ಸೋಲು ಪಾಠವಾಗಲಿ


Team Udayavani, May 27, 2019, 6:10 AM IST

Solu

ಪ್ರತಿ ಚುನಾವಣೆಯ ರಾಜಕೀಯ ಪಕ್ಷಗಳಿಗೆ ಒಂದೊಂದು ಪಾಠವನ್ನು ಕಲಿಸುತ್ತದೆ. ಈ ಪಾಠವನ್ನು ಕಲಿತವರು ಮುಂದಿನ ಚುನಾವಣೆಗಾಗುವಾಗ ಹೊಸ ಹುರುಪಿನಿಂದ ತಯಾರಾಗುತ್ತಾರೆ. ಕಲಿಯದವರು ಮತ್ತಷ್ಟು ಕುಸಿಯುತ್ತಾ ಹೋಗುತ್ತಾರೆ. 2014ರ ಚುನಾವಣೆಯಲ್ಲಿ ಬರೀ 44 ಸ್ಥಾನಗಳಿಗೆ ಸೀಮಿತಗೊಂಡಿದ್ದ ಕಾಂಗ್ರೆಸ್‌ ಈ ಸೋಲಿನಿಂದ ಏನಾದರೂ ಪಾಠವನ್ನು ಕಲಿತಿದ್ದರೆ 2019ರಲ್ಲಿ ಮರಳಿ ಅದೇ ಸ್ಥಿತಿಗೆ ಬರುವ ಅವಮಾನಕಾರಿ ಸನ್ನಿವೇಶವನ್ನು ತಪ್ಪಿಸಿಕೊಳ್ಳಬಹುದಿತ್ತು. ಬಹುಮತಗಳಿಸಲು ಸಾಧ್ಯವಾಗದಿದ್ದರೂ ಕನಿಷ್ಠ 100 ಪ್ಲಸ್‌ ಸ್ಥಾನಗಳನ್ನು ಗೆದ್ದು ವಿರೋಧಪಕ್ಷವಾಗಿ ಪರಿಣಾಮಕಾರಿ ನಿರ್ವಹಣೆ ನೀಡಬಹುದಿತ್ತು. ಸತತ ಎರಡನೇ ಅವಧಿಗೂ ವಿರೋಧ ಪಕ್ಷವಾಗುವ ಅರ್ಹತೆಯನ್ನೂ ಪಡೆಯದಷ್ಟು ಹೀನಾಯ ಸ್ಥಿತಿಗೆ ತಲುಪಲು ಕಾಂಗ್ರೆಸಿನ ಸ್ವಯಂಕೃತ ಅಪರಾಧಗಳು ಕಾರಣ.

ಕಾರ್ಯಕಾರಿ ಸಮಿತಿ ಸಭೆಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಈ ಮಾತನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಪಕ್ಷದ ಅಧ್ಯಕ್ಷನಾಗಿ ಸೋಲಿನ ಹೊಣೆಯನ್ನು ಅವರೇ ಹೊರಬೇಕಾಗಿತ್ತು. ಆ ಕೆಲಸವನ್ನು ಅವರು ಪ್ರಾಮಾಣಿಕವಾಗಿ ಮಾಡಿದ್ದಾರೆ ಕೂಡಾ. ತನ್ನ ಆಡಳಿತವಿರುವ ರಾಜ್ಯಗಳಲ್ಲೂ ಕಾಂಗ್ರೆಸ್‌ ಹೀನಾಯ ಪ್ರದರ್ಶನ ನೀಡಿದೆ. ಇದಕ್ಕೆ ಅವರು ಪಕ್ಷದ ಕೆಲವು ಹಿರಿಯ ನಾಯಕÃನ್ನು ಹೊಣೆ ಮಾಡಿದ್ದಾರೆ. ಅದರಲ್ಲೂ ಕಾಂಗ್ರೆಸ್‌ ಮುಖ್ಯಮಂತ್ರಿಗಳಾದ ಮಧ್ಯ ಪ್ರದೇಶದ ಕಮಲ್‌ನಾಥ್‌ ಮತ್ತು ರಾಜಸ್ಥಾನ ಅಶೋಕ್‌ ಗೆಹೊÉàಟ್‌ ವಿರುದ್ಧ ಹರಿಹಾಯ್ದಿದ್ದಾರೆ. ಹಿರಿಯ ನಾಯಕ ಚಿದಂಬರಂ ಅವರೂ ರಾಹುಲ್‌ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಈ ನಾಯಕರು ತಮ್ಮ ಮಕ್ಕಳಿಗೆ ಟಿಕೆಟ್‌ ನೀಡಲು ಬಲವಂತಪಡಿಸಿದರು. ತನಗೆ ಇಷ್ಟವಿಲ್ಲದಿದ್ದರೂ ಅವರ ಒತ್ತಾಯಕ್ಕೆ ಕಟ್ಟುಬಿದ್ದು ಟಿಕೆಟ್‌ ನೀಡಬೇಕಾಯಿತು ಎನ್ನುವುದು ರಾಹುಲ್‌ ಆರೋಪ.

