ಜಾರಿ ನಿರ್ದೇಶನಾಲಯದ ಕಿವಿ ಹಿಂಡಿದ ದಿಲ್ಲಿ ಹೈಕೋರ್ಟ್‌


Team Udayavani, Jan 27, 2023, 6:00 AM IST

ಜಾರಿ ನಿರ್ದೇಶನಾಲಯದ ಕಿವಿ ಹಿಂಡಿದ ದಿಲ್ಲಿ ಹೈಕೋರ್ಟ್‌

ಜಾರಿ ನಿರ್ದೇಶನಾಲಯ(ಇ.ಡಿ.) ಅಕ್ರಮ ಹಣ ವರ್ಗಾವಣೆ ಪ್ರಕರಣಗಳನ್ನು ಹೊರತುಪಡಿಸಿದಂತೆ ಇನ್ಯಾವುದೇ ಇತರ ಅಪರಾಧ ಅಥವಾ ಅಕ್ರಮ ಪ್ರಕರಣಗಳ ಬಗೆಗೆ ತನಿಖೆ ನಡೆಸುವಂತಿಲ್ಲ ಎಂದು ದಿಲ್ಲಿ ಹೈಕೋರ್ಟ್‌ ತನ್ನ ಮಹತ್ವದ ಆದೇಶವೊಂದರಲ್ಲಿ ಸ್ಪಷ್ಟಪಡಿಸಿದೆ. ಖಾಸಗಿ ಕಂಪೆನಿಯೊಂದರ ವಿರುದ್ಧ ಇ.ಡಿ. ಕೈಗೊಂಡ ತನಿಖೆ ಮತ್ತು ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ 2 ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿ ಹೈಕೋರ್ಟ್‌ ಈ ತೀರ್ಪು ನೀಡಿದೆ.

ದಿಲ್ಲಿ ಹೈಕೋರ್ಟ್‌ನ ಈ ತೀರ್ಪು ಇ.ಡಿ.ಯ ಅಧಿಕಾರ ವ್ಯಾಪ್ತಿಯನ್ನು ನೆನಪಿಸಿಕೊಟ್ಟಿದ್ದೇ ಅಲ್ಲದೆ ಇತರ ಅಪರಾಧ ಅಥವಾ ಅಕ್ರಮ ಪ್ರಕರಣಗಳ ತನಿಖೆಗಾಗಿ ದೇಶದಲ್ಲಿ ಬೇರೆ ಬೇರೆ ತನಿಖಾ ಸಂಸ್ಥೆಗಳಿದ್ದು ಅವುಗಳ ಕಾರ್ಯವ್ಯಾಪ್ತಿಯನ್ನು ಕಬಳಿಸದಿರುವಂತೆಯೂ ಇ.ಡಿ.ಗೆ ಪರೋಕ್ಷ ಎಚ್ಚರಿಕೆಯನ್ನು ನೀಡಿದೆ. ದೇಶದ ಸ್ವತಂತ್ರ ಮತ್ತು ಉನ್ನತ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಜಾರಿ ನಿರ್ದೇಶನಾಲಯವನ್ನು ಕೇಂದ್ರ ಸರಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂಬ ಆರೋಪಗಳ ನಡುವೆಯೇ ದಿಲ್ಲಿ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಚಾಟಿ ಬೀಸಿರುವುದು ರಾಜಕೀಯವಾಗಿಯೂ ಒಂದಿಷ್ಟು ಮಹತ್ವವನ್ನು ಪಡೆದುಕೊಂಡಿದೆ.

