ವಿದ್ಯಾರ್ಥಿಗಳೇ ಎದೆಗುಂದದಿರಿ

ಸೋಲು-ಗೆಲುವು ಬದುಕಿನ ಭಾಗ

Team Udayavani, Apr 17, 2019, 6:00 AM IST

r-17

ಮಾರ್ಚ್‌ ತಿಂಗಳಲ್ಲಿ ನಡೆದಿದ್ದ 2018-19ನೇ ಸಾಲಿನ ದ್ವಿತೀಯ ಪಿಯುಸಿ ಫ‌ಲಿತಾಂಶ ಹೊರಬಿದ್ದಿದ್ದು, ಈ ಬಾರಿ ರಾಜ್ಯದ ವಿದ್ಯಾರ್ಥಿಗಳು ಹಿಂದೆಂದಿಗಿಂತಲೂ ಉತ್ತಮ ಸಾಧನೆ ಮಾಡಿದ್ದಾರೆ. ಅದರಲ್ಲೂ 90 ಪ್ರತಿಶತ ಅಂಕಗಳಂತೂ ಸಾಮಾನ್ಯ ಎನ್ನಿಸುವಷ್ಟರ ಮಟ್ಟಿಗೆ ಬಂದಿವೆ. ಊಹಿಸಿದಂತೆಯೇ ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿನಿಯರ ಮೇಲುಗೈಯಾಗಿದೆ. ಸಾಧನೆ ಮಾಡಿದ ವಿದ್ಯಾರ್ಥಿಗಳ ಪರಿಶ್ರಮದ ಕಥೆಗಳು, ಸಾಧಕ ಜಿಲ್ಲೆಗಳ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳ ರೇಟಿಂಗ್‌ಗಳು ಸದ್ದು ಮಾಡಿವೆ…

ಇವೆಲ್ಲದರ ನಡುವೆಯೇ, ಸೋಮವಾರವಷ್ಟೇ ಉಡುಪಿ ಜಿಲ್ಲೆಯ ಕೊಕ್ಕರ್ಣೆ ಸಮೀಪದ ವಿದ್ಯಾರ್ಥಿನಿಯೊಬ್ಬಳು ಕನ್ನಡ ಪರೀಕ್ಷೆಯಲ್ಲಿ ಅನುತ್ತೀರ್ಣಳಾದ ಕಾರಣಕ್ಕಾಗಿ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಡೆದುಹೋಗಿದೆ.ಅದರಂತೆಯೇ ಪ್ರತಿವರ್ಷವೂ ಕಾಡುವ ಆತಂಕ-ಮಡುಗಟ್ಟುವ ನೋವೊಂದು ಮತ್ತೆ ರಾಜ್ಯವನ್ನು ಆವರಿಸಿದೆ. “ಪರೀಕ್ಷೆಯೇ ಎಲ್ಲವೂ ಅಲ್ಲ, ಫೇಲಾದವರೂ ಸಾಧಕರಾದ ಅನೇಕ ಕಥೆಗಳಿವೆ’ ಎಂಬರ್ಥದ ಪ್ರೋತ್ಸಾಹದ ನುಡಿಗಳನ್ನು ಎಷ್ಟೇ ಆಡಿದರೂ, ವಾಸ್ತವದಲ್ಲಿ ಪರಿಸ್ಥಿತಿ ನಿಜಕ್ಕೂ ಬದಲಾಗುತ್ತಿದೆಯೇ ಎನ್ನುವ ಪ್ರಶ್ನೆಯನ್ನು ಇಂಥ ಘಟನೆಗಳು ಹುಟ್ಟುಹಾಕುತ್ತಿವೆ. ಏಕೆಂದರೆ, ಸ್ಪರ್ಧಾತ್ಮಕತೆಯ ಓಟದಲ್ಲಿ ಮಕ್ಕಳು-ಪೋಷಕರು ಎಷ್ಟು ವೇಗವಾಗಿ ಓಡುತ್ತಿದ್ದಾರೆಂದರೆ , ಸಾವರಿಸಿಕೊಂಡು ವಾಸ್ತವವನ್ನು ಅರಿತುಕೊಳ್ಳುವುದಕ್ಕೆ, ಕಿವಿಮಾತುಗಳನ್ನು ಎದೆಗೆ ಇಳಿಸಿಕೊಳ್ಳುವುದಕ್ಕೆ ಅವರಿಗೆ ಸಾಧ್ಯವಾಗುತ್ತಲೇ ಇಲ್ಲ. ಯಾವ ಸಂಗತಿ ಜೀವನದ ಒಂದು ಚಿಕ್ಕ ಭಾಗವಾಗಬೇಕೋ, ಅದೇ ಸಂಗತಿ ಜೀವನವನ್ನು ಕೊನೆಗೊಳಿಸುವಷ್ಟು ಬಲಿಷ್ಠವಾಗಿ ಬದಲಾಗಿದ್ದೇಕೆ? ಪಿಯುಸಿ ಅಥವಾ ಎಸ್‌ಎಸ್‌ಎಲ್‌ಸಿ ಪರೀಕ್ಷೆಯೇ ಸರ್ವಸ್ವ, ಅದರಲ್ಲಿ ವಿಫ‌ಲರಾದರೆ ಜೀವನದಲ್ಲೇ ವಿಫ‌ಲವಾದಂತೆ ಎಂಬ ಭಾವನೆ ಎಷ್ಟು ಪ್ರಬಲವಾಗಿ ಬದಲಾಗಿದೆಯೆಂದರೆ, ವಿದ್ಯಾರ್ಥಿಗಳು ತಮ್ಮ ಅಮೂಲ್ಯ ಜೀವನವನ್ನು ಕ್ಷಣಾರ್ಧದಲ್ಲಿ ಕೈಚೆಲ್ಲುತ್ತಿದ್ದಾರೆ.