ಕಾಂಗ್ರೆಸ್‌ ಸೋಲಿಗೆ ಅಸಮರ್ಪಕ ಟಿಕೆಟ್‌ ಹಂಚಿಕೆಯೂ ಒಂದು ಕಾರಣ ಎನ್ನುವುದು ನಿಜ. ಆದರೆ ಟಿಕೆಟ್‌ ಹಂಚುವ ಪರಮಾಧಿಕಾರ ಇದ್ದದ್ದು ರಾಹುಲ್‌ ಗಾಂಧಿಯ ಕೈಯಲ್ಲಿಯೇ. ಅವರಿಗೆ ಇಂಥ ಒತ್ತಾಯಗಳನ್ನು ನಿರ್ದಾಕ್ಷಿಣ್ಯವಾಗಿ ನಿರಾಕರಿಸುವ ಸಂಪೂರ್ಣ ಅಧಿಕಾರವಿತ್ತು. ಯಾವ ಮುಲಾಜಿಗೆ ಕಟ್ಟುಬಿದ್ದು ಮಕ್ಕಳಿಗೆ, ಮೊಮ್ಮಕ್ಕಳಿಗೆಲ್ಲ ಟಿಕೆಟ್‌ ನೀಡಲಾಯಿತು ಎಂಬುದನ್ನು ಅವರೆ ತಿಳಿಸಬೇಕು. ಬಿಜೆಪಿ ಮತ್ತು ಕಾಂಗ್ರೆಸ್‌ ನಡುವೆ ಇರುವ ಮುಖ್ಯ ವ್ಯತ್ಯಾಸವೇ ಇದು. ಬಿಜೆಪಿಯ ಅಧ್ಯಕ್ಷ ಯಾವ ಒತ್ತಾಯ, ಬಲವಂತ, ಲಾಬಿ, ಕೋರಿಕೆಗೆ ಮಣಿಯುವುದಿಲ್ಲ. ಪ್ರತಿಯೊಬ್ಬ ಅಭ್ಯರ್ಥಿಯ ಗೆಲುವಿನ ಸಾಧ್ಯತೆಯನ್ನು ತಾನೇ ಲೆಕ್ಕ ಹಾಕಿ ಟಿಕೆಟ್‌ ನೀಡುತ್ತಾರೆ. ಇದಕ್ಕೊಂದು ಉದಾಹರಣೆ ಬೆಂಗಳೂರು ದಕ್ಷಿಣದ ಅಭ್ಯಥಿ ತೇಜಸ್ವಿ ಸೂರ್ಯ ಅವರ ಆಯ್ಕೆ.
ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಹಿರಿಯ ನಾಯಕ ಅನಂತಕುಮಾರ್‌ ಕೆಲ ತಿಂಗಳ ಹಿಂದೆಯಷ್ಟೇ ಮೃತಪಟ್ಟಿದ್ದರು. ಅವರ ಪತ್ನಿ ತೇಜಸ್ವಿನಿಯವರಿಗೆ ಟಿಕೆಟ್‌ ಸಿಗುವ ನಿರೀಕ್ಷೆಯಿತ್ತು. ತೇಜಸ್ವಿನಿ ಕೂಡಾ ಸಾಕಷ್ಟು “ಗ್ರೌಂಡ್‌ವರ್ಕ್‌’ ಮಾಡಿದ್ದರು. ಆದರೆ ಕೊನೆ ಕ್ಷಣದಲ್ಲಿ ಅಭ್ಯರ್ಥಿ ತೇಜಸ್ವಿ ಸೂರ್ಯ ಎಂದು ಘೋಷಣೆಯಾದಾಗ ಬಿಜೆಪಿಯವರಿಗೆ ಮಾತ್ರವಲ್ಲ ಇಡೀ ದೇಶಕ್ಕೆ ಅಚ್ಚರಿಯಾಗಿತ್ತು. ಬೇರೆ ಯಾವುದೇ ಪಕ್ಷದ ಅಧ್ಯಕ್ಷನಾಗಿದ್ದರೂ ಅನುಕಂಪದ ಮತಗಳ ಲೆಕ್ಕಾಚಾರ ಹಾಕಿ ಟಿಕೆಟ್‌ ನೀಡುತ್ತಿದ್ದ. ಇದೇ ಮಾದರಿಯ ಇನ್ನೊಂದು ಅಚ್ಚರಿಯ ಆಯ್ಕೆ ಭೋಪಾಲದ ಸಾಧ್ವಿ ಪ್ರಜ್ಞಾಸಿಂಗ್‌ ಠಾಕೂರ್‌ ಅವರದ್ದು. ಸಾಧ್ವಿಗೆ ಟಿಕೆಟ್‌ ನೀಡಿದ್ದು ನೈತಿಕವಾಗಿಯೇ ಸರಿಯೇ ತಪ್ಪೇ ಎನ್ನೋದು ಬೇರೆ ವಿಚಾರ. ಆದರೆ ಅಭ್ಯರ್ಥಿಗಳ ಆಯ್ಕೆಯಲ್ಲಿ ಇಂಥದ್ದೊಂದು ದಿಟ್ಟತನವನ್ನು ತೋರಿಸುವ ಛಾತಿ ಇರುವುದರಿಂದಲೇ ಇಂದು ಬಿಜೆಪಿ ಉಳಿದ ಪಕ್ಷಗಳಿಗಿಂತ ಭಿನ್ನವೆಂದು ಗುರುತಿಸಿಕೊಳ್ಳುತ್ತಿದೆ.

