ದೀಪಾವಳಿ ಸಡಗರ ;ಎಚ್ಚರಿಕೆಯೂ ಅಗತ್ಯ


Team Udayavani, Nov 14, 2020, 6:15 AM IST

ದೀಪಾವಳಿ ಸಡಗರ ;ಎಚ್ಚರಿಕೆಯೂ ಅಗತ್ಯ

ಜಗತ್ತನ್ನೇ ಅನಿಶ್ಚಿತತೆಯ ಕತ್ತಲಲ್ಲಿ ಕೆಡವಲು ಕೋವಿಡ್‌ ಎಂಬ ಸಾಂಕ್ರಾಮಿಕ ಪ್ರಯತ್ನಿಸುತ್ತಿರುವ ವೇಳೆಯಲ್ಲೇ, ಬೆಳಕಿನ ಹಬ್ಬ ದೀಪಾವಳಿ ಎದುರಾಗಿದೆ. ಈಗಷ್ಟೇ ಸಕಲ ಜಾಗೃತಿಯೊಂದಿಗೆ ನವರಾತ್ರಿಯನ್ನು ಸಂಭ್ರಮದಿಂದ ಆಚರಿಸಿದ ಹೊಸ್ತಿಲಲ್ಲೇ ದೀಪಾವಳಿಯ ಉತ್ಸಾಹ ಮನೆಮನಗಳಲ್ಲೂ ಹೊಳೆಯುತ್ತಿದೆ.

ಹೊಸ ಬಟ್ಟೆ, ಸಿಹಿ ಖಾದ್ಯ, ಹಣ್ಣು-ಹೂಗಳು, ಪಟಾಕಿಗಳ ಖರೀದಿ..ಹಬ್ಬವಾಚರಿಸಲು ಮಹಾನಗರಗಳಿಂದ ಊರಿಗೆ ಹೊರಟುನಿಂತವರು… ಅವರಲ್ಲಿ ಮನೆಮಾಡಿರುವ ಸಡಗರದ ವಾತಾವರಣವೆಲ್ಲ, ಭಾರತೀಯರಲ್ಲಿ ದೀಪಾವಳಿ ಹಬ್ಬ ಎಂಥ ಸ್ಥಾನ ಪಡೆದಿದೆ ಎನ್ನುವುದನ್ನು ಸಾರುತ್ತಿದೆ.

ವಿಶೇಷವೆಂದರೆ, ಲಾಕ್‌ಡೌನ್‌ನಿಂದಾಗಿ ತತ್ತರಿಸಿರುವ ಆರ್ಥಿಕತೆಗೆ ಹಬ್ಬಗಳು ಬಲ ತುಂಬಲಾರಂಭಿಸಿವೆ. ಕೆಲವು ದಿನಗಳಿಂದ ಹೆಚ್ಚಾಗಿರುವ ಬೇಡಿಕೆಯಿಂದಾಗಿ ಮಾರುಕಟ್ಟೆಗಳು ಚೇತರಿಸಿಕೊಳ್ಳಲಾರಂಭಿಸಿವೆ. ಆದರೆ, ಈ ಸಂಭ್ರಮದ ಭರದಲ್ಲಿ ನಾವು ಅಸಡ್ಡೆ ಮಾಡಲೇಬಾರದು. ಹಿಂದೆಂದಿಗಿಂತಲೂ ಹೆಚ್ಚು ಎಚ್ಚರಿಕೆಯಿಂದ ಹಬ್ಬವನ್ನು ಆಚರಿಸಬೇಕಾದ ಅಗತ್ಯವಿದೆ ಎನ್ನುವುದನ್ನು ಮರೆಯದಿರೋಣ. ಸ್ವತ್ಛತೆ- ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವಂಥ ಸುರಕ್ಷಾ ಕ್ರಮಗಳ ಕಡೆಗಣನೆ ಆಗಲೇಬಾರದು.