ಅಕ್ರಮ ಹಣ ವರ್ಗಾವಣೆ ನಿಯಂತ್ರಣ ಕಾಯಿದೆ ಸೆಕ್ಷನ್‌ 3ರ ಅಡಿಯಲ್ಲಿ ಬರುವ ಅಕ್ರಮ ಹಣ ವರ್ಗಾವಣೆ ಅಪರಾಧ ಪ್ರಕರಣಗಳನ್ನು ಮಾತ್ರ ತನಿಖೆ ಮಾಡಲು ಜಾರಿ ನಿರ್ದೇಶನಾಲಯಕ್ಕೆ ಅಧಿಕಾರವಿದೆ. ಯಾವುದೇ ಪ್ರಕರಣದಲ್ಲಿ ವಶಪಡಿಸಿಕೊಳ್ಳಲಾದ ವಸ್ತುಗಳನ್ನು ಆಧರಿಸಿ ಬೇರೆ ತೆರನಾದ ಅಪರಾಧಗಳು ನಡೆದಿವೆ ಎಂದು ಊಹಿಸಿ ಆ ಪ್ರಕರಣಗಳ ತನಿಖೆಯನ್ನು ನಡೆಸಲು ಇ.ಡಿ.ಗೆ ಅಧಿಕಾರವಿಲ್ಲ. ಅಕ್ರಮ ಹಣ ವರ್ಗಾವಣೆ ಅಪರಾಧ ಪ್ರಕರಣದ ತನಿಖೆಯ ವೇಳೆ ಇತರ ಪ್ರಕರಣಗಳ ಬಗೆಗೆ ಸುಳಿವು ಲಭಿಸಿದಲ್ಲಿ ಸಂಬಂಧಿಸಿದ ತನಿಖಾ ಸಂಸ್ಥೆಗಳಿಗೆ ಮಾಹಿತಿ ನೀಡುವುದು ಇ.ಡಿ.ಯ ಜವಾ ಬ್ದಾರಿ ಯಾಗಿದೆ ಎಂದು ದಿಲ್ಲಿ ಹೈಕೋರ್ಟ್‌ನ ನ್ಯಾಯಾಧೀಶ ಯಶವಂತ್‌ ವರ್ಮಾ ತಿಳಿಸಿದ್ದಾರೆ. ಅಷ್ಟು ಮಾತ್ರವಲ್ಲದೆ ಈ ಹಿಂದೆ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಕೂಡ ಅವರು ತಮ್ಮ ಆದೇಶದಲ್ಲಿ ಉಲ್ಲೇಖೀಸಿದ್ದಾರೆ.

ತನಿಖಾ ಸಂಸ್ಥೆಗಳನ್ನು ಚುನಾಯಿತ ಸರಕಾರಗಳು ದುರುಪಯೋಗ ಪಡಿಸಿಕೊಳ್ಳುತ್ತಿವೆ ಎಂಬ ಆರೋಪ ಹಿಂದಿನಿಂದಲೂ ಕೇಳಿ ಬರುತ್ತಲೇ ಇದೆ. ಈ ವಿಷಯವಾಗಿ ಆಡಳಿತಾರೂಢ ಮತ್ತು ವಿಪಕ್ಷಗಳ ನಡುವೆ ವಾಕ್ಸಮರ ನಡೆಯುತ್ತಲೇ ಬಂದಿದೆ. ಈ ಹಿಂದಿನ ಕಾಂಗ್ರೆಸ್‌, ಯುಪಿಎ ಸರಕಾರದ ಅವಧಿಯಲ್ಲಿ ಈ ವಾಗ್ಯುದ್ಧ ಅತಿರೇಕಕ್ಕೆ ಹೋಗಿತ್ತು. ಸಿಬಿಐ ವಿಚಾರವಾಗಿ ಸುಪ್ರೀಂ ಕೋರ್ಟ್‌, ಅಂದಿನ ಯುಪಿಎ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತ್ತು. ಆ ಬಳಿಕ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ಆಡಳಿತಾವಧಿಯಲ್ಲಿಯೂ ತನಿಖಾ ಸಂಸ್ಥೆಗಳ ದುರುಪಯೋಗದ ಬಗೆಗೆ ವಿಪಕ್ಷಗಳು ನೇರವಾಗಿ ಕೇಂದ್ರ ಸರಕಾರ ಮತ್ತು ಬಿಜೆಪಿ ವಿರುದ್ಧ ಹರಿಹಾಯುತ್ತಲೇ ಬಂದಿವೆ. ಅಷ್ಟು ಮಾತ್ರವಲ್ಲದೆ ತನಿಖಾ ಸಂಸ್ಥೆಗಳನ್ನು ಮುಂದಿಟ್ಟು ವಿಪಕ್ಷ ನಾಯಕರನ್ನು ತನ್ನತ್ತ ಸೆಳೆದುಕೊಳ್ಳುವ ಪ್ರಯತ್ನದಲ್ಲಿ ಬಿಜೆಪಿ ನಿರತವಾಗಿದೆ ಎಂಬ ಗಂಭೀರ ಆರೋಪವನ್ನೂ ಮಾಡುತ್ತಲೇ ಬಂದಿವೆ.

