ಇನ್ನು ಸಿಇಟಿ ಕೌನ್ಸೆಲಿಂಗ್‌ ತಡ ಮಾಡುವುದು ಬೇಡ


Team Udayavani, Sep 5, 2022, 6:00 AM IST

ಇನ್ನು ಸಿಇಟಿ ಕೌನ್ಸೆಲಿಂಗ್‌ ತಡ ಮಾಡುವುದು ಬೇಡ

ಪುನರಾವರ್ತಿತ ವಿದ್ಯಾರ್ಥಿಗಳ ಪಿಯು ಅಂಕ ಪರಿಗಣನೆ ವಿಚಾರದಲ್ಲಿ ಎದ್ದಿದ್ದ ಗೊಂದಲಗಳು ಬಗೆಹರಿದಿದ್ದು, ರಾಜ್ಯ ಸರಕಾರವು ಶೀಘ್ರದಲ್ಲೇ ಕೌನ್ಸೆಲಿಂಗ್‌ ದಿನಾಂಕ ಪ್ರಕಟಿಸಿ ತಾಂತ್ರಿಕ ಕಾಲೇಜುಗಳಿಗೆ ವಿದ್ಯಾರ್ಥಿಗಳನ್ನು ಪ್ರವೇಶ ಮಾಡಿಕೊಳ್ಳುವತ್ತ ಗಮನಹರಿಸಲಿ. ಈಗಾಗಲೇ ಸೆಪ್ಟಂಬರ್‌ ತಿಂಗಳು ಆರಂಭವಾಗಿದ್ದು, ಸದ್ಯ ವಿದ್ಯಾರ್ಥಿಗಳ ದಾಖಲಾತಿಗಳ ಪರಿ ಶೀಲನೆಯಷ್ಟೇ ಆಗುತ್ತಿದೆ. ಉಳಿದ ಪ್ರಕ್ರಿಯೆ ಈಗ ಆರಂಭವಾದರೂ, ಮುಗಿಯಲು ಇನ್ನೂ ಒಂದು ತಿಂಗಳಿಗೂ ಹೆಚ್ಚು ಕಾಲ ಬೇಕಾಗುತ್ತದೆ.

ಶನಿವಾರವಷ್ಟೇ ರಾಜ್ಯ ಹೈಕೋರ್ಟ್‌ ಪುನರಾವರ್ತಿತ ವಿದ್ಯಾರ್ಥಿಗಳ ಪರವಾಗಿ ತೀರ್ಪು ನೀಡಿತ್ತು. ಅಂದರೆ, ಕಳೆದ ಸಾಲಿನಲ್ಲಿ ಪಿಯು ತೇರ್ಗಡೆ ಯಾಗಿದ್ದ ವಿದ್ಯಾರ್ಥಿಗಳ ಸಿಇಟಿ ಅಂಕವನ್ನು ಮಾತ್ರ ಪರಿಗಣಿಸುತ್ತೇವೆ. ಆದರೆ ಪಿಯು ಅಂಕಗಳನ್ನು ಪರಿಗಣಿಸಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿತ್ತು. ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ವೃತ್ತಿ ಶಿಕ್ಷಣ ಪ್ರವೇಶ ಪಡೆಯುವಲ್ಲಿ ವಿಫ‌ಲರಾಗುತ್ತಿದ್ದರು. ಈ ವಿಚಾರದಲ್ಲಿ ಸರಕಾರಕ್ಕೆ ವಿದ್ಯಾರ್ಥಿಗಳು ಮನವಿ ಮಾಡಿದ್ದರೂ, ಯಾವುದೇ ಫ‌ಲ ನೀಡಿರಲಿಲ್ಲ. ಹೀಗಾಗಿ, ಹೈಕೋರ್ಟ್‌ ಮೆಟ್ಟಿಲೇರಿದ್ದ ವಿದ್ಯಾರ್ಥಿಗಳು ತಮ್ಮ ಪಿಯು ಅಂಕವನ್ನು ಪರಿಗಣನೆ ಮಾಡುವಂತೆ ಸೂಚಿಸಬೇಕು ಎಂದಿದ್ದರು. ಈ ಬಗ್ಗೆ ವಾದ-ಪ್ರತಿವಾದ ಆಲಿಸಿದ್ದ ಹೈಕೋರ್ಟ್‌, ಶೇ. 50-50ರ ಆಧಾರದಲ್ಲಿ ಪುನರಾವರ್ತಿತ ವಿದ್ಯಾರ್ಥಿಗಳಿಗೂ ವೃತ್ತಿಶಿಕ್ಷಣಕ್ಕೆ ಪ್ರವೇಶ ನೀಡಬೇಕು ಎಂದು ಆದೇಶ ನೀಡಿದೆ. ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ನಿರುಮ್ಮಳರಾಗಿದ್ದಾರೆ.

