ಉದಾಸೀನ ಬೇಡ; ಹೋಮ್‌ ಐಸೊಲೇಶನ್‌ ಕಟ್ಟುನಿಟ್ಟಾಗಿರಲಿ


Team Udayavani, Jan 11, 2022, 6:30 AM IST

ಉದಾಸೀನ ಬೇಡ; ಹೋಮ್‌ ಐಸೊಲೇಶನ್‌ ಕಟ್ಟುನಿಟ್ಟಾಗಿರಲಿ

ಒಮಿಕ್ರಾನ್‌ ಕಾಣಿಸಿಕೊಂಡ ಬಳಿಕ ದೇಶಾದ್ಯಂತ ಕೊರೊನಾ ಕೇಸುಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸೋಮವಾರದ ವೇಳೆಗೆ 1.79 ಲಕ್ಷ ಕೇಸುಗಳು ಕಾಣಿಸಿಕೊಂಡಿವೆ. ಮಹಾರಾಷ್ಟ್ರ, ದಿಲ್ಲಿ ಮತ್ತು ಕರ್ನಾಟಕದಲ್ಲಿ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಹೀಗಾಗಿ ಕೊರೊನಾ ನಿಯಂತ್ರಣ ಸಂಬಂಧ ಕೇಂದ್ರ ಸರಕಾರ ಎಲ್ಲ ರಾಜ್ಯಗಳಿಗೆ ಹೋಮ್‌ ಐಸೊಲೇಶನ್‌ಕುರಿತಂತೆ ಮಾರ್ಗಸೂಚಿ ಹೊರಡಿಸಿದೆ.

ಮೂರನೇ ಅಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಬಹಳಷ್ಟು ಕಡಿಮೆ ಇದೆ. ಎರಡನೇ ಅಲೆಗೆ ಹೋಲಿಕೆ ಮಾಡಿದರೆ ಈಗ ಶೇ.5ರಿಂದ ಶೇ.10ರಷ್ಟು ಮಂದಿ ಮಾತ್ರ ಆಸ್ಪತ್ರೆಗೆ ದಾಖಲಾಗ ಬಹುದು. ಇದು ಮುಂದಿನ ದಿನಗಳಲ್ಲಿ ಬದಲಾಗಲೂಬಹುದು ಎಂದು ಕೇಂದ್ರ ಸರಕಾರವೇ ಹೇಳಿದೆ.

ಈಗಿನ ಲೆಕ್ಕಾಚಾರದಂತೆ ನೋಡಿದರೆ ಮೂರನೇ ಅಲೆಯಲ್ಲಿ ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ ಹೆಚ್ಚಾಗಿದೆ. ಹೀಗಾಗಿ ಈ ಬಾರಿ ಮನೆಯಲ್ಲೇ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ಇಡುವುದು ಕಷ್ಟ ಸಾಧ್ಯವಾದ ಕೆಲಸವಾಗಲಿದೆ. ಈಗಾಗಲೇ ಬಹಳಷ್ಟು ಮಂದಿ ಕೊರೊನಾ ಪಾಸಿಟಿವ್‌ ಆಗಿದ್ದರೂ ಹೇಳದೇ ಕೇಳದೇ ಬೆಂಗಳೂರು ಬಿಟ್ಟು ಹೋಗಿರುವುದೂ ಕಂಡು ಬಂದಿದೆ. ಹೀಗಾಗಿ ಮನೆಯಲ್ಲಿರುವವರನ್ನು ಹೊರಗೆ ಹೋಗದಂತೆ ಕಾಯ್ದುಕೊಳ್ಳಬೇಕಾಗಿದೆ.

