆ ನೋಂದಣಿ ಪ್ರಕ್ರಿಯೆ ಸರಳೀಕರಣವಾಗಬೇಕು

ಹಿರಿಯ ನಾಗರಿಕರಿಗೆ ಕೋವಿಡ್‌ ಲಸಿಕೆ ನೀಡಿಕೆ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ಕಳೆದ ನಾಲ್ಕು ದಿನಗ ಳಿಂದ ಹಿರಿಯ ನಾಗರಿಕರು ಉತ್ಸಾಹದಿಂದ ಭಾಗವಹಿಸುತ್ತಿದ್ದಾರೆ. ಮೊದಲ ದಿನ 2,000ದಷ್ಟು ಮಂದಿ ಭಾಗವಹಿಸಿದ್ದರೆ, ಗುರುವಾರ ನಾಲ್ಕನೇ ದಿನ 11,000 ಮಂದಿಯಷ್ಟು ನಾಗರಿಕರು ಲಸಿಕೆ ಸ್ವೀಕರಿಸಿರುವುದು ಅವರಲ್ಲಿನ ಉತ್ಸಾಹದ ಪ್ರತೀಕ. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಸ್ವೀಕರಿಸದೆ ಇಡೀ ಪ್ರಕ್ರಿಯೆ ಬಗ್ಗೆ  ಆತಂಕಕ್ಕೆ ಕಾರಣವಾಗಿದ್ದರು. ಸರಕಾರ ಹಾಗೂ ಆಡಳಿತ ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರೂ ಆರೋಗ್ಯ ಕಾರ್ಯಕರ್ತರು ನಿರಾಶದಾಯಕ ಪ್ರತಿಕ್ರಿಯೆ ನೀಡಿದ್ದರು. ಆದರೆ ಹಿರಿಯ ನಾಗರಿಕರು ಸಕಾರಾತ್ಮಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಆದರೆ 45 ವರ್ಷ ವಯೋಮಿತಿಯ ಇತರ ಆರೋಗ್ಯ ಸಮಸ್ಯೆಗಳುಳ್ಳ ಮಂದಿ ಲಸಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುತ್ತಿರುವ ಪ್ರಮಾಣ ಕುಂಠಿತವಾಗಿದ್ದು, ಈ ಬಗ್ಗೆ ವಿಶ್ಲೇಷಿಸಬೇಕಾಗಿದೆ. ರಾಷ್ಟ್ರಪತಿ ಕೋವಿಂದ್‌, ಪ್ರಧಾನಿ ನರೇಂದ್ರ ಮೋದಿ ಸಹಿತ ಹಲವು ಗಣ್ಯರು ಲಸಿಕೆ ಪಡೆದುಕೊಳ್ಳುವ ಮೂಲಕ ಇಡೀ ಸಮಾಜಕ್ಕೆ ಹೊಸ ಭರವಸೆ ಮೂಡಿಸಿದ್ದಾರೆ. ಇದೇ ಸಂದರ್ಭದಲ್ಲಿ ಲಸಿಕೆ ಪ್ರಕ್ರಿಯೆಯಲ್ಲಿ ಕಾಣಿಸುತ್ತಿರುವ ಹಲವು ಸಮಸ್ಯೆ ಗಳನ್ನು ಕೂಡಲೇ ಬಗೆಹರಿಸಬೇಕಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ಸಾಕಷ್ಟು ವ್ಯತ್ಯಯಗಳಾಗುತ್ತಿರುವುದು ಎದ್ದು ಕಾಣುತ್ತಿದೆ. ಸರ್ವರ್‌ ಸಮಸ್ಯೆಯಿಂದ ನೋಂದಣಿ ಪ್ರಕ್ರಿಯೆ ಸುಲಲಿತವಾಗಿಲ್ಲ ಎಂಬ ದೂರಿದೆ. ಈ ನಿಟ್ಟಿನಲ್ಲಿ  ತಾಂತ್ರಿಕ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಬೇಕಿದೆ. ಈಗಾಗಲೇ ದಿನದ 24 ಗಂಟೆಯೂ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ದೊರೆತಿರುವುದು ಅನುಕೂಲಕರವೇ. ಆದರೆ ನೋಂದಣಿ ಸಹ ನಿರಾಯಾಸವಾಗಿ ದಿನದ 24 ಗಂಟೆಯೂ ಆಗುವಂತಿದ್ದರೆ ಹಿರಿಯ ನಾಗರಿಕರು ಆಸ್ಪತ್ರೆಯಲ್ಲಿ ಅಲೆದಾಡುವುದು ತಪ್ಪುತ್ತದೆ. ಹಲವು ಆಸ್ಪತ್ರೆಗಳಲ್ಲಿ ಲಸಿಕೆ ಪಡೆದುಕೊಳ್ಳುವುದಕ್ಕಿಂತ ನೋಂದಣಿಗೆ ಗಂಟೆಗಟ್ಟಲೆ ಕಾಯುವ ಪರಿಸ್ಥಿತಿ ಇದೆ. ಇದನ್ನು ತಪ್ಪಿಸಬೇಕಾದರೆ ಪ್ರತೀ ಆಸ್ಪತ್ರೆಯಲ್ಲೂ  ನಾಲ್ಕರಿಂದ ಐದು ಕೌಂಟರ್‌ಗಳನ್ನು ತೆರೆಯಬೇಕು.

