ಸುಲಭದ ಸಾಲಕ್ಕಾಗಿ ವಂಚನೆಯ ಬಲೆಗೆ ಬೀಳದಿರಿ


Team Udayavani, Aug 22, 2022, 6:00 AM IST

ಸುಲಭದ ಸಾಲಕ್ಕಾಗಿ ವಂಚನೆಯ ಬಲೆಗೆ ಬೀಳದಿರಿ

ಚೀನದ ಸುಲಭ ಸಾಲದ ವಂಚನೆಯ ಜಾಲಕ್ಕೆ ಬೀಳಬೇಡಿ ಎಂದು ಪದೇ ಪದೆ ಜನರಿಗೆ ಜಾಗೃತಿ ಮೂಡಿಸುತ್ತಿದ್ದರೂ, ಇದು ಕಡಿಮೆ ಯಾಗದೇ ಇರುವುದು ದುರದೃಷ್ಟಕರ ಸಂಗತಿ. ಇಂದಿಗೂ, ಚೀನ ಲೋನ್‌ ಆ್ಯಪ್‌ ಗಳ ಹಾವಳಿ ಮುಂದುವರಿದಿದ್ದು, ಲಕ್ಷಾಂತರ ಭಾರತೀ ಯರು ಸಾವಿರಾರು ರೂಪಾಯಿ ಕಳೆದುಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ಲ, ಈ ಬಲೆಯೊಳಗೆ ಸಿಲುಕಿದ ನೂರಾರು ಮಂದಿ ತಮ್ಮ ಖಾಸಗೀತನವನ್ನೂ ಕಳೆದುಕೊಂಡಿದ್ದಾರೆ.

ಸುಲಭವಾಗಿ ಸಾಲ ನೀಡುವ ಆ್ಯಪ್‌ಗ್ಳ ಕುರಿತಂತೆ ಬಲವಾಗಿ ಯೋಚಿಸಬೇಕಾದ ಅನಿವಾರ್ಯ ಇದೆ. ಕೇಂದ್ರ ಸರಕಾರ ಮತ್ತು ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾತ್ರ ಈ ಬಗ್ಗೆ ಯೋಚಿಸಲಿ ಎಂದು ಬಿಟ್ಟರೆ ಕೆಲಸವಾಗದು. ಈ ವಿಚಾರದಲ್ಲಿ ಜನರೂ ಕೈಜೋಡಿಸಬೇಕಾದ ಅಗತ್ಯ ಇದೆ. ಏಕೆಂದರೆ, ಎಲ್ಲಿವರೆಗೆ ಮೋಸ ಹೋಗುವವರು ಇರುತ್ತಾರೆಯೋ, ಅಲ್ಲಿವರೆಗೆ ಮೋಸ ಮಾಡುವವರು ಇರುತ್ತಾರೆ ಎಂಬುದನ್ನು ಮರೆಯಬಾರದು.

ಈ ಆ್ಯಪ್‌ ಸಾಲದ ಮೋಡಿ ಹೆಚ್ಚಾಗಿದ್ದು ಕೊರೊನಾ ಸಾಂಕ್ರಾಮಿಕ ಬಂದು, ಜನರ ಆರ್ಥಿಕತೆಯನ್ನು ಹಾಳುಗೆಡವಿದ ಮೇಲೆಯೇ. ಅದಕ್ಕೂ ಮುನ್ನ ಇದ್ದವಾದರೂ, ಕೆಲವೇ ಕೆಲವು ಮಾತ್ರ ಕಾರ್ಯ ನಿರ್ವಹಿ­ಸು­ತ್ತಿದ್ದವು. ಇವುಗಳಿಗೆ ಆರ್‌ಬಿಐನ ಸಂಕೋಲೆಯೂ ಇದ್ದುದರಿಂದ ಸುಲಭವಾಗಿ ಕಾರ್ಯ ನಿರ್ವಹಣೆ ಮಾಡಲು ಸಾಧ್ಯವಿರಲಿಲ್ಲ.

