ಸಂಚಾರ ನಿಯಮ ಪಾಲನೆ ಅಗತ್ಯ ಸಾರಿದ ಮಿಸ್ತ್ರಿ ದುರಂತ


Team Udayavani, Sep 6, 2022, 6:00 AM IST

ಸಂಚಾರ ನಿಯಮ ಪಾಲನೆ ಅಗತ್ಯ ಸಾರಿದ ಮಿಸ್ತ್ರಿ ದುರಂತ

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷ ಸೈರಸ್‌ ಮಿಸ್ತ್ರಿ ಅವರು ರವಿವಾರ ನಡೆದ ರಸ್ತೆ ಅಪಘಾತದಲ್ಲಿ ಅಸುನೀಗಿದ್ದಾರೆ. ಅವರ ನಿಧನಕ್ಕೆ ಕಾರಣ ವಾದದ್ದು ಸಂಚಾರ ನಿಯಮದ ಉಲ್ಲಂಘನೆ ಎಂಬ ಅಂಶ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ವ್ಯಕ್ತವಾಗಿದೆ. ಅವರು ಪ್ರಯಾಣಿ ಸುತ್ತಿದ್ದ ಮರ್ಸಿಡಿಸ್‌ ಬೆಂಜ್‌ ಕಾರಿನ ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ಮಿಸ್ತ್ರಿ ಮತ್ತು ಸಹ ಪ್ರಯಾಣಿಕ ಸೀಟ್‌ ಬೆಲ್ಟ್ ಹಾಕಿರಲಿಲ್ಲ, ಹೀಗಾಗಿಯೇ ಅವರಿಗೆ ಅದು ಪ್ರತಿಕೂಲವಾಯಿತು ಎಂಬ ಅಂಶ ವ್ಯಕ್ತವಾಗುತ್ತಿದೆ.

ಸಂಚಾರ ನಿಯಮಗಳ ಪಾಲನೆ ಬಗ್ಗೆ ನಮ್ಮ ದೇಶದಲ್ಲಿ ಎಷ್ಟು ನಿರ್ಲಕ್ಷ್ಯ ಇದೆ ಎಂಬುದಕ್ಕೆ ಮಿಸ್ತ್ರಿ ಅವರ ದುರಂತ ಸಾವಿನ ಒಂದು ಘಟನೆ ಸಾಕ್ಷಿಯೇ ಆಗಿದೆ ಎಂಬುದನ್ನು ವಿಷಾದಪೂರ್ವಕವಾಗಿ ಹೇಳಲೇಬೇಕಾದ ಅನಿ ವಾರ್ಯ ಸ್ಥಿತಿ ಉಂಟಾಗಿದೆ. ಅವರು ಪ್ರಯಾಣಿಸುತ್ತಿದ್ದ ಕಾರು ಸಾಮಾನ್ಯರು ಖರೀದಿ ಮಾಡಲು ಸಾಧ್ಯವಿಲ್ಲದಷ್ಟು ದುಬಾರಿ ಎನ್ನುವುದು ಸತ್ಯ. ದುಬಾರಿ ಬೆಲೆಯ ಕಾರು ಅದು ಆಗಿದ್ದರೂ ಹಿಂದಿನ ಸೀಟುಗಳಲ್ಲಿ ಏರ್‌ಬ್ಯಾಗ್‌ಗಳು ಇರಲಿಲ್ಲ ಎನ್ನಲಾಗುತ್ತಿದೆ. ದೊಡ್ಡ ಮೊತ್ತ ನೀಡಿ ಖರೀದಿ ಮಾಡಿದ ಕಾರಿನ ಹಿಂದಿನ ಸೀಟುಗಳಲ್ಲಿ ಏರ್‌ಬ್ಯಾಗ್‌ ಇರಲಿಲ್ಲ ಎಂದರೆ ಅದು ಆಲೋಚಿಸಬೇಕಾದ ಅಂಶವಾಗಿದೆ.

