ಕೋವಿಡ್‌ ರೋಗಿಯ ಮಾನಸಿಕ ಸ್ವಾಸ್ಥ್ಯ; ಶಿಫಾರಸುಗಳು ಜಾರಿಯಾಗಲಿ


Team Udayavani, Oct 2, 2020, 6:29 AM IST

ಕೋವಿಡ್‌ ರೋಗಿಯ ಮಾನಸಿಕ ಸ್ವಾಸ್ಥ್ಯ; ಶಿಫಾರಸುಗಳು ಜಾರಿಯಾಗಲಿ

ಸಾಂದರ್ಭಿಕ ಚಿತ್ರ

ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಎದುರಾಗಿರುವ ಬಹುದೊಡ್ಡ ಸವಾಲೆಂದರೆ, ರೋಗ ಲಕ್ಷಣ ಇದ್ದರೂ ಜನರು ಪರೀಕ್ಷೆಗೆ ಮುಂದಾಗದೇ ಇರುವುದು. ಇದಕ್ಕೆ ಹಲವು ಕಾರಣಗಳಿವೆ. ರೋಗದ ಕುರಿತು ಅಸಡ್ಡೆಯ ಭಾವನೆ ಒಂದೆಡೆಯಾದರೆ, ಇನ್ನೊಂದೆಡೆ ಸಾಮಾಜಿಕ ತಿರಸ್ಕಾರಕ್ಕೆ ಗುರಿಯಾಗುವ, ಆಸ್ಪತ್ರೆ ಅಥವಾ ಕ್ವಾರಂಟೈನ್‌ ಕೇಂದ್ರಗಳಲ್ಲಿ ಒಂಟಿಯಾಗಿ ಇರಬೇಕಾಗುತ್ತದೇನೋ ಎಂಬ ಭಯವೂ ಇರುವುದು ಸ್ಪಷ್ಟ. ಎಲ್ಲಕ್ಕಿಂತ ಹೆಚ್ಚಾಗಿ, ಕೋವಿಡ್‌ ಸೋಂಕಿತರನ್ನು ಭೇಟಿಯಾಗಲು ಕುಟುಂಬಸ್ಥರಿಗೆ ಅನುಮತಿ ನೀಡದೇ ಇರುವುದು, ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ಮನೆಯವರ ಉಪಸ್ಥಿತಿಯಿಲ್ಲದೇ ನಡೆದುಹೋಗುತ್ತಿರುವಂಥ ದೃಶ್ಯಾವಳಿಗಳು ಜನರಲ್ಲಿ ಒಂದು ರೀತಿಯ ಹಿಂಜರಿಕೆ ಮೂಡಲು ಕಾರಣವಾಗಿದೆ.

