ಸಾರ್ವಜನಿಕ ದೂರುಗಳ ವಿಲೇವಾರಿಯಲ್ಲಿ ಅಸಡ್ಡೆ ಬೇಡ 


Team Udayavani, Sep 22, 2021, 6:00 AM IST

ಸಾರ್ವಜನಿಕ ದೂರುಗಳ ವಿಲೇವಾರಿಯಲ್ಲಿ ಅಸಡ್ಡೆ ಬೇಡ 

ಕೇಂದ್ರ ಸರಕಾರ ಗಾಂಧಿ ಜಯಂತಿಯಿಂದ ತಿಂಗಳ ಕಾಲ ಎಲ್ಲ ಸಚಿ ವಾಲಯಗಳು ಮತ್ತು ಇಲಾಖೆಗಳಲ್ಲಿ ಬಾಕಿ ಇರುವ ದೂರುಗಳನ್ನು ವಿಲೇವಾರಿಗೊಳಿಸಲು ಅಭಿಯಾನವೊಂದನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನದಡಿಯಲ್ಲಿ  ಸಂಸತ್‌ ಸದಸ್ಯರು, ರಾಜ್ಯ ಸರಕಾರಗಳಿಂದ ದೂರು ವಿಲೇವಾರಿ, ಸಂಸದೀಯ ಸಮಿತಿಗಳು ನೀಡಿದ ಭರವಸೆಗಳ ಬಾಕಿ ಅನುಷ್ಠಾನ ಹಾಗೂ ಸಾರ್ವಜನಿಕ ದೂರುಗಳನ್ನು ಕೂಡ ಆದ್ಯತೆಯ ಮೇಲೆ ಇತ್ಯರ್ಥಗೊಳಿಸಲು ಉದ್ದೇಶಿಸಿದೆ.

ಸಾರ್ವಜನಿಕ ದೂರುಗಳಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಲ್ಲಿ ಪ್ರತ್ಯೇಕ ಸಚಿವಾಲಯ ಅಥವಾ ವ್ಯವಸ್ಥೆಗಳಿದ್ದರೂ ದೂರುಗಳಿಗೆ ಕನಿಷ್ಠ ಸ್ಪಂದನೆಯೂ ಲಭಿಸುತ್ತಿಲ್ಲ ಎಂಬ ಆರೋಪ ಸಾರ್ವಜನಿಕ ರದ್ದಾಗಿದೆ. ಇನ್ನು ಈ ದೂರುಗಳ ವಿಲೇವಾರಿ, ಇತ್ಯರ್ಥಕ್ಕೆ ಸಂಬಂಧಿಸಿದಂತೆ ಸರಕಾರ ಹಲವಾರು ಸಮಿತಿಗಳನ್ನು ರಚಿಸಿ  ವರದಿಗಳನ್ನು ಪಡೆದು ಕೊಂಡಿದ್ದರೂ ಕಾರ್ಯಯೋಗ್ಯವಾದ ಶಿಫಾರಸುಗಳನ್ನು ಅನುಷ್ಠಾನ ಗೊಳಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳು ನಿರಾಸಕ್ತಿ ವಹಿಸಿದುದರಿಂ ದಾಗಿ ಭಾರೀ ಸಂಖ್ಯೆಯ ದೂರುಗಳು ಪ್ರತಿಯೊಂದೂ ಸಚಿವಾಲಯ ಮತ್ತು ಇಲಾಖೆಗಳಲ್ಲಿ ರಾಶಿಬಿದ್ದಿವೆ. ಕಳೆದೆರಡು ವರ್ಷಗಳಿಂದೀಚೆಗೆ ದೇಶಾದ್ಯಂತ ಕೊರೊನಾ ವ್ಯಾಪಿಸಿದಾಗಿನಿಂದ ಸಚಿವಾಲಯಗಳು ಮತ್ತು ಇಲಾಖೆಗಳಲ್ಲಿ ಈ ದೂರುಗಳನ್ನು ಕೇಳುವವರೇ ಇಲ್ಲದಂತಾಗಿದೆ.

ಕೆಲವೊಂದು ವಿಷಯಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ವಿವಿಧ ಸಚಿವಾಲಯ ಮತ್ತು ಇಲಾಖೆಗಳಿಗೆ ಸ್ಪಷ್ಟನೆ ಅಥವಾ ಪರಿಹಾರ ಕೋರಿ ದೂರುಗಳನ್ನು ನೀಡುವುದು ಸಾಮಾನ್ಯ. ಇವುಗಳಲ್ಲಿ ಕೆಲವೊಂದು ಅತ್ಯಂತ ಮಹತ್ವದ ಮತ್ತು ತ್ವರಿತ ಉತ್ತರ ಬಯಸುವ ದೂರುಗಳಾಗಿರುತ್ತವೆ. ಈ ದೂರುಗಳ ವಿಲೇವಾರಿಗಾಗಿ ಕೇಂದ್ರ ಮತ್ತು ರಾಜ್ಯ ಸರಕಾರ ಹೊಂದಿ ರುವ ನಿಯಮಾವಳಿಗಳಲ್ಲಿ ಕಾಲಮಿತಿಯನ್ನು ನಿಗದಿಪಡಿಸಲಾಗಿದೆಯಾದರೂ ಬಹುತೇಕ ಪ್ರಕರಣಗಳಲ್ಲಿ ಇದನ್ನು ಪಾಲಿಸಲಾಗುತ್ತಿಲ್ಲ.

