ಗ್ರಾಮೀಣ ಪ್ರದೇಶಗಳತ್ತ ಚಿತ್ತ ಕೋವಿಡ್‌ ಪ್ರಸರಣ


Team Udayavani, Jul 22, 2020, 8:48 AM IST

ಗ್ರಾಮೀಣ ಪ್ರದೇಶಗಳತ್ತ ಚಿತ್ತ ಕೋವಿಡ್‌ ಪ್ರಸರಣ

ಸಾಂದರ್ಭಿಕ ಚಿತ್ರ

ದೇಶದಲ್ಲಿ ಕೋವಿಡ್‌ ಸಾಂಕ್ರಾಮಿಕವು ಸಮುದಾಯ ಪ್ರಸರಣ ಚರಣವನ್ನು ತಲುಪಿಬಿಟ್ಟಿದೆಯೇ ಎನ್ನುವ ಬಗ್ಗೆ ಕೆಲವು ದಿನಗಳಿಂದ ಜೋರಾಗಿ ಚರ್ಚೆ ನಡೆಯುತ್ತಿದೆ. ಈ ಪ್ರಶ್ನೆಗೆ ಸಾಂಕ್ರಾಮಿಕ ರೋಗ ತಡೆ ವಿಶೇಷಜ್ಞರು ಮತ್ತು ಸರಕಾರಗಳ ನಡುವೆ ಸಹಮತವಂತೂ ಇಲ್ಲ. ಆದರೆ ದೇಶದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯನ್ನು ಪರಿಗಣಿಸಿದಾಗ ನಿಜಕ್ಕೂ ರೋಗ ಸಮುದಾಯ ಪ್ರಸರಣ ಹಂತವನ್ನು ತಲುಪಿಬಿಟ್ಟಿತೇ ಎನ್ನುವ ಅನುಮಾನ ಕಾಡದಿರದು. ಒಟ್ಟು ಪ್ರಕರಣಗಳ ಸಂಖ್ಯೆ ಈಗಾಗಲೇ 11.71 ಲಕ್ಷ ದಾಟಿದ್ದರೆ, ಇದರಲ್ಲಿ 4 ಲಕ್ಷ ಸಕ್ರಿಯ ಪ್ರಕರಣಗಳು ಇವೆ. ಕಳವಳದ ಅಂಶವೆಂದರೆ, ಈಗ ನಿತ್ಯ ಸೋಂಕಿತರ ಸಂಖ್ಯೆ 40 ಸಾವಿರ ದಾಟಿರುವುದು!

ಇಂದು ದೇಶದಲ್ಲಿ ಟೆಸ್ಟ್‌ಗಳ ಪ್ರಮಾಣದಲ್ಲಿ ಹೆಚ್ಚಳವಾಗಿರುವ ಕಾರಣದಿಂದಾಗಿಯೇ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ ಕಾಣಿಸಿದೆ ಎನ್ನಲಾಗುತ್ತದೆ. ಆದರೆ ಮತ್ತಷ್ಟು ಪರೀಕ್ಷೆಗಳನ್ನು ನಡೆಸಿದರೆ, ನಿತ್ಯ ಸೋಂಕಿತರ ಸಂಖ್ಯೆಯಲ್ಲಿ ಮಗದಷ್ಟು ಏರಿಕೆ ಕಾಣುತ್ತದೆ ಎಂದರ್ಥ ಅಲ್ಲವೇ? ಈ ಕಾರಣಕ್ಕಾಗಿಯೇ ನಿತ್ಯ ಟೆಸ್ಟ್‌ಗಳ ಸಂಖ್ಯೆ ಈ ತಿಂಗಳಾಂತ್ಯಕ್ಕೆ ಕನಿಷ್ಠ ನಾಲ್ಕು ಲಕ್ಷದಷ್ಟಾದರೂ ನಡೆಯಬೇಕು ಎನ್ನುತ್ತಾರೆ ತಜ್ಞರು. ದೇಶದಲ್ಲಿ ಜುಲೈ 15ರಿಂದ ಪ್ರತಿ ನಿತ್ಯ 3 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳು ನಡೆಯಲಾರಂಭಿಸಿವೆ. ಗಮನಾರ್ಹ ಸಂಗತಿಯೆಂದರೆ ಇತ್ತ ರಾಜ್ಯದಲ್ಲೂ ಸಹ ಟೆಸ್ಟಿಂಗ್‌ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿರುವುದು. ಜೂನ್‌ ತಿಂಗಳ ವೇಳೆ 15-18 ಸಾವಿರದ ಆಸುಪಾಸು ನಡೆಯುತ್ತಿದ್ದ ನಿತ್ಯ ಟೆಸ್ಟಿಂಗ್‌ಗಳ ಸಂಖ್ಯೆ ಈಗ ಕೆಲವು ದಿನಗಳಿಂದ 35 ಸಾವಿರದ ಗಟಿ ದಾಟಿದೆ. ಈಗ ಕರ್ನಾಟಕವು ಸಕ್ರಿಯ ಪ್ರಕರಣಗಳಲ್ಲಿ ಮೂರನೇ ಸ್ಥಾನದಲ್ಲಿದ್ದು, ಮೊದಲೆರಡು ಹಾಟ್‌ಸ್ಪಾಟ್‌ಗಳಲ್ಲಿ ಮಹಾರಾಷ್ಟ್ರ ಹಾಗೂ ತಮಿಳುನಾಡು ಇವೆ. ರಾಜ್ಯದಲ್ಲಷ್ಟೇ ಅಲ್ಲದೇ ಅನ್ಯ ರಾಜ್ಯಗಳಲ್ಲೂ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಅನೇಕ ರಾಜ್ಯಗಳು ತಮ್ಮಲ್ಲಿ ಹಲವು ಭಾಗಗಳಲ್ಲಿ ಅರೆ ಅಥವಾ ಪೂರ್ಣ ಲಾಕ್‌ಡೌನ್‌ ಜಾರಿಮಾಡಿವೆ.