ಬಹುತೇಕ ಹಿರಿಯ ನಾಗರಿಕರಿಗೆ ಸ್ವಂತ ಮೊಬೈಲ್‌ ನಂಬರ್‌, ಹ್ಯಾಂಡ್‌ಸೆಟ್‌ಗಳಿರುವುದಿಲ್ಲ ಎನ್ನುವುದು ಲಸಿಕಾ ಕೇಂದ್ರಗಳಲ್ಲಿ ದಿನವೂ ಕಂಡುಬರುತ್ತಿರುವ ಚಿತ್ರಣ. ಅವರು ಮನೆಮಂದಿಯ ಮೊಬೈಲನ್ನು ಆಶ್ರಯಿಸಬೇಕಾಗಿದೆ. ಮನೆಮಂದಿ ರಜೆ ಹಾಕಿ ಆಸ್ಪತ್ರೆಗೆ ಬಂದರೆ ಬರೆ ನೋಂದಣಿಗಾಗಿಯೇ ದಿನಕಳೆದ ಉದಾಹರಣೆಗಳಿವೆ. ಹೀಗಾಗಿ  ಅಂಚೆ ಕಚೇರಿ, ಬೆಂಗಳೂರು ಒನ್‌, ಕರ್ನಾಟಕ ಒನ್‌ನಂಥ ಕೇಂದ್ರಗಳಲ್ಲೂ ನೋಂದಣಿ ಆರಂಭಿಸಿದರೆ ಉತ್ತಮ. ಈಗಾಗಲೇ ಜಿಲ್ಲಾ, ತಾಲೂಕು ಆರೋಗ್ಯ ಕೇಂದ್ರಗಳಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೂ ವಿಸ್ತರಿಸಿದರೆ ಗ್ರಾಮೀಣ ಭಾಗದ ಹಿರಿಯ ನಾಗರಿಕರಿಗೆ ಅನುಕೂಲವಾಗುತ್ತದೆ.

ಇತರ ಆರೋಗ್ಯ ಸಮಸ್ಯೆ ಇರುವ ನಾಗರಿಕರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವುದು ಯೋಚನೆಗೀಡು ಮಾಡುವ ವಿಷಯ. ಇಲ್ಲಿ ಹಲವರಿಗೆ ಯಾವ ಆರೋಗ್ಯ ಸಮಸ್ಯೆ ಇದ್ದವರು ಲಸಿಕೆ ಪಡೆದುಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಜಾಗೃ ತಿ ಮೂಡಿಸ ಬೇಕು ಹಾಗೂ ಅನಾರೋಗ್ಯ ದೃಢೀಕರಣ ಪತ್ರದ ನೀಡಿಕೆಯನ್ನು ಸರಳೀಕರಣಗೊಳಿಸಬೇಕಾಗಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.