ಕೋವಿಡ್‌ ಮರಣಾಂತಿಕವಲ್ಲ ಎನ್ನುವುದು ನಿಜವಾದರೂ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತ ವ್ಯಕ್ತಿಗಳಿಗೆ ದೈಹಿಕ ತೊಂದರೆಗಳಿಗಿಂತ ಹೆಚ್ಚಾಗಿ ಒಂಟಿತನ, ಆತಂಕ ಹಾಗೂ ಖನ್ನತೆಯಂಥ ಮಾನಸಿಕ ಸಮಸ್ಯೆಗಳು ಹೆಚ್ಚಾಗಿ ಬಾಧಿಸುತ್ತಿವೆ ಎನ್ನುತ್ತವೆ ಇತ್ತೀಚಿನ ಕೆಲವು ವರದಿಗಳು. ಇದನ್ನು ಮನಗಂಡ ತಜ್ಞರ ಸಮಿತಿ, ಆಸ್ಪತ್ರೆಯಲ್ಲಿರುವ ಸೋಂಕಿತರ ಭೇಟಿಗೆ ಕುಟುಂಬಸ್ಥರಿಗೆ ಅವಕಾಶ ನೀಡಬೇಕು (ಸುರûಾ ಸಾಧನಗಳನ್ನು ಧರಿಸಿ), ಆರೋಗ್ಯ ಸ್ಥಿರವಾಗಿರುವ ರೋಗಿಗಳಿಗೆ ಮನೆ ಊಟ ನೀಡಬೇಕು ಹಾಗೂ ಬಹುಮುಖ್ಯ ವಾಗಿ ಪಿಪಿಇ ಕಿಟ್‌ ಧರಿಸಿ ಸೋಂಕಿತರ ಸಂಬಂಧಿಗಳಿಗೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅನುಮತಿ ನೀಡಬೇಕು ಎಂದು ರಾಜ್ಯ ಸರಕಾರಕ್ಕೆ ಶಿಫಾರಸು ಮಾಡಿದೆ. ಖನ್ನತೆ, ಆತಂಕ, ಒತ್ತಡದಂಥ ಸಮಸ್ಯೆಗಳು ರೋಗನಿರೋಧಕ ಶಕ್ತಿಯ ಮೇಲೆಯೂ ಋಣಾತ್ಮಕ ಪರಿಣಾಮ ಬೀರುವುದರಿಂದ ಈ ನಿಟ್ಟಿನಲ್ಲಿ ಇಂಥದ್ದೊಂದು ಶಿಫಾರಸು ಮಾಡಿರುವುದು ಸ್ವಾಗತಾರ್ಹ. ಕುಟುಂಬಸ್ಥರನ್ನು ಭೇಟಿಯಾಗುವುದರಿಂದ ರೋಗಿಗೆ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ, ಅವರು ಸುರಕ್ಷಿತವಾಗಿದ್ದಾರೆ ಎಂಬುದು ಖಾತ್ರಿಯಾದಂತೆ, ಬೇಗನೇ ಚೇತರಿಸಿ ಕೊಳ್ಳಬೇಕು ಎಂಬ ಲವಲವಿಕೆ ಆತನಲ್ಲಿ ಕಾಣಿಸಿಕೊಳ್ಳುತ್ತದೆ ಎನ್ನುತ್ತಾರೆ ಮನೋವೈದ್ಯರು.

ಈಗ ಎಂದಲ್ಲ, ಆರಂಭದಿಂದಲೂ ದೇಶದಲ್ಲಿ ದೈಹಿಕ ಆರೋಗ್ಯಕ್ಕೆ ಸಿಕ್ಕ ಗಮನ, ಮಾನಸಿಕ ಆರೋಗ್ಯಕ್ಕೆ ದೊರೆತೇ ಇಲ್ಲ. ಕೋವಿಡ್‌ ಸಂಕಷ್ಟವಂತೂ ದೇಶವಾಸಿಗಳ ಮಾನಸಿಕ ಆರೋಗ್ಯದ ಮೇಲೆ ಭಾರೀ ಪ್ರಹಾರ ಮಾಡುತ್ತಿದೆ. ಈ ಕಾರಣಕ್ಕಾಗಿಯೇ ಮಾನಸಿಕ ಆರೋಗ್ಯ ರಕ್ಷಣೆಯತ್ತಲೂ ಗಮನಹರಿಸುವುದು ಅಗತ್ಯವಾಗಿದೆ. ಸೋಂಕು ತಗಲಿದಾಗಲಷ್ಟೇ ಅಲ್ಲ, ಚೇತರಿಸಿಕೊಂಡ ಅನಂತರವೂ ತಮ್ಮ ನೆರೆಹೊರೆಯವರು, ಸಹೋದ್ಯೋಗಿಗಳು ತಮ್ಮನ್ನು ತಪ್ಪಿತಸ್ಥರಂತೆ ನೋಡುತ್ತಿದ್ದಾರೆ ಎಂದು ಅನೇಕರು ಬೇಸರ ವ್ಯಕ್ತಪಡಿಸುತ್ತಾರೆ. ಆರಂಭದಿಂದಲೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಇದು ರೋಗದ ವಿರುದ್ಧದ ಹೋರಾಟವೇ ಹೊರತು ರೋಗಿಯ ವಿರುದ್ಧದ ಹೊರಾಟವಲ್ಲ ಎಂದು ಜಾಗೃತಿ ಮೂಡಿಸುತ್ತಲೇ ಬಂದರೂ ಇಂಥ ಮನಃಸ್ಥಿತಿಗಳು ಕಾಣಿಸುತ್ತಿರುವುದು ದುರಂತ.

