ಕೋವಿಡ್ ಯೋಧರು ಹುತಾತ್ಮ; ಪರಿಹಾರ ವಿಳಂಬ ಸಲ್ಲ


Team Udayavani, Oct 19, 2020, 6:34 AM IST

ಕೋವಿಡ್ ಯೋಧರು ಹುತಾತ್ಮ; ಪರಿಹಾರ ವಿಳಂಬ ಸಲ್ಲ

ಸಾಂದರ್ಭಿಕ ಚಿತ್ರ

ಯೋಧರ ಸೇವೆಯನ್ನು ಗೌರವಿಸುವ ಮತ್ತು ಅವರ ಬಲಿದಾನವನ್ನು ರಾಷ್ಟ್ರಪ್ರೇಮ ಹಾಗೂ ಭಾವನಾತ್ಮಕತೆಯ ಹಿನ್ನೆಲೆಯಲ್ಲಿ ಸ್ಮರಿಸುವ ಪರಂಪರೆ ನಮ್ಮದು. ಗಡಿ ಕಾಯುವ ಯೋಧರು ಮತ್ತವರ ಕುಟುಂಬದವರ ಬಗ್ಗೆ ದೇಶದ ಪ್ರತಿಯೊಬ್ಬರೂ ವಿಶೇಷ ಗೌರವ ಹೊಂದಿರುತ್ತಾರೆ. ಸದ್ಯ ದೇಶವನ್ನು ಕಾಡುತ್ತಿರುವ ಕೊರೊನಾ ವಿರುದ್ಧ ಸರಕಾರಗಳಿಗೆ ಹೆಗಲು ಕೊಟ್ಟು ತಮ್ಮ ಪ್ರಾಣದ ಹಂಗು ತೊರೆದು ಕಳೆದ ಆರೇಳು ತಿಂಗಳಿಂದ ಅಹರ್ನಿಶಿ ದುಡಿಯುತ್ತಿರುವ ಮುಂದಾಳುಗಳನ್ನು “ಕೊರೊನಾ ಯೋಧರು’ ಎಂದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಕರೆದಿವೆ. ಅದಕ್ಕೆ ಪೂರಕವಾಗಿ ಸಮಾಜ ಸಹ ಅವರನ್ನು ಯೋಧರಂತೆ ಕಂಡು ಗೌರವಿಸುತ್ತಿದೆ.

ಅನೇಕ ಸಂದರ್ಭಗಳಲ್ಲಿ ಕೊರೊನಾ ಯೋಧರ ಆರೋಗ್ಯ, ಆರೈಕೆ ಗೌಣವಾಗಿರುವ ನಿದರ್ಶನಗಳು ಕಂಡಿದ್ದೇವೆ. ಪ್ರಾಣ ಕಳೆದುಕೊಂಡ ಕೊರೊನಾ ಯೋಧರನ್ನು “ಹುತಾತ್ಮ’ರೆಂದು ಘೋಷಿಸುವ ಒತ್ತಾಯಗಳು ಕೇಳಿ ಬರುತ್ತಿವೆ. ಕೋವಿಡ್‌-19 ವಿರುದ್ಧದ ಸಮರದಲ್ಲಿ ಮುಂಚೂಣಿಯಲ್ಲಿರುವ ವೈದ್ಯರು, ದಾದಿಯರು, ಆಶಾ ಕಾರ್ಯಕರ್ತೆಯರು ಕೋವಿಡ್‌ ಕರ್ತವ್ಯದಲ್ಲಿದ್ದಾಗ ಅಥವಾ ಕೊರೊನಾ ಸೋಂಕಿಗೆ ತುತ್ತಾಗಿ ಪ್ರಾಣ ಕಳೆದುಕೊಂಡರೆ ಅಂತಹವರ ಕುಟುಂಬದವರಿಗೆ ಕೇಂದ್ರ ಸರಕಾರದ ಪ್ರಧಾನಮಂತ್ರಿ ಗರೀಬ್‌ ಕಲ್ಯಾಣ ಯೋಜನೆಯಡಿ 50 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಆದರೆ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಸಿಬಂದಿ, ಹೋಮ್‌ ಗಾರ್ಡ್‌, ನಾಗರಿಕ ರಕ್ಷಣಾ ಸಿಬಂದಿ, ಪೊಲೀಸ್‌ ಅಧಿಕಾರಿಗಳು, ಆಗ್ನಿ ಶಾಮಕ ಸಿಬಂದಿ, ಕಾರಾಗೃಹದ ಸಿಬಂದಿ, ಪೌರಕಾರ್ಮಿಕರು ಕೋವಿಡ್‌ ಕರ್ತವ್ಯದಲ್ಲಿದ್ದಾಗ ಅಥವಾ ಸೋಂಕಿನಿಂದ ಪ್ರಾಣ ಕಳೆದುಕೊಂಡರೆ ಅಂತಹವರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡುವ ಯೋಜನೆಯನ್ನು ರಾಜ್ಯ ಸರಕಾರ ಜಾರಿಗೆ ತಂದಿತು.

