ಧರಣಿ ಹೆಸರಲ್ಲಿ ದೆಹಲಿ ಆಡಳಿತ ಬಲಿ ಸಿಎಂ ಹುದ್ದೆಗೆ ಭೂಷಣವಲ್ಲ


Team Udayavani, Jun 19, 2018, 9:25 AM IST

kejriwal.jpg

ದೆಹಲಿಯ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ತಮ್ಮ ಮೂವರು ಸಂಪುಟದ ಸದಸ್ಯರೊಂದಿಗೆ ಲೆಫ್ಟಿನೆಂಟ್‌ ಗವರ್ನರ್‌ ಅವರ ನಿವಾಸದಲ್ಲಿ ಕಳೆದ 8 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಧರಣಿ ಮೂಲಕವೇ ರಾಜಕೀಯ ಪ್ರವೇಶಿಸಿದ ಕೇಜ್ರಿವಾಲ್‌ ಮುಖ್ಯಮಂತ್ರಿಯಾದ ಮೇಲೂ ಧರಣಿ ರಾಜಕೀಯ ಮುಂದುವರಿಸಿದ್ದಾರೆ. ಐಎಎಸ್‌ ಅಧಿಕಾರಿಗಳ ಮುಷ್ಕರ ಹಿಂಪಡೆಯುವಂತೆ ಲೆಫ್ಟಿನೆಂಟ್‌ ಗವರ್ನರ್‌ ಅನಿಲ್‌ ಬೈಜಲ್‌ ಆದೇಶಿಸಬೇಕು, ಬಡವರ ಮನೆಗಳಿಗೆ ರೇಷನ್‌ ಒದಗಿಸುವ ತಮ್ಮ ಪ್ರಸ್ತಾಪಕ್ಕೆ ಕೇಂದ್ರ ಅನುಮತಿ ನೀಡಬೇಕು ಎಂಬುದು ಧರಣಿ ನಿರತ ಮುಖ್ಯಮಂತ್ರಿಯ ಬೇಡಿಕೆ. 8 ದಿನಗಳಲ್ಲಿ ಈ ಪ್ರಹಸನ ವಿವಿಧ ಆಯಾಮಗಳನ್ನು ಪಡೆದುಕೊಂಡಿದೆ. ಕರ್ನಾಟಕ ಸಹಿತ ನಾಲ್ಕು ರಾಜ್ಯಗಳ ಮುಖ್ಯಮಂತ್ರಿಗಳೂ ಇದರಲ್ಲಿ ರಂಗಪ್ರವೇಶ ಮಾಡುವ ಮೂಲಕ ರಾಜಕೀಯ ಶಕ್ತಿ ಪ್ರದರ್ಶನವೂ ನಡೆದಿದೆ. ಬಿಜೆಪಿ ಹಾಗೂ ಕಾಂಗ್ರೆಸ್‌ ದೆಹಲಿ ಮುಖ್ಯಮಂತ್ರಿಯ ಈ ಧರಣಿಯನ್ನು ಟೀಕಿಸುತ್ತಿದ್ದರೆ, ಉಳಿದ ಪ್ರಾದೇಶಿಕ ಪಕ್ಷಗಳು ಬಹುತೇಕ ಕೇಜ್ರಿವಾಲ್‌ ಬೆಂಬಲಕ್ಕೆ ನಿಂತು ಕೇಂದ್ರ ಸರ್ಕಾರವನ್ನು ಜರೆದಿವೆ. ಈ ಪ್ರಕರಣವೀಗ ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದು, ಲೆಫ್ಟಿನೆಂಟ್‌ ಗವರ್ನರ್‌ ಅವರ ನಿವಾಸ ಪ್ರವೇಶಿಸಲು ನಿಮಗೆ ಅನುಮತಿ ಕೊಟ್ಟವರು ಯಾರು ಎಂದು ಕೇಜ್ರಿವಾಲ್‌ರನ್ನು ನ್ಯಾಯಾಲಯ ಪ್ರಶ್ನಿಸಿದೆ.