ನೆನಪಿರಲಿ, ಇದು ಜಗತ್ತಿಗೇ ಆವರಿಸಿರುವ ಕಂಟಕ. ಸೋಂಕಿತರಿಗೆ ನಾವೆಲ್ಲ ಮಾನಸಿಕವಾಗಿ ಬಲ ತುಂಬಿದರೆ, ರೋಗದ ಸುತ್ತಲೂ ಹಬ್ಬಿಕೊಂಡಿ ರುವ ಮಾನಸಿಕ ತುಮುಲಗಳು ಪರಿಹಾರವಾಗುತ್ತಾ ಹೋದರೆ, ನಿಸ್ಸಂಶಯ ವಾಗಿಯೂ ರೋಗದ ವಿರುದ್ಧದ ಹೋರಾಟದಲ್ಲಿ ನಾವು ದಾಪುಗಾಲಿಡಲಿದ್ದೇವೆ. ಒಟ್ಟಲ್ಲಿ, ಈಗ ರಾಜ್ಯ ಸರಕಾರದ ಎದುರಿರುವ ಶಿಫಾರಸುಗಳಿಗೆ ಅಂಕಿತ ಬೀಳಲೇಬೇಕಿದೆ. ಈ ವಿಷಯದಲ್ಲಿ ಯಾವುದೇ ಕಾರಣಕ್ಕೂ ವಿಳಂಬ ಆಗುವುದು ಬೇಡ.

ಟಾಪ್ ನ್ಯೂಸ್

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್

kohli

ಸೋಷಿಯಲ್‌ ಮೀಡಿಯಾದಲ್ಲಿ ತಮ್ಮ 10 ನೇ ತರಗತಿ ಅಂಕಪಟ್ಟಿ ಹಂಚಿಕೊಂಡ ಕಿಂಗ್‌ ಕೊಹ್ಲಿ!

Bhuvneshwar Kumar Replaces Adien Markram As Captain Of Sunrisers Hyderabad?

ಹೈದರಾಬಾದ್ ತಂಡದ ನಾಯಕತ್ವ ಬದಲಾವಣೆ? ಮಾಕ್ರಮ್ ಬದಲು ಕಾಣಸಿಕೊಂಡ ಭುವನೇಶ್ವರ್

BIHULLU

ಬೈ ಹುಲ್ಲು ತುಂಬಿದ್ದ ಲಾರಿ ಬೆಂಕಿಗಾಹುತಿ: ಲಕ್ಷಾಂತರ ರೂಪಾಯಿ ನಷ್ಟ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನ್ಯಾಯ, ಪಾರದರ್ಶಕವಾಗಿ ಚುನಾವಣೆ ನಡೆಯಲಿ

ನ್ಯಾಯ, ಪಾರದರ್ಶಕವಾಗಿ ಚುನಾವಣೆ ನಡೆಯಲಿ

ಆಧಾರ್‌-ಪಾನ್‌ ಜೋಡಣೆ ಗಡುವು ವಿಸ್ತರಣೆ: ಇನ್ನು ವಿಳಂಬ ಸಲ್ಲದು

ಆಧಾರ್‌-ಪಾನ್‌ ಜೋಡಣೆ ಗಡುವು ವಿಸ್ತರಣೆ: ಇನ್ನು ವಿಳಂಬ ಸಲ್ಲದು

ಹಣದ ಸಾಗಾಟದ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಿ

ಹಣದ ಸಾಗಾಟದ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಿ

ಪ್ರತ್ಯೇಕತಾವಾದಕ್ಕೆ ಆಸ್ಪದ ಬೇಡ ಖಲಿಸ್ಥಾನಿ ಬೆಂಬಲಿಗರನ್ನು ಮಟ್ಟ ಹಾಕಿ

ಪ್ರತ್ಯೇಕತಾವಾದಕ್ಕೆ ಆಸ್ಪದ ಬೇಡ ಖಲಿಸ್ಥಾನಿ ಬೆಂಬಲಿಗರನ್ನು ಮಟ್ಟ ಹಾಕಿ

bjp cong

ಸಂಪಾದಕೀಯ : ರಾಜಕೀಯ ಪಕ್ಷಗಳ ಇಬ್ಬಂದಿತನ – ಪ್ರಬುದ್ಧತೆ ಅಲ್ಲ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-qwqe-wqewqe

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

M P K umar

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

sonda

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

1-sdasdas

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್