ಕಾಂಗ್ರೆಸ್‌ಗೆ ಹೊಸ ಸಾರಥಿ ಡಿಕೆಶಿ ಮುಂದೆ ಸವಾಲಿನ ಬಂಡೆ


Team Udayavani, Jul 3, 2020, 5:59 AM IST

ಕಾಂಗ್ರೆಸ್‌ಗೆ ಹೊಸ ಸಾರಥಿ ಡಿಕೆಶಿ ಮುಂದೆ ಸವಾಲಿನ ಬಂಡೆ

ರಾಜ್ಯ ಕಾಂಗ್ರೆಸ್‌ ಇತಿಹಾಸದಲ್ಲಿ ಮೊದಲು ಎಂಬಂತೆ ವಿನೂತನವಾಗಿ “ಡಿಜಿಟಲ್‌’ ಸಮಾರಂಭ ಆಯೋಜಿಸಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರತಿಜ್ಞಾ ವಿಧಿ ಸ್ವೀಕಾರ ಮಾಡಿರುವ ಡಿ.ಕೆ.ಶಿವಕುಮಾರ್‌ ಒಂದು ಹಂತದ ಕೆಲಸ ಮುಗಿಸಿದ್ದಾರೆ.

ಬೃಹತ್‌ ಸಂಖ್ಯೆಯ ಕಾರ್ಯಕರ್ತರನ್ನು ಸೇರಿಸಿ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ದೇಶದ ಎಲ್ಲ ಪಿಸಿಸಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕಾರ ಸ್ವೀಕಾರ ಮಾಡುವ ಅವರ ಕನಸಿಗೆ ಕೋವಿಡ್ 19 ತಣ್ಣೀರು ಎರಚಿದರೂ ಡಿಜಿಟಲ್‌ ವ್ಯವಸ್ಥೆ, ಸಾಮಾಜಿಕ ಜಾಲತಾಣದ ಉಪಯೋಗ ಪಡೆದು ರಾಜ್ಯಾದ್ಯಂತ ಪ್ರತಿ ಪಂಚಾಯಿತಿ, ವಾರ್ಡ್‌ ಮಟ್ಟದಲ್ಲೇ ಪ್ರತಿಜ್ಞಾ ಸಮಾರಂಭ ವೀಕ್ಷಿಸುವ ಅವಕಾಶ ಕಲ್ಪಿಸಿ ಲಕ್ಷಾಂತರ ಜನ ಮನೆಯಲ್ಲೇ ಕುಳಿತು ನೋಡುವಂತೆ ಮಾಡುವ ಮೂಲಕ ಯಶಸ್ಸು ಸಾಧಿಸಿದ್ದಾರೆ.

ಜತೆಗೆ, ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಂವಿಧಾನದ ಪೀಠಿಕೆ ಓದಿ ಪಕ್ಷವನ್ನು ಅಧಿಕಾರಕ್ಕೆ ತರಲು ಏಕಕಾಲಕ್ಕೆ ಪ್ರತಿಜ್ಞೆ ಕೈಗೊಂಡಿದ್ದು, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಲಿ, ಬಿ.ಕೆ.ಹರಿಪ್ರಸಾದ್‌, ದಿನೇಶ್‌ ಗುಂಡೂರಾವ್‌, ಡಾ| ಜಿ.ಪರಮೇಶ್ವರ್‌, ಶಾಮನೂರು ಶಿವಶಂಕರಪ್ಪ, ಎಸ್‌.ಆರ್‌. ಪಾಟೀಲ್‌, ಆರ್‌.ವಿ.ದೇಶಪಾಂಡೆ, ರೆಹಮಾನ್‌ ಖಾನ್‌ ಸಹಿತ ಎಲ್ಲ ನಾಯಕರು ಒಗ್ಗಟ್ಟು ಪ್ರದರ್ಶಿಸುವಂತೆ ಮಾಡಿದ್ದು ಪಕ್ಷದ ತಳಮಟ್ಟದ ಕಾರ್ಯಕರ್ತರಲ್ಲಿಯೂ ಹೊಸ ಉತ್ಸಾಹ ಮೂಡಿಸಿದೆ. ಜತೆಗೆ, ಆಡಳಿತಾರೂಢ ಬಿಜೆಪಿ ಹಾಗೂ ಮತ್ತೂಂದು ವಿಪಕ್ಷ ಜೆಡಿಎಸ್‌ನಲ್ಲೂ ಒಂದಷ್ಟು ಅತಂಕವೂ ಮೂಡಿಸಿರುವುದು ಸಹಜ.