ಹಬ್ಬದ ಕಾರಣಕ್ಕಾಗಿ ಮಾರುಕಟ್ಟೆಗಳಲ್ಲಿ ಜನ ಕಿಂಚಿತ್ತೂ ಭಯವಿಲ್ಲದೇ ಗಿಜುಗುಟ್ಟುತ್ತಿರುವುದೂ ಆತಂಕ ಹುಟ್ಟಿಸುತ್ತಿದೆ. ಕೋವಿಡ್‌ನ‌ ಅಪಾಯ ಇನ್ನೂ ದೂರವಾಗಿಲ್ಲ. ನಿತ್ಯವೂ ಸಾವಿರಾರು ಪ್ರಕರಣಗಳು ವರದಿಯಾಗುತ್ತಲೇ ಇವೆ. ಸಾಲುಸಾಲು ಹಬ್ಬಗಳ ಸಮಯದಲ್ಲಿ ಎಚ್ಚರಿಕೆ ವಹಿಸದಿದ್ದರೆ ಒಂದೇ ತಿಂಗಳಲ್ಲೇ ಪ್ರಕರಣಗಳ ಸಂಖ್ಯೆ 2 ದಶಲಕ್ಷ ದಾಖಲಾಗಬಹುದು ಎಂದು ಪರಿಣತರು ಎಚ್ಚರಿಸುತ್ತಿದ್ದಾರೆ.

ಇನ್ನು ದೀಪಾವಳಿಯ ಸಮಯದಲ್ಲಿ ದೀಪಗಳನ್ನು ಬೆಳಗುವ, ಪಟಾಕಿ ಹೊಡೆಯಬೇಕೆಂಬ ಉತ್ಸಾಹ ಬಹುತೇಕರಲ್ಲಿರುತ್ತದೆ. ನೆನಪಿಡಬೇಕಾದ
ಸಂಗತಿಯೆಂದರೆ, ಕೋವಿಡ್‌ನಿಂದಾಗಿ ನಾವೆಲ್ಲರೂ ಈಗ ಸ್ಯಾನಿಟೈಜರ್‌ಗಳನ್ನು ನಿರಂತರವಾಗಿ ಬಳಸುವ ಅಭ್ಯಾಸ ರೂಢಿಸಿಕೊಂಡಿದ್ದೇವೆ. ಪ್ರತಿ ಮನೆಯಲ್ಲೂ ಸ್ಯಾನಿಟೈಸರ್‌ ಬಾಕ್ಸ್‌ಗಳು ಇದ್ದೇ ಇರುತ್ತವೆ. ಅವು ದೀಪ ಬೆಳಗಿಸುವ ಅಥವಾ ಪಟಾಕಿ ಹಚ್ಚುವ ಸಮಯದಲ್ಲಿ ಅಪಾಯಕ್ಕೂ
ತಳ್ಳಬಲ್ಲವು.

ಸ್ಯಾನಿಟೈಸರ್‌ಗಳಲ್ಲಿ ಆಲ್ಕೋಹಾಲ್‌ ಅಂಶವಿರುವುದರಿಂದ ತ್ವರಿತವಾಗಿ ಬೆಂಕಿ ಹೊತ್ತಿಕೊಳ್ಳುವ ಸಾಧ್ಯತೆ ಇರುತ್ತದೆ. ಈ ಕಾರಣಕ್ಕಾಗಿಯೇ, ಸ್ಯಾನಿಟೈಸರ್‌ ಡಬ್ಬಿ ದೀಪಗಳ ಸಮೀಪ ಇರದಂತೆ ಎಚ್ಚರಿಕೆ ವಹಿಸಬೇಕಾದ ಅಗತ್ಯವೂ ಇದೆ. ಈಗಾಗಲೇ ಕೆಲವರು ಸ್ಯಾನಿಟೈಸರ್‌ ಬಳಸಿದ ಮೇಲೆ ಕ್ಯಾಂಡಲ್‌ ಅಥವಾ ದೀಪ ಹಚ್ಚುವ ಸಂದರ್ಭದಲ್ಲಿ ಗಾಯಗೊಂಡ ಘಟನೆಗಳೂ ವರದಿಯಾಗುತ್ತಿವೆ. ಹೀಗಾಗಿ, ಸಕಲ ಎಚ್ಚರಿಕೆಯೊಂದಿಗೆ ಬೆಳಕಿನ ಹಬ್ಬವನ್ನು ನಾವೆಲ್ಲರೂ ಆಚರಿಸಬೇಕಿದೆ. ದೀಪಾವಳಿ ಹಬ್ಬ ಎಲ್ಲರ ಬದುಕು ಬೆಳಗಿಸಲಿ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.