ಆದರೆ, ಕೊರೊನೋತ್ತರದಲ್ಲಿ ಜನರ ಕೈನಲ್ಲಿ ಹಣ ಕಡಿಮೆಯಾಗಿ, ಅವರ ಆರ್ಥಿಕ ಸ್ಥಿತಿ ಏರುಪೇರಾದ ಮೇಲೆ ಹಣಕ್ಕಾಗಿ ಬಹಳಷ್ಟು ಮಂದಿ ಇಂಥ ಸುಲಭ ಸಾಲದ ಆ್ಯಪ್‌ ಗಳ ಮೊರೆ ಹೋಗಿದ್ದಾರೆ. ಒಮ್ಮೆ ಗೂಗಲ್‌ ಪ್ಲೇ ಸ್ಟೋರ್‌ ಅಥವಾ ಆ್ಯಪಲ್‌ ಪ್ಲೇ ಸ್ಟೋರ್‌ಗಳಿಗೆ ಹೋಗಿ ಸರ್ಚ್‌ ಮಾಡಿದರೆ, ಇಂಥ ಸಾವಿರಾರು ಆ್ಯಪ್‌ಗಳು ಕಾಣ ಸಿಗುತ್ತವೆ. ಇವುಗಳಲ್ಲಿ ನಿಜವಾಗಿಯೂ, ಯಾವುದೇ ಮೋಸವಿಲ್ಲದೇ ಸಾಲ ನೀಡುವ ಆ್ಯಪ್‌ ಯಾವುದು? ಚೀನದಿಂದ ಹಣ ಪೂರೈಕೆಯಾಗಿ ಕಾರ್ಯ ನಿರ್ವಹಿಸುವ ಆ್ಯಪ್‌ ಗಳು ಯಾವುವು ಎಂಬುದನ್ನು ತಿಳಿಯು­ವುದೇ ಕಷ್ಟಕರ ಸನ್ನಿವೇಶದಂತಾಗಿದೆ. ಈ ನಿಟ್ಟಿನಲ್ಲಿ ಕೇಂದ್ರ ಮತ್ತು ಆರ್‌ಬಿಐ ಒಟ್ಟಿಗೆ ಸೇರಿಕೊಂಡು ಇಂಥ ಆ್ಯಪ್‌ ಗಳ ನಿಯಂತ್ರಣಕ್ಕಾಗಿ ತುರ್ತು ಗಮನ ನೀಡಬೇಕಾದದ್ದು ಅತ್ಯವಶ್ಯಕವಾಗಿದೆ.

ರವಿವಾರವೂ ಸುಮಾರು 500 ಕೋಟಿ ರೂ.ಗಳಷ್ಟು ಅವ್ಯವಹಾರದ ಹಗರಣ ಬೆಳಕಿಗೆ ಬಂದಿದೆ. ಪತ್ರಿಕಾ ವರದಿಗಳ ಪ್ರಕಾರ, ಸದ್ಯ ದೇಶದಲ್ಲಿ ಶೇ.54ರಷ್ಟು ಸಾಲ ನೀಡುವ ಆ್ಯಪ್‌ ಗಳು ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿವೆ. ಜತೆಗೆ, ಭಾರತದಲ್ಲಿ ಮೊಬೈಲ್‌ ಬ್ಯಾಂಕಿಂಗ್‌ ಆರಂಭವಾದ ಮೇಲೆ ಇಂಥ ಪ್ರಕರಣಗಳು ಹೆಚ್ಚಾಗಿವೆ ಎಂಬ ಮಾಹಿತಿಯೂ ಇದೆ.

ಮೊದಲೇ ಹೇಳಿದ ಹಾಗೆ, ಅಕ್ರಮ ಆ್ಯಪ್‌ ಗಳ ಬೆನ್ನುಮೂಳೆ ಮುರಿಯಲು ಸಾಧ್ಯವಿರುವುದು ಜನರಿಗೇ. ಸುಲಭವಾಗಿ, ಥಟ್‌ ಅಂತ ಸಾಲ ಕೊಡುತ್ತೇವೆ ಎಂದು ಹೇಳುವವರನ್ನು ನಂಬಲು ಹೋಗಬಾರದು. ಕಡಿಮೆ ದಾಖಲೆಗಳನ್ನು ಪಡೆದುಕೊಂಡು ಸಾಲ ಕೊಡುತ್ತಾರೆ ಎಂದಾದರೆ, ಅವರು ವಸೂಲಿಗೆ ಅಡ್ಡ ಮಾರ್ಗ ಹಿಡಿದೇ ಹಿಡಿಯುತ್ತಾರೆ. ಇಂಥವರ ಕುರಿತಂತೆ ಎಚ್ಚರದಿಂದ ಇರಬೇಕು. ಸಾಧ್ಯವಾದರೆ, ಆರ್‌ಬಿಐನ ಕೆಳಗೆ ಬರುವಂಥ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆಯಲು ನೋಡುವುದು ಸೂಕ್ತ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.