ಡೆಂಗ್ಯೂ ಜ್ವರದ ಬಗ್ಗೆ ಇರಲಿ ಎಚ್ಚರಿಕೆ


Team Udayavani, Apr 14, 2022, 6:00 AM IST

ಡೆಂಗ್ಯೂ ಜ್ವರದ ಬಗ್ಗೆ ಇರಲಿ ಎಚ್ಚರಿಕೆ

ಬೇಸಗೆ ನಡುವೆಯೂ ರಾಜ್ಯದಲ್ಲಿ ಆಗಾಗ್ಗೆ ಮಳೆಯಾಗುತ್ತಿದ್ದು, ಇದು ಡೆಂಗ್ಯೂ ಜ್ವರಕ್ಕೆ ಆಹ್ವಾನ ಕೊಟ್ಟಂತಿದೆ. ಅದೂ ಅಲ್ಲದೆ ಬೆಂಗಳೂರು ವ್ಯಾಪ್ತಿಯಲ್ಲಿ ಕಳೆದ ಮೂರು ತಿಂಗಳಲ್ಲಿ 241 ಡೆಂಗ್ಯೂ ಪ್ರಕರಣಗಳು ಕಾಣಿಸಿಕೊಂಡಿದ್ದು, ಇದು ಆತಂಕಕ್ಕೂ ಕಾರಣವಾಗಿದೆ.

ಕಳೆದ ಎರಡು ವರ್ಷಗಳ ಕಾಲ, ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಅಷ್ಟಕ್ಕಷ್ಟೇ ಎಂಬಂತಿದ್ದವು. ಇದಕ್ಕೆ ಕಾರಣ ಕೊರೊನಾ ಸೋಂಕು. ಕೊರೊನಾದ ಬಗ್ಗೆ ಜನ ಹೆಚ್ಚಿನ ಆಸ್ಥೆ ವಹಿಸಿದ್ದರಿಂದ ಮತ್ತು ಜ್ವರ ಬಂದರೂ ಅದು ಕೊರೊನಾ ಅಥವಾ ಡೆಂಗ್ಯೂ ಎಂಬ ಗೊಂದಲಗಳು ಇದ್ದಿದ್ದರಿಂದ ಅಷ್ಟೇನೂ ಕಾಣಿಸಿರಲಿಲ್ಲ. ಕೊರೊನಾ ಕಾಣಿಸಿಕೊಂಡ ಮೊದಲ ವರ್ಷವಂತೂ ಜನ ತುಸು ಹೆಚ್ಚಿನ ಆಸ್ಥೆಯನ್ನೇ ವಹಿಸಿಕೊಂಡಿದ್ದರು. ಜತೆಗೆ ಕೊರೊನಾ ನಿಯಂತ್ರಣಕ್ಕಾಗಿ ರೋಗ ನಿರೋಧಕ ಔಷಧಗಳನ್ನೂ ಹೆಚ್ಚಾಗಿಯೇ ತೆಗೆದುಕೊಂಡಿದ್ದರು. ಇದರಿಂದಾಗಿ ಡೆಂಗ್ಯೂ ಸೇರಿದಂತೆ ಕೆಲವು ಸಾಂಕ್ರಾಮಿಕ ರೋಗಗಳ ನಿಯಂತ್ರಣವಾಗಿತ್ತು.

ಆದರೆ ಈ ವರ್ಷ ಕೊರೊನಾ ಸೋಂಕಿನ ಭಯ ಒಂದಷ್ಟು ಕಡಿಮೆಯಾಗಿದೆ. ಅಲ್ಲದೆ ಕೊರೊನಾ ಸೋಂಕು ಪ್ರಮಾಣವೂ 100ರ ಒಳಗೇ ಇದೆ. ಹೀಗಾಗಿ ಯಾವುದೇ ಜ್ವರ ಕಾಣಿಸಿಕೊಂಡರೂ ಅದು ಕೊರೊನಾ ಎಂಬ ಭಯದಲ್ಲಿ ಪರೀಕ್ಷೆಗೆ ಹೋಗುತ್ತಿಲ್ಲ. ಇದನ್ನು ಬಿಟ್ಟು, ಬೇರೆ ರೀತಿಯ ಜ್ವರಗಳಿರಬಹುದೇ ಎಂಬ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಇದರಿಂದಾಗಿಯೂ ಡೆಂಗ್ಯೂ ಪ್ರಕರಣಗಳಲ್ಲಿ ಹೆಚ್ಚಾಗಿರಬಹುದು.