ಇವನ್ನೆಲ್ಲ ಗಮನಿಸಿದಾಗ ಕೋವಿಡ್‌-19 ಪ್ರಕರಣಗಳ ಸಂಖ್ಯೆ ಎಲ್ಲಿಗೆ ಹೋಗಿ ತಲುಪಲಿದೆ, ಎಷ್ಟು ಪಸರಿಸಲಿದೆ, ಯಾವಾಗ ನಿಲ್ಲಲಿದೆ ಎನ್ನುವ ಪ್ರಶ್ನೆ ಜನಸಾಮಾನ್ಯರನ್ನು ಕಾಡುತ್ತಿದೆ. ಇದೇ ವೇಳೆಯಲ್ಲೇ ಈ ರೋಗ ಮಾರಣಾಂತಿಕವಲ್ಲ ಎನ್ನುವುದು ನಿಜವಾದರೂ ಪ್ರತಿಯೊಂದು ಜೀವವೂ ಅಮೂಲ್ಯವಾದ್ದರಿಂದ ಸಾವನ್ನು ಅಂಕಿಯಲ್ಲಿ ಅಳೆಯುವುದು ತರವಾಗದು. ಈಗಾಗಲೇ ದೇಶದಲ್ಲಿ 7 ಲಕ್ಷಕ್ಕೂ ಅಧಿಕ ಜನರು ಗುಣಮುಖರಾಗಿದ್ದಾರೆ ಎನ್ನುವುದು ನೆಮ್ಮದಿಯ ವಿಷಯವೇ ಆದರೂ ನಿತ್ಯ ಸೋಂಕಿತರ ಸಂಖ್ಯೆ 40 ಸಾವಿರ ದಾಟುತ್ತಿರುವುದು ಖಂಡಿತ ಚಿಂತೆಯ ವಿಷಯವೇ ಸರಿ. ಈಗ ಗ್ರಾಮೀಣ ಭಾಗಗಳಲ್ಲೂ ಸೋಂಕಿತರ ಸಂಖ್ಯೆ ಏರುತ್ತಿದೆ. ಈ ಕಾರಣಕ್ಕಾಗಿಯೇ, ಎಲ್ಲ ರಾಜ್ಯ ಸರಕಾರಗಳೀಗ ತಮ್ಮ ಗಮನವನ್ನು ಗ್ರಾಮೀಣ ಭಾಗಗಳತ್ತ ಹೆಚ್ಚು ಹರಿಸಬೇಕಾದ ಅಗತ್ಯವಿದೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

ಮತದಾನಕ್ಕೆ ಬಿಸಿಲು ಅಡ್ಡಿಯಾಗದಿರಲಿ

Editorial:ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Editorial: ಮಣಿಪುರ- ಒಡೆದ ಮನಸು‌ ಬೆಸೆಯುವ ಕಾರ್ಯವಾಗಲಿ

Economy

ಉತ್ಪಾದನ ವಲಯದಲ್ಲಿ ಜಿಗಿತ: ಆರ್ಥಿಕತೆಗೆ ಮತ್ತಷ್ಟು ಬಲ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.