ಅಭಿವೃದ್ಧಿ ದರದ ಕುಸಿತ ಆರ್ಥಿಕತೆ ಹಳಿಯೇರಲಿ


Team Udayavani, Jan 9, 2020, 6:49 AM IST

32

ನಿರಂತರವಾಗಿ ಆರ್ಥಿಕ ಅಭಿವೃದ್ಧಿ ದರ ಕುಸಿಯುತ್ತಿರುವುದರಿಂದ ಸರಕಾರದ ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ಈ ಕಾರಣಕ್ಕೆ ಸರಕಾರ ಜಿಡಿಪಿ ಕುಸಿತವನ್ನು
ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ.

ರಾಷ್ಟ್ರೀಯ ಸಾಂಖೀಕ ಕಚೇರಿ (ಎನ್‌ಎಸ್‌ಒ) 2019-20ನೇ ಸಾಲಿನ ಜಿಡಿಪಿ ಅಭಿವೃದ್ಧಿ ದರ ಶೇ.5ರಂತೆ ಅಭಿವೃದ್ಧಿ ಹೊಂದುವ ನಿರೀಕ್ಷೆಯನ್ನು ವ್ಯಕ್ತಪಡಿಸಿದೆ. ಈಗಾಗಲೇ ಆರ್ಥಿಕ ಕುಸಿತದ ಕಾರಣಕ್ಕೆ ಭಾರೀ ಟೀಕೆಗಳನ್ನು ಎದುರಿಸುತ್ತಿರುವ ಸರಕಾರಕ್ಕೆ ಇದು ಬಹಳ ಮುಜುಗರಉಂಟುಮಾಡುವ ವರದಿ. ಹಿಂದಿನ ಆರ್ಥಿಕ ವರ್ಷದಲ್ಲಿ ಶೇ. 6.8 ಜಿಡಿಪಿ ಅಭಿವೃದ್ಧಿ ದರವಿತ್ತು. ಪ್ರಸಕ್ತ ಸಾಲಿಗಾಗುವಾಗ ಅದು ಇನ್ನಷ್ಟು ಕುಸಿದಿರುವುದಲ್ಲದೆ ಕಳೆದೊಂದು ದಶಕದಲ್ಲೇ ಕನಿಷ್ಠ ಮಟ್ಟಕ್ಕಿಳಿದಿದೆ. ಇಂಥ ಹಿಂಜರಿತ ಭಾರೀ ಕಳವಳಕ್ಕೆ ಕಾರಣವಾಗುವುದಿಲ್ಲ ನಿಜ. ಇದಕ್ಕಿಂತಲೂ ಕಠಿಣ ಪರಿಸ್ಥಿತಿಯನ್ನು ದೇಶ ಎದುರಿಸಿ ಎದ್ದು ನಿಂತಿದೆ ಎಂಬ ಸರಕಾರದ ವಿವರಣೆಯನ್ನು ಒಪ್ಪಿಕೊಳ್ಳಬಹುದು. ಆದರೆ ನಿರಂತರವಾಗಿ ಆರ್ಥಿಕ ಅಭಿವೃದ್ಧಿ ದರ ಕುಸಿಯುತ್ತಿರುವುದರಿಂದ ಸರಕಾರದ ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಹಿನ್ನಡೆಯಾಗಲಿದೆ. ಈ ಕಾರಣಕ್ಕೆ ಸರಕಾರ ಜಿಡಿಪಿ ಕುಸಿತವನ್ನು ಗಂಭೀರವಾಗಿ ಪರಿಗಣಿಸುವ ಅಗತ್ಯವಿದೆ.

ಸರಕಾರಿ ಅಂಕಿಅಂಶಗಳು ದ್ವಿತೀಯಾರ್ಧದಲ್ಲೂ ಆರ್ಥಿಕ ಚಟುವಟಿಕೆಗಳು ನಿರೀಕ್ಷಿತ ವೇಗದಲ್ಲಿ ಗರಿಗೆದರುವುದಿಲ್ಲ ಎನ್ನುವುದನ್ನು ಸ್ಪಷ್ಟಪಡಿಸುತ್ತಿವೆ. ಈ ಸಂದರ್ಭದಲ್ಲಿ ಆರ್ಥಿಕ ಚೇತರಿಕೆಗಾಗಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳು ಅನೇಕ ಇವೆ. ವಾಹನೋದ್ಯಮ, ರಿಯಲ್‌ಎಸ್ಟೇಟ್‌ ವಲಯಗಳಿಗೆ ಘೋಷಿಸಿದ ಪ್ಯಾಕೇಜ್‌ಗಳನ್ನು ಉಳಿದ ವಲಯಗಳಿಗೂ ವಿಸ್ತರಿಸುವ ಅಗತ್ಯವಿದೆ. ಮುಖ್ಯವಾಗಿ ಉತ್ಪಾದನಾ ವಲಯಕ್ಕೆ ತುರ್ತು ನೆರವು ಬೇಡುತ್ತಿದೆ. ಈ ವಲಯದಲ್ಲಾಗಿರುವ ಕುಂಠಿತ ನೇರವಾಗಿ ರಫ್ತಿನ ಮೇಲೆ ಪರಿಣಾಮ ಬೀರಿದ್ದು, ಇದರಿಂದ ವಿನಿಮಯ ದರ ಕುಸಿದು ವಿತ್ತೀಯ ಕೊರತೆ ಹೆಚ್ಚುತ್ತಿದೆ.