ಇಂಥ ದೂರುಗಳ ವಿಲೇವಾರಿಯಲ್ಲಾಗುತ್ತಿರುವ ವಿಳಂಬವನ್ನು ಹೋಗಲಾಡಿಸಲು, ಪ್ರಕ್ರಿಯೆಯನ್ನು ತ್ವರಿತ ಮತ್ತು ಸರಳಗೊಳಿಸಲು ಕೇಂದ್ರ ಮತ್ತು ರಾಜ್ಯ ಸರಕಾರಗಳಿಂದ ನಿರಂತರ ಹೊಸ ಹೊಸ ಯೋಜನೆ, ವಿಧಾನ ಅನುಸರಿಸಲಾಗುತ್ತ ಬಂದಿದ್ದರೂ ಇವ್ಯಾವುವೂ ನಿರೀಕ್ಷಿತ ಯಶ ಸ್ಸನ್ನು ಕಂಡಿಲ್ಲ. ಸರಕಾರಿ ಕೆಲಸ ಕಾರ್ಯಗಳೆಲ್ಲವೂ ಇದೀಗ ಮೊಬೈಲ್‌ ಮೂಲಕ ಅಂಗೈಯಲ್ಲಿಯೇ ನಡೆಯುವಂತಾಗಿದ್ದರೂ ದೂರು ಗಳ ಇತ್ಯರ್ಥ ಮಾತ್ರ ಇನ್ನೂ ಆಮೆಗತಿಯಲ್ಲಿ ಸಾಗುತ್ತಿರುವುದು ತೀರಾ ವಿಪ ರ್ಯಾಸ.  ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ಇಂತಹ ವಿಳಂಬವನ್ನು ಸಾಕಷ್ಟು ಕಡಿಮೆಗೊಳಿಸಬಹುದಾಗಿದೆ. ಇವೆಲ್ಲದರ ಹಿನ್ನೆಲೆ ಯಲ್ಲಿ ಕೇಂದ್ರ ಸರಕಾರ ಇದೀಗ ದೂರುಗಳ ವಿಲೇವಾರಿಗೆ ಕಡತ ಯಜ್ಞದ ಮಾದರಿಯಲ್ಲಿ ಅಭಿಯಾನವನ್ನು ನಡೆಸಲು ನಿರ್ಧರಿಸಿರುವುದು ಸ್ವಾಗತಾರ್ಹ. ಆದರೆ ಈ ಅಭಿಯಾನವೂ ಕೇವಲ ಆರಂಭಶೂರತನಕ್ಕೆ ಸೀಮಿತವಾಗದಿರಲಿ. ವಿಲೇವಾರಿ ಪ್ರಕ್ರಿಯೆ ನಿರಂತರವಾಗಿ ನಡೆಯು ವಂತಾದಲ್ಲಿ ಈ ಅಭಿಯಾನದ ನೈಜ ಉದ್ದೇಶ ಈಡೇರಿದಂತಾಗಲಿದೆ. ಈ ನಿಟ್ಟಿನಲ್ಲಿ ಸರಕಾರದ ಎಲ್ಲ ಇಲಾಖೆಗಳ ಅಧಿಕಾರಿಗಳ ಇಚ್ಛಾಶಕ್ತಿ ಮತ್ತು ಬದ್ಧತೆ ಪ್ರಮುಖ. ಇಷ್ಟು ಮಾತ್ರವಲ್ಲದೆ ಸಾರ್ವಜನಿಕರೂ ಕೂಡ ಸಣ್ಣಪುಟ್ಟ ವಿಚಾರಗಳಿಗೆಲ್ಲ ದೂರು ನೀಡುವ ಚಾಳಿಯಿಂದ ಹೊರಬಂದು ಜನಹಿತಕ್ಕೆ ಪೂರಕವಾದ ದೂರುಗಳನ್ನು ಮಾತ್ರವೇ ಸಲ್ಲಿಸಿದಲ್ಲಿ ಅಧಿಕಾರಿಗಳ ಶ್ರಮ ಮತ್ತು ಸಮಯ ಎರಡೂ ಉಳಿತಾಯವಾಗಲು ಸಾಧ್ಯ.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.