ಕೇವಲ ಶಿಕ್ಷಕರು, ಪೋಷಕರಷ್ಟೇ ಅಲ್ಲ, ಮಾಧ್ಯಮ ರಂಗ, ಶೈಕ್ಷಣಿಕ ವಲಯ ಯಾವ ಮಟ್ಟಕ್ಕೆ ಪಿಯುಸಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಸುತ್ತ ಅಗಾಧ ನಿರೀಕ್ಷೆಗಳ ಬೆಟ್ಟಗಳನ್ನು ಸೃಷ್ಟಿಸಿಬಿಟ್ಟಿದೆಯೆಂದರೆ, ಮಕ್ಕಳ ಮೇಲೆ ಅವರ ವಯೋಮಾನಕ್ಕೆ ಅಸಹಜವಾದಂಥ ಒತ್ತಡ ಬೀಳುತ್ತಿದೆ. ಅನುತೀರ್ಣರಾಗಿಬಿಟ್ಟರೆ ಮುಂದೆ ಬೇರೆ ದಾರಿಯೇ ಇಲ್ಲ ಎನ್ನುವಂಥ ಮೌಡ್ಯವನ್ನು ನಾವೇಕೆ ಅವರ ಸುತ್ತ ಕಟ್ಟಿಬಿಟ್ಟಿದ್ದೇವೋ ತಿಳಿಯದು.

ಶಾಲೆಗಳಲ್ಲಿ ಜೀವನಮೌಲ್ಯಗಳ ಕುರಿತ ಪಾಠಗಳ ಅಗತ್ಯ ಎಷ್ಟಿದೆ ಎನ್ನುವುದನ್ನು ಈ ಸಂಗತಿ ಸಾರುತ್ತಿದೆ. ವಿದ್ಯಾರ್ಥಿಯೊಬ್ಬ/ಬ್ಬಳು ನಪಾಸಾದರೆ ಆತ/ಆಕೆಯ ಅಪ್ಪ-ಅಮ್ಮನೇನೋ ಅದನ್ನು ಒಂದು ಚಿಕ್ಕ ವೈಫ‌ಲ್ಯ ಎಂದು ಪರಿಗಣಿಸಿ ಪ್ರೋತ್ಸಾಹಿಸಬಹುದು. ಆದರೆ ಆ ವಿದ್ಯಾರ್ಥಿಗೆ ಕೇವಲ ಮನೆಯಲ್ಲಷ್ಟೇ ಅಲ್ಲ, ಸುತ್ತಲಿನ ಜನ(ಮುಖ್ಯವಾಗಿ ಬಂಧು-ಬಳಗದ ಕೊಂಕು ಮಾತುಗಳ ಭಯ ಮಕ್ಕಳಿಗೆ ಬಹಳ ಇರುತ್ತದೆ), ಶಾಲೆಗಳ ಪರಿಸರವೂ ವಿದ್ಯಾರ್ಥಿ ಸ್ನೇಹಿಯಾಗಿರಬೇಕು. ನಪಾಸಾದ ವಿದ್ಯಾರ್ಥಿಗಳಿಗೆ ಪ್ರತಿ ಕಾಲೇಜುಗಳಲ್ಲೂ ಕೌನ್ಸೆಲಿಂಗ್‌ ಕೊಡಿಸಬೇಕಾದಂಥ ವ್ಯವಸ್ಥೆ ಅಸ್ತಿತ್ವಕ್ಕೆ ತರಬೇಕಿದೆ. ಈ ಕೆಲಸವನ್ನು ಸರ್ಕಾರವೇ ಕೈಗೆತ್ತಿಕೊಳ್ಳುವುದು ಒಳಿತು. ಪ್ರತಿ ಕಾಲೇಜು-ಶಾಲೆಯಲ್ಲೂ ಆಯಾ ಪ್ರಾಂತ್ಯದ ಮಾನಸಿಕ ತಜ್ಞರಿಂದ, ಸಾಧಕರಿಂದ ಮಕ್ಕಳಿಗೆ ಕೌನ್ಸೆಲಿಂಗ್‌ ಕೊಡಿಸಿ, ಪೂರಕ ಪರೀಕ್ಷೆಗೆ ಅವರನ್ನು ಸಜ್ಜುಗೊಳಿಸಬೇಕು. ಇಡೀ ವ್ಯವಸ್ಥೆಯೇ ಮಕ್ಕಳ ಪರ ನಿಂತಾಗ ಅವರಿಗೂ ಹೋರಾಡುವ ಛಲ ಬರುತ್ತದೆ.