ಇವೆಲ್ಲದರ ನಡುವೆ ದಿಲ್ಲಿ ಹೈಕೋರ್ಟ್‌ ಇ.ಡಿ.ಗೆ ಚಾಟಿ ಬೀಸಿ ಅದರ ಹೊಣೆಗಾರಿಕೆಯನ್ನು ಜ್ಞಾಪಿಸಿರುವುದು ಈ ಕುರಿತಾಗಿನ ಚರ್ಚೆಯನ್ನು ಮತ್ತೂಂದು ಮಜಲಿಗೆ ಕೊಂಡೊಯ್ಯುವ ಎಲ್ಲ ಸಾಧ್ಯತೆ ಇದೆ. ಇದೊಂದು ರಾಜಕೀಯೇತರ ಪ್ರಕರಣದ ತೀರ್ಪು ಆಗಿದ್ದರೂ ಇ.ಡಿ. ಕಾರ್ಯವೈಖರಿಯ ಬಗೆಗೆ ಹೈಕೋರ್ಟ್‌ ಬೆಟ್ಟು ಮಾಡಿರುವುದು ಸಹಜವಾಗಿಯೇ ಕುತೂಹಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಈ ರಾಜ್ಯದ ಎಲ್ಲ ನಿರುದ್ಯೋಗಿ ಯುವಕರಿಗೆ ಮುಂದಿನ ವಿತ್ತೀಯ ವರ್ಷದಿಂದ ಮಾಸಿಕ ಭತ್ಯೆ

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆಧಾರ್‌-ಪಾನ್‌ ಜೋಡಣೆ ಗಡುವು ವಿಸ್ತರಣೆ: ಇನ್ನು ವಿಳಂಬ ಸಲ್ಲದು

ಆಧಾರ್‌-ಪಾನ್‌ ಜೋಡಣೆ ಗಡುವು ವಿಸ್ತರಣೆ: ಇನ್ನು ವಿಳಂಬ ಸಲ್ಲದು

ಹಣದ ಸಾಗಾಟದ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಿ

ಹಣದ ಸಾಗಾಟದ ತಡೆಗೆ ಕಠಿಣ ಕ್ರಮ ತೆಗೆದುಕೊಳ್ಳಿ

ಪ್ರತ್ಯೇಕತಾವಾದಕ್ಕೆ ಆಸ್ಪದ ಬೇಡ ಖಲಿಸ್ಥಾನಿ ಬೆಂಬಲಿಗರನ್ನು ಮಟ್ಟ ಹಾಕಿ

ಪ್ರತ್ಯೇಕತಾವಾದಕ್ಕೆ ಆಸ್ಪದ ಬೇಡ ಖಲಿಸ್ಥಾನಿ ಬೆಂಬಲಿಗರನ್ನು ಮಟ್ಟ ಹಾಕಿ

bjp cong

ಸಂಪಾದಕೀಯ : ರಾಜಕೀಯ ಪಕ್ಷಗಳ ಇಬ್ಬಂದಿತನ – ಪ್ರಬುದ್ಧತೆ ಅಲ್ಲ

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

ಸೂರತ್‌ ಕೋರ್ಟ್‌ ತೀರ್ಪು ನಾಯಕರಿಗೆ ಪಾಠವಾಗಲಿ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್