ಅಧಿಕಾರ ಸ್ವೀಕರಿಸಿ ಮಾತನಾಡುತ್ತಾ, ಪಕ್ಷದಲ್ಲಿ ಬ್ಲ್ಯಾಕ್‌ ಮೇಲ್‌ ನಡೆಯಲ್ಲ, ನಾನು ಹಿಂಬಾಲಕರ ಮಾತು ಕೇಳಲ್ಲ. ನಾನು ಅಧ್ಯಕ್ಷನಾದರೂ ಸಾಮಾನ್ಯ ಕಾರ್ಯಕರ್ತನ ರೀತಿ ಕೆಲಸ ಮಾಡುತ್ತೇನೆ. ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆಗೆ ನನ್ನ ಆದ್ಯತೆ, ಮತ್ತೆ ಪಕ್ಷ ಅಧಿಕಾರಕ್ಕೆ ತರಲು ವಿಧಾನಸೌಧದ ಮೆಟ್ಟಿಲ ಚಪ್ಪಡಿ ಕಲ್ಲಾಗುತ್ತೇನೆ ಎಂಬ ಭಾವನಾತ್ಮಕ ಮಾತುಗಳು ಸಹ ಪಕ್ಷದ ಕಾರ್ಯಕರ್ತರಲ್ಲಿ ಭರವಸೆ ಮೂಡಿಸಬಹುದು. ಆದರೆ, ಇದೇ ಒಗ್ಗಟ್ಟು ಮುಂದಿನ ವಿಧಾನಸಭೆ ಚುನಾವಣೆ ವರೆಗೂ ಇರಲಿದೆಯಾ? ಎಂಬ ಪ್ರಶ್ನೆಯೂ ಇದೆ. ಏಕೆಂದರೆ ಕಾಂಗ್ರೆಸ್‌ ಸೋಲಿಸಲು ಬೇರೆ ಪಕ್ಷಗಳು ಬೇಕಿಲ್ಲ ಕಾಂಗ್ರೆಸಿಗರೇ ಸಾಕು ಎಂಬುದು ಹಿಂದಿನ ಚುನಾವಣೆಗಳಲ್ಲಿ ಹಲವಾರು ಬಾರಿ ಸಾಬೀತಾಗಿದೆ. ಗುಂಪುಗಾರಿಕೆಯೇ ಮುಳುವಾಗಿದ್ದು ಇದೆ.

ಡಿ.ಕೆ.ಶಿವಕುಮಾರ್‌ ಅವರ ಮುಂದಿನ ಹಾದಿಯೂ ಆಷ್ಟು ಸುಲಭವಲ್ಲ. ಬಹಿರಂಗವಾಗಿ ಎಷ್ಟೇ ಒಗ್ಗಟ್ಟು ತೋರ್ಪಡಿಸಿದರೂ ಪಕ್ಷದಲ್ಲೇ ಅವರ ಕಾಲೆಳೆ ಯಲು ಒಂದಷ್ಟು ಮಂದಿ ಇದ್ದೇ ಇರುತ್ತಾರೆ. ಜತೆಗೆ ಬೇರೆ ಪಕ್ಷಗಳ ರಾಜ ಕೀಯ ವಿರೋಧಿಗಳನ್ನೂ ಎದುರಿಸಬೇಕಾಗುತ್ತದೆ. ಕಾಂಗ್ರೆಸ್‌ ಪಕ್ಷಕ್ಕಿದ್ದ ಸಾಂಪ್ರದಾಯಿಕ ಮತಬ್ಯಾಂಕ್‌ ಈಗ ಚದುರಿದೆ. ಅದನ್ನು ಮತ್ತೆ ತರುವ ಸವಾಲು ಶಿವಕುಮಾರ್‌ ಮುಂದಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ವೈಫ‌ಲ್ಯಗಳ ವಿರುದ್ಧ ಹೋರಾಟ, ಸರಕಾರದ ಮೇಲೆ ಒತ್ತಡ ಹೇರಿ ಕೋವಿಡ್ 19 ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಸಹಾಯ ದೊರಕುವಂತೆ ಮಾಡುವುದು ತತ್‌ಕ್ಷಣದ ಹೊಣೆಗಾರಿಕೆ.

ಚುನಾವಣೆ ಸಂದರ್ಭದಲ್ಲಿ ಆವರ ಸಮುದಾಯವೂ ಸಂಪೂರ್ಣವಾಗಿ ಬೆನ್ನಿಗೆ ನಿಂತು ಹಿಂದುಳಿದ, ಅಲ್ಪಸಂಖ್ಯಾಕ, ದಲಿತ, ಲಿಂಗಾಯತ ಸಮುದಾಯವೂ ಕೈ ಹಿಡಿದರೆ ಕಾಂಗ್ರೆಸ್‌ ಭದ್ರವಾಗಲು ಸಾಧ್ಯ. ಈ ಹಿಂದೆ ಒಕ್ಕಲಿಗ ಸಮುದಾಯದ ಎಚ್‌.ಡಿ.ದೇವೇಗೌಡರು ಅನಂತರ ಎಸ್‌.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಯಾಗಲು ಇಂಥದ್ದೊಂದು ಭರ್ಜರಿ ಬೆಂಬಲ ರಾಜ್ಯವ್ಯಾಪಿ ಸಿಕ್ಕಿತ್ತು. ಅ ನಿಟ್ಟಿನಲ್ಲಿ ಶಿವಕುಮಾರ್‌ ಪ್ರಯತ್ನ, ಇತರ ನಾಯಕರ ಸಹಕಾರ, ಪರಿಸ್ಥಿತಿಯ ನೆರವು ಇವೆಲ್ಲ ದರ ಮೇಲೆ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ. ಏನೇ ಆದರೂ ಸದ್ಯಕ್ಕೆ ಹೊಸ ಸಾರಥಿಯಿಂದ ಪಕ್ಷಕ್ಕೆ ಒಂದು ರೀತಿಯ ಟಾನಿಕ್‌ ಸಿಕ್ಕಿರುವುದಂತೂ ಹೌದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.