ಉಪ್ಪಿಷ್ಟು ಹುಳಿಯಿಷ್ಟು ಕಾರ ಸಿಹಿಯಷ್ಟಿಷ್ಟು
ಒಪ್ಪಿರ್ದೊಡದು ಭೋಜ್ಯವಂತು ಜೀವಿತಂ
ತಪ್ಪು ಸರಿ ಬೆಪ್ಪು ಜಾಣಂದ ಕುಂದುಗಳ ಬಗೆ
ಯಿಪ್ಪತ್ತು ಸೇರೆರುಚಿ- ಮಂಕುತಿಮ್ಮ
ಅಂದರು ಡಿವಿಜಿಯವರು. ಬದುಕೆಂದರೆ ಬರೀ ಸಿಹಿಯಷ್ಟೇ ಅಲ್ಲ, ಊಟದಲ್ಲಿ ಉಪ್ಪು, ಹುಳಿ, ಖಾರ, ಸಿಹಿ, ಎಲ್ಲವೂ ಸಮ ಪ್ರಮಾಣದಲ್ಲಿ ಇದ್ದರೆ ಹೇಗೆ ಭೋಜನ ಉತ್ತಮವಾಗುತ್ತದೋ, ಹಾಗೆಯೇ ಬದುಕಿನಲ್ಲೂ ಸರಿ, ತಪ್ಪು, ಜಾಣ್ಮೆ, ಸೋಲು-ಗೆಲುವು ಸೇರಿದಂತೆ ಹತ್ತಾರು ಬಗೆಯ ಭಾವಗಳೂ ಇರಬೇಕು ಎನ್ನುವುದು ಇದರರ್ಥ. ಡಿ.ವಿ.ಜಿ.ಯವರ ಈ ದಾರ್ಶನಿಕ ಹಿತವಚನವನ್ನು ಇಂದು ಪೋಷಕರು, ಮಕ್ಕಳು, ಶಿಕ್ಷಕರು, ಒಟ್ಟಲ್ಲಿ ಎಲ್ಲರೂ ಮನನ ಮಾಡಿಕೊಳ್ಳುವ ಅಗತ್ಯವಿದೆ.

ಟಾಪ್ ನ್ಯೂಸ್

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mob

OTT; ಅಸಭ್ಯ ಒಟಿಟಿ ನಿಯಂತ್ರಣ: ಶಾಶ್ವತ ಕಡಿವಾಣ ಅಗತ್ಯ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಒಂದು ದೇಶ-ಒಂದು ಚುನಾವಣೆ ಎಲ್ಲರ ಸಹಮತ ದೊರೆಯಲಿ

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

ಕೃತಕ ಬಣ್ಣ ಬಳಕೆಗೆ ನಿಷೇಧ: ಕಟ್ಟುನಿಟ್ಟಾಗಿ ಪಾಲನೆಯಾಗಲಿ…

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Aviation: ವಿಮಾನಯಾನ: ಭದ್ರತಾ ಕಾರ್ಯತಂತ್ರವೂ ಬದಲಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

Karnataka Governament: ಕಾರ್ಯಸಾಧು ಶಿಫಾರಸುಗಳ ಜಾರಿಗೆ ಸರಕಾರ ಮುಂದಾಗಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.