ಕಾಂಗ್ರೆಸ್‌ನ ಉನ್ನತ ನಾಯಕತ್ವದಲ್ಲಿ ಇಂಥ ಛಾತಿ ಇಲ್ಲ ಎನ್ನುವುದು ಈಗ ಜಗಜ್ಜಾಹೀರಾಗಿದೆ. ಈಗಲೂ ಪಕ್ಷವನ್ನು ಅದೇ ಕೆಲವು ಹಿರಿತಲೆಗಳು ನಿಯಂತ್ರಿಸುತ್ತಿವೆ. ಹಾಗೇ ನೋಡುವುದಾದರೆ ಬಹುತೇಕ ಕೆ‌Òàತ್ರಗಳ ಅಭ್ಯರ್ಥಿಗಳ ಆಯ್ಕೆಯಲ್ಲಿ ಕಾಂಗ್ರೆಸ್‌ ಎಡವಿತ್ತು. ಹೀಗಾಗಿಯೇ ಬಿಜೆಪಿಗೆ ಕಾಂಗ್ರೆಸ್‌ಗಿಂತಲೂ ಪ್ರಾದೇಶಿಕ ಪಕ್ಷಗಳು ಹೆಚ್ಚು ಸವಾಲೊಡ್ಡಿದ್ದವು. ಸಾಕಷ್ಟು ಮೊದಲೇ ಚುನಾವಣೆ ತಯಾರಿ ಪ್ರಾರಂಭಿಸಿಯೂ ಸರಿಯಾದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಏಕೆ ಸಾಧ್ಯವಾಗಿಲ್ಲ ಎಂಬುದರ ಕುರಿತು ಪಕ್ಷ ಮೊದಲು ಆತ್ಮಾವಲೋಕನ ಮಾಡಿಕೊಳ್ಳಬೇಕು.

ಗೆಲುವಿಗೆ ಸಾವಿರ ಅಪ್ಪಂದಿರು, ಸೋಲು ಅನಾಥ ಎಂಬ ಮಾತು ಕಾಂಗ್ರೆಸ್‌ ಸೇರಿದಂತೆ ಎಲ್ಲ ಪಕ್ಷಗಳಿಗೂ ಅನ್ವಯವಾಗುಂಥದ್ದು. ಸೋಲಿನಿಂದ ಕುಗ್ಗದೆ ಆಗಿರುವ ತಪ್ಪುಗಳನ್ನು ಸರಿಪಡಿಸಿಕೊಂಡು ಮುಂದೆ ಅವೇ ತಪ್ಪುಗಳು ಪುನರಾವರ್ತಿಸದಂತೆ ನೋಡಿಕೊಳ್ಳುವುದು ಬುದ್ಧಿವಂತಿಕೆ. ಈ ಬುದ್ಧಿವಂತಿಕೆಯನ್ನು ಈಗ ಕಾಂಗ್ರೆಸ್‌ ತೋರಿಸಬೇಕಾಗಿದೆ. ಏಕೆಂದರೆ ಪ್ರಜಾತಂತ್ರ ಸಮರ್ಪಕವಾಗಿ ಕಾರ್ಯ ನಿರ್ವಹಿಸಲು ಆಡಳಿತ ಪಕ್ಷದಷ್ಟೇ ಪ್ರಬಲವಾಗಿರುವ ಪ್ರತಿಪಕ್ಷದ ಅಗತ್ಯವೂ ಇದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.