ಆಡಳಿತಕ್ಕೆ ಬಂದ ಲಾಗಾಯ್ತಿನಿಂದ ಒಂದಿಲ್ಲೊಂದು ವಿವಾದಗಳನ್ನು ಆಮ್‌ ಆದ್ಮಿ ಪಕ್ಷ ಮೈಮೇಲೆಳೆದುಕೊಳ್ಳುತ್ತಾ ಬಂದಿದೆ. ಸ್ವತ್ಛ ಆಡಳಿತದ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದಿದ್ದ ಆಪ್‌ನ ಸಾಲು ಸಾಲು ಶಾಸಕರು ವಿವಿಧ ಹಗರಣಗಳಲ್ಲಿ ಜೈಲು ಸೇರಿದ್ದಾರೆ. ಮುಖ್ಯಮಂತ್ರಿಯ ಕಚೇರಿಯಲ್ಲೇ ಮುಖ್ಯ ಕಾರ್ಯದರ್ಶಿ ಮೇಲೆ ಆಪ್‌ ಶಾಸಕರಿಂದ ನಡೆಯಿತೆನ್ನಲಾದ ಹಲ್ಲೆಯೇ ಈ ಒಟ್ಟಾರೆ ಪ್ರಹಸನದ ಮೂಲವಾಗಿದೆ. ಆ ಹಲ್ಲೆಯನ್ನು ವಿರೋಧಿಸಿ ಐಎಎಸ್‌ ಅಧಿಕಾರಿಗಳು ಮುಷ್ಕರ ನಡೆಸುತ್ತಿದ್ದಾರೆ ಎಂದು ಕೇಜ್ರಿವಾಲ್‌ ಸರ್ಕಾರ ಆರೋಪಿಸುತ್ತಿದೆ. ಆದರೆ ನಾವು ಮುಷ್ಕರ ನಡೆಸುತ್ತಿಲ್ಲ. ನಮ್ಮನ್ನು ರಾಜಕೀಯಕ್ಕೆ ಎಳೆಯಬೇಡಿ. ನಾವು ಎಂದಿನಂತೆ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಅಧಿಕಾರಿಗಳು ಪತ್ರಿಕಾಗೋಷ್ಠಿ ನಡೆಸಿ ಹೇಳಿಕೆ ನೀಡಿದ್ದಾರೆ. ಸದ್ಯಕ್ಕಂತೂ ಇದು ಬಗೆಹರಿಯದ ಸಮಸ್ಯೆಯಂತೆ ಕಾಣುತ್ತಿದೆ.

ದೆಹಲಿಯು ಉಳಿದ ರಾಜ್ಯಗಳಂತೆ ಪೂರ್ಣ ರಾಜ್ಯದ ಸ್ಥಾನಮಾನ ಹೊಂದಿಲ್ಲ. 1993ರಲ್ಲಿ ಮಾಡಿದ ಸಂವಿಧಾನದ 69ನೇ ತಿದ್ದುಪಡಿಯ ಪ್ರಕಾರ, ದೆಹಲಿ ಸರ್ಕಾರವು ಶಿಕ್ಷಣ, ಸಾರಿಗೆ, ಆರೋಗ್ಯ ಇತ್ಯಾದಿ ವಿಷಯಗಳಲ್ಲಿ ಪೂರ್ಣ ಅಧಿಕಾರ ಹೊಂದಿದ್ದರೂ, ಪೊಲೀಸ್‌, ಭೂಮಿಯಂತಹ ವಿಚಾರಗಳಲ್ಲಿ ತೀರ್ಮಾನ ಕೈಗೊಳ್ಳುವ ಅಧಿಕಾರ ಹೊಂದಿಲ್ಲ. ಇವುಗಳಿಗೆ ಕೇಂದ್ರದ ಜತೆ ಸಹಕಾರ ಅತ್ಯಗತ್ಯ. 1952ರಲ್ಲಿ ದೆಹಲಿ ಸರ್ಕಾರ ಅಸ್ತಿತ್ವಕ್ಕೆ ಬಂತಾದರೂ 1956ರಲ್ಲಿ ಅದನ್ನು ರದ್ದುಗೊಳಿಸಲಾಯಿತು. ಬಳಿಕ ಸಂವಿಧಾನ ತಿದ್ದುಪಡಿ ತಂದು 1993ರಲ್ಲಿ ಮೊದಲ ವಿಧಾನಸಭೆ ರಚನೆಗೊಂಡಿತು.