ಮಿತಿ ಮೀರಿದ ವೇಗದಿಂದ ಕಾರು ಚಲಾಯಿಸುತ್ತಿದ್ದದ್ದೂ ದುರಂತಕ್ಕೆ ಕಾರಣ. ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯ ಪ್ರಕಾರ 20 ಕಿ.ಮೀ. ದೂರವನ್ನು ಮಿಸ್ತ್ರಿ ಅವರ ಕಾರು ಕೇವಲ 9 ನಿಮಿಷಗಳಲ್ಲಿ ಕ್ರಮಿಸಿದೆ. ಹೀಗಾಗಿ ಹೈಎಂಡ್‌ ಕಾರುಗಳಲ್ಲಿ ವೇಗದ ಮಿತಿಗೆ ಅವಕಾಶ ಇಲ್ಲ ಎಂಬ ಅಂಶವೂ ಕಳವಳಕ್ಕೆ ಕಾರಣವಾಗಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳಲ್ಲಿ ಅಸುನೀಗುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿಯೇ ಎಂಟು ಆಸನ ಸಾಮರ್ಥ್ಯದ ಸಣ್ಣ ಕಾರುಗಳಲ್ಲಿ ಕೂಡ ಆರು ಏರ್‌ಬ್ಯಾಗ್‌ಗಳು ಕಡ್ಡಾಯ ಎಂಬ ನಿಯಮ ಜಾರಿ ಮಾಡಲು ಕೇಂದ್ರ ಸರಕಾರ ತೀರ್ಮಾನಿಸಿದೆ. ಈ ಬೆಳವಣಿಗೆಯೂ ಒಂದು ರೀತಿಯಲ್ಲಿ ಸಮಾಧಾನಕರ ಅಂಶ. ಆದರೆ ಗ್ರಾಹಕರ ಜೇಬಿಗೆ ಹೊರೆ ಎನ್ನುವುದೂ ಸತ್ಯವಾದ ವಿಚಾರ. ಸದ್ಯ ಸಾಮಾನ್ಯ ಕಾರುಗಳಲ್ಲಿ ಚಾಲಕ ಮತ್ತು ಸಹ ಪ್ರಯಾಣಿಕನಿಗೆ ಮಾತ್ರ ಏರ್‌ ಬ್ಯಾಗ್‌ ಸೌಲಭ್ಯ ಕಲ್ಪಿಸಲಾಗಿದೆ.

ಸೀಟ್‌ಬೆಲ್ಟ್ ಧಾರಣೆ ಸೇರಿದಂತೆ ಸಂಚಾರ ನಿಯಮಗಳನ್ನು ಸ್ಪಷ್ಟ ವಾಗಿ ಉಲ್ಲಂ ಸಲಾಗುತ್ತಿದೆ ಎಂದು ರಾಜ್ಯ ಸರಕಾರಗಳು ಮತ್ತು ಕೇಂದ್ರ ಸರಕಾರ ಆಗಾಗ ಬಿಡುಗಡೆ ಮಾಡುವ ವರದಿಗಳಿಂದ ವೇದ್ಯ ವಾಗುತ್ತದೆ. ಹಗಲಿನಷ್ಟೇ ಖಚಿತವಾಗಿರುವ ವರದಿಗಳು ಪ್ರಕಟವಾಗುತ್ತಿದ್ದರೂ ವಾಹನ ಚಲಾಯಿಸುವವರು ಸಂಚಾರ ನಿಯಮ ಪಾಲನೆಯತ್ತ ನಿರ್ಲಕ್ಷ್ಯವನ್ನೇಕೆ ತೋರುತ್ತಿದ್ದಾರೆ ಎಂಬ ಪ್ರಶ್ನೆ ಕಾಡುತ್ತಿದೆ. ಸಂಚಾರ ನಿಯಮ ಪಾಲನೆಯ ಹೊಣೆ ಹೊತ್ತ ಅಧಿಕಾರಿಗಳು ನಿಯಮ ಭಂಜಕರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲೇಬೇಕು. ವಾಹನ ಚಾಲಕರೂ ನಿರ್ಲಕ್ಷ್ಯ ತೋರದೆ ನಿಯಮ ಪಾಲಿಸಬೇಕು.

ಎನ್‌ ಸಿ ಆ ರ್‌ಬಿ ಪ್ರಕಾರ 2020ಕ್ಕಿಂತ 2021ರಲ್ಲಿ ಅಪಘಾತ ಪ್ರಮಾಣ ಶೇ.16.8ರಷ್ಟು ಹೆಚ್ಚಾಗಿದೆ. ದೇಶ ಹೊಂದಿರುವ ಒಟ್ಟಾರೆ ರಸ್ತೆ ಜಾಲದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಪ್ರಮಾಣ ಶೇ. 2.1. ಅಲ್ಲಿ ಅಪಘಾತಗಳ ಪ್ರಮಾಣ ಶೇ.30.3. ರಾಜ್ಯ ಹೆದ್ದಾರಿಗಳ ಪ್ರಮಾಣ ಶೇ. 9 ಆಗಿದ್ದು, ಅಲ್ಲಿ ಶೇ. 23.9ರಷ್ಟು ಅಪಘಾತಗಳು ಉಂಟಾಗುತ್ತವೆ. ಹೀಗಾಗಿ ಸರಕಾರಗಳ ಸಹಿತ ಅಧಿಕಾರಿಗಳು ಸಂಚಾರ ನಿಯಮ ಪಾಲನೆಯತ್ತ ಹಾಗೂ ಅದರ ಕಟ್ಟುನಿಟ್ಟಿನ ಅನುಷ್ಠಾನದತ್ತ ಮನಸ್ಸು ಮಾಡಬೇಕಾಗಿದೆ.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.