ಕಳೆದ ಸಾಲಿನ ಬಜೆಟ್‌ನಲ್ಲಿ ಜಿಡಿಪಿ ಶೇ. 12ರ ದರದಲ್ಲಿ ಅಭಿವೃದ್ಧಿ ಹೊಂದಲಿದೆ ಎಂದು ಹೇಳಲಾಗಿತ್ತು. ಇದು ಸಾಧ್ಯವಾಗದಿದ್ದರೂ ಸಾಮಾನ್ಯ ಅಭಿವೃದ್ಧಿಯನ್ನು ನಿರೀಕ್ಷಿಸಲಾಗಿತ್ತು. ಸಾಮಾನ್ಯ ಅಭಿವೃದ್ಧಿ ದರ ಎಂದರೆ ಶೇ.7ರಿಂದ 7.5ರ ಆಸುಪಾಸಿನಲ್ಲಿರಬೇಕು. ಆದರೆ ಪ್ರಸ್ತುತ ಸಾಲಿನ ನಿರೀಕ್ಷೆ ಇದಕ್ಕಿಂತಲೂ ಬಹಳ ಕಡಿಮೆಯಿದೆ. ಆರ್ಥಿಕ ಹಿಂಜರಿತ ಕಾಣಿಸಿಕೊಂಡು ಬಹಳ ಸಮಯವಾಗಿದ್ದರೂ ಇದೀಗ ಹೊಸ ಸವಾಲುಗಳು ಎದುರಾಗಿವೆ. ಮುಖ್ಯವಾಗಿ ಅಮೆರಿಕ ಮತ್ತು ಇರಾನ್‌ ನಡುವೆ ಉಂಟಾಗಿರುವ ಪ್ರಕ್ಷುಬ್ಧತೆ ನಮ್ಮ ಆರ್ಥಿಕತೆಯ ಮೇಲೆ ನೇರವಾಗಿಯೇ ಪರಿಣಾಮಗಳನ್ನು ಬೀರುತ್ತಿದೆ. ಕಚ್ಚಾತೈಲ ಬೆಲೆ ಏರಿಕೆಯಿಂದಾಗಿ ಈಗಾಗಲೇ ಪೆಟ್ರೋಲು ಮತ್ತು ಡೀಸೆಲ್‌ ಬೆಲೆ ಹೆಚ್ಚಳವಾಗಿದೆ. ಜೊತೆಗೆ ಚಿನ್ನವೂ ಬೆಲೆ ಏರಿಕೆಯಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಮಾಡುತ್ತಿದೆ. ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಖರ್ಚು ಮಾಡುವ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಹೀಗೆ ಆರ್ಥಿಕತೆಯ ಎಲ್ಲ ಅಂಗಗಳೂ ಹೊಡೆತ ತಿನ್ನುತ್ತಿರುವ ಇಂಥ ಸವಾಲಿನ ಪರಿಸ್ಥಿತಿಯಲ್ಲಿಯೇ ಇನ್ನು ಕೆಲವೇ ದಿನಗಳಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡಿಸಲಿದ್ದಾರೆ.

ಹೂಡಿಕೆಗಳನ್ನು ಆಕರ್ಷಿಸುವ ಸಲುವಾಗಿ ಸರಕಾರ ಕೆಲ ಸಮಯದಿಂದ ಪ್ರಾಮಾಣಿಕವಾದ ಪ್ರಯತ್ನಗಳನ್ನು ಮಾಡುತ್ತಿದೆ. ಕಾರ್ಪೊರೇಟ್‌ ತೆರಿಗೆ ಕಡಿತ, ಉದ್ಯಮಿಗ ಜೊತೆ ಪ್ರಧಾನಿಯ ಸಂವಾದ ಈ ಮುಂತಾದ ಕ್ರಮಗಳಿಂದ ಹೂಡಿಕೆದಾರರಲ್ಲಿರುವ ಆತಂಕವನ್ನು ಹೋಗಲಾಡಿಸುವುದು ಈ ಸಂದರ್ಭದಲ್ಲಿ ಅಪೇಕ್ಷಣೀಯ ಕ್ರಮಗಳೇ. ಆದರೆ ಇದಿಷ್ಟೇ ಸಾಲದು. ಇಂಥ ಉಪಕ್ರಮಗಳು ಫ‌ಲನೀಡಲು ಬಜೆಟ್‌ನಲ್ಲಿ ಆರ್ಥಿಕ ಸುಧಾರಣೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ದೂರಗಾಮಿ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ವೈಧಾನಿಕವಾದ ಸುಧಾರಣೆಗಳನ್ನು ತರುವುದು ಈಗಿನ ಅಗತ್ಯ. ದೇಶವನ್ನು ಜಗತ್ತಿನ ಐದನೇ ಆರ್ಥಿಕ ಶಕ್ತಿಯಾಗಿ ಬೆಳೆಸುವ , 5 ಲಕ್ಷಕೋಟಿ ಆರ್ಥಿಕತೆಯನ್ನಾಗಿ ಮಾಡುವಂಥ ದೊಡ್ಡ ಗುರಿಗಳನ್ನು ಸರಕಾರ ಇಟ್ಟುಕೊಂಡಿದೆ. 5 ಲಕ್ಷ ಕೋ. ರೂ. ಆರ್ಥಿಕತೆಯಾಗಬೇಕಾದರೆ ಜಿಡಿಪಿ ಅಭಿವೃದ್ಧಿ ದರ ಶೇ. 12 ಇರಬೇಕು. ಪ್ರಸ್ತುತ ಅದರ ಅರ್ಧವೂ ಇಲ್ಲ.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.