1993ರ ಬಳಿಕ ದೆಹಲಿ ಸರ್ಕಾರದ ಕಾರ್ಯವ್ಯಾಪ್ತಿಯ ಸಂಬಂಧ ಕಾನೂನಿನಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಬಿಜೆಪಿ, ಕಾಂಗ್ರೆಸ್‌ ಹಾಗೂ ಇದೀಗ ಆಪ್‌ ಹೀಗೆ ಮೂರು ಪಕ್ಷಗಳು ಇಲ್ಲಿ ಅಧಿಕಾರಕ್ಕೇರಿವೆ. ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯೊಂದಿಗೆ ಆಪ್‌ ರಾಜಕೀಯ ಭಿನ್ನಾಭಿಪ್ರಾಯ ಹೊಂದಿದೆ. ಇದು ಉಭಯ ಸರ್ಕಾರಗಳ ಮಧ್ಯೆ ಆಡಳಿತಾತ್ಮಕ ಸಂಘರ್ಷಕ್ಕೆ ನಾಂದಿ ಹಾಡಿರುವುದು ಸ್ಪಷ್ಟ. ಕೇಂದ್ರ- ದೆಹಲಿ ಸರ್ಕಾರದ ತಿಕ್ಕಾಟ ಇದು ಮೊದಲಲ್ಲ. ಕೇಜ್ರಿವಾಲ್‌ ದೆಹಲಿಯಲ್ಲಿ ಅಧಿಕಾರಕ್ಕೇರಿದಂದಿನಿಂದ ಇದು ನಡೆದು ಬಂದಿದೆ. ಇದೇ ರೀತಿಯ ಧರಣಿಯನ್ನೂ ಸಿಎಂ ಕೇಜ್ರಿವಾಲ್‌ ಕೈಗೊಂಡಿದ್ದಿದೆ.

ಎಲ್ಲಾ ರಾಜ್ಯಗಳ ನೀತಿ ನಿರ್ಧಾರ ಚರ್ಚಿಸುವ, ದೇಶದ ಭವಿಷ್ಯದ ಕಾರ್ಯಸೂಚಿ ನಿರ್ಧರಿಸುವ ನೀತಿ ಆಯೋಗದ ಸಭೆಗೆ ಭಾಗವಹಿಸದೆ ಧರಣಿ ಕುಳಿತಿದ್ದರು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ರಾಜ್ಯ ಸರ್ಕಾರವೊಂದು ರಾಜ್ಯಪಾಲರಿಗೆ ಅಥವಾ ಕೇಂದ್ರ ಸರ್ಕಾರಕ್ಕೆ ತನ್ನ ಅಹವಾಲು ಸಲ್ಲಿಸಲು ಧರಣಿಯ ಮಾರ್ಗವನ್ನು ಹಿಡಿಯುವುದು ಎಷ್ಟರಮಟ್ಟಿಗೆ ಸರಿ? ತಮ್ಮೆಲ್ಲಾ ಆಡಳಿತ ಕಾರ್ಯವನ್ನು ಬದಿಗಿಟ್ಟು ಏಳೆಂಟು ದಿನಗಳ ಕಾಲ ಧರಣಿ ನಡೆಸುತ್ತಾ ಕೂರುವುದು ಮುಖ್ಯಮಂತ್ರಿ ಹುದ್ದೆಗೆ ಘನತೆ ತರುವುದಿಲ್ಲ.ಆಡಳಿತಾತ್ಮಕ ಸಂಗತಿಗಳನ್ನು ರಾಜಕೀಯ ಪ್ರಹಸನಗೊಳಿಸುವುದು ಸಲ್ಲ. ಆಡಳಿತದಲ್ಲಿರುವ ಪಕ್ಷಗಳು ಬೇರೆಯಾದರೂ, ಆಡಳಿತ ವಿಚಾರದಲ್ಲಿ ರಾಜಕೀಯ ಸೂಕ್ತವಲ್ಲ. ಕೇಂದ್ರ ಸರ್ಕಾರ ಹಾಗೂ ಲೆಫ್ಟಿನೆಂಟ್‌ ಜನರಲ್‌ ಹಾಗೂ ಐಎಎಸ್‌ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಕುಳಿತು ಮಾತನಾಡಿ ಸಮಸ್ಯೆ ಬಗೆಹರಿಸಬೇಕು. ಇನ್ನಾದರೂ ಬೀದಿ ನಾಟಕ ನಿಲ್ಲುವುದೊಳಿತು.

ಟಾಪ್ ನ್ಯೂಸ್

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.