ಈಗ ಹೈಕೋರ್ಟ್‌ನ ಈ ತೀರ್ಪಿನ ಬಗ್ಗೆ ಚರ್ಚೆಗಳೂ ನಡೆಯುತ್ತಿವೆ. ಕಳೆದ ಶೈಕ್ಷಣಿಕ ವರ್ಷದ ಸಾಲಿನಲ್ಲಿ ಪಿಯು ಪರೀಕ್ಷೆ ನಡೆಸದೇ ಮೌಲ್ಯಾಂಕನದ ಮೂಲಕ ತೇರ್ಗಡೆ ಮಾಡಲಾಗಿತ್ತು. ಜತೆಗೆ ಕಳೆದ ವರ್ಷ ವೃತ್ತಿಪರ ಶಿಕ್ಷಣ ಪ್ರವೇಶಕ್ಕೆ ಕೇವಲ ಸಿಇಟಿ ಅಂಕಗಳನ್ನು ಮಾತ್ರ ಪರಿ ಗಣಿಸಲಾಗಿತ್ತು. ಈ ಬಾರಿಯೂ ಪುನರಾವರ್ತಿತ ವಿದ್ಯಾರ್ಥಿಗಳ ವಿಚಾರದಲ್ಲಿ ಸರಕಾರ ಅದೇ ನಿಯಮ ಪಾಲನೆ ಮಾಡಿತ್ತು. ಆದರೆ, ಈ ನಿಯಮದಿಂದಾಗಿ ಬಹಳಷ್ಟು ಪುನರಾವರ್ತಿತ ವಿದ್ಯಾರ್ಥಿಗಳಿಗೆ ಸೀಟು ತಪ್ಪುವ ಆತಂಕ ಎದುರಾಗಿತ್ತು. ಹೀಗಾಗಿ ಹೈಕೋರ್ಟ್‌ಗೆ ಹೋಗಿದ್ದರು.

ಆದರೀಗ ಹೊಸ ಚರ್ಚೆಯೂ ಶುರುವಾಗಿದೆ. ಕಳೆದ ವರ್ಷ ಪರೀಕ್ಷೆ ಇಲ್ಲದ್ದರಿಂದ ಹೆಚ್ಚಾಗಿಯೇ ಅಂಕ ನೀಡಲಾಗಿತ್ತು. ಇದರಿಂದಾಗಿ ಈ ವರ್ಷ ರ್‍ಯಾಂಕ್‌ ಪಡೆದು ವೃತ್ತಿಪರ ಶಿಕ್ಷಣಕ್ಕೆ ಸೇರಲು ತುದಿಗಾಲಲ್ಲಿ ನಿಂತಿ ರುವ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ. ಹೀಗಾಗಿ, ಈಗ ಎದ್ದಿರುವ ಗೊಂದಲವನ್ನು ಸರಕಾರ ಯಾವ ರೀತಿ ಪರಿಹಾರ ಮಾಡಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ. ಏನೇ ಆಗಲಿ, ರಾಜ್ಯ ಸರಕಾರ ಹಗಲಿರುಳು ಕೆಲಸ ಮಾಡಿ ಇದಕ್ಕೊಂದು ಪರಿಹಾರ ಸೂತ್ರ ತರಬೇಕು. ಯಾವುದೇ ವಿದ್ಯಾರ್ಥಿಗಳಿಗೆ ಅನ್ಯಾಯ ವಾಗದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಸರಕಾರದ ಮೇಲಿದೆ. ಏಕೆಂದರೆ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಹೊಸ ವಿದ್ಯಾರ್ಥಿಗಳ ರ್‍ಯಾಂಕಿಂಗ್‌ ಈಗ ಬದಲಾಗುವ ಸಾಧ್ಯತೆಯೂ ಇದೆ.

ಅಲ್ಲದೆ, ಯಾವುದೇ ಕಾರಣಕ್ಕೂ ಸಿಇಟಿ ದಾಖಲಾತಿ ಪ್ರಕ್ರಿಯೆಯನ್ನು ತಡಮಾಡದಿರಲಿ. ಕಾಲೇಜುಗಳು ತಡವಾಗಿ ಆರಂಭವಾದರೆ ವಿದ್ಯಾರ್ಥಿ ಗಳ ಪಾಠ ಪ್ರವಚನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ, ಶಿಕ್ಷಣ ತಜ್ಞರನ್ನು ಒಳಗೊಂಡಂತೆ ಎಲ್ಲರ ಜತೆ ಚರ್ಚಿಸಿ ಇದಕ್ಕೊಂದು ಪರಿಹಾರ ಕಂಡು ಹಿಡಿಯಲಿ ಎಂಬುದೇ ವಿದ್ಯಾರ್ಥಿಗಳ ಬಯಕೆಯಾಗಿದೆ.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.