ಏನೇ ಆಗಲಿ ಡೆಂಗ್ಯೂ ಜ್ವರದ ಬಗ್ಗೆ ಯಾವುದೇ ಕಾರಣಕ್ಕೂ ಉದಾಸೀನ ಸಲ್ಲದು. ಈಗ ಆಗಾಗ್ಗೆ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮನೆಯ ಸುತ್ತಮುತ್ತ ಇರುವ ಗುಂಡಿಗಳಲ್ಲಿ, ಮನೆ ಬಳಿ ಇರುವ ಪಾತ್ರೆಗಳಲ್ಲಿ ನೀರು ಸಂಗ್ರಹವಾಗುತ್ತದೆ. ಅದರಲ್ಲೂ ಮಹಡಿ

ಮನೆಗಳಾಗಿದ್ದರೆ, ಮೇಲೆ ಕೆಲವೊಂದು ಉಪಯೋಗಕ್ಕೆ ಬಾರದ ಮತ್ತು ನೀರು ತುಂಬುವಂಥ ವಸ್ತುಗಳನ್ನು ಇಡುವುದು ಮಾಮೂಲಿ. ಇಂಥವುಗಳಲ್ಲಿ ನೀರು ತುಂಬಿಕೊಂಡು ಡೆಂಗ್ಯೂಗೆ ಕಾರಣವಾಗುವ ಸೊಳ್ಳೆ ಉತ್ಪತ್ತಿಯಾಗುತ್ತವೆ. ಇಂಥ ವಸ್ತುಗಳ ಬಗ್ಗೆ ಎಚ್ಚರದಿಂದ ಇರುವುದು ಒಳಿತು. ಜತೆಗೆ ಆಗಾಗ್ಗೆ ಪರಿಶೀಲಿಸಿಕೊಂಡು, ನೀರು ತುಂಬಿರುವ ಪಾತ್ರೆಗಳನ್ನು ಖಾಲಿ ಮಾಡಬೇಕು.

ಅಲ್ಲದೆ ಡೆಂಗ್ಯೂನಂಥ ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ಸಾರ್ವಜನಿಕರು ತಮ್ಮ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವತ್ಛಗೊಳಿಸಬೇಕು. ಯಾವುದೇ ಜ್ವರವಿರಲಿ ಮೊದಲು ಕಡ್ಡಾಯವಾಗಿ ರಕ್ತ ಪರೀಕ್ಷೆ ಮಾಡಿಸಬೇಕು. ನೀರು ಸಂಗ್ರಹ ಸಾಮಗ್ರಿಗಳನ್ನು ಮುಚ್ಚಿಡಬೇಕು. ತೊಟ್ಟಿಯಂಥವುಗಳನ್ನು ವಾರಕ್ಕೊಮ್ಮೆ ತೊಳೆಯುವ

ಅಭ್ಯಾಸ ಮಾಡಿಕೊಳ್ಳಬೇಕು. ಟೈರ್‌, ಎಳನೀರಿನ ಚಿಪ್ಪು, ಡಬ್ಬ, ಪ್ಲಾಸ್ಟಿಕ್‌ ಕವರ್‌ಗಳನ್ನು ವಿಲೇವಾರಿ ಮಾಡಿ ಸೊಳ್ಳೆಗೆ ಆಶ್ರಯವಾಗುವುದನ್ನು ತಪ್ಪಿಸಬೇಕು.

ಡೆಂಗ್ಯೂನಿಂದ ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಅಪಾಯ ಹೆಚ್ಚು. ಅಂದರೆ ಗರ್ಭಿಣಿಯರು, ಮಕ್ಕಳು, ವೃದ್ಧರು, ರೋಗಿಗಳು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಮನೆ ಸುತ್ತ ಸೊಳ್ಳೆ ಕಾಟ ಹೆಚ್ಚಿದ್ದರೆ ದೇಹ ಪೂರ್ತಿ ಮುಚ್ಚುವಂಥ ಬಟ್ಟೆ ಧರಿಸಿಕೊಳ್ಳಬೇಕು. ಇದೆಲ್ಲದರ ಜತೆಗೆ ನಾವು ಹುಶಾರಾಗಿರಬೇಕು. ಯಾವುದೇ ರೀತಿಯ ಜ್ವರ ಕಂಡರೂ ಉದಾಸೀನ ಮಾಡದೇ ವೈದ್ಯರಲ್ಲಿಗೆ ಹೋಗಿ ತೋರಿಸಿಕೊಳ್ಳಬೇಕು.

ಟಾಪ್ ನ್ಯೂಸ್

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

ವಿಶ್ವ ದಿಗ್ಗಜ ರಾಷ್ಟ್ರಗಳ ಅಪ್ರಬುದ್ಧ ರಾಜತಾಂತ್ರಿಕತೆ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Wild Elephant ದಾಳಿ ಸಮಸ್ಯೆ: ವೈಜ್ಞಾನಿಕ ಪರಿಹಾರ ಅಗತ್ಯ

Terror 2

Terrorism ನಿಗ್ರಹ ಎಲ್ಲ ದೇಶಗಳ ಧ್ಯೇಯವಾಗಲಿ

1-aww

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಸರಕಾರ ತುರ್ತು ಗಮನ ನೀಡಲಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.