ಹೋಮ್‌ ಐಸೊಲೇಶನ್‌ವಿಚಾರದಲ್ಲಿ ಕೇವಲ ಸರಕಾರ ಮಾತ್ರ ಕಠಿನ ನಿಯಮ ಮಾಡಿದರೆ ಸಾಕಾಗುವುದಿಲ್ಲ. ಸರಕಾರಗಳ ಜತೆ ನಾಗರಿಕರು ಕೈಜೋಡಿಸಬೇಕಾಗಿದೆ. ಸಾಧ್ಯವಾದಷ್ಟು ಮಟ್ಟಿಗೆ ಕೊರೊನಾ ಸೋಂಕಿತರು, ಮನೆಯಲ್ಲಿಯೇ ಐಸೋಲೇಟ್‌ ಆಗಿ ಇರಬೇಕಾಗುತ್ತದೆ. ಯಾವುದೇ ಕಾರಣಕ್ಕೂ ಮನೆಯಿಂದ ಹೊರಬರುವುದು, ಮನೆಯಲ್ಲೇ ಇರುವವರೊಂದಿಗೆ ಸಂಪರ್ಕದಲ್ಲಿರುವುದನ್ನು ಮಾಡಬಾರದು.

ಮೂರನೇ ಅಲೆ ಹೆಚ್ಚು ತೀವ್ರವಾಗಿರುತ್ತದೆ, ಹರಡುವಿಕೆಯ ಶಕ್ತಿಯೂ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯೂ ಸೇರಿದಂತೆ ಜಗತ್ತಿನ ನಾನಾ ಅಧ್ಯಯನಗಳು ಸ್ಪಷ್ಟವಾಗಿ ಹೇಳಿವೆ. ಇದಕ್ಕೆ ಪೂರಕವೆಂಬಂತೆ ಭಾರತವೂ ಸೇರಿದಂತೆ ವಿವಿಧ ದೇಶಗಳಲ್ಲಿ ಕೊರೊನಾ ಹರಡುವಿಕೆ ಪ್ರಮಾಣ ಹೆಚ್ಚಾಗಿದೆ. ಈ ಹೆಚ್ಚಳಕ್ಕೆ ಈಗಾಗಲೇ ಸೋಂಕು ತಗುಲಿರುವವರೇ ಕಾರಣ ಎಂಬುದನ್ನು ಮರೆಯುವಂತಿಲ್ಲ. ಈಗಾಗಲೇ ಸೋಂಕು ಕಾಣಿಸಿಕೊಂಡವರು ಜಾಗ್ರತೆಯಲ್ಲಿ ಇದ್ದಿದ್ದರೆ, ಹೆಚ್ಚು ಜನಕ್ಕೆ ಸೋಂಕು ತಗುಲುತ್ತಿರಲಿಲ್ಲ.

ಈಗ ಹೋಮ್‌ ಐಸೋಲೆಶನ್‌ನಲ್ಲಿರುವವರ ಕಥೆಯೂ ಅಷ್ಟೇ. ಅಲ್ಲದೆ ಈ ರೀತಿ ಮನೆಯಲ್ಲಿ ಇರುವವರು ಲಕ್ಷಣ ರಹಿತ ಅಥವಾ ಸೌಮ್ಯ ಸ್ವಭಾವದ ಸೋಂಕು ಹೊಂದಿರುತ್ತಾರೆ. ಇವರು ತಮಗೆ

ಕೊರೊನಾವೇ ಇಲ್ಲ ಎಂಬಂತೆ ವರ್ತನೆ ಮಾಡಿ, ಆಚೀಚೆ ಓಡಾಡುವುದು ಹೆಚ್ಚು. ಇವರೆಲ್ಲಾದರೂ ಬೇಕಾಬಿಟ್ಟಿಯಾಗಿ ಓಡಾಡಿದರೆ ಮುಂದಿನ ದಿನಗಳಲ್ಲಿ ಅಪಾಯ ಗ್ಯಾರಂಟಿ.

ಕೊರೊನಾ ಎರಡನೇ ಅಲೆ ವೇಳೆ ಶೇ.20ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಬಾರಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಕಡಿಮೆ ಇರಬಹುದು ಎಂದು ಕೇಂದ್ರ ಸರಕಾರವೇ ಹೇಳಿದೆ. ಎರಡನೇ ಅಲೆಗಿಂತ ಈ ಬಾರಿ ಕೊರೊನಾ ಹರಡುವಿಕೆ ಪ್ರಮಾಣ ಹೆಚ್ಚಿರುವುದರಿಂದ, ಮುಂದಿನ ದಿನಗಳಲ್ಲಿ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹೆಚ್ಚಬಹುದು. ಹೀಗಾಗಿ, ಕೊರೊನಾ ನಿಯಂತ್ರಣದಲ್ಲಿ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು.

 

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.