ಕೇಂದ್ರ ಮತ್ತು ರಾಜ್ಯ ಸರಕಾರದ ಯೋಜನೆ ವ್ಯಾಪ್ತಿಗೆ ಬರುವ ಕೊರೊನಾ ಯೋಧರ ಕೆಲಸ ಒಂದೇ ಆಗಿರುವಾಗ ಪರಿಹಾರದಲ್ಲಿ ವ್ಯತ್ಯಾಸ ಏಕೆ? ರಾಜ್ಯ ಸರಕಾರದ ವ್ಯಾಪ್ತಿಗೆ ಬರುವ ಕೊರೊನಾ ಯೋಧರಿಗೂ ಕೇಂದ್ರದ ಮಾದರಿಯಲ್ಲಿ 50 ಲಕ್ಷ ರೂ. ಪರಿಹಾರ ನೀಡುವ ಬಗ್ಗೆ ಪರಿಶೀಲಿಸಿ ಎಂದು ಹೈಕೋರ್ಟ್‌ ಹೇಳಿತ್ತು. ಆದರೆ ಹಣಕಾಸಿನ ಕೊರತೆ ಹಿನ್ನೆಲೆಯಲ್ಲಿ ಪರಿಹಾರ ಹೆಚ್ಚಳ ಸಾಧ್ಯವಿಲ್ಲ ಎಂದು ರಾಜ್ಯ ಸರಕಾರ ಹೇಳಿದೆ. ಯೋಧರು ಎಂದು ಕರೆದು ಪರಿಹಾರದಲ್ಲಿ ತಾರತಮ್ಯ ಎಷ್ಟು ಸರಿ ಅನ್ನುವುದನ್ನು ಸರಕಾರ ಸ್ವಯಂಪ್ರಶ್ನೆ ಮಾಡಿಕೊಳ್ಳಲಿ. ಈವರೆಗೆ ಪ್ರಾಣ ಕಳೆದುಕೊಂಡ ಕೊರೊನಾ ಯೋಧರ ಎಷ್ಟು ಕುಟುಂಬಗಳಿಗೆ ಸಕಾಲದಲ್ಲಿ ಪರಿಹಾರ ಸಿಕ್ಕಿದೆ ಎಂಬ ಲೆಕ್ಕವನ್ನೂ ಜನರ ಮುಂದಿಡುವ ಕೆಲಸ ಸರಕಾರ ಮಾಡಲಿ.

ಸರಕಾರವೇ ಘೋಷಿಸಿದ ಕೊರೊನಾ ಯೋಧರ ವಿಚಾರ ಹೀಗಿದ್ದರೆ, ಕೊರೊನಾ ಯೋಧರಂತೆ ಕೆಲಸ ಮಾಡುವ ಬಹುದೊಡ್ಡ ನೌಕರ ವರ್ಗ ವ್ಯವಸ್ಥೆಯ ಉಪೇಕ್ಷೆಗೆ ಒಳಗಾಗಿರುವುದು ಸುಳ್ಳಲ್ಲ. ಸರಕಾರಿ ನೌಕರರು ಕೊರೊನಾ ಸೋಂಕಿಗೆ ಒಳಗಾದರೆ ಚಿಕಿತ್ಸಾ ವೆಚ್ಚ ಮಾತ್ರ ಸರಕಾರ ಭರಿಸುತ್ತಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಬರುವ ಸ್ವಾಯತ್ತ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಸಿಬಂದಿ ಸುವರ್ಣ ಅರೋಗ್ಯ ಸುರಕ್ಷಾ ಟ್ರಸ್ಟ್‌ ಯೋಜನೆಯಡಿ ನಗದು ರಹಿತ ಚಿಕಿತ್ಸೆ ಪಡೆದುಕೊಳ್ಳಲು ಅರ್ಹರಾಗಿರುತ್ತಾರೆ ಎಂದು ಸರಕಾರ ಇತ್ತಿಚಿಗಷ್ಟೇ ಹೇಳಿದೆ. ಕೇಂದ್ರ ಮತ್ತು ರಾಜ್ಯ ಸರಕಾರಗಳ ಪರಿಹಾರ ಯೋಜನೆ ವ್ಯಾಪ್ತಿಗೆ ಒಳಪಡದ ಸರಕಾರಿ ನೌಕರರು, ಶಾಲಾ ಶಿಕ್ಷಕರು, ಪೌರ ಕಾರ್ಮಿಕರು ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳ, ಪಂಚಾಯಿತಿಗಳ ಇತರ ಸಿಬಂದಿ ಸೇರಿದಂತೆ ಕೋವಿಡ್‌-19 ಕರ್ತವ್ಯಕ್ಕೆ ಬಳಿಸಿಕೊಳ್ಳುವ ಪ್ರತಿಯೊಬ್ಬ ಸಿಬಂದಿ, ನೌಕರರನ್ನು “ಕೋವಿಡ್ ಯೋಧರು’ ಎಂದು ಸರಕಾರ ಪರಿಗಣಿಸಿಬೇಕು. ಪರಿಹಾರ ನೀಡುವ ವಿಚಾರದಲ್ಲಿ ವಿಳಂಬ ಧೋರಣೆ ಸಲ್ಲದು. ಮೃತ ಒಬ್ಬ ವ್ಯಕ್ತಿ ಅಲ್ಲ, ಸಂತ್ರಸ್ತ ಒಂದು ಕುಟುಂಬ ಎಂಬುದನ್ನು ಸರಕಾರ ಗಮನಿಸಬೇಕು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.